ಗ್ರಾಮೀಣ ವಿದ್ಯಾರ್ಥಿಗಳ ಕಲಿಕೆಗೆ ಆದ್ಯತೆ ನೀಡಿ


Team Udayavani, Feb 13, 2020, 3:00 AM IST

graam-ina-vid

ಯಳಂದೂರು: ಗ್ರಾಮೀಣ ಭಾಗದಲ್ಲಿ ಶಿಕ್ಷಣವನ್ನು ಇನ್ನಷ್ಟು ಉತ್ತೇಜಿಸಬೇಕಿದೆ. ಸರ್ಕಾರ ಗುಣಮಟ್ಟದ ಶಿಕ್ಷಣಕ್ಕೆ ಹೆಚ್ಚಿನ ಮಹತ್ವವನ್ನು ನೀಡಿದೆ. ಆದರೆ, ಇದನ್ನು ಮಕ್ಕಳಿಗೆ ತಲುಪಿಸುವ ಜವಾಬ್ದಾರಿ ಶಿಕ್ಷಕರು ಹಾಗೂ ಪೋಷಕರ ಮೇಲಿದೆ.

ಗ್ರಾಮೀಣ ವಿದ್ಯಾರ್ಥಿಗಳ ಕಲಿಕೆಗೆ ಇನ್ನಷ್ಟು ಆದ್ಯತೆ ನೀಡುವ ಕೆಲಸವಾಗಬೇಕು ಎಂದು ಶಾಸಕ ಎನ್‌.ಮಹೇಶ್‌ ಸಲಹೆ ನೀಡಿದರು. ತಾಲೂಕಿನ ಬನ್ನಿಸಾರಿಗೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಶಾಲಾ ವಾರ್ಷಿಕೋತ್ಸವ ಸಮಾರಂಭದಲ್ಲಿ ಮಾತನಾಡಿದರು.

ಸರ್ಕಾರಿ ಶಾಲೆಗಳಲ್ಲೂ ಇಂತಹ ಉತ್ಸವಗಳ ಆಚರಣೆ ನಡೆಸುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ. ಈ ಮಕ್ಕಳಲ್ಲೂ ಖಾಸಗಿ ಶಾಲೆಯ ಮಕ್ಕಳಂತೆ ನಾವು ಕೂಡ ಸಹಪಠ್ಯ ಚಟುವಟಿಕೆಗಳಲ್ಲೂ ಮುಂದಿದ್ದೇವೆ ಎಂಬ ಅರಿವು ಮೂಡಿಸುವ ಕೆಲಸ ಇಂತಹ ಕಾರ್ಯಕ್ರಮಗಳ ಮೂಲಕ ಮನದಟ್ಟು ಮಾಡಿಕೊಟ್ಟಿರುವುದು ಸಾರ್ಥಕದ ಕೆಲಸವಾಗಿದೆ ಎಂದು ಹೇಳಿದರು.

ಶೈಕ್ಷಣಿಕ ಪ್ರಗತಿಗೆ ಕೆಲಸ ಮಾಡಿ: ಶಿಕ್ಷಣವನ್ನು ಅರ್ಧಕ್ಕೆ ಮೊಟಕುಗೊಳಿಸದಂತೆ ಗ್ರಾಮೀಣ ಮಕ್ಕಳಲ್ಲಿ ಚೈತನ್ಯ ತುಂಬುವ ಕೆಲಸವನ್ನು ಶಿಕ್ಷಕರು ಮಾಡಬೇಕು. ಇವರ ಪೋಷಕರಿಗೆ ಮಕ್ಕಳಲ್ಲಿರುವ ಸುಪ್ತ ಪ್ರತಿಭೆಗಳನ್ನು ಗುರುತಿಸಿ, ಹೇಳುವ ಕೆಲಸವಾಗಬೇಕು.

ಶಿಕ್ಷಣ ಯಾವ ರೀತಿ ನೀಡಿದರೆ ಅನುಕೂಲವಾಗುತ್ತದೆ ಎಂಬ ಅರಿವನ್ನು ಮೂಡಿಸಬೇಕು. ಉಚಿತ ಶಿಕ್ಷಣಕ್ಕೆ ಸರ್ಕಾರ ನೀಡಿರುವ ಸೌಲಭ್ಯಗಳ ಮನವರಿಕೆ ಮಾಡಿಕೊಡಬೇಕು. ಈ ಮೂಲಕ ಗ್ರಾಮೀಣ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಕೆಲಸವನ್ನು ಮಾಡಬೇಕು ಎಂದು ಸಲಹೆ ನೀಡಿದರು.

ಮಕ್ಕಳಿಗೆ ಬಹುಮಾನ ವಿತರಣೆ: ಈ ಸಂದರ್ಭದಲ್ಲಿ ವಿವಿಧ ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು. ಶಾಲಾ ಮಕ್ಕಳು ನಡೆಸಿಕೊಟ್ಟ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಗಮನ ಸೆಳೆದವು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯ್ತಿ ಸದಸ್ಯ ಜೆ.ಯೋಗೇಶ್‌, ತಾಲೂಕು ಪಂಚಾಯ್ತಿ ಅಧ್ಯಕ್ಷ ನಿರಂಜನ್‌, ಸದಸ್ಯರಾದ ಮಲ್ಲಾಜಮ್ಮ ನಂಜಯ್ಯ, ಶಾರದಮ್ಮ, ಗ್ರಾಮ ಪಂಚಾಯ್ತಿ ಅಧ್ಯಕ್ಷ ಮಹೇಶ್‌, ಉಪಾಧ್ಯಕ್ಷೆ ಗಾಯತ್ರಿ, ಸದಸ್ಯರಾದ ಚಂದ್ರಮ್ಮ, ಗೋವಿಂದ ನಾಯಕ, ಎಸ್‌ಡಿಎಂಸಿ ಅಧ್ಯಕ್ಷ ಗೋವಿಂದ ನಾಯಕ, ಉಪಾಧ್ಯಕ್ಷ ಸಿದ್ದಪ್ಪ ಸ್ವಾಮಿ, ಕ್ಷೇತ್ರ ಶಿಕ್ಷಣಾಧಿಕಾರಿ ತಿರುಮಲಾಚಾರ್‌, ಶಾಲಾ ಮುಖ್ಯಶಿಕ್ಷಕ ಜಯಮ್ಮ, ಶಿಕ್ಷಕರಾದ ಮಹೇಶ್‌, ಸೌಮ್ಯ, ಉಷಾ ಸೇರಿದಂತೆ ಇತರರು ಹಾಜರಿದ್ದರು.

ಟಾಪ್ ನ್ಯೂಸ್

10-cow-trafficcking

Yelimale: ಅಕ್ರಮ ಗೋ ಸಾಗಾಟ ತಡೆದು ಆರೋಪಿಗಳನ್ನು ಪೊಲೀಸರಿಗೊಪ್ಪಿಸಿದ ಸ್ಥಳಿಯರು

9-exams

Exams: ಪರೀಕ್ಷೆ ಸವಾಲುಗಳು ಮಾತ್ರ ಬದುಕು ಅಲ್ಲ 

Ambati Rayudu’s Post Mocking RCB

IPL 2024: ಮತ್ತೆ ಆರ್ ಸಿಬಿ ಅಭಿಮಾನಿಗಳನ್ನು ಕೆಣಕಿದ ಅಂಬಾಟಿ ರಾಯುಡು

ʼಒಡೆಯʼ,ʼಕಾಟೇರʼದಂತೆ ಡಿಸೆಂಬರ್‌ನಲ್ಲೇ ʼಡೆವಿಲ್‌ʼ ರಿಲೀಸ್:‌ ಮತ್ತೆ ಮೋಡಿ ಮಾಡ್ತಾರ ಡಿಬಾಸ್?

ʼಒಡೆಯʼ,ʼಕಾಟೇರʼದಂತೆ ಡಿಸೆಂಬರ್‌ನಲ್ಲೇ ʼಡೆವಿಲ್‌ʼ ರಿಲೀಸ್:‌ ಮತ್ತೆ ಮೋಡಿ ಮಾಡ್ತಾರ ಡಿಬಾಸ್?

8-uv fusion

Life: ಬದುಕಿನ ಮುಂದಿನ ನಿಲ್ದಾಣ ಎಲ್ಲಿಗೊ…

Watch SHOLY Real Ending: ಶೋಲೆ ಸಿನಿಮಾದ ರಿಯಲ್‌ ಕ್ಲೈಮ್ಯಾಕ್ಸ್‌ ಬದಲಾಯಿಸಿದ್ದೇಕೆ?

Watch SHOLY Real Ending: ಶೋಲೆ ಸಿನಿಮಾದ ರಿಯಲ್‌ ಕ್ಲೈಮ್ಯಾಕ್ಸ್‌ ಬದಲಾಯಿಸಿದ್ದೇಕೆ?

ಜೋಶಿ

Bidar; ಈಗ ವಿಧಾನಸಭೆ ಚುನಾವಣೆ ನಡೆದರೆ ಕಾಂಗ್ರೆಸ್ ಗೆ 35 ಸ್ಥಾನವು ಸಿಗದು: ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap; ಗುಂಡ್ಲುಪೇಟೆ: ಬೈಕ್-ಕಾರು ಅಪಘಾತ: ಸವಾರ ಸಾವು

Road Mishap; ಗುಂಡ್ಲುಪೇಟೆ: ಬೈಕ್-ಕಾರು ಅಪಘಾತ: ಸವಾರ ಸಾವು

Bandipur: ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದ ಹೆಣ್ಣಾನೆBandipur: ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದ ಹೆಣ್ಣಾನೆ

Bandipur: ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದ ಹೆಣ್ಣಾನೆ

Elephant Census; ಮೊದಲ ಬಾರಿಗೆ ದಕ್ಷಿಣದ ರಾಜ್ಯಗಳ ಗಡಿ ಪ್ರದೇಶಗಳಲ್ಲಿ ಆನೆ ಗಣತಿ

Elephant Census; ಮೊದಲ ಬಾರಿಗೆ ದಕ್ಷಿಣದ ರಾಜ್ಯಗಳ ಗಡಿ ಪ್ರದೇಶಗಳಲ್ಲಿ ಆನೆ ಗಣತಿ

Dog Attack ಗುಂಡ್ಲುಪೇಟೆ: ನಾಯಿಗಳ ದಾಳಿಗೆ ಬಲಿಯಾದವು 10ಕುರಿಗಳು!

Dog Attack ಗುಂಡ್ಲುಪೇಟೆ: ನಾಯಿಗಳ ದಾಳಿಗೆ 10 ಕುರಿಗಳು ಸಾವು

1-qeqwqew

Gundlupete: ಕೊಳೆತ ಸ್ಥಿತಿಯಲ್ಲಿ ಹುಲಿಯ ಮೃತ ದೇಹ ಪತ್ತೆ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

10-cow-trafficcking

Yelimale: ಅಕ್ರಮ ಗೋ ಸಾಗಾಟ ತಡೆದು ಆರೋಪಿಗಳನ್ನು ಪೊಲೀಸರಿಗೊಪ್ಪಿಸಿದ ಸ್ಥಳಿಯರು

9-exams

Exams: ಪರೀಕ್ಷೆ ಸವಾಲುಗಳು ಮಾತ್ರ ಬದುಕು ಅಲ್ಲ 

Ambati Rayudu’s Post Mocking RCB

IPL 2024: ಮತ್ತೆ ಆರ್ ಸಿಬಿ ಅಭಿಮಾನಿಗಳನ್ನು ಕೆಣಕಿದ ಅಂಬಾಟಿ ರಾಯುಡು

ʼಒಡೆಯʼ,ʼಕಾಟೇರʼದಂತೆ ಡಿಸೆಂಬರ್‌ನಲ್ಲೇ ʼಡೆವಿಲ್‌ʼ ರಿಲೀಸ್:‌ ಮತ್ತೆ ಮೋಡಿ ಮಾಡ್ತಾರ ಡಿಬಾಸ್?

ʼಒಡೆಯʼ,ʼಕಾಟೇರʼದಂತೆ ಡಿಸೆಂಬರ್‌ನಲ್ಲೇ ʼಡೆವಿಲ್‌ʼ ರಿಲೀಸ್:‌ ಮತ್ತೆ ಮೋಡಿ ಮಾಡ್ತಾರ ಡಿಬಾಸ್?

Dhruva Sarja ಫ್ಯಾನ್ಸ್‌ಗೆ ಡಬಲ್‌ ಧಮಾಕಾ; ಅಪ್‌ಡೇಟ್‌ ಕ್ಯೂನಲ್ಲಿ ಮಾರ್ಟಿನ್‌, ಕೆಡಿ

Dhruva Sarja ಫ್ಯಾನ್ಸ್‌ಗೆ ಡಬಲ್‌ ಧಮಾಕಾ; ಅಪ್‌ಡೇಟ್‌ ಕ್ಯೂನಲ್ಲಿ ಮಾರ್ಟಿನ್‌, ಕೆಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.