ಅವೈಜ್ಞಾನಿಕ ಮೀನುಗಾರಿಕೆಯಿಂದ ಕ್ಷಾಮ

ಲಂಗುರ ಹಾಕಿರುವ ಬೋಟ್‌ಗಳು | ಆಳ ಸಮುದ್ರ ಮೀನುಗಾರಿಕೆ ನಿರ್ಬಂಧಿಸಲು ಒತ್ತಾಯ

Team Udayavani, Feb 13, 2020, 3:43 PM IST

13-February-19

ಕಾರವಾರ: ಅರಬ್ಬಿ ಸಮುದ್ರದಲ್ಲಿ ಮತ್ಸ್ಯ ಕ್ಷಾಮದಿಂದ ಮೀನುಗಾರಿಕೆಗೆ ತೆರಳಿದ ಪರ್ಶಿನ್‌ ಹಾಗೂ ಟ್ರಾಲರ್‌ ಬೋಟ್‌ಗಳು ಖಾಲಿ ಬಲೆಯೊಂದಿಗೆ ಹಿಂದಿರುಗಿವೆ. ಬೈತಖೋಲ್‌ ಮೀನುಗಾರಿಕಾ ಬಂದರಿನಲ್ಲಿ ಬೋಟ್‌ ಗಳು ಲಂಗುರ ಹಾಕಿವೆ. ಸಮುದ್ರ ಬೆಳೆಯಿಲ್ಲದೇ ಮೀನುಗಾರರು ಆತಂಕ ಪಡುವಂತಾಗಿದೆ.

ಅವೈಜ್ಞಾನಿಕ ಮತ್ತು ಕಾನೂನುಬಾಹಿರವಾಗಿ ಲೈಟ್‌ ಫಿಶಿಂಗ್‌, ಬುಲ್‌ ಟ್ರಾಲ್‌ ಮೀನುಗಾರಿಕೆ ಮತ್ತು ಮೀನು ಹಿಡಿಯಲು ಆಳ ಸಮುದ್ರದಲ್ಲಿ ಕ್ಯಾಸುರಿನಾ ಗಿಡಗಳನ್ನು ಬೆಳಸುತ್ತಿರುವ ವಿಧಾನಗಳು ಮೀನು ಕ್ಷಾಮಕ್ಕೆ ಕಾರಣವಾಗಿವೆ ಎಂದು ಮೀನುಗಾರರು ಆರೋಪಿಸಿದ್ದಾರೆ.

ಕಳೆದ ಹದಿನೈದು ದಿನಗಳ ಹಿಂದೆ ಸಾಗರಮಾಲಾ ಯೋಜನೆಯಡಿ ಕಾರವಾರ ವಾಣಿಜ್ಯ ಬಂದರು ವಿಸ್ತರಣೆ ವಿರೋಧಿಸಿ ಹದಿಮೂರು ದಿನಗಳ ಕಾಲ ಮೀನುಗಾರಿಕೆ ಚಟುವಟಿಕೆಗಳನ್ನು ಮೀನುಗಾರರು ಸಂಪೂರ್ಣ ಸ್ಥಗಿತ ಮಾಡಿದ್ದರು. ಈಗ ಸಮುದ್ರದಲ್ಲಿ ಮೀನು ಬೇಟೆ ಯಶಸ್ವಿಯಾಗದೇ ಖಾಲಿ ಬೋಟ್‌ಗಳಲ್ಲಿ ಮರಳುತ್ತಿದ್ದಾರೆ ಎಂದು ಮೀನುಗಾರರು ತಿಳಿಸಿದ್ದಾರೆ.

ಕೇರಳ, ಮಹಾರಾಷ್ಟ್ರ ಮತ್ತು ಗುಜರಾತ್‌ನಲ್ಲಿ 24 ನಾಟಿಕಲ್‌ ಮೈಲಿ ಮೀರಿದ ಮೀನುಗಾರಿಕೆ ಚಟುವಟಿಕೆ ನಿಷೇಧಿಸಲಾಗಿದೆ. ಆದರೆ ಗೋವಾ ಮತ್ತು ಕರ್ನಾಟಕದಲ್ಲಿ ಇದಕ್ಕೆ ಅನುಮತಿ ನೀಡಲಾಗಿದೆ. ಇದರಿಂದ ಇತರ ರಾಜ್ಯಗಳ ಮೀನುಗಾರರು ಇದರ ಲಾಭ ಪಡೆದುಕೊಳ್ಳುತ್ತಿದ್ದಾರೆ. ಹೊರ ರಾಜ್ಯದವರು ನಿರಾತಂಕದಿಂದ ರಾಜ್ಯದ ಸಮುದ್ರ ಗಡಿಯೊಳಗಿನ ಆಳ ಸಮುದ್ರದ ಮಧ್ಯದಲ್ಲಿ ಅಪಾರ ಪ್ರಮಾಣದ ಮೀನುಗಳನ್ನು ಹಿಡಿಯುತ್ತಿದ್ದಾರೆ.

ಇದಲ್ಲದೇ ಹಗ್ಗಗಳನ್ನು ಕಟ್ಟಿ ಕ್ಯಾಸುರಿನಾ ಗಿಡಗಳನ್ನು ಸಮುದ್ರ ಮಧ್ಯದಲ್ಲಿ ಎಸೆದು ಕೊಳೆಯಲು ಬಿಡಲಾಗುತ್ತದೆ. ಇದು ಅಪಾರ ಪ್ರಮಾಣದ ಮೀನುಗಳನ್ನು ಆಕರ್ಷಿಸುತ್ತದೆ. ನಂತರ ಹೊರ ರಾಜ್ಯದವರು ಅದರ ಸುತ್ತಲೂ ಬಲೆ ಹರಡಿ ಮೀನು ಹಿಡಿಯುತ್ತಾರೆ. ಆದರೂ ರಾಜ್ಯ ಸರ್ಕಾರ ಕಣ್ಣು ಮುಚ್ಚಿಕೊಂಡಿದೆ ಎಂದು ಮೀನುಗಾರ ಯುವ ಮುಖಂಡ ವಿನಾಯಕ ಹರಿಕಂತ್ರ ಆರೋಪಿಸಿದ್ದಾರೆ.

ನಾವು ಅದನ್ನು ಹಲವಾರು ಬಾರಿ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದಿದ್ದೇವೆ. ಆದರೆ ಏನೂ ಪ್ರಯೋಜನವಾಗಲಿಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆಳ ಸಮುದ್ರದಲ್ಲಿ ಇತರೆ ರಾಜ್ಯದವರ ಅವೈಜ್ಞಾನಿಕ ಮೀನುಗಾರಿಕೆಯಿಂದ ಇದರ ದುಷ್ಪರಿಣಾಮಗಳಿಂದ ಸಮುದ್ರದಲ್ಲಿ ಮೀನು ಸಿಗುತ್ತಿಲ್ಲ. ಮೀನುಗಾರರಿಗೆ ಇದು ಮತ್ಸ್ಯ ಬೇಟೆ ಸಮಯವಾಗಿದ್ದು, ಮೀನುಗಾರಿಕೆಯಿಂದ ಹಣ ಸಂಪಾದಿಸುವ ಕಾಲವಾಗಿದೆ.ಆದರೆ ಈಗ ನಮ್ಮ ಸಾಂಪ್ರದಾಯಿಕ ದೋಣಿಗಳು ಹಾಗೂ ಆಳ ಸಮುದ್ರ ಮೀನುಗಾರಿಕೆಯ ಯಾಂತ್ರಿಕೃತ ಬೋಟ್‌ಗಳು ಮೀನು ಇಲ್ಲದೇ ಖಾಲಿ ಮರಳುತ್ತಿವೆ. ಈ ಹಿನ್ನೆಲೆಯಲ್ಲಿ ಕೂಡಲೇ ಸರ್ಕಾರ ಅಕ್ರಮ ಮೀನುಗಾರಿಕೆ ನಿಷೇಧಿಸಬೇಕು. ರಾಜ್ಯದ ಸಾಗರ ಗಡಿಯೊಳಗೆ ಬಂದು ಕಾನೂನು ಬಾಹಿರವಾಗಿ ಆಳ ಸಮುದ್ರದಲ್ಲಿ ಮೀನುಗಾರಿಕೆ ನಡೆಸುತ್ತಿರುವ ತಮಿಳುನಾಡು, ಕೇರಳ ಮೀನುಗಾರಿಕಾ ಬೋಟ್‌ಗಳನ್ನು ನಿರ್ಬಂಧಿಸಬೇಕು ಎಂದು ಇಲ್ಲಿನ ಸ್ಥಳೀಯ ಮೀನುಗಾರರು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

1-sirsi

Modi ಬಂದಿದ್ದು ಕಾಂಗ್ರೆಸ್‌ಗೆ ಅಡ್ಡ ಪರಿಣಾಮ ಏನಿಲ್ಲ: ಭೀಮಣ್ಣ ನಾಯ್ಕ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

9-kushtagi

Kushtagi: ಕಾಣೆಯಾಗಿದ್ದ ಪುರಸಭೆ ನೌಕರ ಪತ್ತೆ; ಆತಂಕ ದೂರ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.