ಸ್ವಚ್ಛತೆ ಇದ್ದಲ್ಲಿ ವಾಸಿಸುತ್ತಾನೆ ಭಗವಂತ
ಶ್ರದ್ಧಾ ಕೇಂದ್ರಗಳಿಗೆ ಕಸದ ಬುಟ್ಟಿ ವಿತರಣೆ
Team Udayavani, Feb 13, 2020, 5:28 PM IST
ಜಗಳೂರು: ಧಾರ್ಮಿಕ ಶ್ರದ್ಧಾ ಕೇಂದ್ರಗಳಿಗೆ ನೀಡುವ ಹಸಿರು ಮತ್ತು ನೀಲಿ ಬಣ್ಣದ ಕಸದ ಬುಟ್ಟಿಗಳಲ್ಲಿ ಹಸಿ ಮತ್ತು ಒಣ ಕಸವನ್ನು ಪ್ರತ್ಯೇಕಿಸಿ ವಿಲೇವಾರಿ ಮಾಡುವ ಮೂಲಕ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕೆಂದು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾಧಿಕಾರಿ ಗುಣಕಾರ್ ಹೇಳಿದರು.
ಪಟ್ಟಣದ ಅಂಬೇಡ್ಕರ್ ವೃತ್ತದ ಗಣೇಶ ದೇವಾಲಯದಲ್ಲಿ ಬುಧವಾರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಹಸಿರು-ನೀಲಿ ಕಸದ ಬುಟ್ಟಿ ವಿತರಣೆ ಮಾಡಿ ಅವರು ಮಾತನಾಡಿದರು.
ಪಟ್ಟಣ ಸೇರಿದಂತೆ ಗ್ರಾಮೀಣ ಪ್ರದೇಶಗಳಲ್ಲಿ ಇರುವ ದೇವಾಲಯ ಮತ್ತು ಮಠ, ಮಂದಿರ, ಮಸೀದಿ, ಚರ್ಚ್ಗಳು ಸೇರಿದಂತೆ ಒಟ್ಟು 126 ಕೇಂದ್ರಗಳಿಗೆ ಹಸಿರು ಮತ್ತು ನೀಲಿ ಬಣ್ಣದ ಕಸದ ಬುಟ್ಟಿಗಳನ್ನು ವಿತರಣೆ ಮಾಡಲಾಗುತ್ತಿದೆ. ಎಲ್ಲಿ ಸ್ವಚ್ಛತೆ ಇರುತ್ತದೆಯೋ ಅಲ್ಲಿ ಭಗವಂತ ವಾಸಿಸಲಿದ್ದಾನೆ ಎಂಬಂತೆ ಶ್ರೀ ಕ್ಷೇತ್ರದಲ್ಲಿ ಅನಾದಿ ಕಾಲದಿಂದಲೂ ಸ್ವತ್ಛತೆಗೆ ಹೆಚ್ಚಿನ ಆದ್ಯತೆ ನೀಡುತ್ತಾ ಬರಲಾಗಿದೆ. ರಾಷ್ಟ್ರ ಮಟ್ಟದಲ್ಲಿ ಧರ್ಮಸ್ಥಳ ಸ್ವಚ್ಛ ಧಾರ್ಮಿಕ ನಗರಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲಾ ಧಾರ್ಮಿಕ ಶ್ರದ್ಧಾ ಕೇಂದ್ರಗಳ ಸ್ವಚ್ಛತೆ ಕಾಪಾಡುವ ಸಲುವಾಗಿ ನಮ್ಮೂರು ನಮ್ಮ ಶ್ರದ್ಧಾ ಕೇಂದ್ರ ಎಂಬ ಧ್ಯೇಯ ವಾಕ್ಯದಲ್ಲಿ ಪಟ್ಟಣ ಸೇರಿದಂತೆ ಗ್ರಾಮೀಣ ಪ್ರದೇಶಗಳಲ್ಲಿ
ಜ.7 ರಿಂದ 13ರವರೆಗೆ ರಾಜ್ಯಾದ್ಯಾಂತ ಸ್ವಚ್ಛತಾ ಸಪ್ತಾಹ ಆಚರಿಸಲಾಗಿದೆ. ಶ್ರೀ ವೀರೇಂದ್ರ ಹೆಗ್ಗಡೆಯವರ ಸಂಕಲ್ಪದಂತೆ ಎಲ್ಲಾ 126 ಧಾರ್ಮಿಕ ಕೇಂದ್ರಗಳಿಗೆ ಹಸಿರು ಮತ್ತು ನೀಲಿ ಬಣ್ಣದ ಕಸದ ಬುಟ್ಟಿ ವಿತರಿಸಲಾಗುತ್ತಿದ್ದು, ಹಸಿ-ಒಣ ಕಸ ಪ್ರತ್ಯೇಕವಾಗಿ ವಿಂಗಡಿಸಿ ವಿಲೇವಾರಿ ಮಾಡುವ ಮೂಲಕ ಸ್ವಚ್ಛತೆಯನ್ನು ಕಾಪಾಡುವಂತೆ ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಾದೇಶಿಕ ನಿರ್ದೇಶಕ ಶ್ರೀಹರಿ, ಪ್ರೇರಣಾ ಸಮಾಜ ಸೇವಾ ಸಂಸ್ಥೆಯ ಫಾ|ವಿಲಿಯಮ್ ಮಿರಾಂದ, ಅಲ್ ಫಾತಿಮಾ ಸಂಸ್ಥೆಯ ಕಾರ್ಯದರ್ಶಿ ಷಾಯಿನಾ ಬೇಗಂ, ಅರವಿಂದ್, ಮಂಜುಳ, ಮಂಜುನಾಥಾಚಾರಿ, ತಿಪ್ಪೇಸ್ವಾಮಿ, ಪಪಂ ಸದಸ್ಯ ಪಾಪಲಿಂಗಪ್ಪ, ಆರೋಗ್ಯ ನಿರೀಕ್ಷಕ ಕಿಫಾಯತ್ ಸೇರಿದಂತೆ ಮೇಲ್ವಿಚಾರಕರು, ಧಾರ್ಮಿಕ ಕೇಂದ್ರಗಳ ಅರ್ಚಕರು, ಮುಖಂಡರು, ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Elections ಬಿಜೆಪಿ ಗೆಲ್ಲುವ 400 ಸ್ಥಾನಗಳಲ್ಲಿ ನಾನೂ ಒಬ್ಬ: ಶ್ರೀರಾಮುಲು
ಹುಚ್ಚು ರಾಜಕಾರಣಕ್ಕೆ ಸಿದ್ದು ದೊಡ್ಡ ಬೆಲೆ ತೆರಬೇಕಾದೀತು: ಡಿವಿಎಸ್
Bellary; ಸಿದ್ದರಾಮಯ್ಯ ಹುಚ್ಚು ರಾಜಕಾರಣಕ್ಕೆ ದೊಡ್ಡ ಬೆಲೆ ತೆರಬೇಕಾಗುತ್ತದೆ: ಸದಾನಂದ ಗೌಡ
Bellary; ದಲಿತಕೇರಿಯಲ್ಲಿ ಒಡಾಡಿ ಶ್ರೀರಾಮುಲು ಪರ ಮತಯಾಚನೆ ಮಾಡಿದ ಯದುವೀರ್ ಒಡೆಯರ್
ಕೇಂದ್ರದಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ದನಿ ಎತ್ತಲು ಕಾಂಗ್ರೆಸ್ ಗೆಲ್ಲಿಸಿ: ರಾಮಲಿಂಗಾರೆಡ್ಡಿ
MUST WATCH
ಹೊಸ ಸೇರ್ಪಡೆ
Prajwal Pen Drive: ಡಿಸಿಎಂ ವಿರುದ್ಧ ರಾಮನಗರದಲ್ಲಿ ಜೆಡಿಎಸ್-ಬಿಜೆಪಿ ಪ್ರತಿಭಟನೆ
Mangaluru: ನೇಮೋತ್ಸವದಲ್ಲಿ ಭಾಗಿಯಾಗಿ ಹರಕೆ ಸಲ್ಲಿಸಿದ ʼಕೆಜಿಎಫ್ʼ ನಟಿ ಶ್ರೀನಿಧಿ
Relaxed mood; ಮೊಮ್ಮಗಳೊಂದಿಗೆ ಆಟವಾಡಿದ ಕೇಂದ್ರ ಸಚಿವ ಪ್ರಹ್ಲಾದ ಜೋಶಿ
Birla; ಸಂಗೀತ ಕ್ಷೇತ್ರ ತೊರೆಯುವ ಕಠಿನ ನಿರ್ಧಾರ ತಳೆದ ಅನನ್ಯಶ್ರೀ ಬಿರ್ಲಾ
ʼಸಲಾರ್ʼನ ʼಶಿವ್ ಮನ್ನಾರ್ʼಗೂ ʼಕೆಜಿಎಫ್ʼಗೂ ಇದ್ಯಾ ಲಿಂಕ್: ಸುಳಿವು ಕೊಟ್ಟ ಪೃಥ್ವಿರಾಜ್