ಪರ್ಕಳ ರಸ್ತೆಯಲ್ಲೇ ಪೋಲಾಗುತ್ತಿರುವ ಕುಡಿಯುವ ನೀರು


Team Udayavani, Feb 14, 2020, 6:15 AM IST

water

ಉಡುಪಿ: ಪರ್ಕಳ ಸಿಂಡಿಕೇಟ್‌ ಬ್ಯಾಂಕ್‌ ಎದುರು ಕುಡಿಯುವ ನೀರಿನ ಪೈಪ್‌ ಲೈನ್‌ ಕಳೆದ ಒಂದು ವಾರದ ಹಿಂದೆ ಒಡೆದು ಸಾವಿರಾರು ಲೀಟರ್‌ಗಳಷ್ಟು ನೀರು ಚರಂಡಿ ಪಾಲಾಗುತ್ತಿದೆ.

ಪರ್ಕಳ ಭಾಗದ ರಾ.ಹೆ. 169ಎ ಬಳಿ ರಸ್ತೆ ಕಾಮಗಾರಿ ನಡೆಯುತ್ತಿದ್ದು ಉಡುಪಿ ನಗರವನ್ನು ಸಂಪರ್ಕಿಸುವ ಪ್ರಮುಖ ಕುಡಿಯುವ ನೀರಿನ ಪೈಪ್‌ ಲೈನ್‌ಗೆ ಹಾನಿಯಾಗಿದೆ. ಪರಿಣಾಮ ಕಳೆದ ಒಂದು ವಾರದಿಂದ ಈ ಶುದ್ಧಕುಡಿಯುವ ನೀರು, ರಸ್ತೆ ಸೇರಿದಂತೆ ಪಕ್ಕದ ತಗ್ಗು ಪ್ರದೇಶದಲ್ಲಿ ಸಂಗ್ರಹವಾಗುತ್ತಿದೆ. ಪಾದಚಾರಿ ಹಾದಿಯೂ ಕೆಸರು ಮಯವಾಗಿ ಜನರ ಓಡಾಟಕ್ಕೂ ಅಡ್ಥಿ ಉಂಟುಮಾಡಿದೆ.

ವಾರದಿಂದ ಪೋಲು
ಕಳೆದ ಒಂದು ವಾರದಿಂದ ಧಾರಾಕಾರವಾಗಿ ನೀರು ಪೋಲಾಗುತ್ತಿದ್ದು ಇದರ ಬಗ್ಗೆ ನಗರಸಭೆ ಕಿಂಚಿತ್ತೂ ಗಮನಹರಿಸದಿರುವುದು ಸಾರ್ವಜನಿಕ ವಲಯದಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. ನೀರಿನ ಅಭಾವ ನಿವಾರಿಸಲು ಹಲವು ಕಾರ್ಯಕ್ರಮ ಆಯೋಜಿಸಬೇಕೆಂದಿರುವ ನಗರಸಭೆಗೆ ಈ ಹಾನಿ ಕಾಣಿಸುವುದಿಲ್ಲವೇ ಎಂಬ ಟೀಕೆ ಸಾರ್ವಜನಿಕ ವಲಯದಿಂದ ಬರುತ್ತಿದೆ.

ಕಳೆದ ವರ್ಷ ನೀರಿನ ಅಭಾವ
ಬಜೆ ಡ್ಯಾಮ್‌ ಮೂಲಕ ಪರ್ಕಳವಾಗಿ ನಗರಕ್ಕೆ ಸಂಪರ್ಕಿಸುವ ಪ್ರಮುಖ ಕುಡಿಯುವ ನೀರಿನ ಪೈಪ್‌ಲೈನ್‌ ಇದಾಗಿದೆ. ಈಗಾಗಲೇ ಬಿಸಿಲ ತಾಪ ನಿಧಾನವಾಗಿ ಹೆಚ್ಚಳವಾಗುತ್ತಿದ್ದು ಕಳೆದ ಬಾರಿ ನಗರದಲ್ಲಿ ಉಂಟಾದ ನೀರಿನ ಸಮಸ್ಯೆ ಮತ್ತೆ ಉದ್ಭವಿಸಬಹುದೇ ಎಂಬ ಆತಂಕ ಜನರಲ್ಲಿ ಮನೆಮಾಡಿದೆ. ಈ ನಡುವೆ ಕಣ್ಣ ಮುಂದೆ ನೀರು ಪೋಲಾಗುತ್ತಿದ್ದರೂ ಸಂರಕ್ಷಿಸುವ ಕೆಲಸ ಮಾತ್ರ ಆಗಿಲ್ಲ. ಕುಡಿಯುವ ನೀರನ್ನು ಶುದ್ಧೀಕರಿಸಲು ನಗರಸಭೆ ಬಹಳಷ್ಟು ಹಣಗಳನ್ನು ಖರ್ಚುಮಾಡಿ ಶ್ರಮವಹಿಸುತ್ತಿದೆ. ಆದರೆ ಈ ತರದ ನೀರಿನ ಪೋಲಿನಿಂದ ಸಂರಕ್ಷಣೆಯ ಉದ್ದೇಶವೆ ವಿಫ‌ಲವಾದಂತಾಗಿದೆ.

ಧೂಳಿನ ಸಿಂಚನ
ದಿನನಿತ್ಯ ಪರ್ಕಳ ಬಳಿ ನೂರಾರು ವಾಹನಗಳು ಓಡಾಡುತ್ತಿವೆ. ಹೆರ್ಗ ಜಾತ್ರೆಯ ಸಮಯದಲ್ಲೂ ವಾಹನ ದಟ್ಟಣೆ ಅಧಿಕವಿತ್ತು. ಪ್ರತಿನಿತ್ಯ ಪರ್ಕಳ ಭಾಗದಲ್ಲಿ ರಸ್ತೆ ಕಾಮಗಾರಿಯಿಂದ ಧೂಳಿನ ವಾತಾವರಣ ಸಾಮಾನ್ಯವಾಗಿ ಬಿಟ್ಟಿದೆ. ಈ ಮಾರ್ಗಕ್ಕೆ ನೀರು ಹಾಕಿ ಧೂಳಿನ ಪ್ರಮಾಣ ಕಡಿಮೆ ಮಾಡುವಂತೆ ಸ್ಥಳೀಯರು ಅಧಿಕಾರಿಗಳಿಗೆ ತಿಳಿಸಿದರೂ ಇಲಾಖೆಗಳಿಂದ ಸ್ಪಂದನೆ ಇಲ್ಲವಾಗಿದೆ. ದಿನನಿತ್ಯಅಕ್ಕಪಕ್ಕದ ಅಂಗಡಿ ವ್ಯಾಪಾರಸ್ಥರು ಸೇರಿದಂತೆ ಜನರಿಗೆ ಧೂಳಿನ ಸಿಂಚನ ರೂಢಿಯಾಗಿಬಿಟ್ಟಿದೆ.

ತತ್‌ಕ್ಷಣ ರಿಪೇರಿ ಕೆಲಸ ಆಗಬೇಕಿದೆ
ಬಹಳ ಹಣ ಖರ್ಚು ಮಾಡಿ ಶುದ್ಧೀಕರಿಸಿದ ಈ ಶುದ್ಧ ನೀರು ಪೋಲಾಗುತ್ತಿರುವುದು ಖಂಡನೀಯ. ಸಂಬಂಧಪಟ್ಟ ಅಧಿಕಾರಿಗಳು ಯಾವುದೇ ಕ್ರಮ ಕೈಗೆತ್ತಿಕೊಳ್ಳದಿದ್ದರೆ ಮುಂದೆ ಮತ್ತಷ್ಟು ನೀರು ಪೋಲಾಗುವುದು. ತತ್‌ಕ್ಷಣ ಪೈಪ್‌ ಲೈನ್‌ ಅನ್ನು ಸರಿಪಡಿಸಿ ನೀರಿನ ಪೋಲು ತಡೆಯಬೇಕು.
-ಮೋಹನ್‌ ದಾಸ್‌ ನಾಯಕ್‌, ಸ್ಥಳೀಯರು

ತಿಳಿಸಲಾಗಿದೆ
ಕುಡಿಯುವ ನೀರಿನ ಪೈಪ್‌ ಲೈನ್‌ ಹಾನಿಯ ಬಗ್ಗೆ ನಗರ ಸಭೆಗೆ ದೂರು ನೀಡಿದಾಗ ರಾ.ಹೆದ್ದಾರಿ ಪ್ರಾಧಿಕಾರದಿಂದ ಸರಿಪಡಿಸಬೇಕೆಂಬ ಉತ್ತರ ಬಂತು. ನಗರಕ್ಕೆ ಹಾದು ಬರುವ ಕುಡಿಯುವ ನೀರಿನ ಪೈಪ್‌ ಲೈನ್‌ ಆಗಿರುವುದರಿಂದ ನಗರ ಸಭೆಯೆ ಗಮನ ಕೊಡುವಂತೆ ತಿಳಿಸಲಾಗಿದೆ.
-ಸುಮಿತ್ರಾ ಆರ್‌. ನಾಯಕ್‌,
16ನೇ ಪರ್ಕಳ ವಾರ್ಡ್‌ನ ನಗರಸಭೆ ಸದಸ್ಯೆ.

ಟಾಪ್ ನ್ಯೂಸ್

Rabkavi-Banhatti; ರೋಹಿಣಿ ಮಳೆ ಒಲಿದರೆ ರೈತನ ಬಾಳೇ ಬಂಗಾರ

Rabkavi-Banhatti; ರೋಹಿಣಿ ಮಳೆ ಒಲಿದರೆ ರೈತನ ಬಾಳೇ ಬಂಗಾರ

1-qweewqe

Ayodhya; ‘ಮಂದಿರ-ಮಸೀದಿ’ಸಮಸ್ಯೆಯಲ್ಲ,ಅಭಿವೃದ್ಧಿ ಬಯಸುತ್ತೇವೆ ಎಂದ ಮುಸ್ಲಿಮರು

1-weweqwew

CRPF exits;ಮೇ 20 ರಿಂದ ಸಿಐಎಸ್ಎಫ್ ತುಕಡಿಗಳಿಂದ ಸಂಸತ್ತಿಗೆ ಭದ್ರತೆ

1-wqqewqeq

Hubli; ಜನರಲ್ಲಿ ಪೊಲೀಸರ ಬಗ್ಗೆ ನಂಬಿಕೆ ಹೋಗಿದೆ: ಎಡಿಜಿಪಿ ಹಿತೇಂದ್ರ

1-qweeqw

Kundapura; ತಾಯಿಯ ಶವದೊಂದಿಗೆ 72 ಗಂಟೆ ಕಳೆದಿದ್ದ ಪುತ್ರಿಯೂ ವಿಧಿವಶ!

Breach Of Privacy….; ಐಪಿಎಲ್ ಪ್ರಸಾರಕರ ವಿರುದ್ಧ ರೇಗಾಡಿದ ರೋಹಿತ್ ಶರ್ಮಾ

Breach Of Privacy….; ಐಪಿಎಲ್ ಪ್ರಸಾರಕರ ವಿರುದ್ಧ ರೇಗಾಡಿದ ರೋಹಿತ್ ಶರ್ಮಾ

13-doctor

Health: ಸದಾ ಎಚ್ಚರದಿಂದಿರಿ: ನಿಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆರೆ ಅಭಿವೃದ್ಧಿಗೆ ಒಮ್ಮೆಯೂ ತಲೆ ಎತ್ತಿ ನೋಡದ ಇಲಾಖೆ; ಆಟದ ಮೈದಾನದಂತಾದ ಬಾವದಕೆರೆ

ಕೆರೆ ಅಭಿವೃದ್ಧಿಗೆ ಒಮ್ಮೆಯೂ ತಲೆ ಎತ್ತಿ ನೋಡದ ಇಲಾಖೆ; ಆಟದ ಮೈದಾನದಂತಾದ ಬಾವದಕೆರೆ

ಉಭಯ ಜಿಲ್ಲೆಯಲ್ಲೂ ಶಾಲಾರಂಭಕ್ಕೆ ಭರದ ಸಿದ್ಧತೆ

ಉಭಯ ಜಿಲ್ಲೆಯಲ್ಲೂ ಶಾಲಾರಂಭಕ್ಕೆ ಭರದ ಸಿದ್ಧತೆ

ದೋಣಿಗಳು ಢಿಕ್ಕಿಯಾಗಿ ಮುಳುಗಡೆ; ಐವರು ಮೀನುಗಾರರ‌ ರಕ್ಷಣೆ

Malpe ದೋಣಿಗಳು ಢಿಕ್ಕಿಯಾಗಿ ಮುಳುಗಡೆ; ಐವರು ಮೀನುಗಾರರ‌ ರಕ್ಷಣೆ

Udupi District ನಾನ್‌ ಸಿಆರ್‌ಝಡ್‌ ಮರಳು ಆಸರೆ; 2.45 ಲಕ್ಷ ಮೆ. ಟನ್‌ ಮರಳು ತೆರವು

Udupi District ನಾನ್‌ ಸಿಆರ್‌ಝಡ್‌ ಮರಳು ಆಸರೆ; 2.45 ಲಕ್ಷ ಮೆ. ಟನ್‌ ಮರಳು ತೆರವು

Kapu ಟಿಪ್ಪರ್‌ಗೆ ಪಿಕಪ್‌ ಢಿಕ್ಕಿ: ಚಾಲಕ ಗಂಭೀರ

Kapu ಟಿಪ್ಪರ್‌ಗೆ ಪಿಕಪ್‌ ಢಿಕ್ಕಿ: ಚಾಲಕ ಗಂಭೀರ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

1-qweewqe

Ayodhya; ‘ಮಂದಿರ-ಮಸೀದಿ’ಸಮಸ್ಯೆಯಲ್ಲ,ಅಭಿವೃದ್ಧಿ ಬಯಸುತ್ತೇವೆ ಎಂದ ಮುಸ್ಲಿಮರು

Rabkavi-Banhatti; ರೋಹಿಣಿ ಮಳೆ ಒಲಿದರೆ ರೈತನ ಬಾಳೇ ಬಂಗಾರ

Rabkavi-Banhatti; ರೋಹಿಣಿ ಮಳೆ ಒಲಿದರೆ ರೈತನ ಬಾಳೇ ಬಂಗಾರ

1-weweqwew

CRPF exits;ಮೇ 20 ರಿಂದ ಸಿಐಎಸ್ಎಫ್ ತುಕಡಿಗಳಿಂದ ಸಂಸತ್ತಿಗೆ ಭದ್ರತೆ

1-qweqwe

Kushtagi: ಸಿಡಿಲಿಗೆ ಬಿತ್ತನೆ ಕಾರ್ಯ ನಿರತ ರೈತ ಬಲಿ

1-wqqewqeq

Hubli; ಜನರಲ್ಲಿ ಪೊಲೀಸರ ಬಗ್ಗೆ ನಂಬಿಕೆ ಹೋಗಿದೆ: ಎಡಿಜಿಪಿ ಹಿತೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.