ಜಿಲ್ಲೆಗೆ ಸ್ವತ್ಛತೆಯಲ್ಲಿ ರಾಜ್ಯದಲ್ಲಿಯೇ ವಿಶಿಷ್ಟ ಸ್ಥಾನ: ಜಿಲ್ಲಾಧಿಕಾರಿ ಜಗದೀಶ್‌


Team Udayavani, Feb 14, 2020, 6:01 AM IST

jagadesh

ಉಡುಪಿ: ಸ್ವತ್ಛತೆಯ ದೃಷ್ಟಿಯಲ್ಲಿ ಉಡುಪಿ ಜಿಲ್ಲೆಗೆ ವಿಶೇಷ ಸ್ಥಾನ ಮಾನಗಳಿವೆ. ಇದಕ್ಕೆ ಇಲ್ಲಿನ ಜನರ ಕಾಳಜಿ, ಸ್ವತ್ಛತೆಯ ಬಗ್ಗೆ ಸರಕಾರ ಮತ್ತು ಸರಕಾರೇತರ ಸಂಘ- ಸಂಸ್ಥೆಗಳು ಆಯೋಜಿಸುವ ಕಾರ್ಯಕ್ರಮಗಳಿಗೆ ಪೂರಕವಾಗಿ ಸಾರ್ವಜನಿಕ ಜನಸ್ಪಂದನೆ ಕಾರಣವಾಗಿದೆ. ಈ ಅನುಕೂಲಕರ ಪರಿಸ್ಥಿತಿಯನ್ನು ಬಳಸಿಕೊಂಡು ಜಿಲ್ಲೆಗೆ ದೇಶದಲ್ಲಿಯೇ ಹೆಸರು ತರುವಂತೆ ಮುಂದೆಯೂ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಯೋಜನೆಗಳಿವೆ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್‌ ಹೇಳಿದರು.

ಗುರುವಾರ ಮಣಿಪಾಲ ಈಶ್ವರನಗರ ವಾರ್ಡ್‌ನ ಡಾ| ಸುರೇಶ್‌ ರಮಣ ಮಯ್ಯ ಅವರ ಮನೆಯಲ್ಲಿ ಈಶ್ವರನಗರ ರೆಸಿಡೆನ್ಶಿಯಲ್‌ ವೆಲ್‌ ಫೇರ್‌ ಅಸೋಸಿಯೇಷನ್‌, ಸ್ನೇಹಸಂಗಮ ಈಶ್ವರ ನಗರ, ರೋಟರಿ ಸಂಸ್ಥೆಗಳಾದ ಉಡುಪಿ ರಾಯಲ್‌, ಉಡುಪಿ ಮಣಿಪಾಲ, ಈಶ್ವರನಗರ ವಾರ್ಡ್‌ ಸಮಿತಿ, ಉಡುಪಿ ನಗರಸಭೆ, ಸಾಹಸ್‌ ಉಡುಪಿ, ಸಹಕಾರ ಭಾರತಿ ಇವರೆಲ್ಲರ ಜಂಟಿ ಆಶ್ರಯದಲ್ಲಿ ನೂರು ಮನೆಗಳಿಗೆ ಹಸಿ ತ್ಯಾಜ್ಯ ವಿಲೇವಾರಿ ಘಟಕ ಪೈಪ್‌ ಕಾಂಪೋಸ್ಟಿಂಗ್‌ನ್ನು ಅಳವಡಿಸುವ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ನಗರಸಭಾ ಸದಸ್ಯ ಮಂಜುನಾಥ್‌ ಮಣಿಪಾಲ, ನಗರಸಭೆಯ ಆರೋಗ್ಯಾಧಿಕಾರಿ ಕರುಣಾಕರ್‌, ಸಾಹಸ್‌ ಸಂಸ್ಥೆಯ ಜಾನ್‌ ರತ್ನಾಕರ್‌ ಈ ಕಾರ್ಯಕ್ರಮವನ್ನು ಸಂಘಟಿಸಿದರು. ಡಾ| ಸುರೇಶ ರಮಣ್‌ ಮಯ್ಯ, ಹರೀಶ್‌ ಜಿ. ಕಲ್ಮಾಡಿ, ದಿನೇಶ್‌ ಹೆಗ್ಡೆ ಅತ್ರಾಡಿ, ಗಿರೀಶ್‌ ಭೋವಿ, ಡಾ| ಎಚ್‌.ಜಿ. ಗೌರಿ, ಎಚ್‌.ಎನ್‌.ಎಸ್‌.ರಾವ್‌, ಡಾ| ಯಜ್ಞೆàಶ್‌ ಶರ್ಮ, ಸುಧಾಕರ್‌ನಾಯಕ್‌, ರಾಜವರ್ಮ ಅರಿಗ, ದಿನೇಶ್‌ ಹೆಗ್ಡೆ ಅತ್ರಾಡಿ, ಶ್ರೀನಿವಾಸ್‌ ರಾವ್‌, ಎಚ್‌.ಕೆ.ವಿ.ರಾವ್‌, ರಾಘವೇಂದ್ರ ಕಾಮತ್‌, ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಪ್ರಮೀಳಾ ನಾಯಕ್‌, ಸತೀಶ್‌ ಸಾಲಿಯಾನ್‌, ಸಾಲಿಕೇರಿ ಬ್ರಹ್ಮಲಿಂಗ ದುರ್ಗಾ
ಪರಮೇಶ್ವರಿ ದೇಗುಲದ ಆಡಳಿತ ಮೊಕ್ತೇ ಸರ ಬಾಲಕೃಷ್ಣ ಶೆಟ್ಟಿಗಾರ್‌, ನಾಗ ರಾಜ್‌ ಕೆ., ಸ್ವತ್ಛಮ್‌ ಕಾರ್ಯಕರ್ತರು ಹಾಜರಿದ್ದರು.

ಪೈಪ್‌ ಕಾಂಪೋಸ್ಟಿಂಗ್‌ ಅಳವಡಿಕೆಗೆ 50 ಶೇ. ಸಬ್ಸಿಡಿ
ಜಿಲ್ಲೆಯ ಎಲ್ಲ ಭಾಗಗಳಲ್ಲೂ ಪೈಪ್‌ ಕಾಂಪೋಸ್ಟಿಂಗ್‌ ಇತ್ತೀಚೆಗೆ ಪ್ರಚಲಿತವಾಗುತ್ತಿದ್ದು ಹಸಿ ತ್ಯಾಜ್ಯಗಳನ್ನು ಮನೆಯಲ್ಲಿಯೇ ವಿಲೇವಾರಿ ಮಾಡುವ ಉದ್ದೇಶದಿಂದ ಇದಕ್ಕೆ ಪ್ರೋತ್ಸಾಹ ನೀಡಲಾಗುತ್ತಿದೆ. ಉಡುಪಿ ನಗರ ಭಾಗದಲ್ಲಿ ಪೈಪ್‌ ಕಾಂಪೋಸ್ಟಿಂಗ್‌ ಅಳವಡಿಸುವ ಪ್ರತಿಯೊಬ್ಬರಿಗೂ 50 ಶೇ. ಸಬ್ಸಿಡಿ ನೀಡುವ ಯೋಜನೆಯನ್ನು ನೀಡುವ ಬಗ್ಗೆ ಚಿಂತನೆ ನಡೆಯುತ್ತಿದೆ.

ನಮ್ಮ ಉದ್ದೇಶ ಒಟ್ಟಾರೆಯಾಗಿ ಹಸಿ ತ್ಯಾಜ್ಯಗಳನ್ನು ನೂರು ಶೇ. ಮನೆಯಿಂದಲೇ ವಿಲೇವಾರಿಗೊಳಿಸಿ ತ್ಯಾಜ್ಯ ನಿರ್ವಹಣೆಯಲ್ಲಿ ನಗರಸಭೆಯ ಮೇಲಿನ ಒತ್ತಡಗಳನ್ನು ಕಡಿಮೆ ಗೊಳಿಸುವುದು ಮತ್ತು ಇದಕ್ಕೆ ಸಾರ್ವಜನಿಕರ ಮತ್ತು ಸ್ಥಳೀಯ ಸಂಸ್ಥೆಗಳ ಸಹಕಾರ ಆವಶ್ಯಕ.
-ಜಿ. ಜಗದೀಶ್‌, ಜಿಲ್ಲಾಧಿಕಾರಿ

ಟಾಪ್ ನ್ಯೂಸ್

8-uv-fusion

UV Fusion: ಬಾಯಾರಿ ಬರುವ ಬಾನಾಡಿಗಳ ರಕ್ಷಿಸೋಣ

veerappa-moily

Prajwal case; ಪಾತ್ರ ಯಾರದ್ದು ಮುಖ್ಯವಲ್ಲ; ಅಭಿನಯ ಮಾಡಿದ್ದು ಮುಖ್ಯ; ವೀರಪ್ಪ ಮೊಯ್ಲಿ

Davanagere; ದೇಶದ ಎಲ್ಲೆಡೆ ಮೋದಿ ಅಲೆ ಕಂಡು ಬರುತ್ತಿದೆ: ಶೋಭಾ ಕರಂದ್ಲಾಜೆ

Davanagere; ದೇಶದ ಎಲ್ಲೆಡೆ ಮೋದಿ ಅಲೆ ಕಂಡು ಬರುತ್ತಿದೆ: ಶೋಭಾ ಕರಂದ್ಲಾಜೆ

Aravinda Limbavali reacts to Prajwal Case

Prajwal Case; ಪಕ್ಷಕ್ಕೆ ಮುಜುಗರ ಆಗಿರುವುದು ಸತ್ಯ: ಅರವಿಂದ ಲಿಂಬಾವಳಿ

Dakshina Kannada: ದ.ಕ. ಜಿಲ್ಲೆಗೆ ಮೂರೇ ತಿಂಗಳಲ್ಲಿ 1.23 ಕೋಟಿ ಪ್ರವಾಸಿಗರು !

Dakshina Kannada: ದ.ಕ. ಜಿಲ್ಲೆಗೆ ಮೂರೇ ತಿಂಗಳಲ್ಲಿ 1.23 ಕೋಟಿ ಪ್ರವಾಸಿಗರು !

6-virtual-world

UV Fusion: ವರ್ಚುವಲ್‌  ಪ್ರಪಂಚದಲ್ಲಿ ಅನಾಥರು

Pen Drive Case; ಪ್ರಜ್ವಲ್ ರೇವಣ್ಣ ವಿರುದ್ಧ ಲುಕ್‌ಔಟ್ ನೋಟಿಸ್ ಹೊರಡಿಸಿದ ಎಸ್ಐಟಿ

Pen Drive Case; ಪ್ರಜ್ವಲ್ ರೇವಣ್ಣ ವಿರುದ್ಧ ಲುಕ್‌ಔಟ್ ನೋಟಿಸ್ ಹೊರಡಿಸಿದ ಎಸ್ಐಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಬಿಸಿಲಲ್ಲಿ ಬಿಸಿಯೂಟ ಸೇವಿಸಲು ವಿದ್ಯಾರ್ಥಿಗಳ ನಿರಾಸಕ್ತಿ

Udupi ಬಿಸಿಲಲ್ಲಿ ಬಿಸಿಯೂಟ ಸೇವಿಸಲು ವಿದ್ಯಾರ್ಥಿಗಳ ನಿರಾಸಕ್ತಿ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

8-uv-fusion

UV Fusion: ಬಾಯಾರಿ ಬರುವ ಬಾನಾಡಿಗಳ ರಕ್ಷಿಸೋಣ

ರಂಗ ಸಂಗಾತಿ 16ನೇ ವಾರ್ಷಿಕೋತ್ಸವ; ರಂಗಭಾಸ್ಕರ ಪ್ರಶಸ್ತಿಗೆ ನಟ ನವೀನ್‌ ಪಡೀಲ್‌ ಆಯ್ಕೆ

ರಂಗ ಸಂಗಾತಿ 16ನೇ ವಾರ್ಷಿಕೋತ್ಸವ; ರಂಗಭಾಸ್ಕರ ಪ್ರಶಸ್ತಿಗೆ ನಟ ನವೀನ್‌ ಪಡೀಲ್‌ ಆಯ್ಕೆ

veerappa-moily

Prajwal case; ಪಾತ್ರ ಯಾರದ್ದು ಮುಖ್ಯವಲ್ಲ; ಅಭಿನಯ ಮಾಡಿದ್ದು ಮುಖ್ಯ; ವೀರಪ್ಪ ಮೊಯ್ಲಿ

ಆಪತ್ಕಾಲಕ್ಕೆ ಆತಂಕ; “ರಕ್ತ’ ಅಭಾವ- ಬೇಡಿಕೆ ವಿಪರೀತ ಏರಿಕೆ!

ಆಪತ್ಕಾಲಕ್ಕೆ ಆತಂಕ; “ರಕ್ತ’ ಅಭಾವ- ಬೇಡಿಕೆ ವಿಪರೀತ ಏರಿಕೆ!

7-uv-fusion

Father: ಅಪ್ಪ – ಮರೆಯಲಾಗದ ಬಂಧ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.