ಮಂಗಳೂರು ಗೋಲಿಬಾರ್‌: ಮ್ಯಾಜಿಸ್ಟೀರಿಯಲ್‌ ವಿಚಾರಣೆ

ಸಾಕ್ಷಿಗಳ ಹೇಳಿಕೆ, ವೀಡಿಯೋ ದಾಖಲು

Team Udayavani, Feb 14, 2020, 7:20 AM IST

mangalore

ಮಂಗಳೂರು: ನಗರದಲ್ಲಿ ಡಿಸೆಂಬರ್‌ 19ರಂದು ನಡೆದ ಅಹಿತಕರ
ಘಟನೆ ಮತ್ತು ಪೊಲೀಸ್‌ ಗೋಲಿಬಾರ್‌ ಕುರಿತ ಮ್ಯಾಜಿಸ್ಟೀರಿಯಲ್‌ ತನಿಖೆಯ ಭಾಗವಾಗಿ ಗುರುವಾರ ಮಂಗಳೂರು ಸಹಾಯಕ ಆಯುಕ್ತರ ಕೋರ್ಟ್‌ ಹಾಲ್‌ನಲ್ಲಿ ಸಾಕ್ಷಿಗಳ ವಿಚಾರಣೆ ನಡೆಯಿತು.

ಮ್ಯಾಜಿಸ್ಟೀರಿಯಲ್‌ ತನಿಖೆಗೆ ನೇಮಕಗೊಂಡಿರುವ ಉಡುಪಿ ಜಿಲ್ಲಾಧಿಕಾರಿ ಜಗದೀಶ್‌ ಅವರು ಸಾಕ್ಷಿಗಳ ಹೇಳಿಕೆಗಳನ್ನು ಹಾಗೂ ಪೊಲೀಸರಿಂದ ವೀಡಿಯೋ ಸಾಕ್ಷ್ಯದ ತುಣುಕುಗಳನ್ನು ಸ್ವೀಕರಿಸಿ ದಾಖಲಿಸಿಕೊಂಡರು.

ಪೊಲೀಸರ ಪರ ನೋಡಲ್‌ ಅಧಿಕಾರಿ ಮಂಗಳೂರು ಉತ್ತರ ಉಪ ವಿಭಾಗದ ಎಸಿಪಿ ಕೆ.ಯು. ಬೆಳ್ಳಿಯಪ್ಪ ವೀಡಿಯೋಗಳನ್ನು ಹಾಜರು ಪಡಿಸಿದರು.

ಫೆ. 6ರಂದು ಸಾಕ್ಷಿ ಹೇಳಿಕೆ ನೀಡಲು ತಡವಾಗಿ ಬಂದಿದ್ದ 8 ಮಂದಿಗೆ ಫೆ. 13ರಂದು ಸಾಕ್ಷಿ ಹೇಳಿಕೆ ನೀಡಲು ಅವಕಾಶ ನೀಡಲಾಗಿತ್ತು. ಆದರೆ ಗುರು
ವಾರ ಕೇವಲ ಇಬ್ಬರು ಮಾತ್ರ ಲಿಖೀತ ಹೇಳಿಕೆ ನೀಡಿದರು. ಇನ್ನೋರ್ವ ವ್ಯಕ್ತಿ ಮೊಬೈಲ್‌ ಧ್ವನಿ ಮುದ್ರಿಕೆ ಹಾಜರು ಪಡಿಸಿದರು.

ಒಟ್ಟು 203 ಮಂದಿ ಸಾಕ್ಷ್ಯ
ವಿಚಾರಣೆಯ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಜಗದೀಶ್‌ ಅವರು, ಈ ಮೊದಲು 201 ಮಂದಿ ಸಾಕ್ಷಿ ನುಡಿದು ಸಾಕ್ಷ್ಯಗಳನ್ನು ಹಾಜರು ಪಡಿಸಿದ್ದರು. ಗುರುವಾರ ಇಬ್ಬರು ಸಾಕ್ಷ್ಯ ನುಡಿದಿದ್ದಾರೆ. ಈ ತನಕ ಒಟ್ಟು 203 ಮಂದಿ ಸಾಕ್ಷ್ಯ ನುಡಿದಂತಾಗಿದೆ ಎಂದು ತಿಳಿಸಿದರು.

ಎಸಿಪಿ ಬೆಳ್ಳಿಯಪ್ಪ ಅವರು 50 ವೀಡಿಯೋ ತುಣುಕುಗಳ ಪೆನ್‌ಡ್ರೈವ್‌ ಮತ್ತು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದ ಸಿಸಿ ಟಿವಿ ಫುಟೇಜ್‌ಗಳ 23 ಸಿಡಿಆರ್‌ಗಳಿಗೆ ಸಂಬಂಧಿಸಿದ ಸ್ವೀಕೃತಿಯನ್ನು ಸಲ್ಲಿಸಿದ್ದಾರೆ ಎಂದರು.

ಕೇವಲ 1 ವೀಡಿಯೊ!
ಹೈಕೋರ್ಟ್‌ ಸೂಚನೆಯಂತೆ ವೀಡಿಯೋ ತುಣುಕು, ಸಿಸಿಟಿವಿ ಫ‌ುಟೇಜ್‌ಗಳನ್ನು ಹಾಜರುಪಡಿಸಲು ಸಾರ್ವಜನಿಕರು, ಮಾಧ್ಯಮ, ಪೊಲೀಸರಿಗೆ ಸೂಚಿಸಲಾಗಿತ್ತು. ಆದರೆ ಸಾರ್ವಜನಿಕರ ಪರವಾಗಿ ಓರ್ವ ಮಾತ್ರ ಮೊಬೈಲ್‌ ರೆಕಾರ್ಡಿಂಗ್‌ನ ತುಣುಕನ್ನು ಹಾಜರುಪಡಿಸಿದ್ದಾರೆ ಎಂದರು.
ಫೆ. 24ರಂದು ಹೈಕೋರ್ಟ್‌ನಲ್ಲಿ ವಿಚಾರಣೆ ನಡೆಯಲಿದ್ದು, ಈವರೆಗಿನ ವರದಿ ಸಲ್ಲಿಸಲಾಗುವುದು ಎಂದು ಜಗದೀಶ್‌ ವಿವರಿಸಿದರು.

ಫೆ. 19ರಂದು ಮತ್ತೂಂದು ಅವಕಾಶ
ಇಂದು ಕರ್ನಾಟಕ ಬಂದ್‌ ಇದ್ದ ಕಾರಣ ಹಾಗೂ ಸಾರ್ವಜನಿಕರಿಗೆ ಇನ್ನೊಂದು ಅವಕಾಶ ನೀಡುವ ನಿಟ್ಟಿನಲ್ಲಿ ಫೆ. 19ಕ್ಕೆ ವಿಚಾರಣೆಯನ್ನು ಮುಂದೂಡಲಾಗಿದೆ. ಅಂದು ಬೆಳಗ್ಗೆ 11ರಿಂದ ಮಧ್ಯಾಹ್ನ 1 ಗಂಟೆ ವರೆಗೆ ವಿಚಾರಣೆ ನಡೆಯಲಿದೆ. ಸಾಮಾಜಿಕ ಜಾಲತಾಣದಲ್ಲಿನ ವೀಡಿಯೋಗಳನ್ನು ಪರಿಗಣಿಸು ವುದಿಲ್ಲ. ಸ್ವತಃ ಅವರೇ ಮಾಡಿದ ವೀಡಿಯೋ ತುಣುಕುಗಳನ್ನು ಅಥವಾ ಮನೆಯಲ್ಲಿನ ಸಿಸಿಟಿವಿಯ ಸಿಡಿಆರ್‌ಗಳನ್ನು ಸ್ವೀಕರಿಸಲಾಗುವುದು ಎಂದು ತಿಳಿಸಿದರು.

ಟಾಪ್ ನ್ಯೂಸ್

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqqwqwqeqwe

Kodava Hockey: ಚೇಂದಂಡಕ್ಕೆ 3ನೇ ಪ್ರಶಸ್ತಿ

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

1-wwwewqe

IPL; ವಿಲ್‌ ಜಾಕ್ಸ್‌ ಭಾರೀ ಸಂಚಲನ: ಆರೇ ನಿಮಿಷದಲ್ಲಿ ಅರ್ಧ ಶತಕ!

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.