ದತ್ತ ಮಂದಿರದಲ್ಲಿ ಗೋಪಾಳ ಕಾವಲಿ
Team Udayavani, Feb 14, 2020, 10:55 AM IST
ಅಫಜಲಪುರ: ದೇವಲಗಾಣಗಾಪುರದ ದತ್ತ ದೇವಸ್ಥಾನದಲ್ಲಿ ಗುರುವಾರ ಪ್ರತಿಪದ ದಿನದಂದು ದತ್ತ ಮಹಾರಾಜರು ಶ್ರೀಶೈಲದ ಕದಳಿ ವನಕ್ಕೆ ಪ್ರಯಾಣ ಬೆಳೆಸಿದ ಪ್ರಯುಕ್ತ “ಗೋಪಾಳ ಕಾವಲಿ’ ನಡೆದಿದ್ದು, ಸಾವಿರಾರು ಭಕ್ತರು ಪಾಲ್ಗೊಂಡು ದರ್ಶನ ಪಡೆದರು.
ಗುರುವಾರ ಬೆಳಗಿನ ಜಾವ 2 ಗಂಟೆಗೆ ಕಾಕಡಾರತಿ, ನಿರ್ಗುಣ ಪಾದುಕೆ ಪೂಜೆ, ಪಾಲಕರಿ ಪೂಜಾರಿಗಳಿಂದ ಚಂದನ ಲೇಪನ, 5:30ಕ್ಕೆ ಮಹಾ ಮಂಗಳಾರತಿ, ನಂತರ ಭಕ್ತರಿಗೆ ಪಾದುಕೆಗಳ ದರ್ಶನ, 10 ಗಂಟೆಗೆ ಮಹಾ ಮಂಗಳಾರತಿ, 12 ಗಂಟೆಗೆ ಗೋಪಾಳ ಕಾವಲಿ (ಮೊಸರು ಗಡಿಗೆ ಒಡೆಯುವುದು) 12:30ಕ್ಕೆ ಪಲ್ಲಕ್ಕಿ ಉತ್ಸವವು ಅಪಾರ ಭಕ್ತರೊಂದಿಗೆ ರುದ್ರಪಾದ ತೀರ್ಥಕ್ಕೆ ತೆರಳಿ ಪುಣ್ಯಸ್ನಾನ ನಡೆಯಿತು.
ಪುಣ್ಯಸ್ನಾನ ಬಳಿಕ ಮಧ್ಯಾಹ್ನ 3ಗಂಟೆಗೆ ದೇವಸ್ಥಾನಕ್ಕೆ ಮರಳಿ ಪಲ್ಲಕ್ಕಿ ಬಂತು. ಈ ಎಲ್ಲ ಕಾರ್ಯಕ್ರಮಗಳಲ್ಲಿ ಸೀಮಾಂಧ್ರ, ತೆಲಂಗಾಣ, ಮಹಾರಾಷ್ಟ್ರ, ಕೇರಳ, ಗೋವಾ, ತಮಿಳುನಾಡು ಸೇರಿದಂತೆ ರಾಜ್ಯದ ವಿವಿಧ ಮೂಲೆಗಳಿಂದ ಸಾವಿರಾರು ಭಕ್ತರು ಆಗಮಿಸಿದ್ದರು.
ಮಾಜಿ ಶಾಸಕ ಮಾಲೀಕಯ್ಯ ಗುತ್ತೇದಾರ, ಮುಖಂಡ ಮಹಾದೇವ ಗುತ್ತೇದಾರ, ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಕೆ.ಜಿ. ಬಿರಾದಾರ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
MUST WATCH
ಹೊಸ ಸೇರ್ಪಡೆ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು