ಹೆಚ್ಚುತ್ತಿದೆ ಅಕ್ರಮ ಮರಳು ದಂಧೆ

ಜನರ ನೆಮ್ಮದಿಗೂ ಭಂಗವಾಹನ ಸವಾರರು- ಪಾದಚಾರಿಗಳಿಗೂ ಸಮಸ್ಯೆ

Team Udayavani, Feb 14, 2020, 5:50 PM IST

14-February-13

ತೀರ್ಥಹಳ್ಳಿ: ತಾಲೂಕಿನಲ್ಲಿ ಸರ್ಕಾರ ನಿಗದಿ ಪಡಿಸಿರುವ ಕೆಲವು ಮರಳು ಕ್ವಾರಿಗಳು ಇನ್ನು ತೆರೆಯದಿರುವ ಕಾರಣ ಅಕ್ರಮ ಮರಳು ಲೂಟಿಕೋರರಿಗೆ ಪ್ರತಿದಿನ ಹಬ್ಬದೂಟವಾಗುತ್ತಿದೆ. ಆದರೆ ಪಾದಚಾರಿಗಳಿಗೆ, ವಾಯು ವಿಹಾರಕ್ಕೆ ಹೋಗುವವರಿಗೆ, ವಾಹನ ಸವಾರರಿಗೆ ಬೆಳಗಿನ ಮುಸುಕಿನ ಜಾವದಲ್ಲಿ ತಮ್ಮ ಪ್ರಾಣವನ್ನು ಕೈಯಲ್ಲಿ ಹಿಡಿದುಕೊಂಡು ಓಡಾಡುವ ಪರಿಸ್ಥಿತಿ ಉದ್ಭವವಾಗಿದೆ.

ಅಕ್ರಮ ಮರಳು ದಂಧೆ ತಡೆಯಬೇಕಾದ ಅಧಿಕಾರಿಗಳು ಕಾಂಚಾಣ ಜಣ ಜಣದ ಆಟ ಕಂಡು ಜಾಣ ಮೌನ ವಹಿಸಿದ್ದಾರೆ. ಈ ಜಾಣ ಮೌನದ ಹಿಂದಿನ ಗುಟ್ಟೇನು ಎಂದು ಅಧಿಕಾರಿಗಳೇ ತಿಳಿಸಬೇಕಾಗಿದೆ. ಕಳೆದ ವರ್ಷ ಸುರಿದ ಭಾರೀ ಮಳೆಯಿಂದ ತುಂಗಾ ನದಿಯ ಅಕ್ಕಪಕ್ಕ ಭಾರೀ ಪ್ರಮಾಣದ ಮರಳು ಶೇಖರಣೆಯಾಗಿದ್ದು ಪ್ರತಿದಿನ ಹಗಲು- ರಾತ್ರಿಯೆನ್ನದೆ ತುಂಗಾ ನದಿಯ ಪಾತ್ರದಿಂದ ಹೊರಬೈಲು, ಕೌರಿಬೈಲು, ಬುಕ್ಲಾಪುರ, ಕುಶಾವತಿ, ಸಂಕದಹೊಳೆ,
ಕಿತ್ತಿನಗದ್ದೆ, ಮೇಳಿಗೆ, ರಂಜದಕಟ್ಟೆ, ಕುರುವಳ್ಳಿ ತೋಟಗಾರಿಕಾ ಇಲಾಖೆ, ಹೆಗ್ಗೇಬೈಲು, ತುಂಬಡಿ, ಹುಣಸವಳ್ಳಿಯ ನದಿ ಪಾತ್ರದಿಂದ ಅಕ್ರಮವಾಗಿ ಪಿಕಪ್‌, ಟ್ರ್ಯಾಕ್ಟರ್‌ಗಳನ್ನು ಬಳಸಿ ಮರಳು ತೆಗೆಯಲಾಗುತ್ತಿತ್ತು.

ಇದರಿಂದ ಸರ್ಕಾರದ ಬೊಕ್ಕಸಕ್ಕೆ ಲಕ್ಷಾಂತರ ರೂ. ಆದಾಯ ಕುಂಠಿತವಾಗುತ್ತಿದೆ. ಈ ಬಗ್ಗೆ ಇತ್ತೀಚೆಗೆ ಶಿವಮೊಗ್ಗ ಕೆಡಿಪಿ ಸಭೆಯಲ್ಲಿ ಶಿವಮೊಗ್ಗ ಜಿಲ್ಲೆ ಉಸ್ತುವಾರಿ ಸಚಿವರಾದ ಈಶ್ವರಪ್ಪ ಮತ್ತು ಶಾಸಕರ ಉಪಸ್ಥಿತಿಯಲ್ಲೂ ಹಾಗೂ ತೀರ್ಥಹಳ್ಳಿ ಕೆಡಿಪಿ ಸಭೆಯಲ್ಲೂ ಬಿಸಿಬಿಸಿ ಚರ್ಚೆಯಾದರೂ ಚರ್ಚೆಯ ವಿಷಯ ಕೇವಲ ಮೀಟಿಂಗ್‌ ಹಾಗೂ ಪತ್ರಿಕೆಗಳಲ್ಲಿ ಪ್ರಕಟವಾಗಿದೆಯೇ ಹೊರತು ಅಕ್ರಮ ಮರಳು ಸಾಗಾಟ ಮಾತ್ರ ನಿಂತಿಲ್ಲ.

ಕೆಲವು ಭಾಗಗಳಲ್ಲಿ ರಾತ್ರಿ ಮರಳು ತೆಗೆಯುವುದರಿಂದ ಅದರ ಶಬ್ದದಿಂದ ಸಾರ್ವಜನಿಕರಿಗೆ ಕಿರಿಕಿರಿಯಾಗಿದೆ ಗ್ರಾಮಸ್ಥರು ಸಂಬಂಧಪಟ್ಟ ಗ್ರಾಪಂಗಳಿಗೆ ತಿಳಿಸಿದರೂ ಸಹ ಇದರ ಬಗ್ಗೆ ತಲೆ ಕೆಡಿಸಿಕೊಳ್ಳುತ್ತಿಲ್ಲ. ಈ ಬಗ್ಗೆ ಗ್ರಾಮಸ್ಥರು ಪೊಲೀಸ್‌, ಅರಣ್ಯ ಮತ್ತು ಗಣಿ ಇಲಾಖೆಗೆ ದೂರು ನೀಡಿದರೂ ಯಾವುದೇ ಪ್ರಯೋಜನವಾಗುತ್ತಿಲ್ಲ ಎಂಬ ಮಾತು ಸಾರ್ವಜನಿಕರಿಂದ ಕೇಳಿಬರುತ್ತಿದೆ.

ಇಲಾಖಾ ಅಧಿಕಾರಿಗಳೇ ಅಕ್ರಮ ದಂಧೆಕೋರರೊಂದಿಗೆ ಶಾಮೀಲಾಗಿದ್ದಾರೆಂದು ಜನರು ಅಂಗಡಿ- ಮುಂಗಟ್ಟುಗಳಲ್ಲಿ ಮಾತನಾಡಿಕೊಳ್ಳುತ್ತಿದ್ದಾರೆ. ಅನೇಕ ವರ್ಷಗಳ ಹಿಂದೆ ಗಂಧ ಸಾಗಾಟದ ದಂಧೆಯಿದ್ದಾಗಲೂ ಇದೇ ರೀತಿಯಲ್ಲಿ ಜನರ ನೆಮ್ಮದಿ ಕೆಡಿಸುತ್ತಿತ್ತು. ಈಗ ಅಕ್ರಮ ಮರಳಿನ ದಂಧೆಯಾಗಿದೆ. ಆದ್ದರಿಂದ ಜನರು ಸ್ಯಾಂಡಲ್‌ ಹೋಗಿದೆ ಸ್ಯಾಂಡ್‌ ಬಂದಿದೆ ಎಂಬ ಮಾತುಗಳನ್ನಾಡುತ್ತಿದ್ದಾರೆ.

ತೀರ್ಥಹಳ್ಳಿಯಿಂದ ಪಿಕಪ್‌ ಮತ್ತು ಟ್ರ್ಯಾಕ್ಟರ್‌ ಗಳಲ್ಲಿ ಈ ದಂಧೆಕೋರರು ಒಂದು ಕಡೆ ಕಾಟಿಂಗ್‌ ಮಾಡಿ ಕಾಟಿಂಗ್‌ ಮಾಡಿದ ಮರಳನ್ನು ಟಿಪ್ಪರ್‌ ಮತ್ತು ಲಾರಿಗೆ ತುಂಬಿಕೊಂಡು ಹೋಗುತ್ತಿದ್ದಾರೆ. ಪ್ರತಿ ದಿನ ಅಕ್ರಮ ಮರಳು ಸಾಗಾಟದ ವಾಹನಗಳು ತೀರ್ಥಹಳ್ಳಿ ಪಟ್ಟಣದ ಮುಖಾಂತರ ಮಾಳೂರು ಠಾಣೆ ಹಾಗೂ ಮಂಡಗದ್ದೆ ಅರಣ್ಯ ಇಲಾಖೆ ಕಚೇರಿ ಎದುರೇ ಯಾವುದೆ ಭಯಭೀತಿ ಇಲ್ಲದೇ ಸಂಚರಿಸುತ್ತಿವೆ ಎಂಬ ಮಾತು ಸಾರ್ವಜನಿಕರಿಂದ ಕೇಳಿ ಬರುತ್ತಿದೆ.

ತೀರ್ಥಹಳ್ಳಿ ಮತ್ತು ಶಿವಮೊಗ್ಗದ ನಡುವಿನ ಗಾಜನೂರಿನ ಫಾರೆಸ್ಟ್‌ ಗೇಟ್‌ ಬಳಿ ಈ ಅಕ್ರಮ ಮರಳು ಸಾಗಾಟದ ಟಿಪ್ಪರ್‌ ಲಾರಿ ಹೋಗುತ್ತಿದ್ದಂತೆ ಲಾರಿಯನ್ನು ತಡೆದು ತಪಾಸಣೆ ಮಾಡದೆ ಲಾರಿಯೊಂದಕ್ಕೆ ಎರಡು ಸಾವಿರ ರೂ. ಹಣ ಪಡೆದುಕೊಂಡು ಗೇಟ್‌ನಿಂದ ಬಿಡುತ್ತಿದ್ದಾರೆ ಎಂದು ಹೆಸರು ಹೇಳಲಿಚ್ಛಿಸದ ಟಿಪ್ಪರ್‌ ಚಾಲಕರೊಬ್ಬರು ಮಾಹಿತಿ ನೀಡಿದ್ದಾರೆ.

ರಾತ್ರಿ ಮತ್ತು ಬೆಳಗಿನ ಹೊತ್ತು ಅಕ್ರಮ ಮರಳು ಸಾಗಾಟದ ವಾಹನಗಳು ರಸ್ತೆಯಲ್ಲಿ ಅತಿ ವೇಗ ಮತ್ತು ಪೈಪೋಟಿಯಿಂದ ಸಂಚರಿಸುತ್ತಿರುವುದರಿಂದ ಬೆಳಗಿನ ಸಮಯದಲ್ಲಿ ಓಡಾಡುವ ಪಾದಚಾರಿಗಳಿಗೆ, ವಾಹನ ಸವಾರರಿಗೆ ಕಂಟಕ ಕಟ್ಟಿಟ್ಟ ಬುತ್ತಿ. ಈ ಬಗ್ಗೆ ಶಿವಮೊಗ್ಗ ಜಿಲ್ಲಾ ರಕ್ಷಣಾ ಧಿಕಾರಿಗಳು ತೀರ್ಥಹಳ್ಳಿಯ ಡಿವೈಎಸ್‌ಪಿ ರವಿಕುಮಾರ್‌, ಸರ್ಕಲ್‌ ಇನ್ಸೆಪೆಕ್ಟರ್‌ ಗಣೇಶಪ್ಪ, ಸಬ್‌ ಇನ್ಸೆಪೆಕ್ಟರ್‌ ಸುಷ್ಮಾ ಅವರು ತಕ್ಷಣ ಗಮನಿಸಿ ಅಕ್ರಮ ಮರಳು ತುಂಬಿ ಅತಿ ವೇಗದ ಸಾಗಾಟಕ್ಕೆ ತಡೆ ನೀಡಲು ಕ್ರಮ ಜರುಗಿಸಬೇಕೆಂದು ಒತ್ತಾಯಿಸಿದ್ದಾರೆ.

ವಿಶೇಷ ವರದಿ

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Kerala ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.