ಹೊನ್ನಿನ ಮೊಗದ ಮುಕ್ಕಣ್ಣನ ಶಿವರಾತ್ರಿ


Team Udayavani, Feb 15, 2020, 6:05 AM IST

honninna

ಮಹಾ ಶಿವರಾತ್ರಿಯಂದು ಮೈಸೂರು ಅರಮನೆ ಆವರಣದಲ್ಲಿರುವ ಶ್ರೀ ತ್ರಿಣೇಶ್ವರಸ್ವಾಮಿಯನ್ನು (ಮುಕ್ಕಣ್ಣ) ನೋಡುವುದೇ ಒಂದು ಚೆಂದ. ಬಂಗಾರದ ಮುಖ ಹೊತ್ತು ಫ‌ಳಗುಟ್ಟುತ್ತಿರುತ್ತಾನೆ. ಮೈಸೂರಿನ ದೊಡ್ಡ ಕೆರೆ ಏರಿಯ ಮೇಲೆ ಅರಮನೆ ನಿರ್ಮಿಸುವ ಮುಂಚೆಯೇ ಇಲ್ಲಿ ತ್ರಿಣೇಶ್ವರ ಸ್ವಾಮಿ ಮತ್ತು ಕೋಡಿ ಸೋಮೇಶ್ವರ ಸ್ವಾಮಿ ದೇಗುಲಗಳನ್ನು 16ನೇ ಶತಮಾನದಲ್ಲಿ ರಾಜ ಒಡೆಯರ್‌ ಆಳ್ವಿಕೆಯ ಕಾಲದಲ್ಲಿ ಕಟ್ಟಿಸಲಾಗಿತ್ತು. ದ್ರಾವಿಡ ಶೈಲಿಯ ದೇಗುಲ ಇದು. ಸಾಮಾನ್ಯವಾಗಿ ದೇಗುಲಗಳು ಪೂರ್ವಾಭಿಮುಖವಾಗಿದ್ದರೆ, ಶಿವನ ಸ್ವರೂಪಿ ಮೂರು ಕಣ್ಣಿನ ದೈವ ತ್ರಿಣೇಶ್ವರ ಸ್ವಾಮಿ ದೇಗುಲ ಪಶ್ಚಿಮಾಭಿಮುಖವಾಗಿದೆ.

ತ್ರಿಣೇಶ್ವರನ ಅಂಗಳದಲ್ಲಿ…: ದೇಗುಲ ಪ್ರಕಾರದ ಸುತ್ತಲೂ ಪಾರ್ವತಿ, ಸೂರ್ಯ ನಾರಾಯಣ ಮತ್ತು ಶಂಕರಾಚಾರ್ಯರ ವಿಗ್ರಹಗಳು ಮತ್ತು ಹಲವಾರು ಲಿಂಗಗಳು ಇವೆ. ದೇವಾಲಯದ ಮಹಾದ್ವಾರದ ಒಳಗಿನ ಗೂಡುಗಳಲ್ಲಿ ಗಣಪತಿ ಮತ್ತು ಭೈರವನ ಮೂರ್ತಿಗಳಿವೆ. ನವರಂಗದಲ್ಲಿ ಎರಡು ಪ್ರವೇಶದ್ವಾರಗಳಿದ್ದು, ಒಂದು ಪಶ್ಚಿಮ ಮತ್ತು ಇನ್ನೊಂದು ದಕ್ಷಿಣಕ್ಕಿದೆ. ಪ್ರವೇಶದ್ವಾರದ ಎಡಭಾಗದಲ್ಲಿ ಸುಮಾರು ಅರ್ಧ ಮೀಟರ್‌ ಎತ್ತರವಿರುವ ತೃಣಬಿಂದು ಮಹರ್ಷಿಯ ಪ್ರತಿಮೆ ಇದೆ. “ತೃಣಬಿಂದು ಮಹರ್ಷಿಗಳು ಈ ಸ್ಥಳದಲ್ಲಿ ಶಿವನಿಗಾಗಿ ತಪಸ್ಸು ಮಾಡಿದಾಗ ಇಲ್ಲಿಯೇ ಶಿವ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಇಲ್ಲಿ ತ್ರಿಣೇಶ್ವರನನ್ನು ಪ್ರತಿಷ್ಠಾಪಿಸಿದರು ಎಂದು ಸ್ಥಳ ಪುರಾಣ ಇದೆ’ ಎನ್ನುತ್ತಾರೆ, ತ್ರಿಣೇಶ್ವರ ಸ್ವಾಮಿ ದೇಗುಲದ ಅಂಗಳದಲ್ಲಿರುವ ತ್ರಿಪುರ ಸುಂದರಿ ಅಮ್ಮನವರ ದೇವಸ್ಥಾನದ ಅರ್ಚಕ ಶ್ರೀಹರಿ ಅವರು.

ಮುಖವಾಡ ಹೇಗಿದೆ?: ತ್ರಿಣೇಶ್ವರ ಸ್ವಾಮಿಗೆ ತೊಡಿಸುವ ಚಿನ್ನದ ಮುಖವಾಡ 11 ಕಿಲೊ (716 ತೊಲ) ತೂಗುತ್ತದೆ. ಅಪರಂಜಿ ಚಿನ್ನದ ಈ ಮುಖವಾಡದಲ್ಲಿ ಶಿವನ ತಲೆಯ ಮೇಲೆ ಗಂಗೆ, ಆಕೆಗೆ ಮೂಗುತಿ, ಓಲೆ ಇದೆ. ಶಿವನಿಗೆ ಎಡಭಾಗದಲ್ಲಿ ಕರ್ಣಕುಂಡಲ, ಬಲಭಾಗದಲ್ಲಿ ಕಾಂತಕ (ಲಾಳಾಕೃತಿ), ತಲೆಯ ಮೇಲೆ ಬೆಳ್ಳಿಯ ಚಂದ್ರ… ಹೀಗೆ ಚಿನ್ನದ ಕೊಳಗದ ಮೂರು ಭಾಗಗಳಿದ್ದು, ವರ್ಷಪೂರ್ತಿ ಜಿಲ್ಲಾ ಖಜಾನೆಯಲ್ಲಿರಿಸಲಾಗುತ್ತದೆ. ಮಹಾ ಶಿವರಾತ್ರಿಯ ಹಿಂದಿನ ದಿನ ಜಿಲ್ಲಾ ಖಜಾನೆಯಿಂದ ತಂದು ದೇವಸ್ಥಾನದ ಆಡಳಿತ ವರ್ಗಕ್ಕೆ ಚಿನ್ನದ ಕೊಳಗವನ್ನು ಒಪ್ಪಿಸಲಾಗುತ್ತದೆ. ಮಹಾಶಿವರಾತ್ರಿ­ಯಂದು ಶಿವನಿಗೆ ಚಿನ್ನದ ಕೊಳಗ ಧಾರಣೆ ಮಾಡಿ, ವಿಶೇಷ ಪೂಜೆ ಸಲ್ಲಿಸಿ ಹಗಲು- ರಾತ್ರಿ ಭಕ್ತರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುತ್ತೆ. ಶಿವರಾತ್ರಿ ಮುಗಿದ ಮೇಲೆ ಚಿನ್ನದ ಕೊಳಗವನ್ನು ಮತ್ತೆ ಜಿಲ್ಲಾ ಖಜಾನೆಗೆ ಒಪ್ಪಿಸಲಾಗುತ್ತದೆ.

ಪುತ್ರ ಸಂತಾನದ ನೆನಪಿಗೆ ಚಿನ್ನದ ಮುಖವಾಡ: ಶಿವರಾತ್ರಿಯಲ್ಲಿ ತ್ರಿಣೇಶ್ವರ ಧರಿಸುವ ಮುಖವಾಡಕ್ಕೂ ಒಂದು ಕಥೆ ಇದೆ. ಮೈಸೂರು ಸಂಸ್ಥಾನದ ಕೊನೆಯ ಮಹಾರಾಜರಾದ ಶ್ರೀ ಜಯಚಾಮರಾಜೇಂದ್ರ ಒಡೆಯರ್‌, ತಮಗೆ ಪುತ್ರ ಸಂತಾನವಾದ ಸವಿನೆನಪಿಗಾಗಿ (ಶ್ರೀಕಂಠದತ್ತ ನರಸಿಂಹರಾಜ ಒಡೆಯರ್‌ ಹುಟ್ಟಿದ) 1953ರಲ್ಲಿ ಅರಮನೆ ಕೋಟೆಯಲ್ಲಿರುವ ಶ್ರೀ ತ್ರಿಣೇ ಶ್ವರ ಸ್ವಾಮಿ, ನಂಜನಗೂಡಿನ ಶ್ರೀ ಕಂಠೇಶ್ವರ ಸ್ವಾಮಿ ಹಾಗೂ ಮಲೆ ಮಹದೇಶ್ವರ ಸ್ವಾಮಿಗೆ ಚಿನ್ನದಲ್ಲಿ ಸುಂದರವಾದ ಕೊಳಗ (ಮುಖವಾಡ) ಮಾಡಿಸಿಕೊಟ್ಟಿದ್ದಾರೆ.

* ಗಿರೀಶ್‌ ಹುಣಸೂರು

ಟಾಪ್ ನ್ಯೂಸ್

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bahumuki

ಅರಮನೆಯಂಥ ಬಂಗಲೆ ಇದೆ, ಏನುಪಯೋಗ?

ಮೊದಲ ಗುರಿಯೇ ಕೊನೆಯದೂ ಆಗಿದೆ!

ಮೊದಲ ಗುರಿಯೇ ಕೊನೆಯದೂ ಆಗಿದೆ!

bahumuki

ಹುಡುಗಿಯ ಚುಂಬನ ಮತ್ತು ಆಗಸದ ತಾರೆ

ಟೊಮೇಟೊ ಹಣ್ಣಿನ ಗೊಜ್ಜು

ಟೊಮೇಟೊ ಹಣ್ಣಿನ ಗೊಜ್ಜು

ದೀಪವನ್ನೇ ಏಕೆ ಬಳಸಬೇಕು?

ದೀಪವನ್ನೇ ಏಕೆ ಬಳಸಬೇಕು?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.