ಭ್ರಷ್ಟಾಚಾರ ಪೋಷಕ ಸರ್ಕಾರ: ಸಿದ್ದರಾಮಯ್ಯ
Team Udayavani, Feb 15, 2020, 3:04 AM IST
ಬೆಂಗಳೂರು: ಅಕ್ರಮ ಗಣಿಗಾರಿಕೆ ಆರೋಪ, ಅರಣ್ಯ ಕಾಯ್ದೆಯಡಿ ಪ್ರಕರಣ ಎದುರಿಸುತ್ತಿರುವ ಆನಂದ್ ಸಿಂಗ್ಗೆ ಅರಣ್ಯ ಖಾತೆ ಕೊಡುವ ಮೂಲಕ “ಬಿಜೆಪಿ ಸರ್ಕಾರ ಭ್ರಷ್ಟಾಚಾರ ಪೋಷಕ ಸರ್ಕಾರ’ವೆಂದು ಸಾಬೀತಾಗಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿ, ಆನಂದ್ ಸಿಂಗ್ ಮೇಲೆ ಅಕ್ರಮ ಗಣಿಗಾರಿಕೆ ಆರೋಪ ಇದೆ. ಜೊತೆಗೆ ಅರಣ್ಯ ಕಾಯ್ದೆಯಡಿ ಪ್ರಕರಣ ಸಹ ಎದುರಿಸುತ್ತಿದ್ದಾರೆ.
ಅಂತಹವರಿಗೆ ಮಂತ್ರಿ ಸ್ಥಾನ ಕೊಟ್ಟರೆ “ಕುರಿ ಕಾಯಿ ತೋಳ ಅಂದ್ರೆ, ಸಂಬಳ ಬೇಡ ಅಂತಂತೆ’ ಎಂಬಂತಾಗುತ್ತದೆ ಎಂದು ಕುಟುಕಿದರು. ತಕ್ಷಣ ಸಂಪುಟದಿಂದ ಆನಂಗ್ ಸಿಂಗ್ರನ್ನು ಕೈಬಿಡಬೇಕು. ನೈತಿಕತೆ ಇದ್ದರೆ ಖುದ್ದಾಗಿ ಆನಂದ್ ಸಿಂಗ್ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು. ರಾಜೀನಾಮೆ ಕೊಡದಿದ್ದರೆ ಮುಖ್ಯಮಂತ್ರಿಯವರು ಖಾತೆ ಬದಲಾವಣೆ ಮಾಡಿ ಬೇರೊಬ್ಬರಿಗೆ ನೀಡಬೇಕು ಎಂದು ಒತ್ತಾಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್