ಆಟೋ ಪ್ರಯಾಣ ದರ 5 ರೂ. ಏರಿಕೆ ಸಾಧ್ಯತೆ

ರಿಕ್ಷಾ ಯೂನಿಯನ್‌ಗಳ ಆಗ್ರಹ

Team Udayavani, Feb 15, 2020, 5:59 AM IST

1402MLR101-RIKSHAW

ಮಹಾನಗರ: ಮಂಗಳೂರು ವ್ಯಾಪ್ತಿಯಲ್ಲಿ ಬಾಡಿಗೆ ನಡೆಸುವ ಆಟೋ ಪ್ರಯಾಣ ದರವನ್ನು ಕನಿಷ್ಠ 5 ರೂ. ಏರಿಕೆ ಮಾಡುವಂತೆ ರಿಕ್ಷಾ ಯೂನಿಯನ್‌ಗಳು ಒತ್ತಾಯಿಸುತ್ತಿದ್ದು, ಶೀಘ್ರದಲ್ಲಿ ದರ ಏರಿಕೆ ಆಗುವ ಸಾಧ್ಯತೆಯಿದೆ.

ದ.ಕ. ಜಿಲ್ಲೆಯಲ್ಲಿ ಆಟೋ ಪ್ರಯಾಣ ದರ ಏರಿಕೆ ಆಗದೆ ಐದು ವರ್ಷ ಕಳೆದಿದ್ದು, ಪೆಟ್ರೋಲ್‌, ಡೀಸೆಲ್‌ ದರ ಬಹಳಷ್ಟು ಏರಿಕೆ ಕಂಡಿದೆ. ದರ ಏರಿಕೆ ಮಾಡುವಂತೆ ಕೆಲವು ಬಾರಿ ರಿಕ್ಷಾ ಯೂನಿಯನ್‌ಗಳು ಮನವಿ ಮಾಡಿದ್ದರೂ ದರ ಏರಿಕೆ ಆಗಿಲ್ಲ. ಹೀಗಾಗಿ ರಿಕ್ಷಾವನ್ನೇ ನಂಬಿ ಬದುಕುತ್ತಿರುವ ಸಾವಿ ರಾರು ಜನರಿಗೆ ಸಮಸ್ಯೆ ಆಗುತ್ತಿದೆ. ಹೀಗಾಗಿ ಈ ಬಾರಿ ದರ ಏರಿಕೆ ಮಾಡಬೇಕಾದದ್ದು ಅನಿ ವಾರ್ಯ ಎಂಬುದು ರಿಕ್ಷಾ ಯೂನಿ ಯನ್‌ಗಳ ಅಭಿಪ್ರಾಯ. ಆದರೆ, ಆಟೋ ಪ್ರಯಾಣ ದರ ಏರಿಕೆಯ ಮೂಲಕ ಜನಸಾ ಮಾ ನ್ಯರಿಗೂ ಸಮಸ್ಯೆ ಆಗದಂತೆ ಅವರಿಗೂ ನ್ಯಾಯ ಸಿಗು ವಂತೆ ಮಾಡಬೇಕಿದ್ದು, ಪರಿಷ್ಕರಣೆ ತೀರ್ಮಾನದಿಂದ ಸಾರ್ವಜನಿಕರಿಗೆ ಹೊರೆ ಯಾಗಲೇಬಾರದು ಎಂಬುದು ಸಾರ್ವಜನಿಕರ ಅಭಿಪ್ರಾಯ. ಈ ಅಭಿಪ್ರಾಯಗಳ ಹಿನ್ನೆಲೆಯಲ್ಲಿ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳುವ ಹಿನ್ನೆಲೆ ಯಲ್ಲಿ ಫೆ. 27ರಂದು ದ.ಕ. ಜಿಲ್ಲಾಧಿ ಕಾರಿ ಕಚೇರಿ ಸಭಾಂಗಣದಲ್ಲಿ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆ ನಡೆಯಲಿದ್ದು, ಅಲ್ಲಿ ಅಂತಿಮ ತೀರ್ಮಾನವಾಗಲಿದೆ ಎಂದು ಆರ್‌ಟಿಒ ಮೂಲಗಳು ತಿಳಿಸಿವೆ.

ಸಾರಿಗೆ ಪ್ರಾಧಿಕಾರ ಸಭೆಯಲ್ಲಿ ತೀರ್ಮಾನ
ಆಟೋ ಪ್ರಯಾಣ ದರ ಪರಿಷ್ಕರಿಸುವಂತೆ ರಿಕ್ಷಾ ಚಾಲಕರು, ಮಾಲಕರು, ವಿವಿಧ ಸಂಘಟನೆಗಳಿಂದ ಮನವಿ ಬಂದಿದೆ. ಈ ಬಗ್ಗೆ ರಿಕ್ಷಾ ಬಳಕೆದಾರರ ಜತೆಗೆ ಚರ್ಚೆ ನಡೆಸಿ ಸಾರಿಗೆ ಪ್ರಾಧಿಕಾರದ ಜಿಲ್ಲಾ ಸಮಿತಿಯು ಸೂಕ್ತ ತೀರ್ಮಾನ ಕೈಗೊಳ್ಳಬೇಕಿದೆ. ಈ ಕುರಿತಂತೆ ಚರ್ಚಿಸಲು ಫೆ. 27 ರಂದು ಬೆಳಗ್ಗೆ 10.30ಕ್ಕೆ ದ.ಕ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆ ನಡೆಯಲಿದೆ. ಅಲ್ಲಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು.
– ರಾಮಕೃಷ್ಣ ರೈ, ಆರ್‌ಟಿಒ, ಮಂಗಳೂರು.

ಕನಿಷ್ಠ ದರ ಏರಿಕೆ ಬೇಡ
5 ವರ್ಷಗಳಲ್ಲಿ ಆಟೋ ಪ್ರಯಾಣ ದರ ಏರಿಕೆ ಆಗದ ಕಾರಣದಿಂದ ರಿಕ್ಷಾದವರು ದರ ಏರಿಕೆ ಕೇಳುವುದು ತಪ್ಪಲ್ಲ. ಆದರೆ, ದರ ಏರಿಕೆಯ ಮೂಲಕ ಜನಸಾಮಾನ್ಯರ ಮೇಲೆ ಹೊರೆ ವಿಧಿಸುವುದು ಸರಿಯಲ್ಲ. ರಿಕ್ಷಾ ಬಳಕೆ ಮಾಡುವ ಬಡ-ಮಧ್ಯಮ ವರ್ಗದ ಜನರ ಜೀವನಕ್ಕೂ ಸಮಸ್ಯೆ ಆಗಬಾರದು. ಹೀಗಾಗಿ 1.5 ಕಿ.ಮೀ. ವರೆಗಿನ ಕನಿಷ್ಠ ದರ 25 ರೂ.ಗಳನ್ನು ಬದಲಾವಣೆ ಮಾಡದೆ, ಆ ಬಳಿಕದ ದರ ಜನರ ಅಭಿಪ್ರಾಯ ಪಡೆದು ಪರಿಷ್ಕರಣೆ ಆಗಲಿ.
– ಹನುಮಂತ ಕಾಮತ್‌, ಸಾಮಾಜಿಕ ಹೋರಾಟಗಾರರು.

ಉಡುಪಿಯಲ್ಲಿ ಏರಿಕೆ
ಉಡುಪಿ ಜಿಲ್ಲೆಯ ಆಟೋ ಪ್ರಯಾಣ ದರವನ್ನು ಫೆ. 7ರಂದು ಪರಿಷ್ಕರಿಸಲಾಗಿದ್ದು, ಈಗಿನ ಕನಿಷ್ಠ ದರ 25 ರೂ.ಗಳನ್ನು 30 ರೂ.ಗೆ ಏರಿಸಲಾಗಿದೆ. ಅನಂತರದ ರನ್ನಿಂಗ್‌ ದರವನ್ನು 17 ರೂ.ಗೆ ನಿಗದಿಪಡಿಸಲಾಗಿದೆ. ಎ. 1ರಿಂದ ಹೊಸ ದರ ಉಡುಪಿಯಲ್ಲಿ ಅನ್ವಯವಾಗುತ್ತದೆ. ಇದೇ ಮಾನದಂಡದ ಪ್ರಕಾರ ರಿಕ್ಷಾದರ ಏರಿಕೆ ಮಾಡಬೇಕು ಎಂದು ರಿಕ್ಷಾ ಚಾಲಕ-ಮಾಲಕರು ಹಾಗೂ ವಿವಿಧ ರಿಕ್ಷಾ ಪರ ಸಂಘಟನೆಯವರು ಈಗಾಗಲೇ ದ.ಕ. ಜಿಲ್ಲಾಧಿಕಾರಿ ಹಾಗೂ ಸಾರಿಗೆ ಆಯುಕ್ತರಿಗೆ ಮನವಿ ಸಲ್ಲಿಸಿದ್ದಾರೆ. ಕೆಲವು ಸಂಘಟನೆಯವರು ಕನಿಷ್ಠ ದರವನ್ನು 35 ರೂ.ಗೆ ಏರಿಸಬೇಕು ಎಂದೂ ಮನವಿಯಲ್ಲಿ ಆಗ್ರಹಿಸಿದ್ದಾರೆ.

ದರ ಏರಿಕೆ ಅನಿವಾರ್ಯ
ರಿಕ್ಷಾ ಪ್ರಯಾಣ ದರ ಏರಿಕೆ ಮಾಡದೆ ಬರೋಬ್ಬರಿ 5 ವರ್ಷಗಳೇ ಕಳೆದಿವೆ. ಅದರ ಬಳಿಕ ಪೆಟ್ರೋಲ್‌, ಡೀಸೆಲ್‌ ದರ ಸಹಿತ ಎಲ್ಲ ಉತ್ಪನ್ನಗಳ ಬೆಲೆಯೂ ಅಧಿಕವಾಗಿದೆ. ಆದರೆ, ರಿಕ್ಷಾ ದರ ಮಾತ್ರ ಏರಿಕೆಯಾಗಲೇ ಇಲ್ಲ. ರಿಕ್ಷಾದಲ್ಲಿ ದುಡಿಯುತ್ತಿರುವ ಬಡವರು ಇದರಿಂದ ನಿತ್ಯ ತೊಂದರೆ ಅನುಭವಿಸುತ್ತಿದ್ದಾರೆ. ಹೀಗಾಗಿ ಕನಿಷ್ಠ ದರವನ್ನು ಉಡುಪಿಯ ಸ್ವರೂಪದಲ್ಲಿ ಕನಿಷ್ಠ 5 ರೂ.ಗಳಾದರೂ ಏರಿಕೆ ಮಾಡಬೇಕಾಗಿದೆ.
 - ಸುನಿಲ್‌ ಕುಮಾರ್‌ ಬಜಾಲ್‌, ಜಿಲ್ಲಾಧ್ಯಕ್ಷರು, ಆಟೋ ರಿಕ್ಷಾ ಡ್ರೈವರ್‌ ಫೆಡರೇಶನ್‌.

ಟಾಪ್ ನ್ಯೂಸ್

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

kejriwal 2

CM ‘ಅಲಂಕಾರಿಕವಲ್ಲ’: ಕೇಜ್ರಿಗೆ ಮತ್ತೆ ಕೋರ್ಟ್‌ ಗುದ್ದು

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.