ಎಸಿಸಿ ತ್ಯಾಜ್ಯ ಮರುಬಳಕೆ ಘಟಕದಿಂದ ದುರ್ವಾಸನೆ

ರಾಜ್ಯದ 25 ಕಾರ್ಖಾನೆಗಳ ಅವಧಿ ಮುಗಿದ ಉತ್ಪನ್ನ ಇಂಧನವಾಗಿ ಪರಿವರ್ತನೆ

Team Udayavani, Feb 15, 2020, 10:39 AM IST

15-February-01

ವಾಡಿ(ಕಲಬುರಗಿ ಜಿಲ್ಲೆ): ಇಲ್ಲಿಯ ಎಸಿಸಿ ಸಿಮೆಂಟ್‌ ಕಾರ್ಖಾನೆಯಲ್ಲಿ ಸ್ಥಾಪಿಸಲಾಗಿರುವ ತ್ಯಾಜ್ಯ ಮರುಬಳಕೆ (ಜಿಯೊಸೈಕಲ್‌) ಘಟಕದಿಂದ ವಿಪರೀತ ದುರ್ವಾಸನೆ ಹರಡುತ್ತಿದ್ದು, ಸ್ಥಳೀಯರು ಉಸಿರಾಟ ತೊಂದರೆಯಿಂದ ಬಳಲುವಂತಾಗಿದೆ.

ದೇಶದ ಇತರ ಕಾರ್ಖಾನೆಗಳ ಅನುಪಯುಕ್ತ ಉತ್ಪನ್ನಗಳ ತ್ಯಾಜ್ಯವನ್ನು ಇಂಧನವನ್ನಾಗಿ ಮರುಬಳಕೆ ಮಾಡುವ ಉದ್ದೇಶದಿಂದ ಎಸಿಸಿ ಆಡಳಿತ ಮಂಡಳಿಯು 2014ರಲ್ಲಿ ಸುಮಾರು 65 ಕೋಟಿ ರೂ. ಖರ್ಚು ಮಾಡಿ ತ್ಯಾಜ್ಯ ಮರುಬಳಕೆ ಘಟಕ ಸ್ಥಾಪಿಸಿದೆ. ದೇಶದ ಇತರ ಏಳು ಕಾರ್ಖಾನೆಗಳ ತ್ಯಾಜ್ಯ ಮರುಬಳಕೆ ಘಟಕಗಳ ಪೈಕಿ ವಾಡಿ ಎಸಿಸಿ ಘಟಕವೂ ಒಂದಾಗಿದೆ.

ಬೆಂಗಳೂರು, ಮೈಸೂರು, ರಾಯಚೂರು, ಧಾರವಾಡ ಸೇರಿದಂತೆ ರಾಜ್ಯದ ವಿವಿಧ ಒಟ್ಟು 25 ಕಾರ್ಖಾನೆಗಳಿಂದ ಬರುವ ಅವಧಿ ಮುಗಿದ ಉತ್ಪನ್ನಗಳಾದ ಟೂತ್‌ ಪೇಸ್ಟ್‌, ಸಾಬೂನು, ಚಾಕೋಲೆಟ್‌, ಕಾμ ಪುಡಿ, ಹಾರ್ಲಿಕ್ಸ್‌, ಚಹಾಪುಡಿ, ಬಿಸ್ಕತ್‌ ಹಾಗೂ ಜೈವಿಕ ತ್ಯಾಜ್ಯ ಮತ್ತು ನಗರಗಳ ಘನತ್ಯಾಜ್ಯವನ್ನು ಈ ಘಟಕದಲ್ಲಿ ಸುಟ್ಟು ಇಂಧನವನ್ನಾಗಿ ಪರಿವರ್ತಿಸಲಾಗುತ್ತಿದೆ.

ಕಲ್ಲಿದ್ದಲು ಬಳಕೆ ಕಡಿಮೆಗೊಳಿಸಲು ಕಂಪನಿ ಈ ತಂತ್ರಕ್ಕೆ ಮುಂದಾಗಿದ್ದೇ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಪರಿಸರ ಸ್ನೇಹಿ ಘಟಕವೆಂದು ನಂಬಿಸಿ ಫ್ರೀ ಕೋ ಪ್ರೊಸೆಸಿಂಗ್‌ ಘಟಕವನ್ನು ನಡೆಸಲಾಗುತ್ತಿದೆ. ಆದರೆ ಇದರಿಂದ ಕೆಟ್ಟ ವಾಸನೆ ಹರಡಿ ಜನರ ಆರೋಗ್ಯ ಹದಗೆಡುತ್ತಿದೆ. ಈ ವಿಷಯ ಸಂಸ್ಥೆಯ ಆಡಳಿತ ಮಂಡಳಿ ಗಮನಕ್ಕಿದ್ದರೂ ಕ್ರಮಕೈಗೊಂಡಿಲ್ಲ ಎಂಬುದು ಸಾರ್ವಜನಿಕರ ಆರೋಪವಾಗಿದೆ.

ಆಮದು ಸ್ಥಗಿತ: ಈ ನಡುವೆ ಎಸಿಸಿ ಕಾರ್ಖಾನೆಯ ಪರಿಸರ ವಿಭಾಗದ ಮುಖ್ಯಸ್ಥ ರಮೇಶ ಗೌಡಪ್ಪನೋರ ಮಾತನಾಡಿ, ಕಂಪನಿಯಲ್ಲಿ ಸ್ಥಾಪಿಸಲಾಗಿರುವ ತ್ಯಾಜ್ಯ ಮರುಬಳಕೆ ಘಟಕದಲ್ಲಿ ಅವಧಿ ಮುಗಿದ ವಿವಿಧ ಕಂಪನಿಗಳ ಉತ್ಪನ್ನಗಳನ್ನು ದಹನ ಮಾಡುತ್ತಿರುವುದು ನಿಜ. ಈ ವೇಳೆ ದುರ್ವಾಸನೆಯಾಗಿ ಪರಿಸರದಲ್ಲಿ ಸೇರಿಕೊಳ್ಳದಂತೆ ತುಂಬಾ ಎಚ್ಚರ ವಹಿಸಲಾಗುತ್ತಿದೆ.

ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರದಂತೆ ತಡೆಯಲು ಅತ್ಯಾಧುನಿಕ ಯಂತ್ರಗಳನ್ನು ಅಳವಡಿಸಿದ್ದೇವೆ. ದುರ್ವಾಸನೆಗೆ ಕಾರಣವಾಗುತ್ತಿರುವ ಕೆಲ ಕಂಪನಿಗಳ ಉತ್ಪನ್ನಗಳ ಆಮದು ಸ್ಥಗಿತಗೊಳಿಸಿದ್ದೇವೆ. ಇದರ ನಡುವೆಯೂ ಜನರಿಗೆ ವಾಸನೆ ಬರುತ್ತಿದ್ದರೆ ಪುನಃ ಪರಿಶೀಲನೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಎಸಿಸಿ ತ್ಯಾಜ್ಯ ಮರುಬಳಕೆ ಘಟಕದಿಂದ ದುರ್ವಾಸನೆ ಹಬ್ಬುತ್ತಿರುವ ಬಗ್ಗೆ ಸಾರ್ವಜನಿಕರಿಂದ ಯಾವುದೇ ದೂರು ಬಂದಿಲ್ಲ. ಪರಿಸರ ಮಾಲಿನ್ಯವಾಗದಂತೆ ತಡೆಯಲು ಎಸಿಸಿ ಕ್ರಮ ಕೈಗೊಳ್ಳದಿದ್ದರೆ ಜನರ ಆರೋಗ್ಯ ಹದಗೆಡುತ್ತದೆ. ಎಸಿಸಿ ತ್ಯಾಜ್ಯ ದಹನ ಘಟಕಕ್ಕೆ ಭೇಟಿ ನೀಡಿ ಪರಿಶೀಲಿಸಲಾಗುವುದು. ವಾಸ್ತವ ಸ್ಥಿತಿಗತಿ ಅರಿತು ಕರ್ನಾಟಕ ಪರಿಸರ ಸಂರಕ್ಷಣಾ ಮಂಡಳಿಗೆ ಪತ್ರ ಬರೆಯಲಾಗುವುದು. ನಿಯಮ ಉಲ್ಲಂಘಿಸಿದ್ದು ಕಂಡು ಬಂದರೆ ಎಸಿಸಿ ವಿರುದ್ಧ ಕ್ರಮ ಕೈಗೊಳ್ಳಲಾಗುವುದು.
ಸಂಗಮೇಶ ಕಾರಬಾರಿ,
ಪರಿಸರ ಅಭಿಯಂತರ, ಪುರಸಭೆ, ವಾಡಿ

ಮಡಿವಾಳಪ್ಪ ಹೇರೂರ

ಟಾಪ್ ನ್ಯೂಸ್

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

1-eqwqewq

IPL;ಲಕ್ನೋ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 7 ವಿಕೆಟ್ ಗಳ ಜಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

1-wewweq

IPL; ಬೌಲರ್‌ಗಳನ್ನು ಕಾಪಾಡಿ: ಅಶ್ವಿ‌ನ್‌ ವಿನಂತಿ!

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.