ಯೋಗ ಲಕ್ಷ್ಮೀ ನರಸಿಂಹಸ್ವಾಮಿಗೆ ಕುಂಭಾಭಿಷೇಕ


Team Udayavani, Feb 16, 2020, 3:00 AM IST

yoga-lakshmi

ತುಮಕೂರು: ಮಂತ್ರಾಲಯದ ರಾಘವೇಂದ್ರ ಸ್ವಾಮಿ ಆದಿಯಾಗಿ ಪೀಠಾಧಿಗಳಾಗಿದ್ದವರು ಕರಿಗಿರಿ ಕ್ಷೇತ್ರಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದ ಬಗ್ಗೆ ಮಠದ ಇತಿಹಾಸದಲ್ಲಿ ಉಲ್ಲೇಖವಿದೆ ಎಂದು ಮಂತ್ರಾಲಯದ ಪೀಠಾಧಿಪತಿ ಸುಭುದೇಂದ್ರ ತೀರ್ಥರು ತಿಳಿಸಿದರು.

ತಾಲೂಕಿನ ದೇವರಾಯನದುರ್ಗದ ಶ್ರೀ ಯೋಗ ಲಕ್ಷ್ಮೀ ನರಸಿಂಹಸ್ವಾಮಿ ಕುಂಭಾಭಿಷೇಕ ಮಹೋತ್ಸವ ಹಾಗೂ ವಿಶೇಷ ಪೂಜಾ ಕಾರ್ಯಕ್ರಮದಲ್ಲಿ ಮಾತನಾಡಿ, ಸಕಲ ಪಾಪ ದೋಷ ನಿವಾರಣೆಗೆ ಕರಿಗಿರಿ ಕ್ಷೇತ್ರ ಪ್ರಸಿದ್ಧವಾಗಿದೆ. 12 ವರ್ಷಕ್ಕೊಮ್ಮೆ ಕುಂಭಾಭಿಷೇಕ ಹಾಗೂ ಕಳಸಾಭಿಷೇಕ ನಡೆಸಿಕೊಂಡು ಬರಲಾಗುತಿದ್ದು, ಹಾವೇರಿಯ ವೇದ ವಿದ್ವಾಂಸ ವೇದವ್ಯಾಸಾಚಾರ್‌ ನಿರ್ಮಿಸಿರುವ ರಜತ ಕವಚ ಅರ್ಪಿಸಲಾಗಿದೆ ಎಂದು ತಿಳಿಸಿದರು.

ಕರಿಗಿರಿ ಕ್ಷೇತ್ರಕ್ಕೂ ಮಂತ್ರಾಲಯಕ್ಕೂ ನಿಕಟ ಸಂಬಂಧವಿದೆ. ದೇಗುಲದ ಅಭಿವೃದ್ಧಿ ವಿಚಾರಕ್ಕೆ ಶ್ರೀಮಠ ಸಿದ್ಧವಿದ್ದು, ಕುಂಬಾಭಿಷೇಕ ಮಹೋತ್ಸವದ ಅಂಗವಾಗಿ ದೇಗುಲಕ್ಕೆ ರಜತ ಕೊಬ್ಬರಿಗೆ ಹುಂಡಿ ಅರ್ಪಿಸಲಾಗಿದ್ದು, ದೇವಿಗೆ ಪೀಠವನ್ನು ಮಠದಿಂದ ನಿರ್ಮಿಸಿ ನೀಡಲು ಸಂಕಲ್ಪ ಮಾಡಿರುವುದಾಗಿ ತಿಳಿಸಿದರು.

ತಾಲೂಕು ತಹಶೀಲ್ದಾರ್‌ ಮೋಹನ್‌ ಮಾತನಾಡಿ, ಶಾಸ್ತ್ರೋಸ್ತ್ರವಾಗಿ ಕಾರ್ಯಕ್ರಮ ನಡೆಸಲು ಜಿಲ್ಲಾಡಳಿತ ಹಾಗೂ ತಾಲೂಕು ಆಡಳಿತ ಕ್ರಮ ಕೈಗೊಂಡಿದೆ ಎಂದು ತಿಳಿಸಿದರು. ಮುಜರಾಯಿ ಮತ್ತು ಧಾರ್ಮಿಕ ಧತ್ತಿ ಇಲಾಖೆ ದೇವರಾಯನದುರ್ಗ ದೇಗುಲದ ಕಾರ್ಯನಿರ್ವಾಹಣಾಧಿಕಾರಿ ಎಚ್‌.ಸವಿತಾ ಮಾತನಾಡಿದರು.

ಭಕ್ತರಿಗೆ ಪ್ರಸಾದ ವಿನಿಯೋಗ ಮಾಡಲಾಯಿತು. ದೇಗುಲದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಊರ್ಡಿಗೆರೆ ಕರಿಗಿರಿಯಪ್ಪ, ಅರ್ಚಕ ಡಿ.ಎನ್‌.ನರಸಿಂಹಭಟ್ಟರ್‌, ಆಗಮಿಕ ವಾಸುದೇವಭಟ್ಟರ್‌, ಪ್ರಧಾನ ಅರ್ಚಕ ವೆಂಕಟರಾಜು ಭಟ್ಟರ್‌, ಡಿ.ಕೆ.ಲಕ್ಷ್ಮೀನಾರಾಯಣ ಭಟ್ಟರ್‌, ಕಂದಾಯಾಧಿಕಾರಿ ಪಿ.ಶಿವಣ್ಣ ಸೇರಿ ವ್ಯವಸ್ಥಾಪನ ಸಮಿತಿ ಸದಸ್ಯರು ಹಾಗೂ ದೇಗುಲ ಅಭಿವೃದ್ಧಿ ಮಂಡಳಿ ಸದಸ್ಯರು ಇದ್ದರು.

ರಜತ ಕವಚ ಸಮರ್ಪಣೆ: ರಾಜ್ಯದ ಐತಿಹಾಸಿಕ ಪ್ರಸಿದ್ಧ ದೇವಾಲಯಗಳೊಂದಾದ ದೇವರಾಯನ ದುರ್ಗದ ಶ್ರೀ ಯೋಗ ನರಸಿಂಹ ಸ್ವಾಮಿಗೆ 12 ವರ್ಷಕ್ಕೊಮ್ಮೆ ನಡೆಯುವ ಕುಂಭಾಭಿಷೇಕ ಮಹೋತ್ಸವ ನೆರವೇರಿತು. ಪೂಜಾ ಕಾರ್ಯಕ್ರಮ ಬೆಳಗ್ಗೆಯಿಂದಲೇ ನಡೆದವು. ತೀರ್ಥ ಪ್ರಸಾದ ವಿನಿಯೋಗ ನಡೆಯಿತು. ಶ್ರೀ ಯೋಗ ಲಕ್ಷ್ಮೀನರಸಿಂಹ ಸ್ವಾಮಿಗೆ ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿ ಮಠದ ಪೀಠಾಧಿಪತಿ ಶ್ರೀ ಸುಭುದೇಂದ್ರ ತೀರ್ಥರು ರಜತ ಕವಚ ಸಮರ್ಪಿಸಿದರು.

ವಿವಿಧ ಪೂಜಾ ಕಾರ್ಯಕ್ರಮ: ಕುಂಭಾಭಿಷೇಕದ ಅಂಗವಾಗಿ ಶುಕ್ರವಾರ ಪುಣ್ಯಾಹ ವಾಚನ, ಕಳಶಾರಾಧನೆ, ಪಂಚಗವ್ಯಸ್ನಪನ, ಛಾಯಾಸ್ನಾಪನ, ಶಾಂತಿಹೋಮ, ಪ್ರಧಾನ ಹೋಮಗಳು, ಪಾರಾಯಣಗಳು, ಮಹಾನಿವೇದನ, ಮಹಾಮಂಗಳಾರತಿ, ಪ್ರಸಾದ ವಿನಿಯೋಗ ಮಾಡಲಾಯಿತು.

ಸಂಜೆ 6 ಗಂಟೆಗೆ ಶುದ್ಧಿ ಪುಣ್ಯಾಹ, ಪಾರಾಯಣ, ಮಹಾ ಕುಂಭಾರಾಧನೆ, ಪ್ರಧಾನ ಹೋಮ, ಜೀವಾದಿತತ್ವ ಹೋಮಗಳು, ಮಹಾಮಂಗಳಾರತಿ, ಪ್ರಸಾದ ವಿನಿಯೋಗ ನಡೆದವು. ಶನಿವಾರ ಬೆಳಗ್ಗೆಯಿಂದ ಕಳಶಾರಾಧನೆ, ಪ್ರಧಾನ ಹೋಮಗಳು, ಶಾಂತಿ ಹೋಮ, ಪೂರ್ಣಾಹುತಿ, ಕುಂಭೋದ್ವಾಸನೆ, ವಿಮಾನಗೋಪುರ ಮತ್ತು ರಾಜಗೋಪುರ ಕುಂಭಾಭಿಷೇಕ, ಬಲಿಪ್ರಧಾನ, ಶ್ರೀಯರಿಗೆ ಪಂಚಾಮೃತ ಅಭಿಷೇಕ‌, ಅಲಂಕಾರ, ಮಹಾನಿವೇದನ, ಮಹಾಮಂಗಳಾರತಿ ಸೇರಿ ಪೂಜಾ ಕಾರ್ಯಕ್ರಮ ನಡೆದವು.

ಟಾಪ್ ನ್ಯೂಸ್

ಭಾರತ ಸೇರಿದಂತೆ ಜಾಗತಿಕವಾಗಿ ಕೋವಿಡ್‌ ಲಸಿಕೆ ಹಿಂಪಡೆಯುವುದಾಗಿ ಘೋಷಿಸಿದ ಆಸ್ಟ್ರಾಜೆನಿಕಾ!

ಭಾರತ ಸೇರಿದಂತೆ ಜಾಗತಿಕವಾಗಿ ಕೋವಿಡ್‌ ಲಸಿಕೆ ಹಿಂಪಡೆಯುವುದಾಗಿ ಘೋಷಿಸಿದ ಆಸ್ಟ್ರಾಜೆನಿಕಾ!

1–dsdasdsad

Sirsi; ಕಾಗೇರಿ ರಿಲಾಕ್ಸ್ ಮೂಡ್: ಪಕ್ಷಿಗಳಿಗೆ ಆಹಾರ, ತೋಟ ಸುತ್ತಾಟ!

15-

Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ

1-wqewqe

Students; ವಿವಸ್ತ್ರಗೊಳಿಸಿ, ಖಾಸಗಿ ಅಂಗಕ್ಕೆ ಘಾಸಿ!; ಹಿರಿಯ ವಿದ್ಯಾರ್ಥಿಗಳಿಂದ ಚಿತ್ರಹಿಂಸೆ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

Dina Bhavishya

ಅನಿರೀಕ್ಷಿತ ಯಶಸ್ಸು..ಅನಿರೀಕ್ಷಿತ ಪ್ರಗತಿ… ಅನಿರೀಕ್ಷಿತ ಧನಪ್ರಾಪ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-

Koratagere: ಪಟ್ಟಣಕ್ಕೆ 10 ದಿನಕ್ಕೊಮ್ಮೆ ನೀರು ಸರಬರಾಜು

9-koratagere

Koratagere: ಜೂ.9 ರಂದು ಉಚಿತ ಸಾಮೂಹಿಕ ವಿವಾಹ

Prajwal Revanna ನನಗೆ ಆತ್ಮೀಯ ಸ್ನೇಹಿತ: ಸಂಸದ ಬಸವರಾಜು

Prajwal Revanna ನನಗೆ ಆತ್ಮೀಯ ಸ್ನೇಹಿತ: ಸಂಸದ ಬಸವರಾಜು

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಭಾರತ ಸೇರಿದಂತೆ ಜಾಗತಿಕವಾಗಿ ಕೋವಿಡ್‌ ಲಸಿಕೆ ಹಿಂಪಡೆಯುವುದಾಗಿ ಘೋಷಿಸಿದ ಆಸ್ಟ್ರಾಜೆನಿಕಾ!

ಭಾರತ ಸೇರಿದಂತೆ ಜಾಗತಿಕವಾಗಿ ಕೋವಿಡ್‌ ಲಸಿಕೆ ಹಿಂಪಡೆಯುವುದಾಗಿ ಘೋಷಿಸಿದ ಆಸ್ಟ್ರಾಜೆನಿಕಾ!

1–dsdasdsad

Sirsi; ಕಾಗೇರಿ ರಿಲಾಕ್ಸ್ ಮೂಡ್: ಪಕ್ಷಿಗಳಿಗೆ ಆಹಾರ, ತೋಟ ಸುತ್ತಾಟ!

1-wqe-wewq

Cryptocurrency ವೆಬ್‌ಸೈಟ್ ಹ್ಯಾಕ್: ಕೊನೆಗೂ ಆರೋಪಿ ಶ್ರೀಕಿ ಬಂಧನ

1——wqwqe

IPL ರಾಜಸ್ಥಾನ ವಿರುದ್ಧ ಗೆದ್ದ ಡೆಲ್ಲಿ ಪ್ಲೇಆಫ್ ಭರವಸೆ ಜೀವಂತ: ಆರ್ ಸಿಬಿಗೆ ಸವಾಲು

15-

Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.