ಸೆಸ್ಕ್ ವ್ಯಾಪ್ತಿಯಲ್ಲಿ ಸೋಲಾರ್‌ ಬಳಕೆ ಕಡ್ಡಾಯವಾಗಲಿ


Team Udayavani, Feb 16, 2020, 3:00 AM IST

cesk-vyapti

ಚನ್ನರಾಯಪಟ್ಟಣ: ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಮಗದ ವ್ಯಾಪ್ತಿಯ ಎಲ್ಲಾ ಪಟ್ಟಣಗಳಲ್ಲಿ ಸೋಲಾರ್‌ ಬಳಕೆ ಕಡ್ಡಾಯ ಮಾಡಬೇಕು ಎಂದು ವಿಧಾನ ಪರಿಷತ್‌ ಸದಸ್ಯ ಎಂ.ಎ.ಗೋಪಾಲಸ್ವಾಮಿ ಸೂಚನೆ ನೀಡಿದರು.

ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ಹಾಗೂ ರಾಜ್ಯ ಅನುಮತಿ ಪಡೆದ ವಿದ್ಯುತ್‌ ಗುತ್ತಿಗೆದಾರರ ಸಂಘದಿಂದ ಪಟ್ಟಣದಲ್ಲಿ ಹಮ್ಮಿಕೊಂಡಿದ್ದ ವಿದ್ಯುತ್‌ ಸುರಕ್ಷಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪಟ್ಟಣಗಳಲ್ಲಿ ಹೊಸದಾಗಿ ಮನೆ ನಿರ್ಮಾಣ ಮಾಡುವವರಿಗೆ ಸೋಲಾರ್‌ ಅಳವಡಿಸಿಕೊಂಡರೆ ಮಾತ್ರ ವಿದ್ಯುತ್‌ ಪಡೆಯಲು ಅನುಮತಿ ನೀಡುವುದಾಗಿ ಸೂಚಿಸಬೇಕು ಎಂದು ಹೇಳಿದರು.

ಇತ್ತೀಚಿನ ದಿನಗಳಲ್ಲಿ ಗ್ರಾಮೀಣ ಭಾಗದಲ್ಲಿಯೂ ಆರ್‌ಸಿಸಿ ಮನೆ ನಿರ್ಮಿಸಿಕೊಳ್ಳುತ್ತಾರೆ ಅವರಿಗೂ ಸೋಲರ್‌ ಮಹತ್ವ ತಿಳಿಸಬೇಕು. ಡಿ.ಕೆ.ಶಿವಕುಮಾರ್‌ ಅವರು ಇಂಧನ ಮಂತ್ರಿಯಾಗಿದ್ದಾಗ ವಿದ್ಯುತ್‌ ಸಮಸ್ಯೆಯಾಗದಂತೆ ನೋಡಿಕೊಂಡಿದ್ದರು. ಶ್ರವಣಬೆಳಗೊಳ ಗ್ರಾಮ ಪಂಚಾಯಿತಿ ಮೂರು ಕೋಟಿ ಬಿಲ್‌ ಬಾಕಿ ಉಳಿಸಿಕೊಂಡಿದೆ ಈ ಬಗ್ಗೆ ಅಧಿವೇಶನದಲ್ಲಿ ಚರ್ಚಿಸಿ ಸರ್ಕಾರದಿಂದ ಬಿಲ್‌ ಪಾವತಿಸಲು ಮನವಿ ಮಾಡಲಾಗುವುದು ಎಂದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕ ಸಿ.ಎನ್‌.ಬಾಲಕೃಷ್ಣ , ಪಟ್ಟಣದಲ್ಲಿ ಜಾಗೃತಿ ಮೂಡಿಸಿದರೆ ಸಾಲದು ಪ್ರತಿ ಹಳ್ಳಿಯಲ್ಲಯೂ ಜಾಗೃತಿ ಮೂಡಿಸುವುದು ಅನಿವಾರ್ಯವಾಗಿದೆ. ಈ ಬಗ್ಗೆ ಇಲಾಖೆ ಮೇಲಧಿಕಾರಿಗಳು ಚಿಂತಿಸಬೇಕಿದೆ ಎಂದರು. ತಾಲೂಕಿನ ಐದು ಏತನೀರಾವರಿ ಯೋಜನೆಗಳಿಂದ ಸೆಸ್‌ಗೆ 10 ಕೋಟಿ ರೂ. ಬಿಲ್‌ ಬಾಕಿ ಇದೆ. ಇದನ್ನು ಸರ್ಕಾರದ ಗಮನಕ್ಕೆ ತರಲಾಗುವುದು. ಇತ್ತೀಚಿನ ದಿನಗಳಲ್ಲಿ ಗುಣಮಟ್ಟದ ವಿದ್ಯುತ್‌ ನೀಡುತ್ತಿದ್ದು, ಪವರ್‌ ಮ್ಯಾನ್‌ಗಳು ನಿಷ್ಠೆಯಿಂದ ಸೇವೆ ಸಲ್ಲಿಸಿದರೆ ವಿದ್ಯುತ್‌ ಸಮಸ್ಯೆ ಉದ್ಭವವಾಗುವುದಿಲ್ಲ ಎಂದರು.

2,443 ವಿದ್ಯುತ್‌ ಪರಿವರ್ತಕ ಅಗತ್ಯ: ಅಕ್ರಮ ಸಕ್ರಮಗಳಿಗೆ ತಾಲೂಕಿಗೆ 2,443 ವಿದ್ಯುತ್‌ ಪರಿವರ್ತಕ ಅಗತ್ಯವಿದೆ. ಈಗಾಗಲೇ ಸರ್ಕಾರ 43 ಕೋಟಿ ರೂ. ಬಿಡುಗಡೆ ಮಾಡಿದೆ. ರೈತರು ಸರ್ಕಾರ ನಿಗದಿ ಮಾಡಿರುವ ಶುಲ್ಕ ಪಾವತಿ ಮಾಡಿದರೆ ವಿದ್ಯುತ್‌ ಪರಿವರ್ತಕವನ್ನು ಅಳವಡಿಸಲಾಗುವುದು ತಾಲೂಕಿನ ಎಲ್ಲಾ ರೈತರು ಇದರ ಪ್ರಯೋಜನ ಪಡೆದುಕೊಳ್ಳಬೇಕು. ಒಂದು ಹಳ್ಳಿ ಇಂತಿಷ್ಟೇ ಟೀಸಿ ಎಂಬುದು ನಿಗದಿಯಾಗಿಲ್ಲ. ಅಗತ್ಯಕ್ಕೆ ಅನುಗುಣವಾಗಿ ಟೀಸಿ ಅಳವಡಿಸಲಾಗುವುದು ಎಂದು ಹೇಳಿದರು.

ತಾಲೂಕಿನ ದಿಂಡಗೂರು, ಗೌಡಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ 24 ಗ್ರಾಮಗಳಲ್ಲಿ ನಿರಂತರ ಜ್ಯೋತಿ ಸಂಪರ್ಕ ನೀಡಿಲ್ಲ. ಶೀಘ್ರದಲ್ಲಿ ಸಂಪರ್ಕ ನೀಡಲು ಮುಂದಾಗುತ್ತೇವೆ. ಬೆಳಕು ಯೋಜನೆಯು ತಾಲೂಕಿನಲ್ಲಿ ಐದು ಹಳ್ಳಿಗೆ ನೀಡಲಾಗಿದೆ. ಪುರಸಭೆ ವ್ಯಾಪ್ತಿಯಲ್ಲಿ 54 ವಿದ್ಯುತ್‌ ಪರಿವರ್ತಕ ಹಾಕಲಾಗಿದ್ದು ಗುಣಮಟ್ಟದ ವಿದ್ಯುತ್‌ ವಿತರಣೆ ಮಾಡಲಾಗುತ್ತಿದೆ, ಗಂಗಾಕಲ್ಯಾಣ ಯೋಜನೆಗೆ ವಿದ್ಯುತ್‌ ಸಂಪರ್ಕ ನೀಡಲು ಅಧಿಕಾರಿಗಳು ಗಮನ ಹರಿಸಬೇಕಿದೆ ಎಂದು ತಿಳಿಸಿದರು.

ಮಧ್ಯವರ್ತಿಗಳಿಗೆ ಹಣ ನೀಡಬೇಡಿ: ಸೆಸ್ಕ್ ಅಧೀಕ್ಷಕ ಅಭಿಯಂತರ ಸುಚೇತನ್‌ ಮಾತನಾಡಿ, ಇಲಾಖೆ ಹಾಗೂ ಮೇಲಧಿಕಾರಿ ಹೆಸರಿನಲ್ಲಿ ರೈತರಿಂದ ಮಧ್ಯವರ್ತಿಗಳು ಹಣ ಕೀಳುತ್ತಿರುವ ಬಗ್ಗೆ ಇಲಾಖೆ ಮಾಹಿತಿ ಬಂದಿದೆ. ರೈತರು ನೇರವಾಗಿ ಇಲಾಖೆಗೆ ಆಗಮಿಸಿ ತಮಗೆ ಅಗತ್ಯ ಇರುವ ವಿದ್ಯುತ್‌ ಪರಿವರ್ತಕ್ಕೆ ಸರ್ಕಾರ ನಿಗದಿ ಮಾಡಿರುವ ಹಣ ನೀಡಿ ರಸೀದಿ ಪಡೆದರೆ ಪರಿವರ್ತಕ ಹಾಕಲಾಗುವುದು. ನನಗೆ ಸರ್ಕಾರ ನೀಡುತ್ತಿರುವ ವೇತನವೇ ಸಕಾಗಿದೆ ಲಂಚದ ಹಣಕ್ಕೆ ಕೈಚಾಚುವುದಿಲ್ಲ ಎಂದು ಹೇಳಿದರು.

ಲಂಚ ಪಡೆಯುವ ಸಿಬ್ಬಂದಿ ವಿರುದ್ಧ ಕ್ರಮ: ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಸಾರ್ವಜನಿಕರಿಂದ ಹಣ ಪಡೆಯಲು ಮುಂದಾದರೆ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು. ತಾಲೂಕಿನಲ್ಲಿ ವಿದ್ಯುತ್‌ ಪರಿವರ್ತಕ ಅಳವಡಿಸಲು ಸರ್ಕಾರ 43 ಕೋಟಿ ರೂ. ಬಿಡುಗಡೆ ಮಾಡಿದ್ದು ಟೆಂಡರ್‌ ಮಾಡಿದೆ. ಈ ಹಣದಲ್ಲಿ ವಿದ್ಯುತ್‌ ಪರಿವರ್ತಕ ಹಾಕಲಾಗುವುದು.

ಯಾರು ಇದಕ್ಕಾಗಿ ದಲ್ಲಾಳಿಗಳ ಮೂಲಕ ಇಲಾಖೆಗೆ ಬರುವ ಅಗತ್ಯವಿಲ ಎಂದರು. ವಿದ್ಯುತ್‌ ಗುತ್ತಿಗೆದಾರರ ಸಂಘ ಜಿಲ್ಲಾಧ್ಯಕ್ಷ ರಮೇಶ, ತಾಲೂಕು ಅಧ್ಯಕ್ಷ ಮಂಜುನಾಥ, ರಾಜ್ಯ ಸಮಿತಿ ಸದಸ್ಯ ದೇವರಾಜೇಗೌಡ, ರೈತ ಸಂಘದ ಜಿಲ್ಲಾಧ್ಯಕ್ಷ ರಘು, ಅಧಿಕಾರಿಗಳಾದ ಹೇಮಲತಾ, ಜಗದೀಶ, ಪ್ರವೀಣ, ರಂಗಸ್ವಾಮಿ, ಅಂಬಿಕಾ, ಹರೀಶ, ಮರ್ಜಕುಮಾರ ಮೊದಲಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.