ಸಾಮಾಜಿಕ ಕಾರ್ಯಚಟುವಟಿಕೆಗಳಿಂದ ಹೆಸರುವಾಸಿಯಾಗಿರುವ ಸಂಘ

ಕಡಂದಲೆ ಹಾಲು ಉತ್ಪಾದಕರ ಸಹಕಾರ ಸಂಘ

Team Udayavani, Feb 16, 2020, 5:23 AM IST

rav-22

ಗ್ರಾಮೀಣ ಭಾಗದ ಹೈನುಗಾರರನ್ನು ಸ್ವಾವಲಂಬಿಯನ್ನಾಗಿಸುವುದರ ಜತೆಗೆ ನಿರಂತರ 53 ವರ್ಷಗಳಿಂದ ಸಾಮಾಜಿಕ ಕಾರ್ಯಚಟುವಟಿಕೆಗಳಿಂದ ಕಡಂದಲೆ ಹಾಲು ಉತ್ಪಾದಕರ ಸಹಕಾರ ಸಂಘವೂ ಗುರುತಿಸಿಕೊಂಡಿದೆ. ಗ್ರಾಹಕರಿಗೆ ಉತ್ತಮ ಹಾಲಿನದರದ ಜತಗೆ ಗುಣಮಟ್ಟವನ್ನು ಕೂಡ ನೀಡಲಾಗುತ್ತಿದೆ.

ಮೂಡುಬಿದಿರೆ: 1967ರ ಮಾರ್ಚ್‌ 16ರಂದು 50 ಮಂದಿ ಹೈನುಗಾರ ಸದಸ್ಯರೊಂದಿಗೆ ಸ್ಥಾಪನೆಯಾದ ಕಡಂದಲೆ ಹಾಲು ಉತ್ಪಾದಕರ ಸಹಕಾರ ಸಂಘವು ಸ್ಥಾಪನೆಯಾಗಿ 53 ವರ್ಷ ಕಳೆದಿವೆ. ಇತ್ತೀಚೆಗೆ ನಿಧನ ಹೊಂದಿದ ಮಾಜಿ ಸಚಿವ ಮುಂಡ್ರುದೆಗುತ್ತು ಕೆ. ಅಮರನಾಥ ಶೆಟ್ಟಿ ಅವರು ಸ್ಥಾಪಕಾಧ್ಯಕ್ಷರಾಗಿ ಸಹಕಾರಿ ರಂಗವನ್ನು ಪ್ರವೇಶಿಸಿದವರು. ಲಕ್ಷ್ಮಣ ಸನಿಲ್‌ ಸ್ಥಾಪಕ ಕಾರ್ಯದರ್ಶಿ. ಮೊದಲು ಪಾಲಡ್ಕದಲ್ಲಿ ಬಾಡಿಗೆ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿದ್ದ ಈ ಸಂಘವು ಕಡಂದಲೆ ಪಲ್ಕೆಯಲ್ಲಿ 1994ರಲ್ಲಿ ನೂತನ ಕಟ್ಟಡದಲ್ಲಿ ನೆಲೆಗೊಂಡಿತು. ಆರಂಭದಲ್ಲಿ ದಿನಕ್ಕೆ 20 ಲೀ. ಈಗ 1,380 ಲೀ. ಹಾಲು ಸಂಗ್ರಹವಾಗುತ್ತಿದೆ. ಮೊದಲು ಕೆನರಾ ಮಿಲ್ಕ್ ಯೂನಿಯನ್‌ಗೆ ಹಾಲು ಪೂರೈಸಲಾಗುತ್ತಿದ್ದು ಅನಂತರ ಕೆಎಂಎಫ್‌ಗೆ ಹಾಲು ನೀಡಲಾಗುತ್ತಿದೆ. 2012ರಲ್ಲಿ ಬಿಎಂಸಿ (ಬಲ್ಕ್ ಮಿಲ್ಕ್ ಕೂಲರ್‌) ವ್ಯವಸ್ಥೆಯಿಂದ ಶೀಥಲೀಕರಣ ನಡೆಸಲಾಗುತ್ತಿದೆ. ಸಂಘದ ವತಿಯಿಂದ

ಇತರ ಚಟುವಟಿಕೆಗಳು
ಆರೋಗ್ಯ ಶಿಬಿರಗಳು, ಯುವಜನತೆ ಮತ್ತು ಮಹಿಳೆಯರಿಗೆ ಹೈನುಗಾರಿಕೆ ಮಾಹಿತಿ ಶಿಬಿರ, ಮಹಿಳೆಯರಿಗೆ ಜನಜಾಗೃತಿ ಶಿಬಿರ, 20ಗೆ ಮಂದಿ ವಿದ್ಯಾರ್ಥಿ ವೇತನ (ರೂ. 12,000), ಹಾಲು ಉತ್ಪಾದಕರ ಒಕ್ಕೂಟದ ಯೋಜನೆಗಳಾದ ಕರು ಸಾಕಾಣಿಕೆ, ಮಿನಿ ಡೈರಿ, ಗೋಬರ್‌ ಗ್ಯಾಸ್‌, ಹಾಲು ಕರೆಯುವ ಯಂತ್ರ ಖರೀದಿ ಮೊದಲಾದ ಯೋಜನೆಗಳನ್ನು ಸದಸ್ಯರಿಗಾಗಿ ಕಾರ್ಯಗತಗೊಳಿಸಲಾಗಿದೆ. ಸ್ವಂತ ನೀರಿನ ವ್ಯವಸ್ಥೆ ಇದೆ. ಸಂಘವು ಪಡಿತರ ವಿತರಣ ಕಾರ್ಯವನ್ನೂ ನಡೆಸುತ್ತಿದೆ.

ಅಧ್ಯಕ್ಷರು
ಅಮರನಾಥ ಶೆಟ್ಟಿ (1967-72), ಗೋವಿಂದ ಶೆಟ್ಟಿ (1972-73), ಕೆ. ಪಾಂಡುರಂಗ ಶೆಟ್ಟಿ (1974-77), ಲಿಗೊರಿ ದಾಂತಿಸ್‌ (1977-81), ಅಂಬ್ರೋಜ್‌ ಸಿಕ್ವೇರ (1981-85), ಕೆ. ಪಾಂಡುರಂಗ ಶೆಟ್ಟಿ (1985-91), ಅಂಬ್ರೋಜ್‌ ಸಿಕ್ವೇರ (1991-95), ಕೆ. ಪಾಂಡುರಂಗ ಶೆಟ್ಟಿ (1995-2004) ಮತ್ತು ಕೆ.ಪಿ. ಸುಚರಿತ ಶೆಟ್ಟಿ 2004ರ ಸೆ. 30ರಿಂದ ಇದುವರೆಗೂ ಅಂದರೆ 16 ವರ್ಷಗಳಿಂದಲೂ ಅಧ್ಯಕ್ಷರಾಗಿ ಮುಂದುವರಿದಿದ್ದಾರೆ.

ಕಾರ್ಯದರ್ಶಿಗಳು
ಲಕ್ಷ್ಮಣ ಸನಿಲ್‌ ಅವರು ಆರಂಭದಿಂದ 1972 ಜು. 25ರ ವರೆಗೆ , ಎಂ. ಅಂಥೋನಿ ಡಿ’ಸೋಜಾ ಅವರು 1972ರ ಜು. 26ರಿಂದ 1977ರ ಜು. 25ರ ವರೆಗೆ, ಪ್ರವೀಣ್‌ ಕುಮಾರ್‌ ಅವರು 1977ರ ಡಿ.1ರಿಂದ 2012 ಆ. 31ರ ವರೆಗೆ ಹಾಗೂ ಶಿವರಾಮ ಶೇರಿಗಾರ್‌ ಅವರು 2012ರ ಸೆ. 1ರಿಂದ ಇದುವರೆಗೂ ಕಾರ್ಯನಿರ್ವಹಿಸುತ್ತಿದ್ದಾರೆ.

ದ.ಕ.ಹಾಲು ಉತ್ಪಾದಕರ ಸಂಘಕ್ಕೆ ನಾವು ಗುಣಮಟ್ಟದ ಹಾಲು ಸಂಗ್ರಹಿಸಿ ನೀಡುತ್ತಿದ್ದೇವೆ. ಸಂಘ ಸ್ಥಾಪನೆಯಾದ ಬಳಿಕ ಸುತ್ತಮುತ್ತ ಹಲವಾರು ಸಂಘಗಳು ಹುಟ್ಟಿಕೊಂಡಿದ್ದರೂ ನಮ್ಮ ಹಾಲು ಉತ್ಪಾದನೆ, ಸಂಗ್ರಹ ಉತ್ತಮವಾಗಿದೆ. ಸಬ್ಸಿಡಿ, ಆಧುನಿಕ ತಂತ್ರಜ್ಞಾನ, ಮಾಹಿತಿಗಳ ಪ್ರಯೋಜನ ಸದಸ್ಯರಿಗೆ ಲಭಿಸುವಂತೆ ಮಾಡುತ್ತಿದ್ದೇವೆ. ಸರಕಾರದ ನ್ಯಾಯಬೆಲೆ ಅಂಗಡಿಯ ಮೂಲಕ ಜನರಿಗೆ ಪಡಿತರವನ್ನೂ ವಿತರಿಸುತ್ತಿದ್ದೇವೆ. ಸಹಕಾರ ತತ್ತÌದಡಿ ಪಾರದರ್ಶಕ ಆಡಳಿತ ನೀಡುತ್ತಿದ್ದೇವೆ.
– ಕೆ.ಪಿ. ಸುಚರಿತ ಶೆಟ್ಟಿ,
ಅಧ್ಯಕ್ಷರು, ಕಡಂದಲೆ ಹಾಲು ಉತ್ಪಾದಕರ ಸಹಕಾರ ಸಂಘ ನಿ.

ಕೃತಕ ಗರ್ಭಧಾರಣ ವ್ಯವಸ್ಥೆ ಇದೆ. ನಾಲ್ಕು ಬಾರಿ ಜಾನುವಾರು ಪ್ರದರ್ಶನ ನಡೆಸಲಾಗಿದ್ದು ಉತ್ತಮ ಸ್ಪಂದನೆ ಕಂಡುಬಂದಿತ್ತು. ಈ ಸಂಘದಲ್ಲಿ ಇದುವರೆಗೂ ಚುನಾವಣೆ ನಡೆದಿಲ್ಲ; ಅವಿರೋಧ ಆಯ್ಕೆಯೇ ನಡೆದಿರುವುದು ವಿಶೇಷ.

ಧನಂಜಯ ಮೂಡುಬಿದಿರೆ

ಟಾಪ್ ನ್ಯೂಸ್

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.