ನೂರಾರು ಹೈನುಗಾರರನ್ನು ಸೃಷ್ಟಿಸಿದ ಮಾದರಿ ಸಂಸ್ಥೆ

ಸಾೖಬ್ರಕಟ್ಟೆ ಹಾಲು ಉತ್ಪಾದಕರ ಸಹಕಾರಿ ಸಂಘ

Team Udayavani, Feb 16, 2020, 5:16 AM IST

1502KOTA1E11

10 ಲೀಟರ್‌ ಹಾಲಿನೊಂದಿಗೆ ಆರಂಭಗೊಂಡ ಸಂಸ್ಥೆ ಇಂದು ಗರಿಷ್ಠ ಸಂಖ್ಯೆಯಲ್ಲಿ ಹೈನುಗಾರರನ್ನು ಸೃಷ್ಟಿಸಿದ್ದಲ್ಲದೆ ಗ್ರಾಮೀಣ ಆರ್ಥಿಕತೆಗೆ ಕೊಡುಗೆ ನೀಡುತ್ತಿದೆ.

ಕೋಟ: ಹೈನುಗಾರರ ಏಳಿಗೆ ಯನ್ನೇ ಧ್ಯೇಯವಾಗಿಟ್ಟುಕೊಂಡು ಜನ್ಮ ತಳೆದ ಸಾೖಬ್ರಕಟ್ಟೆ ಹಾಲು ಉತ್ಪಾದಕರ ಸಂಘ ಗ್ರಾಮೀಣ ಸುಸ್ಥಿರ ಅಭಿವೃದ್ಧಿಗೂ ಇಂದು ಗಮನಾರ್ಹ ಕೊಡುಗೆ ನೀಡುತ್ತಿದೆ.

1982ರಲ್ಲಿ ಕೆನರಾ ಮಿಲ್ಕ್ ಯೂನಿಯನ್‌(ಕೆಮುಲ್‌) ಅಧೀನದಲ್ಲಿ ಇಲ್ಲಿನ ಮುಖ್ಯಪೇಟೆ ಸಮೀಪ ಚಿಕ್ಕ ಗುಡಿಸಲಿನಂತಹ ಕಟ್ಟಡದಲ್ಲಿ ಸ್ಥಾಪನೆಗೊಂಡಿತು. ಅಂದು 15ಮಂದಿ ಸದಸ್ಯರು ಸಂಘವನ್ನು ಆರಂಭಿಸಿದ್ದರು. ಸುತ್ತಲಿನ ಶಿರಿಯಾರ, ಅಚಾÉಡಿ, ಯಡ್ತಾಡಿ, ಕಾವಡಿ ಮುಂತಾದ ಐದಾರು ಕಿ.ಮೀ. ದೂರದಿಂದ ಇಲ್ಲಿಗೆ ಹಾಲುಪೂರೈಕೆಯಾಗುತಿತ್ತು. ಎಂ.ರಾಮದಾಸ ಕಿಣಿ ಸಂಸ್ಥೆಯ ಸ್ಥಾಪಕಾಧ್ಯಕ್ಷರಾಗಿದ್ದರು. 2014ರಲ್ಲಿ ಸುವ್ಯವಸ್ಥಿತ ಕಟ್ಟಡ ನಿರ್ಮಿಸಿತು.

ದಶಕದ ಹಿಂದೆ ಮೂರು ಶಾಖೆ
ಈ ಸಂಘಕ್ಕೆ ಸುತ್ತಲಿನ ನಾಲ್ಕೈದು ಗ್ರಾಮದಿಂದ ಹೇರಳವಾಗಿ ಹಾಲು ಪೂರೈಕೆಯಾಗುತ್ತಿದ್ದರಿಂದ ಹತ್ತೇ ವರ್ಷಗಳಲ್ಲಿ ಕಾವಡಿ, ಮಧುವನ, ಎತ್ತಿನಟ್ಟಿಯಲ್ಲಿ ಸಂಘದ ಉಪಕೇಂದ್ರದ ಶಾಖೆ ಸ್ಥಾಪಿಸಿತು. ಆ ಕಾಲದಲ್ಲಿ ಗ್ರಾಮಾಂತರ ಭಾಗದಲ್ಲಿ ಅತೀ ಹೆಚ್ಚು ಉಪಕೇಂದ್ರ ಹೊಂದಿದ ಡೈರಿ ಎನ್ನುವ ಕೀರ್ತಿಗೆ ಈ ಸಂಘ ಪಾತ್ರವಾಗಿತ್ತು. ಈಗ ಅದೆಲ್ಲವೂ ಸ್ವತಂತ್ರ ಸಂಘವಾಗಿದ್ದು, ಅಂದಿನ ವ್ಯಾಪ್ತಿಯಲ್ಲಿ ಆರೇಳು ಸಂಘಗಳು ಕಾರ್ಯನಿರ್ವಹಿಸುತ್ತಿವೆ.

ಹೈನುಗಾರಿಕೆಗೆ ಹೊಸ ಸ್ಪರ್ಶ
ಸಂಸ್ಥೆ ಸ್ಥಾಪನೆಯಾದ ಅನಂತರ ಸ್ಥಳೀಯವಾಗಿ ಸಾಕಷ್ಟು ಮಂದಿ ಹೈನುಗಾರಿಕೆಯಲ್ಲಿ ತೊಡಗಿಕೊಂಡರು. ಊರಿನ ಅಕ್ಕ-ಪಕ್ಕದಲ್ಲಿ ಶಾಖೆಗಳನ್ನು ಆರಂಭಿಸಿದ್ದರಿಂದ ಹಾಲು ಉತ್ಪಾದನೆ ಕೂಡ ಹೇರಳ ಪ್ರಮಾಣದಲ್ಲಿ ಹೆಚ್ಚಿತು.

ಪ್ರಸ್ತುತ ಸ್ಥಿತಿಗತಿ
ಪ್ರಸ್ತುತ 165ಮಂದಿ ಸದಸ್ಯರನ್ನು ಹೊಂದಿದ್ದು, ಪ್ರತಿದಿನ 750 ಲೀಟರ್‌ ಹಾಲು ಸಂಗ್ರಹವಾಗುತ್ತಿದೆ ಹಾಗೂ 2014ರಲ್ಲಿ ಸಂಘದಲ್ಲಿ ಶೀತಲೀಕರಣ ಕೇಂದ್ರವನ್ನು ಸ್ಥಾಪಿಸಿದ್ದು ಸ್ಥಳೀಯ ಐದು ಡೈರಿಗಳಿಂದ ಇಲ್ಲಿಗೆ ಹಾಲು ಪೂರೈಕೆಯಾಗುತ್ತಿದೆ. ಪ್ರಸ್ತುತ ಅಧ್ಯಕ್ಷರಾದ ಪ್ರದೀಪ್‌ ಬಲ್ಲಾಳ್‌ ಅವರು ಸತತ 30ವರ್ಷ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕಾರ್ಯದರ್ಶಿಯಾಗಿ ಶಂಭು ಶೆಟ್ಟಿ ಇದ್ದಾರೆ. ಸ್ಥಳೀಯರಾದ ರಂಜಿತ್‌ ಕುಮಾರ್‌ಶೆಟ್ಟಿ, ಮಂಜುನಾಥ ಕೊಡ್ಲ, ಶಾರದಾ ಬಾೖ ಸಂಘಕ್ಕೆ ಅತೀ ಹೆಚ್ಚು ಹಾಲು ಪೂರೈಕೆ ಮಾಡುತ್ತಿದ್ದಾರೆ.

ಸಾೖಬ್ರಕಟ್ಟೆ ಸುತ್ತ-ಮುತ್ತ ಗ್ರಾಮೀಣ ಪ್ರದೇಶದಲ್ಲಿ 7 ಹಾಲು ಉತ್ಪಾದಕರ ಸಂಘಗಳಿದ್ದು ಸುಮಾರು 1300-1500 ಮಂದಿ ಕ್ರಿಯಾಶೀಲ ಹೈನುಗಾರರಿದ್ದಾರೆ ಮತ್ತು ಪ್ರತಿದಿನ ಒಟ್ಟು ಸುಮಾರು 6 ಸಾವಿರ ಲೀ. ಹಾಲು ಸಂಗ್ರಹವಾಗುತ್ತಿದೆ ಹಾಗೂ ಈ ಹಾಲಿಗೆ ಸರಕಾರದಿಂದ ಒಟ್ಟು 30 ಸಾವಿರ ರೂ ಪ್ರೋತ್ಸಾಹಧನ, 2.10ಲಕ್ಷ ರೂ ನಗದು ಹೈನುಗಾರರ ಕೈ ಸೇರುತ್ತದೆ. ಇದು ಪುಟ್ಟ ಗ್ರಾಮೀಣ ಪ್ರದೇಶವೊಂದರ ಅರ್ಥಿಕತೆಗೆ ಹೈನುಗಾರಿಕೆ ನೀಡುತ್ತಿರುವ ಕೊಡುಗೆಯಾಗಿದೆ.

ಪ್ರಶಸ್ತಿ ಪುರಸ್ಕಾರ
2013ನೇ ಸಾಲಿನಲ್ಲಿ ಒಕ್ಕೂಟದಿಂದ ಉತ್ತಮ ಸಂಘ ಎನ್ನುವ ಪುರಸ್ಕಾರಕ್ಕೆ ಸಂಸ್ಥೆ ಪಾತ್ರವಾಗಿದೆ ಹಾಗೂ ಧಾರವಾಡ ಒಕ್ಕೂಟದ ಪದಾಧಿಕಾರಿಗಳು ಸಂಸ್ಥೆಗೆ ಭೇಟಿ ನೀಡಿ ಕಾರ್ಯಚಟುವಟಿಕೆಯನ್ನು ಗಮನಿಸಿ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

10 ಲೀ. ಹಾಲಿನೊಂದಿಗೆ ಆರಂಭಗೊಂಡ ಈ ಸಂಸ್ಥೆ ಇದೀಗ ಸಾಕಷ್ಟು ಬೆಳವಣಿಗೆಯಾಗಿದೆ. ಸಂಸ್ಥೆಯ ಅಭಿವೃದ್ಧಿಯನ್ನು ಇದೇ ರೀತಿ ಮುಂದುವರಿಸಿಕೊಂಡು ಹೋಗುವ ಹೊಣೆಗಾರಿಕೆ ನಮ್ಮ ಮೇಲಿದೆ.
ಪ್ರದೀಪ್‌ ಬಲ್ಲಾಳ್‌,ಅಧ್ಯಕ್ಷರು

ಅಧ್ಯಕ್ಷರು
ಎಂ.ರಾಮದಾಸ ಕಿಣಿ, ರಂಗನಾಥ ಅಡಿಗ, ಪ್ರಶಾಂತ್‌ ಬಲ್ಲಾಳ್‌, ಪ್ರದೀಪ್‌ ಬಲ್ಲಾಳ್‌ (ಹಾಲಿ)
ಕಾರ್ಯದರ್ಶಿ
ಕಮಲಾಕರ್‌ ರಾವ್‌, ನರಸಿಂಹ ಶ್ಯಾನುಭಾಗ್‌, ಶಂಭು ಶೆಟ್ಟಿ (ಹಾಲಿ)

-ರಾಜೇಶ್‌ ಗಾಣಿಗ ಅಚ್ಲಾಡಿ

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.