ಪಲ್ಟಿಯಾದ ಖಾಸಗಿ ಬಸ್: ಅಪಾಯದಿಂದ ಪಾರಾದ ಪ್ರಯಾಣಿಕರು
Team Udayavani, Feb 16, 2020, 10:25 AM IST
ಕಡಬ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸೊಂದು ರಸ್ತೆಯಲ್ಲಿ ಪಲ್ಟಿಯಾದ ಘಟನೆ ಇಲ್ಲಿನ ಪೇರಡ್ಕದಲ್ಲಿ ನಡೆದಿದ್ದು, ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.
ಇಂದು ಬೆಳಿಗ್ಗೆ ಈ ಘಟನೆ ಸಂಭವಿಸಿದ್ದು, ಧರ್ಮಸ್ಥಳ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ಧಾಳ ಸಮೀಪದ ಪೇರಡ್ಕದ ಪೆಟ್ರೋಲ್ ಪಂಪ್ ಬಳಿ ನಡೆದಿದೆ.
ಬಸ್ಸು ಬೆಂಗಳೂರಿನಿಂದ ಧರ್ಮಸ್ಥಳ ಮೂಲಕ ಕುಕ್ಕೆ ಸುಬ್ರಹ್ಮಣ್ಯಕ್ಕೆ ಹೊರಟಿದ್ದು. ಬಸ್ ನಲ್ಲಿ ಸುಮಾರು 35 ಮಂದಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ ಎಂದು ವರದಿಯಾಗಿದೆ.