ಮಹಾಪುರುಷರ ಆದರ್ಶ ಪಾಲಿಸಿ

ಸಂತ ಶ್ರೀ ಸೇವಾಲಾಲ್‌ ಜಯಂತಿಯಲ್ಲಿ ತಹಶೀಲ್ದಾರ್‌ ನಂದಕುಮಾರ್‌ ಸಲಹೆ

Team Udayavani, Feb 16, 2020, 5:01 PM IST

16-February-31

ಚಿಕ್ಕಮಗಳೂರು: ಮಹಾಪುರುಷರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ಮಹಾಪುರುಷರ ಜಯಂತಿಗಳು ಅರ್ಥಪೂರ್ಣವಾಗುತ್ತವೆ ಎಂದು ತಹಶೀಲ್ದಾರ್‌ ನಂದಕುಮಾರ್‌ ತಿಳಿಸಿದರು.

ಶನಿವಾರ ನಗರದ ಕುವೆಂಪು ಕಲಾಮಂದಿರದಲ್ಲಿ ಜಿಲ್ಲಾಡಳಿತದ ವತಿಯಿಂದ ಆಯೋಜಿಸಿದ್ದ ಸಂತ ಶ್ರೀ ಸೇವಾಲಾಲ್‌ ಜಯಂತಿಯನ್ನು ಉದ್ಘಾಟಿಸಿ ಮಾತನಾಡಿದರು. ಶರಣರ, ಮಹಾತ್ಮರ ಜಯಂತಿಗಳು ಕೇವಲ ಒಂದು ಸಮುದಾಯಕ್ಕೆ ಸೀಮಿತವಾಗಿರಬಾರದು. ಸರ್ವರೂ ಅವರ ತತ್ವ, ಆದರ್ಶಗಳನ್ನು ಪಾಲಿಸುವಂತಾಗಬೇಕು. ಅವರ ಉತ್ತಮ ಗುಣಗಳನ್ನು ಪ್ರತಿಯೊಬ್ಬರೂ ಬದುಕಿನಲ್ಲಿ ಅಳವಡಿಸಿಕೊಂಡಾಗ ಮಾತ್ರ ಸಮಾಜದಲ್ಲಿ ಆದರ್ಶ ವ್ಯಕ್ತಿಗಳಾಗಿ ಗುರುತಿಸಿಕೊಳ್ಳಲು ಸಾಧ್ಯ ಎಂದು ತಿಳಿಸಿದರು.

ಬಂಜಾರ ಸಮುದಾಯ ತನ್ನ ವಿಶಿಷ್ಟ ಉಡುಗೆ, ಗಾಯನ, ನೃತ್ಯ, ಕಲೆ, ಸಂಸ್ಕೃತಿಯ ಮೂಲಕ ಸಮಾಜಕ್ಕೆ ತನ್ನದೇ ಕೊಡುಗೆ ನೀಡುತ್ತಾ ಬಂದಿದೆ. ಇಂತಹ ಸಮುದಾಯದವರಿಗೆ ಹೆಚ್ಚಿನ ಪ್ರೋತ್ಸಾಹ ದೊರೆಯಬೇಕು ಎಂದು ಹೇಳಿದರು. ಬಂಜಾರ ಸೇವಾ ಸಂಘದ ಅಧ್ಯಕ್ಷ ಪ್ರೊ| ಚಂದ್ರಶೇಖರ್‌ ಆರ್‌.ನಾಯಕ್‌ ಉಪನ್ಯಾಸ ನೀಡಿ, ಎಲ್ಲೆಡೆ ಸಂತ ಸೇವಾಲಾಲ್‌ ಅವರ 281ನೇ ಜಯಂತಿಯನ್ನು ಆಚರಣೆ ಮಾಡಲಾಗುತ್ತಿದೆ. ಸಂಸ್ಕೃತಿಯ ಮೂಲಕ ಅನನ್ಯತೆಯನ್ನು ಎತ್ತಿ ಹಿಡಿದ ಸಮಾಜ ಇದಾಗಿದೆ. ಇಂತಹ ಸಮುದಾಯದಲ್ಲಿ ಜನರ ಉದ್ಧಾರಕ್ಕಾಗಿ ಹುಟ್ಟಿದ ಸಂತ ಸೇವಾಲಾಲರು ಶ್ರೇಷ್ಠರು ಎಂದು ಹೇಳಿದರು.

ಬದುಕಿನಲ್ಲಿ ಸತ್ಯ, ನಿಷ್ಠೆಯಿಂದ ಬಾಳಿ ತಮ್ಮಲ್ಲಿನ ಗುಣಗಳನ್ನು ಜನಾಂಗಕ್ಕೂ ಬೋಧನೆ ಮಾಡಿ, ಅರಣ್ಯವಾಸಿ ಜನಾಂಗವನ್ನು ರಕ್ಷಿಸುತ್ತಾ ಬಂದಿದ್ದಾರೆ. ಹಾಗಾಗಿ, ಲಂಬಾಣಿ ತಾಂಡಾಗಳಲ್ಲಿ ಸೇವಾಲಾಲ್‌ ಅವರ ದೇವಸ್ಥಾನಗಳನ್ನು ಸ್ಥಾಪಿಸಿ ಪೂಜೆ ಸಲ್ಲಿಸಲಾಗುತ್ತಿದೆ ಎಂದು ಹೇಳಿದರು. ಸಮುದಾಯದವರು ಪೂರ್ವಕಾಲದಲ್ಲಿ ಮೂಲತಃ ರಾಜಸ್ಥಾನದಿಂದ ವಲಸೆ ಬಂದಿದ್ದು, ಇಂದು ದೇಶದಾದ್ಯಂತ ಹಲವು ರಾಜ್ಯಗಳಲ್ಲಿ ಸಮುದಾಯವನ್ನು ವಿಸ್ತರಿಸಿಕೊಂಡಿದ್ದಾರೆ. ಅರಣ್ಯ ವಾಸಿಗಳಾಗಿ ನೆಲೆಸಿದ್ದ ಇವರು ಸಂವಿಧಾನ ಜಾರಿಗೆ ಬಂದ ಬಳಿಕ ಮುಖ್ಯ ವಾಹಿನಿಗೆ ಬಂದು ನೆಲೆಸಿದ್ದಾರೆ ಎಂದರು.

ಸಮಾಜಕ್ಕೆ ಅಗತ್ಯವಾದ ದೈನಂದಿನ ವಸ್ತುಗಳನ್ನು ಪೂರೈಸುತ್ತಾ ಬಂದ ಈ ಸಮುದಾಯದವರು, ಪೂರ್ವದಲ್ಲಿ ಮೊಘಲ್‌ ಅರಸರ ಆಡಳಿತದ ವೇಳೆಯಲ್ಲಿ ಆಹಾರ ಧಾನ್ಯಗಳನ್ನು ಪೂರೈಸಿ ವರ್ತಕರ ಕೆಲಸ ಮಾಡುವುದರ ಜೊತೆಗೆ ಸೈನಿಕ ವೃತ್ತಿಯಲ್ಲೂ ಪ್ರಾವೀಣ್ಯತೆ ಪಡೆದಿದ್ದರು ಹಾಗೂ ಕೆಳಸ್ತರದ ಜನಾಂಗವನ್ನು ಮುಖ್ಯವಾಹಿನಿಗೆ ತರಲು ಶ್ರಮಿಸಿ ಸತ್ಯತೆಯನ್ನು ಸಮಾಜಕ್ಕೆ ಪ್ರಸ್ತುತಪಡಿಸಿದರು ಎಂದು ಹೇಳಿದರು.

ತಾಲೂಕು ಪಂಚಾಯತ್‌ ಸದಸ್ಯ ಆನಂದ ನಾಯ್ಕ ಮಾತನಾಡಿ, ಕಸೂತಿ ಕೆಲಸವನ್ನು ಮುಖ್ಯ ಕಸುಬನ್ನಾಗಿಸಿಕೊಂಡ ಬಂಜಾರ ಸಮುದಾಯದವರು ತಯಾರಿಸಿದಂತಹ ಕಸೂತಿಯ ಬಂಜಾರ ಉಡುಪುಗಳು ಇಂದಿಗೂ ದೇಶ-ವಿದೇಶಗಳಲ್ಲೂ ಪ್ರಸಿದ್ಧಿ ಪಡೆದಿವೆ. ಈ ಸಮುದಾಯ ಕಲೆ ಮತ್ತು ಸಂಸ್ಕೃತಿಗೆ ತನ್ನದೇ ಆದ ಕೊಡುಗೆ ನೀಡುತ್ತಾ ಬಂದಿದೆ ಎಂದು ಹೇಳಿದರು.

ಸಮುದಾಯದ ಅಭಿವೃದ್ಧಿಗಾಗಿ ಸರ್ಕಾರದಿಂದ ಕರ್ನಾಟಕ ಬಂಜಾರ ಅಭಿವೃದ್ಧಿ ನಿಗಮ ಸ್ಥಾಪನೆಯಾಗಿದ್ದು, ಮುಂದಿನ ದಿನಗಳಲ್ಲಿ ಬಂಜಾರ ಅಕಾಡೆಮಿ ಸ್ಥಾಪಿಸುವುದಾಗಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಅವರು ಅಭಿಪ್ರಾಯ ವ್ಯಕ್ತಪಡಿಸಿರುವುದಾಗಿ ತಿಳಿಸಿದರು. ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ| ರಮೇಶ್‌, ದಲಿತ ಮುಖಂಡ ಕೆ.ಟಿ ರಾಧಾಕೃಷ್ಣ, ಶ್ರೀ ಸೇವಾಲಾಲ್‌ ಬಂಜಾರ ಸೇವಾ ಸಂಘದ ಅಧ್ಯಕ್ಷ ರಾಮಾನಾಯ್ಕ, ಜಿಲ್ಲಾ ಸರ್ಜನ್‌ ಡಾ| ಕುಮಾರ್‌ ನಾಯ್ಕ ಮತ್ತಿತರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

1——asdsad

IPL ರೋಚಕ ಪಂದ್ಯ:ರಾಜಸ್ಥಾನ್‌ ವಿರುದ್ಧ ಹೈದರಾಬಾದ್ ಗೆ 1 ರನ್ ಜಯ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

1-wewqewqe

BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ

1-asdsad

Farmers ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ:ಯಡಿಯೂರಪ್ಪ

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-mudigere

Mudigere: ಹುಲಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಶಕ್ಕೆ

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1—dsdasd

Chikkamagaluru; ಪ್ರವಾಸಿ ಬಸ್ ಪಲ್ಟಿ: ಬಾಲಕ ಸಾವು, 30 ಮಂದಿಗೆ ಗಾಯ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

rahul gandhi (2)

ನಾನು ರಾಹುಲ್‌ ಫಿಟ್ನೆಸ್‌ ಅಭಿಮಾನಿ: ಶಿವರಾಜ್‌ಕುಮಾರ್‌

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

Exam 2

ಕೆಸೆಟ್‌: ತಾತ್ಕಾಲಿಕ ಅಂಕ ಪ್ರಕಟ

35

Siddaramaiah: ಚುನಾವಣೆ ಬಂದಾಗ ಮೋದಿಗೆ ರಾಜ್ಯದ ನೆನಪು; ಸಿದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.