ಫಾಸ್ಟ್ಯಾಗ್ ಸಮಸ್ಯೆ: ತಲಪಾಡಿಯಲ್ಲಿ ಬಸ್‌ ಪ್ರಯಾಣಿಕರ ಪಾದಯಾತ್ರೆ!


Team Udayavani, Feb 17, 2020, 5:00 AM IST

14-KBL-1

ಕುಂಬಳೆ: ಮಂಗಳೂರಿನಿಂದ ಕಾಸರಗೋಡಿಗೆ ಮತ್ತು ಕಾಸರಗೋಡಿನಿಂದ ಮಂಗಳೂರಿಗೆ ಖಾಸಗಿ ಬಸ್ಸುಗಳಲ್ಲಿ ತೆರಳುವ ಪ್ರಯಾಣಿಕರು ಪ್ರಕೃತ ತಲಪಾಡಿಯಲ್ಲಿ ಅತ್ತಿಂದಿತ್ತ ರಸ್ತೆಯಲ್ಲಿ ಸುಮಾರು 200 ಮೀಟರ್‌ ಪಾದಯಾತ್ರೆ ಮಾಡಬೇಕಾಗಿದೆ.

ವಾಹನಗಳಿಗೆ ಫಾಸ್ಟ್ಯಾಗ್ ವ್ಯವಸ್ಥೆಯ ಬಳಿಕ ತಲಪಾಡಿ ಟೋಲ್‌ಗೇಟ್‌ ನಲ್ಲಿ ಈ ದುರವಸ್ಥೆ ಉಂಟಾಗಿದೆ.ಈ ಹಿಂದೆ ಮಂಗಳೂರು ಖಾಸಗಿ ಬಸ್ಸುಗಳು ಮೇಲಿನ ತಲಪಾಡಿ ತನಕ ಆಗಮಿಸಿ ಪ್ರಯಾ ಣಿಕರನ್ನು ಇಳಿಸುತ್ತಿದ್ದವು. ಫಾಸ್ಟ್ಯಾಗ್ ವ್ಯವಸ್ಥೆಯ ಬಳಿಕ ತಲಪ್ಪಾಡಿ ಟೋಲ್‌ನಲ್ಲಿ ಕಾನೂನಿನ ಅಡ್ಡಿಯಿಂದಾಗಿ ಇದೀಗ ಮಂಗಳೂರಿನಿಂದ ಆಗಮಿಸಿದ ಖಾಸಗಿ ಬಸ್ಸುಗಳು ಪ್ರಯಾಣಿಕರನ್ನು ತಲಪಾಡಿ ಟೋಲ್‌ ಗೇಟ್‌ ಬಳಿಯಲ್ಲಿ ಇಳಿಸುವುದು. ಅಲ್ಲಿಂದ ಪ್ರಯಾಣಿಕರು ಕಾಸರಗೋಡು ಬಸೇÕರಲು ಗಂಟು ಮೂಟೆ ಹೊತ್ತು ಮೇಲಿನ ತಲಪ್ಪಾಡಿಗೆ ಪಾದಯಾತ್ರೆ ಬೆಳೆಸಬೇಕಾಗಿದೆ.ಲಗೇಜ್‌ ಹೊಂದಿದವರು ಮತ್ತು ಮಕ್ಕಳನ್ನು ಹೊತ್ತ ಮಹಿಳೆಯರ ಪಾಡಂತೂ ಹೇಳತೀರದು.ಕಾಸರಗೋಡಿನಿಂದ ಖಾಸಗಿ ಬಸ್ಸುಗಳಲ್ಲಿ ಆಗಮಿಸಿದ ಪ್ರಯಾಣಿಕರೂ ಇದೇ ರೀತಿ ಮೇಲಿನಿಂದ ಕೆಳಗಿನ ತಲಪಾಡಿ ಟೋಲ್‌ ಗೇಟಿನ ತನಕ ಸುಡು ಬಿಸಿಲಿಗೆ ನಡೆಯಬೇಕಾಗಿದೆ. ಇದೇ ರೀತಿ ಮುಂದುವರಿದಲ್ಲಿ ಮಳೆಗಾಲದ ಪಾಡಂತೂ ಹೇಳತೀರದು.

ತಲಪಾಡಿ ಟೋಲ್‌ ಗೇಟ್‌ ದಾಟಿದ ಬಸ್ಸುಗಳು ಕೇರಳಕ್ಕೆ ಪ್ರಯಾಣ ಬೆಳೆಸಿದಲ್ಲಿ ಫಾಸ್ಟ್ಯಾಗ್ ಮೂಲಕ ಹೇರಳ ಶುಲ್ಕ ಪಾವತಿಯಾಗುವ ಸಮಸ್ಯೆಯನ್ನು ತಪ್ಪಿಸಲು ಮಂಗಳೂರಿನಿಂದ ಆಗಮಿಸುವ ಬಸ್ಸುಗಳು ಟೋಲ್‌ ಗೇಟ್‌ ತನಕ ಮಾತ್ರ ಪ್ರಯಾಣ ಬೆಳೆಸುವುದರಿಂದ ಈ ಸಮಸ್ಯೆ ಸೃಷ್ಟಿಯಾಗಿದೆ. ಪ್ರಯಾಣಿಕರ ಈ ಗಂಭೀರ ಸಮಸ್ಯೆಯತ್ತ ಯಾವ ರಾಜಕೀಯ ಪಕ್ಷಗಳೂ ಈ ತನಕ ಸ್ಪಂದಿಸಿಲ್ಲ, ಮಾತ್ರವಲ್ಲ ಪ್ರಬಲ ಪ್ರತಿಭಟನೆ ನಡೆಸಿಲ್ಲವೆಂಬ ಆರೋಪ ಪ್ರಯಾಣಿಕರದು. ಕೇವಲ ಪತ್ರಿಕೆಯ ಹೇಳಿಕೆಗೆ ಮಾತ್ರ ಇವರ ಮಾತು ಸೀಮಿತವಾಗಿದೆ.ಆದುದಿಂದ ಸಮಸ್ಯೆಗೆ ಪರಿಹಾರವಾಗಬೇಕಾಗಿದೆ.

ಪರಿಹರಿಸಬೇಕಿದೆ
ಈ ಜಟಿಲ ಸಮಸ್ಯೆಯಿಂದ ಪ್ರಯಾಣಿಕರು ಸಂಕಷ್ಟ ಪಡುವಂತಾಗಿದೆ.ಖಾಸಗಿ ಬಸ್ಸಿಗೆ ಪ್ರಯಾಣಿಕರ ಸಂಖ್ಯೆ ಕುಂಠಿತವಾಗಿದೆ.ಸಮಸ್ಯೆಯನ್ನು ಸಂಬಂಧಪಟ್ಟವರು ಪರಿಹರಿಸಬೇಕಿದೆ.
-ಸಾಂತ ಆಳ್ವ ಬಳ್ಳಂಬೆಟ್ಟು,
ಖಾಸಗಿ ಬಸ್‌ ನಿರ್ವಾಹಕ

ಸ್ಪಂದಿಸಿಲ್ಲ
ಪ್ರಯಾಣಿಕರ ಅನನು ಕೂಲತೆಯ ಈ ಸಮಸ್ಯೆಯತ್ತ ಚುನಾಯಿತರಾಗಲಿ,ರಾಜಕೀಯ ಪಕ್ಷಗಳಾಗಲಿ ಸ್ಪಂದಿಸಿಲ್ಲ. ಚುನಾವಣೆಯ ಕಾಲವಾಗಿದ್ದಲ್ಲಿ ಮೊಸಳೆ ಕಣ್ಣೀರಿನ ಮೂಲಕ ಇಲ್ಲಿಗೆ ದೌಡಾಯಿಸಿ ಬಂದು ಸಮಸ್ಯೆಗೆ ಸ್ಪಂದಿಸುತ್ತಿದ್ದರೇನೋ?
– ಸಂತೋಶ್‌ ಕುಮಾರ್‌ ಮಂಜೇಶ್ವರ, ನಿತ್ಯ ಪ್ರಯಾಣಿಕ

ಟಾಪ್ ನ್ಯೂಸ್

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

9-kushtagi

Kushtagi: ಕಾಣೆಯಾಗಿದ್ದ ಪುರಸಭೆ ನೌಕರ ಪತ್ತೆ; ಆತಂಕ ದೂರ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.