ಜನಪ್ರತಿನಿಧಿ, ಅಧಿಕಾರಿಗಳಿಗೆ ನೈತಿಕತೆ ಅಗತ್ಯ


Team Udayavani, Feb 17, 2020, 3:07 AM IST

jana-prati

ಬೆಂಗಳೂರು: ಜನಪ್ರತಿನಿಧಿಗಳು ಮತ್ತು ಅಧಿ ಕಾರಿಗಳಿಗೆ ನೈತಿಕತೆ, ಶಿಸ್ತು ಅಗತ್ಯ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಹೇಳಿದರು. ಚುಂಚಶ್ರೀ ಬಳಗ ಭಾನುವಾರ ಜ್ಞಾನ ಜ್ಯೋತಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಒಕ್ಕಲಿಗ ಸಮುದಾಯದ ಸಚಿವರು ಮತ್ತು ಅಧಿಕಾರಿಗಳಿಗೆ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದರು.

ಪ್ರತಿಯೊಬ್ಬ ಅಧಿಕಾರಿ ಮತ್ತು ರಾಜಕಾರಣಿಗೆ ವೃತ್ತಿಪರತೆ, ಕ್ರಿಯಾ ಶೀಲತೆ, ಅಂತಃಕರಣ, ದೂರದೃಷ್ಟಿ, ನೈತಿಕತೆ ಮತ್ತು ಶಿಸ್ತು ಅಗತ್ಯ. ಈ ಎಲ್ಲ ಅಂಶಗಳನ್ನು ಅಳವಡಿಸಿಕೊಂಡು ಕೆಲಸ ನಿರ್ವಹಿಸಿದರೆ ಮಾತ್ರ ಯಶಸ್ವಿ ಅಧಿಕಾರಿ ಮತ್ತು ರಾಜಕಾರಣಿ ಯಾಗಲು ಸಾಧ್ಯ ಎಂದು ತಿಳಿಸಿದರು.

ಒಬ್ಬ ಅಧಿಕಾರಿ ತಪ್ಪು ಮಾಡಿದರೆ ಆ ಸಮದಾಯಕ್ಕೆ ಕೆಟ್ಟ ಹೆಸರು ಬರುತ್ತದೆ. ಆದ್ದರಿಂದ ಒಕ್ಕಲಿಗ ಸಮುದಾಯದ ಅಧಿಕಾರಿಗಳು ನಿಷ್ಠೆಯಿಂದ ಕೆಲಸ ನಿರ್ವಹಿಸಬೇಕು. ಅತ್ಯು ತ್ತಮವಾಗಿ ಸಮಾಜದ ಕೆಲಸ ಮಾಡಿದರೆ ಒಕ್ಕಲಿಗ ಸಮುದಾಯಕ್ಕೆ ಗೌರವ ನೀಡಿದಂತಾ ಗುತ್ತದೆ. ಕೆಲಸದಲ್ಲಿ ಪ್ರಾಮಾಣಿಕತೆ ತೋರಿಸಿದರೆ ಜನರೇ ಅವರನ್ನು ಗುರುತಿಸುತ್ತಾರೆ ಎಂದರು.

ಸಚಿವ ಸಿ.ಟಿ.ರವಿ ಮಾತನಾಡಿ, ಒಕ್ಕಲಿಗರಾದ ನಾವು ಭೂಮಿ ತಾಯಿಯ ಸೇವೆ ಮಾಡುತ್ತಿದ್ದೇವೆ. ಸಮುದಾಯಕ್ಕೆ ಅನ್ಯಾಯವಾದರೆ ಅದನ್ನು ನೋಡಿ ಸುಮ್ಮನೆ ಇರುವುದಿಲ್ಲ. ಬೆನ್ನು ತೋರಿಸಿ ಓಡಿ ಹೋಗದೇ ಎದೆ ಕೊಟ್ಟು ಹೋರಾಟ ಮಾಡುತ್ತೇವೆ. ಸಮಾಜದಲ್ಲಿ ನಾವೆಷ್ಟು ಬೆಳದಿದ್ದೇವೆ ಎನ್ನುವುದಕಿಂತ ಸಮಾಜ ವನ್ನು ನಾವೆಷ್ಟು ಬೆಳೆಸಿದ್ದೇವೆ ಎಂಬುದು ಮುಖ್ಯವಾಗುತ್ತದೆ ಎಂದು ಹೇಳಿದರು.

ನಿವೃತ್ತ ಐಎಫ್ಎಸ್‌ ಅಧಿಕಾರಿ ಡಾ.ಗಾ.ನಂ.ಶ್ರೀಕಂಠಯ್ಯ ಮಾತನಾಡಿದರು. ಇದೇ ವೇಳೆ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ, ಉಪ ಮುಖ್ಯಮಂತ್ರಿ ಸಿ.ಎನ್‌.ಅಶ್ವತ್ಥ ನಾರಾಯಣ್‌, ಸಚಿವ ಸಿ.ಟಿ.ರವಿ, ಕೆ.ಗೋಪಾಲಯ್ಯ, ಕೆ.ಸುಧಾ ಕರ್‌, ಎಸ್‌.ಟಿ.ಸೋಮಶೇಖರ್‌, ಕೆ.ಸಿ.ನಾರಾಯಣಗೌಡ, ಐಎಎಸ್‌ ಅಧಿಕಾರಿ ಉಮಾ ಶಂಕರ್‌, ಐಪಿಎಸ್‌ ಅಧಿಕಾರಿ ಹಿತೇಂದ್ರ ಸೇರಿದಂತೆ ಒಕ್ಕಲಿಗ ಸಮಾಜದ ಐಎಎಸ್‌, ಐಪಿಎಸ್‌, ಕೆಎಎಸ್‌ ಅಧಿಕಾರಿಗಳನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಆದಿಚುಂಚನ ಗಿರಿ ಮಠದ ಡಾ.ನಿರ್ಮಲಾನಂದನಾಥ ಸ್ವಾಮೀಜಿ, ಗುರುಗುಂಡ ಬ್ರಹ್ಮೇಶ್ವರ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷ ಶ್ರೀನಂಜಾವಧೂತ ಸ್ವಾಮೀಜಿ, ವಿಧಾನ ಪರಿಷತ್‌ ಸದಸ್ಯ ನಾರಾಯಣಸ್ವಾಮಿ, ಅ.ದೇವೇಗೌಡ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

1——asdsad

IPL ರೋಚಕ ಪಂದ್ಯ:ರಾಜಸ್ಥಾನ್‌ ವಿರುದ್ಧ ಹೈದರಾಬಾದ್ ಗೆ 1 ರನ್ ಜಯ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

1-wewqewqe

BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ

1-asdsad

Farmers ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ:ಯಡಿಯೂರಪ್ಪ

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

10

Bengaluru: ಫ್ಲೈಓವರ್‌ಗಳಲ್ಲೂ ಕಸ ಸುರಿಯುವ ವಾಹನ ಸವಾರರು 

7

Bengaluru: ಸೈಕಲ್‌ ಕದಿಯುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಬಂಧನ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

rahul gandhi (2)

ನಾನು ರಾಹುಲ್‌ ಫಿಟ್ನೆಸ್‌ ಅಭಿಮಾನಿ: ಶಿವರಾಜ್‌ಕುಮಾರ್‌

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

Exam 2

ಕೆಸೆಟ್‌: ತಾತ್ಕಾಲಿಕ ಅಂಕ ಪ್ರಕಟ

35

Siddaramaiah: ಚುನಾವಣೆ ಬಂದಾಗ ಮೋದಿಗೆ ರಾಜ್ಯದ ನೆನಪು; ಸಿದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.