ಬೋಳಾರದ ಲೀವೆಲ್‌ ಪರಿಶೀಲನೆಗೆ ಪುರಾತತ್ವ ಇಲಾಖೆ ತಂಡ ಆಗಮನ ಸಾಧ್ಯತೆ


Team Udayavani, Feb 17, 2020, 5:16 AM IST

1602MLR10

ಮಹಾನಗರ: ಹಲವಾರು ದಶಕಗಳ ಹಿಂದೆ ಮುಚ್ಚಿದ್ದ ಶತಮಾನಗಳ ಇತಿಹಾಸವಿರುವ ಬಾವಿಯೊಂದು ಅಕ್ಟೋಬರ್‌ನಲ್ಲಿ ದಿಢೀರ್‌ ಆಗಿ ಪ್ರತ್ಯಕ್ಷಗೊಂಡು ಸುದ್ದಿಯಾಗಿದ್ದ ನಗರದ ಬೋಳಾರ ಲೀವೆಲ್‌ನ ಪರಿಶೀಲನೆಗಾಗಿ ಪುರಾತತ್ವ ಇಲಾಖೆಯ ತಜ್ಞರ ತಂಡವೊಂದು ಮಂಗಳೂರಿಗೆ ಆಗಮಿಸುವ ನಿರೀಕ್ಷೆಯಿದೆ.

ಬೋಳಾರದಲ್ಲಿ ಪತ್ತೆಯಾದ ಬ್ರಿಟೀಷರ ಕಾಲದ ಬಾವಿಯ ಕುರಿತು ಉನ್ನತ ಮಟ್ಟದ ಪರಿಶೀಲನೆಗೆ ಕ್ರಮ ಕೈಗೊಳ್ಳುವಂತೆ ಮಂಗಳೂರು ಪಾಲಿಕೆ ಆಯುಕ್ತ ಶಾನಾಡಿ ಅಜಿತ್‌ ಕುಮಾರ್‌ ಹೆಗ್ಡೆ ಪುರಾತತ್ವ ಇಲಾಖೆಗೆ ಪತ್ರ ಬರೆದಿದ್ದರು. ಜತೆಗೆ, ಮಂಗಳೂರಿನ ಶ್ರೀಮಂತಿ ಬಾಯಿ ಮೆಮೋರಿಯಲ್‌ ಸರಕಾರಿ ಮ್ಯೂಸಿಯಂನ ಮೇಲ್ವಿಚಾರಕರು ಕೂಡ ವಿವರವಾದ ವರದಿಯನ್ನು ಪುರಾತತ್ವ ಇಲಾಖೆಗೆ ಸಲ್ಲಿಸಿದ್ದಾರೆ. ಇದರ ಆಧಾರದ ಮೇಲೆ ಇದೀಗ ಪುರಾತತ್ವ ಇಲಾಖೆಯ ಮೈಸೂರಿನ ತಜ್ಞರು ಮಂಗಳೂರಿಗೆ ಆಗಮಿಸಲಿದ್ದಾರೆ. ಪ್ರಾರಂಭದಲ್ಲಿ ಪುರಾತತ್ವ ಇಲಾಖೆಯ ಎಂಜಿನಿಯರ್‌ಗಳ ತಂಡ ಆಗಮಿಸಿ ಪರಿಶೀಲನೆ ನಡೆಸಲಿದೆ ಎಂದು ತಿಳಿದುಬಂದಿದೆ.

ಬಾವಿ ಬ್ರಿಟಿಷರ ಕಾಲಕ್ಕೆ ಸೇರಿದ್ದಾಗಿದೆ. ಆದರೆ ಈ ಬಗ್ಗೆ ಯಾವುದೇ ಲಿಖೀತ ಸಾಕ್ಷಿಗಳಿಲ್ಲ. ಈ ಬಗ್ಗೆ ಪೂರ್ಣ ಅಧ್ಯಯನ ಅಗತ್ಯವಿದೆ ಎಂದು ಸರಕಾರಿ ಮ್ಯೂಸಿಯಂನ ಮೇಲ್ವಿಚಾರಕರು ಸಿದ್ಧಪಡಿಸಿದ ವರದಿಯಲ್ಲಿ ಉಲ್ಲೇಖೀಸಿದ್ದಾರೆ ಎಂದು ತಿಳಿದುಬಂದಿದೆ.

ಬ್ರಿಟಿಷರ ಆಡಳಿತ ಸಮಯದಲ್ಲಿ ಬೋಳಾರ ಜಂಕ್ಷನ್‌ನಲ್ಲಿ ಬಾವಿ ನಿರ್ಮಿಸಲಾಗಿತ್ತು. ಬ್ರಿಟಿಷ್‌ ಅಧಿಕಾರಿ ಲೀ ಅವರು ಇದನ್ನು ನಿರ್ಮಿಸಿದ್ದರು ಎನ್ನಲಾಗುತ್ತಿದೆ. ಇದಕ್ಕಾಗಿ ಈ ಪ್ರದೇಶಕ್ಕೆ ಲೀ ವೆಲ್‌ ಎಂಬ ಹೆಸರು ಬಂದಿತ್ತು. ಆದರೆ ಹಲವು ವರ್ಷಗಳ ಅನಂತರ ಈ ಬಾವಿಯನ್ನು ಕಸ ಹಾಗೂ ಮಣ್ಣು ಹಾಕಿ ಮುಚ್ಚಲಾಗಿತ್ತು. ಕಾಲಾನಂತರ ಇದೇ ಜಾಗದಲ್ಲಿ ಡಾಮರು ರಸ್ತೆ ನಿರ್ಮಿಸಲಾಗಿತ್ತು. ಹಾಗೂ ಪಕ್ಕದಲ್ಲಿ ಬಸ್‌ನಿಲ್ದಾಣವನ್ನು ಹಲವು ವರ್ಷದ ಹಿಂದೆ ಮಂಗಳೂರು ಪಾಲಿಕೆ ನಿರ್ಮಿಸಿತ್ತು ಎಂದು ಸ್ಥಳೀಯರು ನೆನಪು ಮಾಡುತ್ತಾರೆ.

ಆಗಿದ್ದೇನು?
ಬೋಳಾರ ಮಾರಿಗುಡಿ ದೇವಸ್ಥಾನದ ಸಮೀಪದ ಬೋಳಾರ ಜಂಕ್ಷನ್‌ನಲ್ಲಿ ಅಕ್ಟೋಬರ್‌ 23ರಂದು ರಸ್ತೆ ಕಾಂಕ್ರೀಟ್‌ ಕಾಮಗಾರಿ ನಡೆಸುತ್ತಿದ್ದ ಸಂದರ್ಭ ದಿಢೀರಾಗಿ ಬಾವಿಯೊಂದು ಪ್ರತ್ಯಕ್ಷಗೊಂಡಿತ್ತು. ಬಾವಿಯಿರುವ ಜಾಗದ ಒಂದು ಪಾರ್ಶ್ವದ ಕೊಂಚ ಭೂಮಿ ಒಳಕ್ಕೆ ಕುಸಿದ ಪರಿಣಾಮ ದಶಕಗಳ ಹಿಂದೆ ಇಲ್ಲಿ ಇತ್ತು ಎನ್ನಲಾದ ಬಾವಿಯ ಬಗ್ಗೆ ಎಲ್ಲೆಡೆ ಮಾತು ಕೇಳಿಬಂದು ಕುತೂಹಲಕ್ಕೆ ಕಾರಣವಾಗಿತ್ತು.

ಟಾಪ್ ನ್ಯೂಸ್

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

8-uv-fusion

UV Fusion: ಅತಿಯಾದ ಒಲವು ಒಳಿತಲ್ಲ

MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು

MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.