ಬಿಸಿಲೂರ ಜನರ ಕಣ್ಮನ ತಣಿಸಿದ ಚಿತ್ರಸಂತೆ

ವಿವಿಧ ಜಿಲ್ಲೆಗಳ ಕಲಾವಿದರಿಂದ ಚಿತ್ರ ಪ್ರದರ್ಶನ ಜನಾಭಾವದಿಂದ ಕಲಾವಿದರಲ್ಲಿ ನಿರಾಸೆ ಕಲಾಸಕ್ತರಿಂದ ಕಲಾಕೃತಿ ಖರೀದಿ

Team Udayavani, Feb 17, 2020, 1:40 PM IST

17-February-15

ರಾಯಚೂರು: ನಗರದಲ್ಲಿ ರವಿವಾರ ನಡೆದ ಚಿತ್ರಸಂತೆ ಉರಿಬಿಸಿಲಲ್ಲಿಯೂ ಕಲಾಸಕ್ತರ ಕಣ್ಮನ ತಣಿಸಿತು. ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ ಕಲಾವಿದರು ತಮ್ಮ ಚಿತ್ರಕಲೆಗಳನ್ನು ಪ್ರದರ್ಶನಕ್ಕಿಟ್ಟಿದ್ದು ನೋಡುಗರನ್ನು ಆಕರ್ಷಿಸುವಲ್ಲಿ ಯಶಸ್ವಿಯಾಯಿತು.

ನಗರದ ಸಾರ್ವಜನಿಕ ಉದ್ಯಾವನ ಮುಂಭಾಗದ ಫುಟ್‌ಪಾತ್‌ ಮೇಲೆ ಕಲಾ ಸಂಕುಲ ಸಂಸ್ಥೆಯಿಂದ ನಗರದಲ್ಲಿ ಎರಡನೇ ವರ್ಷವೂ ಚಿತ್ರ ಸಂತೆ ನಡೆಸಲಾಯಿತು. ಜಿಲ್ಲೆ ಮಾತ್ರವಲ್ಲದೇ, ರಾಜ್ಯದ ವಿವಿಧ ಜಿಲ್ಲೆಗಳಿಂದ ಅನೇಕ ಕಲಾವಿದರು ಆಗಮಿಸಿದ್ದರು. ತಾವು ಬಿಡಿಸಿದ ವಿವಿಧ ಬಗೆಯ ಚಿತ್ರಕಲಾಕೃತಿಗಳನ್ನು ಪ್ರದರ್ಶಿಸಿ ಮಾರಿದರು. ಆದರೆ, ಬೆಳಗ್ಗೆಯೇ ಸಂತೆ ಆರಂಭವಾದರೂ ಜನ ನಿರೀಕ್ಷಿತ ಮಟ್ಟದಲ್ಲಿ ಬಂದಿರದ ಕಾರಣ ಕಲಾವಿದರು ತುಸು ಬೇಸರ ವ್ಯಕ್ತಪಡಿಸಿದರು. ಆದರೆ, ಕೆಲವೊಂದು ಕಲಾಸಕ್ತರು ಆಗಮಿಸಿ ಕಲಾಕೃತಿಗಳನ್ನು ವೀಕ್ಷಿಸಿದ್ದಲ್ಲದೇ ಚಿತ್ರಕಲೆಗಳನ್ನು ಖರೀದಿಸುತ್ತಿದ್ದದ್ದು ಕಂಡು ಬಂತು.

ಧ್ಯಾನಸ್ಥ ಬುದ್ಧ, ಶಿಲ್ಪಕಲಾ ವೈಭವ, ಸುಂದರ ಪ್ರಕೃತಿ, ಹಳ್ಳಿಗಾಡಿನ ಸೊಗಡು ಕಣ್ಕಟ್ಟುವಂಥ ಕಲಾಕೃತಿಗಳು ಸಾಕಷ್ಟಿದ್ದವು. ಕಾಲಕ್ಕೆ ತಕ್ಕಂತೆ ಕಲಾವಿದರು ಬದಲಾವಣೆ ಬಯಸಿದ್ದಾರೆ ಎನ್ನಲಿಕ್ಕೆ ಅನೇಕ ಕಲಾಕೃತಿಗಳು ಪುಷ್ಟಿ ನೀಡಿದವು. ಹೆಡ್‌ಸೆಟ್‌ ಹಾಕಿಕೊಂಡು ಸಂಗೀತ ಆಲಿಸುತ್ತಿರುವ ಫಾರಿನ್‌ ತಳಿಯ ನಾಯಿ, ಸೆಲ್ಫಿ ತೆಗೆದುಕೊಳ್ಳುತ್ತಿರುವ ಕೋತಿಗಳು, ಮೊಬೈಲ್‌ನಲ್ಲೇ ಏನನ್ನೋ ನೋಡುತ್ತಿರುವ ಕೋತಿಗಳ ಚಿತ್ರಗಳು ಸೆಳೆದವು. ಇನ್ನು ಕೆಲ ಕಲಾವಿದರು ಸ್ಥಳದಲ್ಲೇ ಚಿತ್ರ ಬಿಡಿಸಿಕೊಡುತ್ತಿದ್ದರು. ಎದುರಿಗೆ ಕೂಡಿಸಿಕೊಂಡು ಕೆಲವೇ ಕ್ಷಣಗಳಲ್ಲಿ ಪ್ರೇಕ್ಷಕರ ಚಿತ್ರ ಬಿಡಿಸಿ ಕೊಡುತ್ತಿದ್ದರು.

ಶಂಕರಗೌಡರ ಸ್ಮರಣೆ: ಜಿಲ್ಲೆ ಎಂದಿಗೂ ಮರೆಯದ ಕಲಾವಿದರಲ್ಲಿ ಶಂಕರಗೌಡ ಬೆಟ್ಟದೂರು ಅವರ ಹೆಸರು ಅಗ್ರಗಣ್ಯ. ಶಾಂತಿನಿಕೇತನದಲ್ಲಿ ಅಧ್ಯಯನ ಮಾಡಿದ ಈ ಕಲಾವಿದರ ಕಲಾಕೃತಿಗಳನ್ನು ನೋಡುವುದೇ ಸಂಭ್ರಮ. ಚಿತ್ರಸಂತೆಯ ವೇದಿಕೆಗೆ ಅವರ ಹೆಸರನ್ನೇ ಇಡುವ ಮೂಲಕ ಅವರಿಗೆ ಗೌರವ ಸಲ್ಲಿಸಿದ್ದು ಒಂದು ವಿಶೇಷವಾದರೆ, ಈ ಬಾರಿ ಶಂಕರಗೌಡರು ಬಿಡಿಸಿದ ಕಲಾಕೃತಿಗಳನ್ನು ಪ್ರದರ್ಶನಕ್ಕಿಟ್ಟಿರುವುದು ಮತ್ತೂಂದು ವಿಶೇಷವಾಗಿತ್ತು. ಅವರ ಮಗ ಶರಣ ಪಾಟೀಲ ಬೆಟ್ಟದೂರು ಅವರೇ ವಿಶೇಷ ಆಸ್ಥೆ ವಹಿಸಿ ಅವರ ಕಲಾಕೃತಿಗಳನ್ನು ಪ್ರದರ್ಶಿಸಿದ್ದು ಗಮನ ಸೆಳೆಯಿತು.

ಟಾಪ್ ನ್ಯೂಸ್

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.