ಪ್ರೇಮಿಯ ಮನವೊಲಿಸಿ ಮದುವೆ ಮಾಡಿದ ಪೋಲಿಸರು


Team Udayavani, Feb 18, 2020, 3:00 AM IST

premiya-mna

ಎಚ್‌.ಡಿ.ಕೋಟೆ: ಕಳೆದ 7 ತಿಂಗಳಿಂದ ಪ್ರೀತಿಸಿ, ದೈಹಿಕವಾಗಿ ಬಳಸಿಕೊಂಡು ಕೊನೆ ಗಳಿಗೆಯಲ್ಲಿ ಯುವತಿಯನ್ನು ವಂಚಿಸಲು ಯತ್ನಿಸಿ ನಾಪತ್ತೆಯಾಗಿದ್ದ ಅಂತರ್ಜಾತಿ ಪ್ರೇಮಿಯೊಬ್ಬನನ್ನು ಪತ್ತೆ ಹಚ್ಚಿದ ಪೊಲೀಸರು ಹಾಗೂ ತಾಲೂಕು ಮಹಿಳಾ ಸಾಂತ್ವನ ಕೇಂದ್ರ ಅಧಿಕಾರಿಗಳು, ಯುವಕನಿಗೆ ತಿಳಿಹೇಳಿ ಯುವತಿಯೊಂದಿಗೆ ಮದುವೆ ಮಾಡಿಸಿರುವ ಘಟನೆ ಸೋಮವಾರ ಪಟ್ಟಣದಲ್ಲಿ ನಡೆದಿದೆ. ಪ್ರೇಮಿಗಳಾದ ಚೇತನ್‌ ಹಾಗೂ ಸುಶ್ಮಿತಾಪ್ರಿಯಾ ನವದಂಪತಿ.

ತಾಲೂಕಿನ ಸರಗೂರು ಪಟ್ಟಣದ ಸುಶ್ಮಿತಾಪ್ರಿಯಾ (19) ಎಂಬ ಯುವತಿಯನ್ನು ಪ್ರೀತಿಸಿ, ಲೈಂಗಿಕವಾಗಿ ಬಳಸಿಕೊಂಡು ಬಳಿಕ ಯುವತಿಯನ್ನು ವಂಚಿಸಲು ಯತ್ನಿಸಿದ ಯುವಕ ಕೂರ್ಣೆಗಾಲ ಗ್ರಾಮದ ಚೇತನ್‌ (23) ಎಂಬಾತ. ಈಗ ಎಚ್‌.ಡಿ.ಕೋಟೆ ಸಿಪಿಐ ಪುಟ್ಟಸ್ವಾಮಿ ಮತ್ತು ತಾಲೂಕು ಮಹಿಳಾ ಸಾಂತ್ವನ ಕೇಂದ್ರದ ಆಪ್ತ ಸಮಾಲೋಚಕಿ ಜಶೀಲ ಅವರ ಮಧ್ಯಸ್ಥಿಕೆಯಲ್ಲಿ ವಿವಾಹವಾದ ಯುವಕ.

ನಡೆದದ್ದೇನು?: ಚೇತನ್‌ ಸರಗೂರು ಪಟ್ಟಣದ ಸುಶ್ಮಿತಾ ಪ್ರಿಯಾ ಅವರ ಮನೆಯ ಸಮೀಪದಲ್ಲಿ ಔಷಧ ಮಾರಾಟ ಅಂಗಡಿ ತೆರೆದಿದ್ದ. ಅಂಗಡಿ ಪಕ್ಕದಲ್ಲೇ ಇದ್ದ ಯುವತಿ ಮತ್ತು ಚೇತನ್‌ ಪರಸ್ಪರ ಪ್ರೀತಿಸಿ, ನಂತರ ಸುಶ್ಮಿತಳನ್ನು ಮೈಸೂರಿಗೆ ಕರೆದುಕೊಂಡು ಆಕೆಯೊಡನೆ 2 ದಿನ ಕಳೆದು ಬಳಿಕ ತಾಲೂಕಿನ ಹ್ಯಾಂಡ್‌ಪೋಸ್ಟ್‌ನಲ್ಲಿರುವ ಸ್ನೇಹಿತನ ಮನೆಗೆ ಕರೆತಂದು ಪೋಷಕರ ಮನವೊಲಿಸಿ ವಿವಾಹವಾಗುವ ಭರವಸೆ ನೀಡಿ ಹೋದವನು, ಮರಳಿ ಮನೆಗೆ ಬರಲಿಲ್ಲ.

ಜತೆಗೆ ಮೊಬೈಲ್‌ ಸ್ಪಿಚ್‌ ಆಫ್‌ ಮಾಡಿಕೊಂಡಿದ್ದ. ಬಳಿಕ ಯುವತಿ ಘಟನೆ ಕುರಿತು ತಾಲೂಕು ಮಹಿಳಾ ಸಾಂತ್ವನ ಕೇಂದ್ರ ಮತ್ತು ಎಚ್‌.ಡಿ.ಕೋಟೆ ಪೊಲೀಸರಿಗೆ ಘಟನೆ ಕುರಿತು ವಿವರಣೆ ನೀಡಿ ನ್ಯಾಯ ದೊರಕಿಸಿಕ್ಕಾಗಿ ಮೊರೆಹೋಗಿದ್ದರು. ವಿಷಯ ತಿಳಿಯುತ್ತಿದ್ದಂತೆಯೇ ಕಾರ್ಯಪ್ರವೃತ್ತರಾದ ಸಾಂತ್ವನ ಕೇಂದ್ರದ ಜಶೀಲ, ಕೆಲವೇ ತಾಸುಗಳಲ್ಲಿ ತಲೆ ಮರೆಸಿಕೊಂಡಿದ್ದ ಪ್ರೇಮಿಯನ್ನು ಪೊಲೀಸರ ಸಂಪೂರ್ಣ ಸಹಕಾರದೊಂದಿಗೆ ವಶಕ್ಕೆ ತೆಗೆದುಕೊಳ್ಳುವಲ್ಲಿ ಯಶಸ್ವಿಯಾದರು.

ಯುವತಿಯನ್ನು ವಂಚಿಸಿರುವ ಆರೋಪಕ್ಕೆ ಸಂಬಂಧಿಸಿದಂತೆ ಆರಂಭದಲ್ಲಿ ಯುವಕ ಯುವತಿಯೊಡನೆ ವಿವಾಹವಾಗಲು ನಿರಾಕರಿಸಿ ಜೈಲು ಶಿಕ್ಷೆ ಅನುಭವಿಸಲು ಸಿದ್ಧ ಎಂದು ರಂಪಾಟ ನಡೆಸಿದ. ಆದರೆ ಕೊನೆಯಲ್ಲಿ ಕಾನೂನಿನ ಅರಿವು ಮೂಡಿಸುತ್ತಿದ್ದಂತೆಯೇ ವಿವಾಹವಾಗಲು ಸಮ್ಮತಿಸಿದ. ಪಟ್ಟಣದ ಶ್ರೀರಾಮಮಂದಿರ ದೇವಸ್ಥಾನದಲ್ಲಿ ಸಾಂತ್ವನ ಮತ್ತು ಪೊಲೀಸರ ಪೌರೋಹಿತ್ಯದಲ್ಲಿ ಚೇತನ್‌ ಮತ್ತು ಸುಶ್ಮಿತಾಪ್ರಿಯಾಗೆ ಮಾಂಗಲ್ಯ ಧಾರಣೆ ನೆರವೇರಿಸುವ ಮೂಲಕ ಇಬ್ಬರೂ ಪರಸ್ಪರ ಸತಿಪತಿಗಳಾದರು.

ಟಾಪ್ ನ್ಯೂಸ್

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

14

Hunsur: ಅಪರಿಚಿತ ವಾಹನ ಡಿಕ್ಕಿಯಾಗಿ ಪಾದಚಾರಿ ಸಾವು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.