ಗೇರು ಕೃಷಿಗೆ ವಿಪರೀತ ಚಹಾ ಸೊಳ್ಳೆ ಕಾಟ

ವಾತಾವರಣದಲ್ಲಿ ಏರಿಳಿತ: ಪುತ್ತೂರಿನಲ್ಲಿ ಅಧಿಕ ಬಾಧೆ; ಬೆಳೆಗಾರರು ಹೈರಾಣ

Team Udayavani, Feb 18, 2020, 5:06 AM IST

ben-28

ಸಾಂದರ್ಭಿಕ ಚಿತ್ರ

ಸುಳ್ಯ: ಹದಿನೈದು ವರ್ಷಗಳಲ್ಲೇ ಗೇರು ಕೃಷಿಗೆ ಅತ್ಯಧಿಕ ಪ್ರಮಾಣದಲ್ಲಿ ಬಾಧಿಸಿರುವ ಚಹಾ ಸೊಳ್ಳೆ ಕಾಟಕ್ಕೆ ಜಿಲ್ಲೆಯಲ್ಲಿ ಶೇ. 50ಕ್ಕೂ ಅಧಿಕ ಫಸಲು ನಷ್ಟ ಉಂಟಾಗಲಿದೆ. ಬಹುತೇಕ ಗೇರು ಮರ, ಗಿಡಗಳಲ್ಲಿ ಹೂ ಕರಟಿ ಹೋಗಿದೆ. ಕೃಷಿಕರ ಪಾಲಿಗೆ ಉಪಬೆಳೆಯಾಗಿ ಆದಾಯ ತಂದುಕೊಡುತ್ತಿದ್ದ ಗೇರು ಕೃಷಿಯನ್ನು ನಂಬಿದವರು ತಲೆ ಮೇಲೆ ಕೈ ಹೊತ್ತು ಕೂರುವ ಪರಿಸ್ಥಿತಿ ಬಂದೊದಗಿದೆ.

ವಾತಾವರಣದ ಏರಿಳಿತ
ವಾತಾವರಣದಲ್ಲಿನ ಬದಲಾವಣೆಯೇ ಕೀಟ ಬಾಧೆ ಹೆಚ್ಚಳಕ್ಕೆ ಕಾರಣ ಎನ್ನುವುದು ಕೃಷಿಕರ ಅಭಿಪ್ರಾಯ. ಚಳಿ, ಮಳೆ, ಬಿಸಿಲು ಇವು ಸಮಯಕ್ಕೆ ಹಾಗೂ ಪ್ರಮಾಣಕ್ಕೆ ತಕ್ಕಂತೆ ಇಲ್ಲದ ಪರಿಣಾಮದಿಂದ ಅದನ್ನೆ ನಂಬಿರುವ ಫಲ ವಸ್ತುವಿನ ಗಿಡ ಮರಗಳಲ್ಲಿನ ಹೂ-ಕಾಯಿ-ಹಣ್ಣಾಗುವ ಸಹಜ ಪ್ರಕ್ರಿಯೆಗೆ ಅಡ್ಡಿ ಉಂಟಾಗಿದೆ. ಈ ಪೈಕಿ ಮಾವು, ಗೇರು ಕೃಷಿಗೆ ಸಾಕಷ್ಟು ತೊಂದರೆ ಕಂಡುಬಂದಿದೆ. ಆರಂಭದಲ್ಲಿ ಚಳಿ, ಅನಂತರ ದಲ್ಲಿ ಸೆಕೆ ವಾತಾವರಣ ಗೇರು ಫಸಲಿಗೆ ಪೂರಕ. ಆದರೆ ಈಗ ಚಳಿ-ಸೆಕೆ-ಮೋಡ ನಡುವಿನ ವ್ಯತ್ಯಾಸ ಹೊಸ ರೋಗ ಸೃಷ್ಟಿಗೆ ಕಾರಣವಾಗುತ್ತಿದೆ.

ಕರಟಿದ ಹೂ
ಗೇರು ಮರಗಳು ನವೆಂಬರ್‌ನಿಂದ ಎಪ್ರಿಲ್‌ ತನಕ ಹೂ ಬಿಟ್ಟು ಫಸಲು ಕೊಡುವುದು ಹೆಚ್ಚು. ಡಿಸೆಂಬರ್‌, ಜನವರಿ ತಿಂಗಳಲ್ಲಿ ಹೂ ಬಿಟ್ಟು ಫಸಲಿಗೆ ಅಣಿಯಾಗುವ ಮರಗಳಲ್ಲಿ ಈ ಬಾರಿ ಫೆಬ್ರವರಿ ಅರ್ಧ ಕಳೆದರೂ ಹೂ, ಕಾಯಿ ಇಲ್ಲ. ಹೆಚ್ಚಿನೆಡೆ ಚಿಗುರು, ಹೂಗಳು ಕರಟಿ ಹೋಗಿವೆ. ಮರಗಳು ಬೆಂಕಿಯ ಕೆನ್ನಾಲಿಗೆಗೆ ಈಡಾದಂತೆ ಕಂಡುಬರುತ್ತಿದೆ. ಚಹಾ ಸೊಳ್ಳೆ ಕಾಟ ಹಳೆಯ ಮರಗಳ ಜತೆಗೆ ಹೊಸ ಗಿಡಗಳನ್ನೂ ಸಮಾನವಾಗಿ ಬಾಧಿಸುತ್ತಿದೆ. ಹೂ ಬಿಟ್ಟು, ಹಣ್ಣು ನೀಡುತ್ತಿದ್ದ ಗೇರು ತೋಟ ಈಗ ಕರಟಿದಂತಾಗಿದೆ.

ಏನಿದು ಚಹಾ ಸೊಳ್ಳೆ?
ಚಹಾ ಸೊಳ್ಳೆ ಕೊಕ್ಕೋ, ಗೇರು, ಹತ್ತಿ, ಚಹಾ ಹೀಗೆ ವಿವಿಧ ತೋಟಗಾರಿಕೆ ಬೆಳೆಗಳಿಗೆ ಹಾನಿ ಉಂಟು ಮಾಡುವ ಕೀಟ. ಇದು ಗೇರು ಚಿಗುರು ಅಥವಾ ಹೂವಿನ ಸಸ್ಯರಸವನ್ನು ಹೀರುತ್ತದೆ. ಇದರಿಂದ ಚಿಗುರು ಮತ್ತು ಹೂಗೊಂಚಲುಗಳು ಒಣಗುತ್ತವೆ. ಕೀಟವು ರಸ ಹೀರಿದ ಅಂಗಾಂಶ ನಾಶವಾಗಿ ಕಂದು ಬಣ್ಣದ ಚುಕ್ಕಿಗಳು ಉಂಟಾಗುತ್ತವೆ. ಕಾಯಿ ಕಟ್ಟುವ ಹಂತದಲ್ಲಿ ಈ ಕೀಟದ ಹಾವಳಿ ಕಂಡುಬಂದರೆ, ಗೇರು ಹಣ್ಣಾಗುವ ಮೊದಲೇ ಉದುರುತ್ತದೆ. ಪ್ರತಿ ಬಾರಿ ಔಷಧ ಸಿಂಪಡಣೆಯಿಂದ ನಿಯಂತ್ರಣಕ್ಕೆ ಬರುತ್ತಿದ್ದ ಸೊಳ್ಳೆ ಕಾಟ ಈ ಬಾರಿ ಔಷಧ ಸಿಂಪಡಿಸಿದರೂ ಅದರ ನಿರ್ಮೂಲನೆ ಸಾಧ್ಯವಾಗಿಲ್ಲ.

ಪುತ್ತೂರಿನಲ್ಲಿ ಗರಿಷ್ಠ ಹಾನಿ
ಪುತ್ತೂರು ತಾಲೂಕಿನ ಗೇರು ತೋಟಗಳಲ್ಲಿ ಶೇ. 50ಕ್ಕೂ ಅಧಿಕ ಫಸಲು ನಷ್ಟವಾಗುವ ಸಾಧ್ಯತೆ ಇದೆ. ಸುಳ್ಯದಲ್ಲಿಯೂ ನಷ್ಟ ಹೆಚ್ಚಿದೆ. ಹದಿನೈದು ವರ್ಷಗಳಲ್ಲೇ ಮೊದಲ ಬಾರಿಗೆ ಚಹಾ ಸೊಳ್ಳೆ ಕಾಟ ಇಷ್ಟು ತೀವ್ರವಾಗಿ ಕಾಡಿದೆ ಎನ್ನುತ್ತಾರೆ ಗೇರು ಸಂಶೋಧನ ಕೇಂದ್ರದ ಅಧಿಕಾರಿಗಳು. ಕೆಲವೆಡೆ ಮರವೇ ಹಳದಿ ಬಣ್ಣಕ್ಕೆ ತಿರುಗಿದೆ. ಗೇರು ತೋಟ ಏಲಂ ಪಡೆಯುವವರಿಗೆ ಈ ಬಾರಿ ಲಾಭಕ್ಕಿಂತ ಅಸಲು ಕೈಗೆ ಸಿಗುವ ನಿರೀಕ್ಷೆ ಕೂಡ ಇಲ್ಲ. ಸಣ್ಣ ಪುಟ್ಟ ಕೃಷಿಕರ ಪಾಲಿಗಂತೂ ಕಡಿಮೆ ಖರ್ಚಿನಲ್ಲಿ ಆದಾಯ ತರುತ್ತಿದ್ದ ಗೇರು ಕೈ ಕೊಟ್ಟಿದೆ. ಗೇರು ಕೃಷಿ ಕೇಂದ್ರಗಳಲ್ಲಿನ ವೈಜ್ಞಾನಿಕ ಆಧಾರಿತ ಗೇರು ತೋಟದಲ್ಲೂ ಕೀಟ ಬಾಧೆ ತಪ್ಪಿಲ್ಲ.

ಧಾರಣೆ ಇರುವಾಗ ಫಸಲು ಇಲ್ಲ
ಜಿಲ್ಲೆಯಲ್ಲಿ ಸುಮಾರು 40 ಸಾವಿರ ಹೆಕ್ಟೇರಿಗಿಂತ ಅಧಿಕ ಗೇರು ತೋಟವಿದೆ. 2015ನೇ ಸಾಲಿನಲ್ಲಿ ಕೆ.ಜಿ.ಗೆ 80ರಿಂದ 90 ರೂ.ಗೆ ಖರೀದಿಯಾಗಿದ್ದ ಗೇರುಬೀಜ 2016ನೇ ಸಾಲಿನಲ್ಲಿ ಗರಿಷ್ಠ 120-130 ರೂ., 2017-2019ರಲ್ಲಿ 130-150 ರೂ. ತನಕ ಖರೀದಿಯಾಗಿದೆ. ಇದರಿಂದ ರಬ್ಬರ್‌, ಅಡಿಕೆಯ ಮಧ್ಯೆ ಗೇರು ಬೆಳೆಗಾರನಿಗೆ ಕಷ್ಟದ ಕಾಲದಲ್ಲಿ ಚೇತರಿಕೆ ನೀಡುತ್ತಿತ್ತು. ಈ ಬಾರಿ ಧಾರಣೆ ಏರಿಕೆ ನಿರೀಕ್ಷೆ ಇತ್ತಾದರೂ ಫಸಲೇ ಇಲ್ಲದ ಸ್ಥಿತಿ ಉಂಟಾಗಿದೆ.

ಚಹಾ ಸೊಳ್ಳೆ ಬಾಧೆ ಹೆಚ್ಚಳ
ಈ ಬಾರಿ ಗೇರು ಕೃಷಿಗೆ ಚಹಾ ಸೊಳ್ಳೆ ಕಾಟ ಹೆಚ್ಚಿನ ಪ್ರಮಾಣದಲ್ಲಿ ಬಾಧಿಸಿದೆ. ಇದಕ್ಕೆ ವಾತಾವರಣದ ಏರಿಳಿತ ಕಾರಣವೋ ಅಥವಾ ಬೇರೆ ಕಾರಣ ಗಳಿವೆಯೋ ಎನ್ನುವುದನ್ನು ಸ್ಪಷ್ಟವಾಗಿ ಹೇಳಲು ಸಾಧ್ಯವಿಲ್ಲ. ಇದನ್ನು ಅಧ್ಯಯನದ ಮೂಲಕ ಕಂಡುಕೊಳ್ಳಬೇಕಿದೆ. ಶೇ. 50ರಷ್ಟು ಫ‌ಸಲು ನಷ್ಟವಾಗುವ ಲಕ್ಷಣ ಇದೆ.
– ಗಂಗಾಧರ ನಾಯಕ್‌, ಪ್ರಭಾರ ನಿರ್ದೇಶಕ, ರಾಷ್ಟ್ರೀಯ ಗೇರು ಸಂಶೋಧನ ಕೇಂದ್ರ, ಪುತ್ತೂರು

ಅರ್ಧಕ್ಕಿಂತ ಹೆಚ್ಚು ಫಸಲು ನಷ್ಟ
ವಾತಾವರಣದಲ್ಲಿನ ಏರಿಳಿತದ ಪರಿಣಾಮ ಗೇರು ಕೃಷಿಗೆ ಬಹುವಾಗಿ ತಟ್ಟಿದೆ. ಜತೆಗೆ ಚಹಾ ಸೊಳ್ಳೆ ಕಾಟ ಕೂಡ ಇದೆ. ಫಸಲು ನಷ್ಟಕ್ಕೆ, ಕೀಟ ಬಾಧೆಗೆ ವಾತಾವರಣದಲ್ಲಿನ ವೈಪರೀತ್ಯ ಕಾರಣ. ಕಳೆದ ಬಾರಿಗೆ ಹೋಲಿಸಿದರೆ ಅರ್ಧಕ್ಕಿಂತ ಹೆಚ್ಚು ಫಸಲು ನಷ್ಟ ಉಂಟಾಗಲಿದೆ.
– ಸುಭಾಷ್‌ ರೈ ಕಡಮಜಲು, ವೈಜ್ಞಾನಿಕ ಪದ್ಧತಿಯ ಗೇರು ಕೃಷಿಕ

ಕಿರಣ್‌ ಪ್ರಸಾದ್‌ ಕುಂಡಡ್ಕ

ಟಾಪ್ ನ್ಯೂಸ್

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

12-gangavathi

ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.