ಹರಾಜು ಪ್ರಾಂಗಣದ ಮೇಲ್ಛಾವಣಿ ತೆರವು ಕಾರ್ಯ ಆರಂಭ

 ಮೀನುಗಾರಿಕಾ ಬಂದರು: ಕಟ್ಟಡ ಕುಸಿಯುವ ಭೀತಿ

Team Udayavani, Feb 18, 2020, 5:54 AM IST

1702KDPP5A

ಗಂಗೊಳ್ಳಿ: ಇಲ್ಲಿನ ಮೀನುಗಾರಿಕಾ ಬಂದರಿನ ಎರಡನೇ ಹರಾಜು ಪ್ರಾಂಗಣದ ಜೆಟ್ಟಿಯ ಸ್ಲ್ಯಾಬ್  ಕುಸಿದು ಒಂದೂವರೆ ವರ್ಷಗಳೇ ಕಳೆದಿದೆ. ಅನುದಾನ ಬಿಡುಗಡೆಯಾಗದ ಕಾರಣ ಇನ್ನೂ ದುರಸ್ತಿಗೆ ಕಾಲ ಕೂಡಿ ಬಂದಿಲ್ಲ. ಆದರೆ ಕುಸಿದ ಸ್ಲ್ಯಾಬ್ ನಿಂದಾಗಿ ಹರಾಜು ಪ್ರಾಂಗಣವಿರುವ ಸಂಪೂರ್ಣ ಕಟ್ಟಡವೇ ಕುಸಿಯುವ ಭೀತಿ ಎದುರಾಗಿದ್ದು, ಈಗ ಪ್ರಾಂಗಣದ ಮೇಲ್ಛಾವಣಿ ತೆರವಿಗೆ ಅಧಿಕಾರಿಗಳು ಮುಂದಾಗಿದ್ದಾರೆ.

ಮೀನುಗಾರರ ಆಕ್ಷೇಪ
ಇದರಿಂದ ಈ ಬಗ್ಗೆ ಮೀನು ಗಾರರೊಂದಿಗೆ ನಡೆದ ಬಂದರು ಮತ್ತು ಮೀನುಗಾರಿಕಾ ಇಲಾಖೆಯ ಅಧಿಕಾರಿಗಳ ಸಭೆಯಲ್ಲಿ ಈ ಎರಡನೇ ಹರಾಜು ಪ್ರಾಂಗಣದ ಸಂಪೂರ್ಣ ಕಟ್ಟಡವನ್ನೇ ಕೆಡವಿ, ದುರಸ್ತಿ ಆಗುವವರೆಗೆ ಈ ಪ್ರದೇಶವನ್ನು ಇಲ್ಲಿ ನಿರ್ಬಂಧಿತ ವಲಯವಾಗಿ ಮಾಡುವ ಬಗ್ಗೆ ಪ್ರಸ್ತಾವವಾಗಿತ್ತು. ಆದರೆ ಇದರಿಂದ ಅಲ್ಲಿ ಈಗಿರುವ 12 ಕೊಠಡಿಗಳನ್ನು ಆಶ್ರಯಿಸಿರುವ ಮೀನುಗಾರರು, ಹಸಿ ಮೀನು ವ್ಯಾಪಾರಸ್ಥರಿಗೆ ಸಮಸ್ಯೆಯಾಗುತ್ತದೆ ಎನ್ನುವ ಆಕ್ಷೇಪ ಮೀನುಗಾರರಿಂದ ವ್ಯಕ್ತವಾಯಿತು.

ಆ ಬಳಿಕ ನಡೆದ ಸಭೆಗಳಲ್ಲಿ ಹರಾಜು ಪ್ರಾಂಗಣದ ಮೇಲ್ಛಾವಣಿ ತೆಗೆದು, ಪ್ರಾಂಗಣದಿಂದ ಈಗಿರುವ 12 ಕೊಠಡಿಗಳನ್ನು ಪ್ರತ್ಯೇಕಿಸಿ ಬಿಡುವ ಕಾಮಗಾರಿ ಮಾಡುವ ತೀರ್ಮಾನಕ್ಕೆ ಅಧಿಕಾರಿಗಳು ಬಂದಿದ್ದಾರೆ. ಈಗ ಮೇಲ್ಛಾವಣಿ ತೆರವು ಕಾಮಗಾರಿ ಆರಂಭವಾಗಿದೆ.

ದುರಸ್ತಿ ಯಾವಾಗ?
ಇಲ್ಲಿನ ಜೆಟ್ಟಿಯ ಸ್ಲ್ಯಾಬ್ ಕುಸಿದು ಸರಿ ಸುಮಾರು ಒಂದೂವರೆ ವರ್ಷಗಳಿಗೂ ಹೆಚ್ಚು ಸಮಯ ಕಳೆಯಿತು. ಆದರೆ ಇನ್ನೂ ಕುಸಿದ ಬಂದರಿನ ದುರಸ್ತಿಯಾಗಲಿ ಅಥವಾ ಹೊಸದಾಗಿ ಮರು ನಿರ್ಮಾಣ ಕಾಮಗಾರಿಗೆ ಅನುದಾನ ಮಾತ್ರ ಬಿಡುಗಡೆಯಾಗಿಲ್ಲ. ಈಗಾಗಲೇ ಪ್ರಸ್ತಾವನೆ ಕಳುಹಿಸಿದರೂ, ಇನ್ನೂ ಯಾವುದೇ ಪ್ರಗತಿ ಮಾತ್ರ ಕಂಡು ಬಂದಿಲ್ಲ.

ಮೇಲ್ಛಾವಣಿ ಮಾತ್ರ ತೆರವು
2ನೇ ಹರಾಜು ಪ್ರಾಂಗಣದ ಜೆಟ್ಟಿಯ ಅಡಿಪಾಯದೊಳಗೆ ನೀರು ನುಗ್ಗುತ್ತಿರುವುದರಿಂದ ಕಟ್ಟಡ ಕುಸಿಯುವ ಭೀತಿಯಿಂದ ಪ್ರಾಂಗಣದ ಮೇಲ್ಛಾವಣಿ ತೆರವು ಮಾಡಲಾಗುವುದು. ಈ 2 ಪ್ರಾಂಗಣಗಳ ಮಧ್ಯೆ ಮತ್ತೂಂದು ತೆರೆದ ಪ್ರಾಂಗಣ ನಿರ್ಮಾಣವಾಗಲಿದೆ.
– ಅಂಜನಾದೇವಿ, ಸ.ನಿ.,
ಮೀನುಗಾರಿಕಾ ಇಲಾಖೆ

100 ಮೀ.ಗೆ ವಿಸ್ತರಿಸಲಿ
ಕಟ್ಟಡಕ್ಕೆ ಆತಂಕ ಎದುರಾಗಿದ್ದರಿಂದ ಹಸಿ ಅನೇಕ ಬಾರಿ ಈ ಮೇಲ್ಛಾವಣಿ ತೆಗೆಯಲು ಮನವಿ ಕೊಟ್ಟಿದ್ದೆವು. ಈಗ ತೆರವು ಕಾರ್ಯ ನಡೆಯುತ್ತಿದೆ. ಆದರೆ ದುರಸ್ತಿಗೆ ಮುಂದಾಗಿಲ್ಲ. ಇನ್ನು ಈ ಎರಡು ಪ್ರಾಂಗಣಗಳ ಮಧ್ಯೆ ಮತ್ತೂಂದು ಕಿರು ಪ್ರಾಂಗಣ ನಿರ್ಮಾಣವಾಗಲಿದೆ. ಮೊದಲ ಪ್ರಾಂಗಣದಿಂದ 2ನೇ ಪ್ರಾಂಗಣದ ಮಧ್ಯೆ 106 ಮೀ. ಜಾಗವಿದೆ. ಅಷ್ಟು ಉದ್ದದ ಪ್ರಾಂಗಣ ನಿರ್ಮಿಸಿದರೆ ಮಳೆಗಾಲದ ಸಮಯದಲ್ಲಿ ಸಾಕಷ್ಟು ಅನುಕೂಲವಾಗಲಿದೆ.
– ವಾಸುದೇವ ಖಾರ್ವಿ, ಹಸಿ ಮೀನು ವ್ಯಾಪಾರಸ್ಥರ ಸಂಘ ಗಂಗೊಳ್ಳಿ

ಕಿರು ಪ್ರಾಂಗಣ
ಗಂಗೊಳ್ಳಿಯ ಮೀನುಗಾರಿಕಾ ಬಂದರಿನಲ್ಲಿ ಈಗಿರುವ 1 ಹಾಗೂ 2ನೇ ಹರಾಜು ಪ್ರಾಂಗಣಗಳ ಮಧ್ಯೆ ಅಂದಾಜು 1.3 ಕೋ.ರೂ. ವೆಚ್ಚದಲ್ಲಿ 35 ಮೀ. ಉದ್ದ ಹಾಗೂ 15 ಮೀ. ಅಗಲದ 4 ಸುತ್ತಲು ತೆರೆದ ಕಿರು ಪ್ರಾಂಗಣ ನಿರ್ಮಾಣವಾಗಲಿದೆ ಎಂದು ತಿಳಿದು ಬಂದಿದೆ. ಎರಡನೇ ಹರಾಜು ಪ್ರಾಂಗಣದ ಮೇಲ್ಛಾವಣಿ ತೆರವಾದ ಕೂಡಲೇ ಈ ಕಿರು ಪ್ರಾಂಗಣ ಕಾಮಗಾರಿ ಆರಂಭಗೊಳ್ಳುವ ನಿರೀಕ್ಷೆಯಿದೆ.

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.