ಮಾರುಕಟ್ಟೆ ದರದಂತೆ ಪರಿಹಾರ ನೀಡಿ


Team Udayavani, Feb 18, 2020, 3:05 AM IST

marukatte

ಬೆಂಗಳೂರು: ಉದ್ದೇಶಿತ ಪೆರಿಫೆರಲ್‌ ರಿಂಗ್‌ ರಸ್ತೆ ಯೋಜನೆಯ ಭೂ ಸ್ವಾಧೀನಕ್ಕೆ ಮಾರುಕಟ್ಟೆ ದರದಂತೆ ಪರಿಹಾರ ನೀಡುವಂತೆ ಆಗ್ರಹಿಸಿದ ಭೂ ಮಾಲೀಕರಿಗೆ ಸರ್ಕಾರದ ಸ್ಪಂದನೆ ಸಿಗದ ಹಿನ್ನೆಲೆ ಹೋರಾಟವನ್ನು ಅಹೋರಾತ್ರಿ ನಡೆಸಲು ನಿರ್ಧರಿಸಿದ್ದಾರೆ.

ರೈತ ಮುಖಂಡರು ಸೋಮವಾರ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಮುಂಭಾಗ ಪ್ರತಿಭಟನೆ ನಡೆಸಿದರು. ಪ್ರತಿಭಟನೆ ತೀವ್ರಗೊಂಡ ಪರಿಣಾಮ ಬಿಡಿಎ ಆಯುಕ್ತ ಡಾ.ಜಿ.ಸಿ.ಪ್ರಕಾಶ್‌ ರೈತರ ನಿಯೋಗವನ್ನು ಸಿಎಂ ಬಳಿಗೆ ಕರೆದುಕೊಂಡು ಹೋಗಿ ದ್ದು, ಸಕಾರಾತ್ಮಕ ಸ್ಪಂದನೆ ಸಿಗದಿದ್ದರಿಂದ ರೈತರು ಬಿಡಿಎ ಕಚೇರಿ ಮುಂಭಾಗ ಧರಣಿ ಮುಂದುವರಿಸಿದ್ದಾರೆ.

ತುಮಕೂರು ರಸ್ತೆಯಿಂದ ಹೊಸೂರು ರಸ್ತೆಗೆ ಸಂಪರ್ಕ ಕಲ್ಪಿಸುವ ಪೆರಫ‌ರಲ್‌ ರಿಂಗ್‌ ರಸ್ತೆ ಅಭಿವೃದ್ಧಿ ಪಡಿಸಲು 2004ರಲ್ಲಿ ಭೂ ಸ್ವಾಧೀನ ಅಧಿಸೂಚನೆ ಹೊರಡಿಸಿದ್ದು, 16 ವರ್ಷ ಕಳೆದರೂ ಸ್ವಾಧೀನ ಪಡಿಸಿಕೊಂಡ ರೈತರ ಭೂಮಿಗೆ ಉತ್ತಮ ಬೆಲೆ ನಿಗದಿ ಮಾಡಿಲ್ಲ. ಈ ಜಮೀನನ್ನು ಮಾರಾಟ ಮಾಡುವಂತಿಲ್ಲ. ಉಳುಮೆಯೂ ಮಾಡುವಂತಿಲ್ಲ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ರೈತರು ಸಿಲುಕಿದ್ದು, ಮುಖ್ಯಮಂತ್ರಿಗಳು ಮಧ್ಯಪ್ರವೇಶಿಸಿ ರೈತರ ಪರಿಹಾರ ವಿಷಯ ಬಗೆಹರಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಈ ವೇಳೆ ಮಾತನಾಡಿದ ರಾಜ್ಯ ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್‌, ತುಮಕೂರು ರಸ್ತೆಯ ಮಾದನಾಯಕಹಳ್ಳಿಯಿಂದ ಹೊಸೂರು ರಸ್ತೆವರೆಗೆ 66 ಕಿ.ಮೀ ಉದ್ದದ ಪೆರಫೆರಲ್‌ ರಿಂಗ್‌ ರಸ್ತೆ ನಿರ್ಮಿಸಲು 1810 ಎಕರೆ ಭೂ ಸ್ವಾಧೀನಕ್ಕೆ ಸರ್ವೇ ಕಾರ್ಯ ಪೂರ್ಣಗೊಳಿಸಿದ್ದು, 16 ವರ್ಷವಾದರೂ ಕಾಮಗಾರಿ ಆರಂಭವಾಗಿಲ್ಲ. ಆದ್ದರಿಂದ ಯೋಜನೆ ರದ್ದು ಮಾಡಿ, ಭೂ ಸ್ವಾಧೀನ ಪ್ರಕ್ರಿಯೆ ಕೈ ಬಿಟ್ಟು ನಿರಪೇಕ್ಷಣಾ ಪತ್ರ (ಎನ್‌ಒಸಿ) ನೀಡಬೇಕೆಂದು ಒತ್ತಾಯಿಸಿದರು.

ಪ್ರತಿಭಟನೆಗೆ ಸರ್ಕಾರ ಸ್ಪಂದಿಸದಿದ್ದರೆ ಸರ್ವೇ ಮಾಡಿ ಜಮೀನಿನಲ್ಲಿ ನೆಟ್ಟ ಕಲ್ಲುಗಳನ್ನು ತಂದು ಬಿಡಿಎ ಕಚೇರಿ ಮುಂದೆ ಹಾಕಲಾಗುವುದು. ಜಮೀನು ದಾಖಲಾತಿ ತಿದ್ದುಪಡಿ ಮಾಡದಿದ್ದರೆ ಕೋರ್ಟ್‌ ಮೆಟ್ಟಿ ಲೇರಿ, ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಸಿಎಂ ಭೇಟಿ ಮಾಡಿದ ನಿಯೋಗ: ರೈತ ಮುಖಂಡರ ನಿಯೋಗ ಸೋಮವಾರ 3.30ಕ್ಕೆ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ್ದು, ಸಕಾರಾತ್ಮಕವಾಗಿ ಸ್ಪಂದನೆ ಸಿಗದ ಹಿನ್ನೆಲೆ ನ್ಯಾಯ ಸಿಗುವವರೆಗೂ ಅಹೋರಾತ್ರಿ ಧರಣಿ ಮುಂದುವರಿಸಲು ನಿರ್ಧರಿಸಿದ್ದಾರೆ.

ರೈತರನ್ನು ಸಮಾಧಾನ ಮಾಡಲು ಬಜೆಟ್‌ ನಲ್ಲಿ ಪೆರಫೆರಲ್‌ ರಿಂಗ್‌ ರಸ್ತೆಗಾಗಿ ಸರ್ಕಾರ ಅನುದಾನ ಮೀಸಲಿಡುತ್ತಿದೆ. ಆದರೆ, ಭೂಮಿಗೆ ಬೆಲೆ ನಿಗದಿ ಮಾಡಿಲ್ಲ. 16 ವರ್ಷದಿಂದ ಯೋಜನೆ ನನೆಗುದಿಗೆ ಬಿದ್ದಿದೆ. ಈಗಾಗಲೇ ನಮ್ಮ ಜಮೀನನ್ನು ಸರ್ವೇ ಮಾಡಲಾಗಿದ್ದು, ಮಾರಾಟ ಮಾಡಲು ತೊಂದರೆಯಾಗಿದೆ. ಈ ಸಮಸ್ಯೆ ಬಗೆಹರಿಯುವವರೆಗೂ ಧರಣಿ ಕೈ ಬಿಡುವುದಿಲ್ಲ.
-ಈಶ್ವರ ರೆಡ್ಡಿ, ರೈತ

ಟಾಪ್ ನ್ಯೂಸ್

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.