ಪ್ಯಾರಾಸಿಟಮಾಲ್‌ ಮಾತ್ರೆ ದರ ಶೇ.40 ಏರಿಕೆ


Team Udayavani, Feb 18, 2020, 6:33 AM IST

Coronavirus-01-730

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಬೀಜಿಂಗ್‌: ಚೀನದಲ್ಲಿ ಸಾವಿರಾರು ಮಂದಿಯನ್ನು ಬಲಿತೆಗೆದುಕೊಂಡಿರುವ ಕೊರೊನಾ ವೈರಸ್‌ನ ಬಿಸಿ ಭಾರತದ ಔಷಧ ಮಾರುಕಟ್ಟೆಗೂ ತಟ್ಟಿದೆ. ಬಹುತೇಕ ಮಂದಿ ಜ್ವರ ಹಾಗೂ ನೋವು ನಿವಾರಕವಾಗಿ ಬಳಸುವ ಪ್ಯಾರಾಸಿಟಮಾಲ್‌ ಮಾತ್ರೆಯ ದರ ಭಾರತದಲ್ಲಿ ಶೇ. 40ರಷ್ಟು ಏರಿಕೆಯಾಗಿದೆ.

ಬ್ಯಾಕ್ಟೀರಿಯಾದಿಂದ ಬರುವ ಸೋಂಕುಗಳಿಗೆ ಆ್ಯಂಟಿಬಯಾಟಿಕ್‌ ಆಗಿ ಬಳಸಲಾಗುವ ಅಝಿತ್ರೋಮೈಸಿನ್‌ ಮಾತ್ರೆಯ ದರ ಶೇ.70ರಷ್ಟು ಹೆಚ್ಚಳವಾಗಿದೆ ಎಂದು ಝೈಡಸ್‌ ಕ್ಯಾಡಿಲಾ ಮುಖ್ಯಸ್ಥ ಪಂಕಜ್‌ ಆರ್‌. ಪಟೇಲ್‌ ತಿಳಿಸಿದ್ದಾರೆ. ಮುಂದಿನ ತಿಂಗಳ ಮೊದಲ ವಾರದಲ್ಲಿ ಔಷಧಿಗಳ ಪೂರೈಕೆ ಹೆಚ್ಚಿಸದೇ ಇದ್ದರೆ, ಔಷಧಗಳ ತೀವ್ರ ಕೊರತೆ ಎದುರಾಗಲಿದೆ ಎಂದೂ ಅವರು ಹೇಳಿದ್ದಾರೆ. ಕೊರೊನಾದಿಂದಾಗಿ ಚೀನದ ಹಲವು ಕಂಪೆನಿಗಳಲ್ಲಿ ಉತ್ಪಾದನೆ ಸ್ಥಗಿತಗೊಂಡಿರುವುದೇ ಈ ಬೆಳವಣಿಗೆಗೆ ಕಾರಣ ಎನ್ನಲಾಗಿದೆ.

ಚೀನದ ವುಹಾನ್‌ನ ಬಳಿಕ ಅತಿದೊಡ್ಡ ಕೊರೊನಾ ಸೋಂಕಿತರ ತಾಣವಾಗಿರುವ ಜಪಾನ್‌ನ ಕ್ರೂಸ್‌ ನೌಕೆಯಲ್ಲಿ ಸೋಮವಾರ ಮತ್ತೆ 99 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಸೋಂಕಿತರ ಸಂಖ್ಯೆ 454ಕ್ಕೇರಿಕೆಯಾಗಿದೆ. ಈ ನಡುವೆ, ಜಪಾನ್‌ ಸರಕಾರವು ಹಡಗಿನಲ್ಲಿರುವವರಿಗೆ 2 ಸಾವಿರ ಐಫೋನ್‌ಗಳನ್ನು ಉಚಿತವಾಗಿ ವಿತರಿಸಿದೆ. ವೈದ್ಯ ರೊಂದಿಗೆ ಸಂಪರ್ಕ ಸಾಧಿಸಲು, ಅಪಾಯಿಂಟ್‌ಮೆಂಟ್‌ ಬುಕ್‌ ಮಾಡಲು, ಔಷಧಗಳಿಗೆ ಆರ್ಡರ್‌ ಮಾಡಲು ಈ ಐಫೋನ್‌ಗಳನ್ನು ನೀಡಲಾಗಿದೆ. ಕೊರೊನಾ ಸೋಂಕು ತಗುಲಿರುವ ನಾಲ್ವರು ಭಾರತೀಯರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಭಾರತೀಯ ರಾಯಭಾರ ಕಚೇರಿ ತಿಳಿಸಿದೆ.

ಇತ್ತೀಚೆಗಷ್ಟೇ ಚೀನದಿಂದ ಭಾರತೀಯರನ್ನು ವಾಪಸ್‌ ಕರೆತಂದ ಏರ್‌ಇಂಡಿಯಾದ ಎಲ್ಲ ಸಿಬಂದಿಗೂ ಪ್ರಧಾನಿ ಮೋದಿ ಅವರ ಸಹಿ ಇರುವ ಶ್ಲಾಘನೆ ಪತ್ರಗಳನ್ನು ವಿತರಿಸಲಾಗಿದೆ. ಬಿಕ್ಕಟ್ಟಿನ ಸಂದರ್ಭದಲ್ಲಿ ಇಡೀ ದೇಶವೇ ನಿಮ್ಮ ಜತೆಗಿರುತ್ತದೆ ಎಂಬ ಸಂದೇಶವನ್ನು ಜಗತ್ತಿನಾದ್ಯಂತ ಇರುವ ಆನಿವಾಸಿ ಭಾರತೀಯರಿಗೆ ನೀವು ಸಾರಿ ಹೇಳಿದ್ದೀರಿ ಎಂದು ಅದರಲ್ಲಿ ಬರೆಯಲಾಗಿದೆ.

1,770 ಮಂದಿ ಸಾವು: ಚೀನದಲ್ಲಿ ಕೊರೊನಾಗೆ ಈವರೆಗೆ 1,770 ಮಂದಿ ಸಾವಿಗೀಡಾಗಿದ್ದು, ಸೋಂಕಿತರ ಸಂಖ್ಯೆ 70 ಸಾವಿರ ದಾಟಿದೆ.ಕಾದಂಬರಿಯಲ್ಲಿ ‘ಕೊರೊನಾ’! 40 ವರ್ಷಗಳ ಹಿಂದೆ ಅಂದರೆ 1981ರಲ್ಲಿ ಡೀನ್‌ ಕೂನ್‌l ಎಂಬವರು ಬರೆದ “ದಿ ಅಯ್ಸ ಆಫ್ ಡಾರ್ಕ್‌ನೆಸ್‌’ ಎಂಬ ಥ್ರಿಲ್ಲರ್‌ ಕಾದಂಬರಿಯಲ್ಲಿ ಕೊರೊನಾ ವೈರಸ್‌ ಬಗ್ಗೆ ಪ್ರಸ್ತಾಪಿಸಲಾಗಿತ್ತು ಎಂಬ ಅಚ್ಚರಿಯ ಅಂಶ ಈಗ ಬೆಳಕಿಗೆ ಬಂದಿದೆ. ಕಾದಂಬರಿಯ ಒಂದು ಪುಟದಲ್ಲಿ “ವುಹಾನ್‌ -400′ ಎಂಬ ವೈರಸ್‌ ಬಗ್ಗೆ ಪ್ರಸ್ತಾಪವಿದೆ. ಅಲ್ಲದೆ, ಇದನ್ನು ಪ್ರಯೋಗಾಲಯದಲ್ಲಿ ಒಂದು ಜೈವಿಕ ಅಸ್ತ್ರವಾಗಿ ಸೃಷ್ಟಿಸಲಾಗಿದೆ ಎಂದೂ ಬರೆಯಲಾಗಿದೆ.

ಟಾಪ್ ನ್ಯೂಸ್

1-qweqqweqwe

ಲೈಂಗಿಕ ಕಿರುಕುಳದೂರು ರಾಜಕೀಯ ಪ್ರೇರಿತ: ಪ.ಬಂಗಾಲ ಗವರ್ನರ್‌

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

bjpRoad Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Road Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Uppinangady ಹೃದಯಾಘಾತ; ಯುವಕ ಸಾವು

Uppinangady ಹೃದಯಾಘಾತ; ಯುವಕ ಸಾವು

IND VS PAK

ಪಾಕ್‌ಗೆ ರಾಜತಾಂತ್ರಿಕ ಸಭ್ಯತೆ ಇಲ್ಲ: ಭಾರತ ಕಿಡಿ

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqqweqwe

ಲೈಂಗಿಕ ಕಿರುಕುಳದೂರು ರಾಜಕೀಯ ಪ್ರೇರಿತ: ಪ.ಬಂಗಾಲ ಗವರ್ನರ್‌

Supreme Court

ಒಂದೇ ಹೆಸರಿರುವ ಅಭ್ಯರ್ಥಿಗಳ ಸ್ಪರ್ಧೆಗೆ ನಿಷೇಧ ಇಲ್ಲ: ಸುಪ್ರೀಂ

1-ewqeqewq

Eknath Shinde ಬಣ ಶಿವಸೇನೆ ಸೇರಿದ ಮಾಜಿ ಸಂಸದ ಸಂಜಯ ನಿರುಪಮ್‌

2000

2,000 ರೂ.ನ 97.76% ನೋಟು ವಾಪಸ್‌: ಆರ್‌ಬಿಐ

police crime

Deepfake ವೀಡಿಯೋ ಸೃಷ್ಟಿಕರ್ತರನ್ನು ಬಂಧಿಸಿ: ಮಹಾ ಸರಕಾರ ಆದೇಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqqweqwe

ಲೈಂಗಿಕ ಕಿರುಕುಳದೂರು ರಾಜಕೀಯ ಪ್ರೇರಿತ: ಪ.ಬಂಗಾಲ ಗವರ್ನರ್‌

Supreme Court

ಒಂದೇ ಹೆಸರಿರುವ ಅಭ್ಯರ್ಥಿಗಳ ಸ್ಪರ್ಧೆಗೆ ನಿಷೇಧ ಇಲ್ಲ: ಸುಪ್ರೀಂ

1-ewqeqewq

Eknath Shinde ಬಣ ಶಿವಸೇನೆ ಸೇರಿದ ಮಾಜಿ ಸಂಸದ ಸಂಜಯ ನಿರುಪಮ್‌

2000

2,000 ರೂ.ನ 97.76% ನೋಟು ವಾಪಸ್‌: ಆರ್‌ಬಿಐ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.