ಬೇಕಾಬಿಟ್ಟಿ ಕಾಮಗಾರಿಗೆ ಬ್ರೇಕ್‌ ಯಾವಾಗ?


Team Udayavani, Feb 18, 2020, 12:41 PM IST

cd-tdy-1

ಸಾಂದರ್ಭಿಕ ಚಿತ್ರ

ಭರಮಸಾಗರ: ರಾಷ್ಟ್ರೀಯ ಹೆದ್ದಾರಿ 4ರ ಐನಹಳ್ಳಿ ಗೇಟ್‌ನಿಂದ ಕಾತ್ರಾಳು ವಿದ್ಯಾಪೀಠದ ವರೆಗಿನ ಸುಮಾರು 5 ಕಿಮೀ ಉದ್ದದ ರಸ್ತೆಯ ಇಕ್ಕೆಲಗಳಲ್ಲಿ ಮುಂದಿನ ಮಳೆಗಾಲದಲ್ಲಿ ಗಿಡಗಳನ್ನು ನೆಡುವ ಸಲುವಾಗಿ ಅರಣ್ಯ ಇಲಾಖೆ ವತಿಯಿಂದ ಇಟಾಚಿ ಯಂತ್ರ ಬಳಸಿ ಗುಂಡಿಗಳನ್ನು ತೆಗೆಯುವ ಕಾರ್ಯ ಮಾಡಲಾಗುತ್ತಿದೆ. ಆದರೆ ಇದು ಅಸಮಪರ್ಕವಾಗಿದೆ ಎಂಬ ಆರೋಪ ಸಾರ್ವಜನಿಕರಿಂದ ವ್ಯಕ್ತವಾಗಿದೆ.

ರಾಷ್ಟ್ರೀಯ ಹೆದ್ದಾರಿ ಮೊದಲು ಈ ಮಾರ್ಗದಲ್ಲೇ ಹಾದು ಹೋಗಿತ್ತು. ಬಳಿಕ ಕಾತ್ರಾಳು ಕೆರೆಯನ್ನು ಬಳಕೆ ಮಾಡಿ ನೇರ ರಸ್ತೆಯನ್ನಾಗಿಸಿದ ಬಳಿಕ ಇಲ್ಲಿನ 5 ಕಿಮೀ ಉದ್ದದ ರಸ್ತೆ ಕೆಲವು ವರ್ಷಗಳಿಂದ ಹಾಳು ಬಿದ್ದಿತ್ತು. ಗುಂಡಿಗಳಿಂದ ತುಂಬಿದ್ದ ಈ ರಸ್ತೆಯಲ್ಲಿ ಜನರ ಸಂಚಾರವಿಲ್ಲದೆ ರಸ್ತೆಯ ಇಕ್ಕೆಲಗಳಲ್ಲಿ ಜಾಲಿ ಗಿಡಗಳು ಬೆಳೆದು ರಸ್ತೆಯೇ ಕಾಣದಂತಾಗಿತ್ತು. ಹಲವು ತಿಂಗಳುಗಳ ಹಿಂದೆ 5 ಕಿಮೀ ಉದ್ದದ ರಸ್ತೆಯನ್ನು ಈ ಹಿಂದೆ ಇದ್ದ ಹೆದ್ದಾರಿಯ ಅಗಲಕ್ಕೆ ರಸ್ತೆಯನ್ನು ಡಾಂಬರೀಕರಣಗೊಳಿಸಿ ರಸ್ತೆ ಇಕ್ಕೆಲಗಳಲ್ಲಿ ಬಿಳಿ ಪಟ್ಟಿ, ರಿಪ್ಲೆಕ್ಟರ್‌ಗಳನ್ನು, ಸೂಚನಾ ಫಲಕಗಳನ್ನು ಹಾಗೂ ಒಂದು ಪ್ರಮುಖ ರಸ್ತೆ ಸೇತುವೆಯನ್ನು ಅಭಿವೃದ್ಧಿಪಡಿಸಲಾಯಿತು. ಬಳಿಕ ಹಲವಾರು ವಾಹನಗಳು ಈ ರಸ್ತೆ ಮೂಲಕ ಸಂಚರಿಸುತ್ತಿವೆ.

ರಸ್ತೆಯನ್ನೂ ಬಿಡದೆ ಒತ್ತುವರಿ!: ಅದ್ಯಾವಾಗ ಈ ರಸ್ತೆ ಹಾಳು ಬಿದ್ದಿತ್ತೋ, ಇನ್ನೇನು ಸರ್ಕಾರ ಈ ರಸ್ತೆಯನ್ನು ಮರೆತಂತಿದೆ ಎಂದು ತಿಳಿದೋ ಏನೋ ರಸ್ತೆಯ ಇಕ್ಕೆಲಗಳ ಜಮೀನಿನ ಕೃಷಿಕರು ಜಮೀನುಗಳ ಬಳಿ ಡಾಂಬರ್‌ ರಸ್ತೆಯ ಅಂಚಿನವರೆಗೆ ಜಮೀನು ಉಳುಮೆ ಮಾಡಿಕೊಂಡು ರಸ್ತೆ ಒತ್ತುವರಿ ಮಾಡಿಬಿಟ್ಟಿದ್ದಾರೆ. ಕೆಲವರು ಅಡಿಕೆ, ತೆಂಗಿನಮರಗಳನ್ನೂ ಬೆಳೆಸಿದ್ದಾರೆ. ಇನ್ನು ಕೆಲವರು ರಸ್ತೆ ಅಂಚಿನವರೆಗೆ ಕಲ್ಲುಕಂಬ ನೆಟ್ಟು ತಮ್ಮ ಗಡಿಯನ್ನು ಗುರುತಿಸಿಕೊಂಡಿದ್ದಾರೆ.

ಇಂತಹ ರಸ್ತೆಯ ಇಕ್ಕೆಲಗಳಲ್ಲಿ ಇದೀಗ ಅರಣ್ಯ ಇಲಾಖೆ ವತಿಯಿಂದ ಮುಂದಿನ ಮಳೆಗಾಲಕ್ಕೆ ಗಿಡಗಳನ್ನು ನೆಡಲು ಗುಂಡಿಗಳನ್ನು ಇಟಾಚಿ ಯಂತ್ರದಿಂದ ತೆಗೆಯಲಾಗುತ್ತಿದೆ. ಈ ರಸ್ತೆ ಅಭಿವೃದ್ಧಿ ಕಾರ್ಯ ನಡೆಸಿರುವ ಲೋಕೋಪಯೋಗಿ ಇಲಾಖೆ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಅರಣ್ಯ ಇಲಾಖೆಗಳ ಸಮನ್ವಯದ ಕೊರತೆಯಿಂದ ರಸ್ತೆ ಒತ್ತುವರಿಯನ್ನು ಲೆಕ್ಕಿಸದೆ ಗಿಡಗಳನ್ನು ನೆಡಲು ರಸ್ತೆ ಗುಂಡಿಗಳನ್ನು ತೆಗೆಸಲಾಗುತ್ತಿದೆ. ಕೆಲವೆಡೆ ಒತ್ತುವರಿ ಆದ ಕಡೆ ಗುಂಡಿಯನ್ನೇ ತೆಗೆದಿಲ್ಲ. ಇನ್ನು ಕೆಲ ಭಾಗಗಳಲ್ಲಿ ರಸ್ತೆಯ ಅಂಚಿಗೆ ಗುಂಡಿ ಅಗೆಯಲಾಗಿದ್ದರೆ, ಹಲವೆಡೆ ರಸ್ತೆಯಿಂದ ನಾಲ್ಕಾರು ಅಡಿ ದೂರದಲ್ಲಿ ಗುಂಡಿ ತೆಗೆಯಲಾಗಿದೆ. ಸರ್ಕಾರದ ಇಲಾಖೆಗಳ ಈ ಕೆಲಸಗಳನ್ನು ನೋಡಿದರೆ ಒಂದೊಮ್ಮೆ ಯಾರಾದರೂ ರಸ್ತೆಯ ಅರ್ಧಕ್ಕೆ ಒತ್ತುವರಿ ಮಾಡಿದರೂ ಕೇಳುವವರಿಲ್ಲ, ಇಲ್ಲಿ ಒತ್ತುವರಿ ಮಾಡಿದವರದೇ ಆಟ ಎಂಬಂತಾಗಿದೆ. ರಸ್ತೆಯನ್ನು ಯಾರು ಎಷ್ಟು ಒತ್ತುವರಿ ಮಾಡಿರುತ್ತಾರೋ ಅದನ್ನು ಬಿಟ್ಟು ಅರಣ್ಯ ಇಲಾಖೆ ಗಿಡಗಳನ್ನು ನೆಡಲು ಗುಂಡಿ ಅಗೆಸುತ್ತಿರುವುದು ಮಾತ್ರ ವಿಪರ್ಯಾಸ.

 

-ಎಚ್‌.ಬಿ. ನಿರಂಜನ ಮೂರ್ತಿ

ಟಾಪ್ ನ್ಯೂಸ್

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.