ಆಧಾರ್‌ ನೋಂದಣಿಗೆ ಪರದಾಟ


Team Udayavani, Feb 18, 2020, 1:34 PM IST

rc-tdy-2

ಸಾಂದರ್ಭಿಕ ಚಿತ್ರ

ದೇವದುರ್ಗ: ಪಟ್ಟಣದ ಸಾರ್ವಜನಿಕ ಕ್ಲಬ್‌ ಆವರಣದ ಪಕ್ಕದ ಬಿಎಸ್‌ಎನ್‌ ಎಲ್‌ ಗ್ರಾಹಕರ ಸೇವಾ ಕೇಂದ್ರದಲ್ಲಿ ಆಧಾರ್‌ ನೋಂದಣಿ, ತಿದ್ದುಪಡಿಗೆ ವ್ಯವಸ್ಥೆ ಮಾಡಲಾಗಿದೆ. ಆದರೆ ಅಧಿಕಾರಿ ರಜೆ, ಬಿಎಸ್ಸೆನ್ನೆಲ್‌ ಕೆಲಸ-ಕಾರ್ಯ ನಿಮಿತ್ತ ತೆರಳಿದಾಗ ಸಾರ್ವಜನಿಕರು ಸೇವಾ ಕೇಂದ್ರಕ್ಕೆ ಬಂದು ಬರಿಗೈಲಿ ವಾಪಸ್‌ ಹೋಗುವಂತಾಗಿದೆ.

ಆಧಾರ್‌ ಕಾರ್ಡ್‌ ಹೊಣೆ: ಮೊಬೈಲ್‌ ಬಳಸುವವರ ಸಂಖ್ಯೆ ಹೆಚ್ಚಿದಂತೆ ಸ್ಥಿರ ದೂರವಾಣಿ ಸಂಪರ್ಕಗಳು ಕಡಿಮೆ ಆಗಿವೆ. ಈ ಕಾರಣಕ್ಕಾಗಿ ಕೇಂದ್ರ ಸರ್ಕಾರ ಗ್ರಾಹಕರ ಸೇವಾ ಕೇಂದ್ರದಲ್ಲಿ ಆಧಾರ್‌ ನೋಂದಣಿಗೆ ವ್ಯವಸ್ಥೆ ಮಾಡಿದೆ. ಇಲ್ಲಿರುವ ಅಧಿಕಾರಿ ಬಿಎಸ್ಸೆನ್ನೆಲ್‌ ಕೆಲಸ ಕಾರ್ಯದ ಜೊತೆಗೆ ಹೆಚ್ಚುವರಿಯಾಗಿ ಆಧಾರ್‌ ತಿದ್ದುಪಡಿ, ನೋಂದಣಿ ಕರ್ತವ್ಯ ನಿರ್ವಹಿಸಬೇಕಿದೆ.

ಅಧಿಕಾರಿ ರಜೆ, ಬಿಎಸ್ಸೆನ್ನೆಲ್‌ ಕಚೇರಿ ಮಿಟಿಂಗ್‌, ದೂರವಾಣಿ ಸಂಪರ್ಕಗಳಲ್ಲಿ ವ್ಯತ್ಯಯವಾದಾಗ ದುರಸ್ತಿ ಇತರೆ ಕಾರ್ಯಕ್ಕೆ ಹೋದಾಗ ಇಲ್ಲಿ ಆಧಾರ್‌ ನೋಂದಣಿ ಸ್ಥಗಿತಗೊಳ್ಳುತ್ತದೆ. ಹೀಗಾಗಿ ಕೆಲವೊಮ್ಮೆ ಸಾರ್ವಜನಿಕರು ಗ್ರಾಹಕರ ಸೇವಾ ಕೇಂದ್ರಕ್ಕೆ ಆಗಮಿಸಿ ತಾಸುಗಟ್ಟಲೇ ನಿಂತು ಕೆಲಸವಾಗದೇ ವಾಪಸ್‌ ಹೋಗುವಂತಾಗಿದೆ.

ಹುದ್ದೆ ಖಾಲಿ: ಬಿಎಸ್‌ಎನ್‌ಎಲ್‌ ಗ್ರಾಹಕರ ಸೇವಾ ಕೇಂದ್ರದಲ್ಲಿ ಬಹುತೇಕ ಹುದ್ದೆಗಳು ಖಾಲಿ ಇವೆ. ಜ್ಯೂನಿಯರ್‌ ಟೆಲಿಕಾಂ ಅಧಿಕಾರಿಯೇ ಎಲ್ಲವನ್ನು ನಿರ್ವಹಿಸಬೇಕಿದೆ. ಕ್ಲರ್ಕ್‌, ಟಿಟಿಎ, ಲೇಬರ್‌ ಸೇರಿ 4 ಜನ ಫೋನ್‌ ಮೆಕ್ಯಾನಿಕ್‌ ಹುದ್ದೆಗಳು ಖಾಲಿ ಇವೆ. ಕೇಂದ್ರ ಸರ್ಕಾರ ಖಾಲಿ ಹುದ್ದೆ ಭರ್ತಿಗೆ ಮುಂದಾಗುತ್ತಿಲ್ಲ. ಹೀಗಾಗಿ ಇರುವ ಸಿಬ್ಬಂದಿ ಮೇಲೆ ಒತ್ತಡ ಹೆಚ್ಚಿದೆ.

ಎಲ್ಲೆಲ್ಲಿ ದೂರವಾಣಿ ಸಂಪರ್ಕ: ಪಟ್ಟಣ ಸೇರಿ ತಾಲೂಕಿನಾದ್ಯಂತ ಅರಕೇರಾ, ಗಬ್ಬೂರು, ಜಾಲಹಳ್ಳಿ ಹೋಬಳಿ ವ್ಯಾಪ್ತಿಯಲ್ಲಿ ದೂರವಾಣಿ ಮತ್ತು ಡಾಟಾ ಸಂಪರ್ಕ ಇವೆ. ಅರಕೇರಾದಲ್ಲಿ 20, ಗಬ್ಬೂರು 20, ಜಾಲಹಳ್ಳಿ ಗ್ರಾಮದಲ್ಲಿ 35 ದೂರವಾಣಿ ಸೌಲಭ್ಯ ಕಲ್ಪಿಸಲಾಗಿದೆ. ಇಲ್ಲಿ ದೂರವಾಣಿ ಸೇವೆಯಲ್ಲಿ ವ್ಯತ್ಯಯವಾದಾಗ ಗ್ರಾಹಕರ ಸೇವಾ ಕೇಂದ್ರದಲ್ಲಿನ ಅಧಿಕಾರಿಯೇ ಸ್ಥಳಕ್ಕೆ ತೆರಳಿ ಸರಿಪಡಿಸಬೇಕಿದೆ. ಇನ್ನು ಬಿ.ಗಣೇಕಲ್‌, ಹಿರೇಬೂದೂರು, ಕೊಪ್ಪರ ಸೇರಿ ಇತರೆಡೆ ಬಿಎಸ್‌ಎನ್‌ಎಲ್‌ ಟವರ್‌ ಅಳವಡಿಸಲಾಗಿದೆ. ಇಲ್ಲೂ ತಾಂತ್ರಿಕ ಸಮಸ್ಯೆ ಎದುರಾದರೆ ಅವರೇ ನಿರ್ವಹಣೆ ಮಾಡಬೇಕಿದೆ.

ಕಟ್ಟಡ ಶಿಥಿಲ: ಇನ್ನು ಬಿಎಸ್ಸೆನ್ನೆಲ್‌ ಗ್ರಾಹಕರ ಸೇವಾ ಕೇಂದ್ರ ನಿರ್ವಹಣೆ ಕೊರತೆಯಿಂದಾಗಿ ಎಲ್ಲೆಂದರಲ್ಲಿ ಬಿರುಕು ಬಿಟ್ಟು ಶಿಥಿಲಗೊಂಡಿದೆ. ಸುಮಾರು 30 ವರ್ಷದ ಹಿಂದೆ ಈ ಕಟ್ಟಡ ನಿರ್ಮಿಸಲಾಗಿದೆ.

ವೇತನವಿಲ್ಲ: ಬಿಎಸ್‌ಎನ್‌ಎಲ್‌ ಗ್ರಾಹಕರ ಸೇವಾ ಕೇಂದ್ರದಲ್ಲಿ ಗುತ್ತಿಗೆ ಆಧಾರದ ಮೇಲೆ ನೇಮಕಗೊಂಡ ದಿನಗೂಲಿ ಸಿಬ್ಬಂದಿಗೆ ವರ್ಷದಿಂದ ವೇತನವಾಗಿಲ್ಲ. ಕುಟುಂಬ ನಿರ್ವಹಣೆಗೆ ಸಂಕಷ್ಟ ಎದುರಿಸುವಂತಾಗಿದೆ ಎಂದು ಸಿಬ್ಬಂದಿ ಅಳಲು ತೋಡಿಕೊಂಡಿದ್ದಾರೆ.

ಬಿಎಸ್ಸೆನ್ನೆಲ್‌ ಕಚೇರಿಯಲ್ಲಿ ಹುದ್ದೆಗಳು ಖಾಲಿ ಇವೆ. ಕೆಲಸ ಕಾರ್ಯಗಳಿಗೆ ಸ್ವಲ್ಪ ತೊಂದರೆ ಆಗುತ್ತಿದೆ. ಆಧಾರ್‌ ಕಾರ್ಡ್‌ ನೋಂದಣಿ, ತಿದ್ದುಪಡಿ ಜವಾಬ್ದಾರಿ ವಹಿಸಲಾಗಿದೆ. ಕೇಬಲ್‌ ಸಮಸ್ಯೆ ಬಂದಾಗ ದುರಸ್ತಿಗೆ ಹೋಗಬೇಕಿರುವುದರಿಂದ ಜನರಿಗೆ ಆಧಾರ್‌ ಸೇವಾ ಸೌಲಭ್ಯ ನೀಡಲು ಆಗುತ್ತಿಲ್ಲ. -ಕಾಂತಿಭೂಷಣ, ಜ್ಯೂನಿಯರ್‌ ಟೆಲಿಕಾಂ ಅಧಿಕಾರಿ

 

-ನಾಗರಾಜ ತೇಲ್ಕರ್‌

ಟಾಪ್ ನ್ಯೂಸ್

Terror Attack On IAF Convoy In poonch

Poonch; ವಾಯುಸೇನೆ ವಾಹನದ ಮೇಲೆ ಉಗ್ರ ದಾಳಿ; ಓರ್ವ ಹುತಾತ್ಮ, ನಾಲ್ವರಿಗೆ ಗಾಯ

2-vitla

Vitla: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

1-24-sunday

Daily Horoscope: ಕೆಲವರಿಗೆ ಅನಿರೀಕ್ಷಿತ ಧನಾಗಮ ಸಂಭವ, ಅವಿವಾಹಿತರಿಗೆ ವಿವಾಹ ಯೋಗ

ಮತದಾನ ಜಾಗೃತಿಗೆ ಪ್ರತೀ ರಾಜ್ಯಕ್ಕೆ 15 ಕೋ.ರೂ. ವೆಚ್ಚ

ಮತದಾನ ಜಾಗೃತಿಗೆ ಪ್ರತೀ ರಾಜ್ಯಕ್ಕೆ 15 ಕೋ.ರೂ. ವೆಚ್ಚ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sindhanur; ಒಂದೇ ದಿನ ‌ ಗ್ರಾಮದ ನಾಲ್ವರ ಸಾವು: ಭಯಭೀತರಾದ ಗ್ರಾಮಸ್ಥರು

Sindhanur; ಒಂದೇ ದಿನ ‌ ಗ್ರಾಮದ ನಾಲ್ವರ ಸಾವು: ಭಯಭೀತರಾದ ಗ್ರಾಮಸ್ಥರು

Raichur; ಅಣ್ಣಾಮಲೈ ಸೆಲ್ಫಿಗಾಗಿ ನೂಕುನುಗ್ಗಲು: ವೇದಿಕೆಯಲ್ಲೇ ಲಾಠಿ ಬೀಸಿದ ಪೊಲೀಸರು

Raichur; ಅಣ್ಣಾಮಲೈ ಸೆಲ್ಫಿಗಾಗಿ ನೂಕುನುಗ್ಗಲು: ವೇದಿಕೆಯಲ್ಲೇ ಲಾಠಿ ಬೀಸಿದ ಪೊಲೀಸರು

Prajwal Revanna Case; ರೆಕಾರ್ಡ್ ಸ್ಪೀಡ್‌ನಲ್ಲಿ ತನಿಖೆ ನಡೆಸಲಿ: ಅಣ್ಣಾಮಲೈ

Prajwal Revanna Case; ರೆಕಾರ್ಡ್ ಸ್ಪೀಡ್‌ನಲ್ಲಿ ತನಿಖೆ ನಡೆಸಲಿ: ಅಣ್ಣಾಮಲೈ

Tragedy: ಬಿಸಿಲಿನ ತಾಪಕ್ಕೆ ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಮೃತ್ಯು…

Tragedy: ಬಿಸಿಲಿನ ತಾಪ… ಕುಸಿದು ಬಿದ್ದು ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಮೃತ್ಯು

HDK (3)

Prajwal Case; ಮೊದಲು ರಾಹುಲ್ ಗಾಂಧಿಗೆ ನೋಟಿಸ್ ಕೊಡಬೇಕು: ಎಚ್ ಡಿಕೆ ಆಗ್ರಹ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Terror Attack On IAF Convoy In poonch

Poonch; ವಾಯುಸೇನೆ ವಾಹನದ ಮೇಲೆ ಉಗ್ರ ದಾಳಿ; ಓರ್ವ ಹುತಾತ್ಮ, ನಾಲ್ವರಿಗೆ ಗಾಯ

2-vitla

Vitla: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

1-24-sunday

Daily Horoscope: ಕೆಲವರಿಗೆ ಅನಿರೀಕ್ಷಿತ ಧನಾಗಮ ಸಂಭವ, ಅವಿವಾಹಿತರಿಗೆ ವಿವಾಹ ಯೋಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.