NRC: ಪೌರತ್ವಕ್ಕೆ ಭೂ ಕಂದಾಯ ರಶೀದಿ, ಪ್ಯಾನ್ ಕಾರ್ಡ್ ದಾಖಲೆ ಎಂದು ತೋರಿಸಬೇಡಿ: ಹೈಕೋರ್ಟ್
Team Udayavani, Feb 18, 2020, 4:27 PM IST
ಗುವಾಹಟಿ: ಪೌರತ್ವಕ್ಕಾಗಿ ಪ್ಯಾನ್ ಕಾರ್ಡ್, ಬ್ಯಾಂಕ್ ಸ್ಟೇಟ್ ಮೆಂಟ್ ಮತ್ತು ಭೂ ಕಂದಾಯ ರಶೀದಿಯನ್ನು ದಾಖಲೆಯನ್ನಾಗಿ ತೋರಿಸುವಂತಿಲ್ಲ ಎಂದು ಗುವಾಹಟಿ ಹೈಕೋರ್ಟ್ ತಿಳಿಸಿದೆ.
ಮಹಿಳೆಯೊಬ್ಬರು ತನ್ನನ್ನು ವಿದೇಶಿ ಕಲಂನಲ್ಲಿ ಸೇರಿಸಿರುವ ಟ್ರಿಬ್ಯುನಲ್ ಆದೇಶದ ವಿರುದ್ಧ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆಯ ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಈ ಅಭಿಪ್ರಾಯವ್ಯಕ್ತಪಡಿಸಿದೆ.
ಅಸ್ಸಾಂನಲ್ಲಿ ಜಾರಿಯಾಗಿರುವ ವಿದೇಶಿ ಪ್ರಜೆಗಳ ಗುರುತಿಸುವಿಕೆಯ ರಾಷ್ಟ್ರೀಯ ಪೌರತ್ವ ನೋಂದಣಿ (ಎನ್ ಆರ್ ಸಿ) ವೇಳೆ ಪಟ್ಟಿಯಲ್ಲಿ ದಾಖಲಿಸಿರುವ ಭೂಮಿ ಮತ್ತು ಬ್ಯಾಂಕ್ ಖಾತೆ ದಾಖಲೆಯನ್ನು ಅಧಿಕಾರಿಗಳು ಸ್ವೀಕರಿಸಿದ್ದರು.
ಕಳೆದ ವರ್ಷ ಆಗಸ್ಟ್ ನಲ್ಲಿ ಪ್ರಕಟಗೊಂಡ ಎನ್ ಆರ್ ಸಿ ಅಂತಿಮ ಪಟ್ಟಿಯಲ್ಲಿ ಸುಮಾರು 19 ಲಕ್ಷ ಮಂದಿ ಹೊರಗುಳಿದಿದ್ದು, ಇವರೆಲ್ಲಾ ಪೌರತ್ವ ಸಾಬೀಪಡಿಸಲು ಯತ್ನಿಸಿದ್ದರು. ಸಾವಿರಾರು ಮಂದಿಯನ್ನು ವಿದೇಶಿ ಎಂದು ಟ್ರಿಬ್ಯೂನಲ್ ಘೋಷಿಸಿದೆ.
ಟ್ರಿಬ್ಯೂನಲ್ ಕೋರ್ಟ್ ವಜಾಗೊಳಿಸಿದ ಪ್ರಕರಣವನ್ನು ಹೈಕೋರ್ಟ್ ಕೈಗೆತ್ತಿಕೊಳ್ಳಲಿದೆ. ಅಲ್ಲದೆ ಒಂದು ವೇಳೆ ಅಗತ್ಯವಿದ್ದರೆ ಸುಪ್ರೀಂಕೋರ್ಟ್ ಕೂಡಾ ವಿಚಾರಣೆ ನಡೆಸಲಿದೆ. ಅಲ್ಲದೇ ಎಲ್ಲಾ ಕಾನೂನು ಹೋರಾಟದ ಅವಕಾಶಗಳು ಮುಕ್ತಾಯವಾಗುವವರೆಗೆ ಬಂಧನ ಶಿಬಿರದಲ್ಲಿ ಇರಿಸುವುದಿಲ್ಲ ಎಂದು ಕೇಂದ್ರ ಸರ್ಕಾರ ಕೋರ್ಟ್ ಗೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಜಗತ್ತಿಗಿಂತ ಮೊದಲು ಪಾಕ್ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್ ದಾಳಿ ಬಗ್ಗೆ ಪ್ರಧಾನಿ
Encounter: ಛತ್ತೀಸ್ಗಢದಲ್ಲಿ ಎನ್ಕೌಂಟರ್… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ
MUST WATCH
ಹೊಸ ಸೇರ್ಪಡೆ
Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !
ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ
ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ
Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ
ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು