ಪಾಕಿಸ್ತಾನಕ್ಕೆ ಜಯವಾಗಲಿ ಎನ್ನುವ ಮನಸ್ಥಿತಿಗೆ ಕಾಂಗ್ರೆಸ್ ನವರು ತಲುಪಿದ್ದಾರೆ: ಶ್ರೀರಾಮುಲು
Team Udayavani, Feb 19, 2020, 11:50 AM IST
ರಾಯಚೂರು: ಕಾಂಗ್ರೆಸ್ ನಾಯಕರ ಧೋರಣೆ ನೋಡುತ್ತಿದ್ದಾರೆ ಪಾಕಿಸ್ತಾನಕ್ಕೆ ಜಯವಾಗಲಿ ಎನ್ನುವ ಮನಸ್ಥಿತಿಗೆ ತಲುಪಿದ್ದಾರೆ ಎನ್ನುವಂತಿದೆ ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ಟೀಕಿಸಿದರು.
ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪಾಕಿಸ್ತಾನಕ್ಕೆ ಜಿಂದಾಬಾದ್ ಎನ್ನುವವರ ಪರ ಕಾಂಗ್ರೆಸ್ ನಾಯಕರು ಮಾತನಾಡುತ್ತಿರುವುದು ಶೋಚನೀಯ. ನೆರೆ, ಬರದ ಚರ್ಚೆ ಮಾಡುವುದು ಬಿಟ್ಟು ದೇಶದ್ರೋಹಿಗಳ ವಿಚಾರವಾಗಿ ಸದನ ಬಹಿಷ್ಕರಿಸಿದ್ದಾರೆ. ಈ ವಿಚಾರದಲ್ಲಿ ನಾವು ಕೈ ಕಟ್ಟಿ ಕೂಡುವುದಿಲ್ಲ ಎಂದರು.
ಕಾಂಗ್ರೆಸ್ ನವರು ಭಾರತವನ್ನು, ಪಾಕಿಸ್ತಾನಕ್ಕೆ ಒತ್ತೆ ಇಡುವ ಹಂತಕ್ಕೆ ತಲುಪಿದ್ದಾರೆ. ಕಾಂಗ್ರೆಸ್ ಭಯೋತ್ಪಾದನೆಗೆ ಪ್ರಚೋದನೆ ನೀಡುತ್ತಿದೆ. ಮಾಜಿ ಸಿಎಂ ಸಿದ್ದರಾಮಯ್ಯನವರೂ ಅದೇ ಧಾಟಿಯಲ್ಲಿ ಮಾತನಾಡುತ್ತಿದ್ದಾರೆ. ಆದರೆ, ಪಾಕಿಸ್ತಾನ ಪರ ಘೋಷಣೆ ಹಾಕಿದವರನ್ನು ಸುಮ್ಮನೆ ಬಿಡುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದರು.
ಅಜ್ಮಲ್ ಕಸಬ್ ನನ್ನು ಹಿಂದು ಎಂದು ಬಿಂಬಿಸಲು ಮುಂದಾಗಲಾಗಿತ್ತು ಎಂಬ ಅಂಶ ಬಯಲಾಗಿದೆ. ಕಸಬ್ ಗೆ ಬೆಂಗಳೂರಿನ ವಿಳಾಸವಿತ್ತು ಎಂಬ ಮಾಹಿತಿ ಇದೆ. ಈ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದರು.
ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿ ಕುರಿತು ಸದನದಲ್ಲಿ ಚರ್ಚಿಸುವ ಉದ್ದೇಶದಿಂದಲೇ ಜಗದೀಶ ಶೆಟ್ಟರ್ ಮನೆಯಲ್ಲಿ ಸಭೆ ನಡೆಸಲಾಗಿತ್ತು. ಸಿಎಂ ಬಿ.ಎಸ್.ಯಡಿಯೂರಪ್ಪ ಪ್ರಶ್ನಾತೀತ ನಾಯಕರು. ಅವರಿಗೆ ತೊಂದರೆ ಮಾಡುವ ಉದ್ದೇಶದಿಂದ ಸಭೆ ನಡೆಸಿದ್ದಲ್ಲ ಎಂದು ಸ್ಪಷ್ಟಪಡಿಸಿದರು.
ಕಾಂಗ್ರೆಸ್ ನವರಿಗೆ ಬಳ್ಳಾರಿ ಜಿಲ್ಲೆಯ ಹೆಸರು ಕೆಡಿಸುವ ಖಯಾಲಿ ಇದೆ. ಇದೇ ಆನಂದ್ ಸಿಂಗ್, ನಾಗೇಂದ್ರ ಅವರು ಕಾಂಗ್ರೆಸ್ ನಿಂದ ನಿಂತು ಗೆದ್ದಾಗ ಪ್ರಾಮಾಣಿಕರಾಗಿದ್ದರು. ಈಗ ಬಿಜೆಪಿಯಿಂದ ಸಚಿವರಾದ ಕೂಡಲೇ ಕಳಂಕಿತರೇ..? ಆನಂದಸಿಂಗ್ ವಿರುದ್ಧ ಇರುವುದು ಆರೋಪಗಳಷ್ಟೆ. ಮೇಲಾಗಿ ಅವರು ಬಿಜೆಪಿಯ ನಿಷ್ಠಾವಂತ ಮುಖಂಡರು ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
MUST WATCH
ಹೊಸ ಸೇರ್ಪಡೆ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ