ದೇವದುರ್ಗದಲ್ಲಿ ಬಿಡಾಡಿ ದನಗಳ ಹಾವಳಿ

ವಾಹನಗಳ ಸುಗಮ ಸಂಚಾರಕ್ಕೆ ಅಡ್ಡಿ ಪುರಸಭೆ ಅಧಿಕಾರಿಗಳ ವಿರುದ್ಧಸಾರ್ವಜನಿಕರ ಆಕ್ರೋಶ

Team Udayavani, Feb 19, 2020, 2:55 PM IST

19-February-15

ದೇವದುರ್ಗ: ಪಟ್ಟಣದ ಪ್ರಮುಖ ರಸ್ತೆ, ವಾರ್ಡ್ಗಳಲ್ಲಿ ಬಿಡಾಡಿ ಜಾನುವಾರುಗಳ ಕಿರಿಕಿರಿ ಹೆಚ್ಚಾಗಿದೆ. ಹಾಗಾಗಿ ಸುಗಮ ಸಂಚಾರಕ್ಕೆ ಪೆಟ್ಟು ಬಿದಂತಾಗಿದೆ. ಅಗತ್ಯ ಕ್ರಮವಹಿಸಲು ಪೊಲೀಸ್‌ ಸಿಬ್ಬಂದಿ ಕೊರತೆ ಎದುರಾಗಿದೆ.

ವಾರ್ಡ್‌ನ ಕೆಲ ಸದಸ್ಯರು ಪುರಸಭೆ ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ. ಆದರೆ ಇಲ್ಲಿವರೆಗೆ ಬಿಡಾಡಿ ಜಾನುವಾರುಗಳ ನಿಯಂತ್ರಣ ಮಾಡಲು ಹಿಂದೇಟು ಹಾಕಿದ ಹಿನ್ನೆಲೆಯಲ್ಲಿ ಸಮಸ್ಯೆ ಮತ್ತಷ್ಟು ಹೆಚ್ಚಾಗಿದೆ. ಒಂದುಕ್ಕೊಂದು ಗುದ್ದಾಡುವುದರಿಂದ ಪಾದಚಾರಿಗಳು ಭಯ ಭೀತರಾಗಿದ್ದಾರೆ.

ಪಟ್ಟಣದ ರಾಜ್ಯ ಹೆದ್ದಾರಿ, ಪ್ರಮುಖ ರಸ್ತೆಯಲ್ಲಿ ದಿನದ 24 ಗಂಟೆ ಬಿಡಾಡಿ ಜಾನುವಾರಗಳದ್ದೇ ಕಾರುಬಾರು. ರಸ್ತೆ ಮಧ್ಯೆ ಎಲ್ಲೆಂದರಲ್ಲಿ ಮಲಗಿರುತ್ತವೆ. ಇಲ್ಲಿನ ಸಮಸ್ಯೆ ಕುರಿತು ಸಾರ್ವಜನಿಕರು ಪುರಸಭೆ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರೂ ಪ್ರಯೋಜವಾಗಿಲ್ಲ. ಬಿಡಾಡಿ ಜಾನುವಾರುಗಳಿಗೆ ರಸ್ತೆಗಿಳಿಸದಂತೆ ಮಾಲೀಕರಿಗೆ ಸೂಕ್ತ ಎಚ್ಚರಿಕೆ ನೀಡುವಲ್ಲಿ ಪುರಸಭೆ ನಿರ್ಲಕ್ಷ್ಯ ತೋರಿಸಿರುವುದು ಎದ್ದು ಕಾಣುತ್ತಿದೆ.

ಪಟ್ಟಣದ ರಾಜ್ಯ ಹೆದ್ದಾರಿ, ಡಾ. ಬಿ.ಆರ್‌. ಅಂಬೇಡ್ಕರ್‌ ವೃತ್ತ, ಬಸ್‌ ನಿಲ್ದಾಣ, ಜಹಿರುದ್ಧೀನ್‌
ವೃತ್ತ, ಮಿನಿ ವಿಧಾನಸೌಧ, ಜಾಲಹಳ್ಳಿ ಕ್ರಾಸ್‌ ಸೇರಿ ಪ್ರಮುಖ ರಸ್ತೆಯಲ್ಲಿ ಎಲ್ಲೆಂದರಲ್ಲಿ ಟ್ರಾಫಿಕ್‌ ಸಮಸ್ಯೆ ಹೆಚ್ಚಾಗುತ್ತಿದೆ. ಬೈಕ್‌ ಸವಾರರು ಎಲ್ಲೆಂದರಲ್ಲಿ ಬೈಕ್‌ ನಿಲ್ಲಿಸುವುದರಿಂದ ಸುಗಮ ಸಂಚಾರಕ್ಕೆ ಪೆಟ್ಟು ಬಿದಿದೆ. ಪೊಲೀಸ್‌ ಸಿಬ್ಬಂದಿ ಕೊರತೆಯಿಂದಾಗಿ ಟ್ರಾಫಿಕ್‌
ಸಮಸ್ಯೆ ನಿಯಂತ್ರಣ ಬರುತ್ತಿಲ್ಲ. ಎಲ್ಲೆಂದರಲ್ಲಿ ಆಟೋ, ಟಂಟಂಗಳನ್ನು ನಿಲುಗಡೆ ಮಾಡುತ್ತಿರುವುದರಿಂದ ಸಂಚಾರ ಸಂಪೂರ್ಣ ಹದಗೆಟ್ಟಿದೆ. ವಾಹನಕ್ಕೆ ಸಂಬಂಧಿಸಿದಂತೆ ದಾಖಲೆ ತಪಾಸಣೆಯಾಗದ ಹಿನ್ನೆಲೆಯಲ್ಲಿ ಚಾಲಕರಿಗೆ ಎಚ್ಚರ ಇಲ್ಲದಂತಾಗಿದೆ.

ಪಟ್ಟಣದಲ್ಲಿ ಬಹುತೇಕ ಟ್ರಾಫಿಕ್‌ ಸಮಸ್ಯೆ ಇಲ್ಲದಾಗ ಸಿಂಧನೂರಿಗೆ ಮಂಜೂರಾಗಿದ್ದ ಸಂಚಾರ ಪೊಲೀಸ್‌ ಠಾಣೆಯನ್ನು ಶಾಸಕ ಕೆ. ಶಿವನಗೌಡ ನಾಯಕ ಈ ಹಿಂದೆ ಸಚಿವರಿದಾಗಿದ್ದಾಗ ತಾಲೂಕಿಗೆ ಮಂಜೂರಿ ಮಾಡಿಸಿದ್ದರು. ಇದೀಗ ದಿನೇ ದಿನೇ ಟ್ರಾಫಿಕ್‌ ಸಮಸ್ಯೆ ಹೆಚ್ಚಾಗಿದೆ. ಹೀಗಾಗಿ ರಾಜ್ಯ ಹೆದ್ದಾರಿಯಲ್ಲಿ ಸಿಗ್ನಲ್‌, ಸಿಸಿ ಕ್ಯಾಮೆರಾ ಅಳವಡಿಸುವುದು ಬಹಳ ಅಗತ್ಯವಿದೆ. ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಇಲ್ಲಿನ ಸಮಸ್ಯೆ ಕುರಿತು ಅಗತ್ಯ ಕ್ರಮವಹಿಸಬೇಕಾಗಿದೆ ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಟ್ರಾಫಿಕ್‌ ಸಮಸ್ಯೆ ನಿಯಂತ್ರಣ ಮಾಡಲು ರಾಜ್ಯ ಹೆದ್ದಾರಿಯಲ್ಲಿ ಸಿಬ್ಬಂದಿ ನಿಯೋಜಿಸಲಾಗುವುದು. ಸಿಗ್ನಲ್‌ ಅಳವಡಿಸುವ ಬಗ್ಗೆ ಮೇಲಧಿಕಾರಿಗಳ ಗಮನಕ್ಕೆ ತರಲಾಗಿದೆ. ಸಿಸಿ ಕ್ಯಾಮೆರಾ ಅಳವಡಿಸಲು ಪುರಸಭೆ ಅಧಿಕಾರಿಗಳ ಜತೆ ಚರ್ಚಿಸಿ ಕ್ರಮ ಕೈಗೊಳ್ಳುತ್ತೇನೆ.
ಎಲ್‌.ಬಿ. ಅಗ್ನಿ,
ಪಿಎಸ್‌ಐ ದೇವದುರ್ಗ

ಬಿಡಾಡಿ ದನಗಳ ಹಾವಳಿ ತಡೆಗಟ್ಟಲು ಈಗಾಗಲೇ ಸಿಬ್ಬಂದಿ ಸೂಚಿಸಲಾಗಿದೆ. ಬಹುತೇಕರು ಗಮನಕ್ಕೆ ತಂದಿದ್ದಾರೆ. ಸಮಸ್ಯೆ ಕುರಿತು ಹಂತ ಹಂತವಾಗಿ ಬಗೆಹರಿಸಲಾಗುವುದು.
ತಿಮ್ಮಪ್ಪ ಜಗ್ಲಿ,
ಪುರಸಭೆ ಮುಖ್ಯಾಧಿಕಾರಿ

ಟಾಪ್ ನ್ಯೂಸ್

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.