ಸಮರ್ಪಕ ಕರ್ತವ್ಯ ನಿರ್ವಹಣೆಗೆ ಸೂಚನೆ

ನಿಗದಿತ ಸಮಯದಲ್ಲಿ ಅರ್ಜಿ ವಿಲೇವಾರಿ ಮಾಡಿದೂರುಗಳಿಗೆ ಬೇಕಾ ಬಿಟ್ಟಿ ಉತ್ತರ ನೀಡಿದರೆ ಕ್ರಮ

Team Udayavani, Feb 19, 2020, 2:35 PM IST

19-February-16

ಶಹಾಪುರ: ಸಾರ್ವಜನಿಕರ ಕೆಲಸ ಸಮರ್ಪಕವಾಗಿ ಮಾಡಿಕೊಡುವುದು ಅಧಿಕಾರಿ ಮತ್ತು ಅಲ್ಲಿನ ಸಿಬ್ಬಂದಿಗಳ ಕರ್ತವ್ಯ. ಅದು ಬಿಟ್ಟು ಅವರನ್ನು ಅಲೆದಾಡಿಸುವುದು, ವಿಳಂಬ ನೀತಿ ಅನುಸರಿಸುವುದು ಸರಿಯಲ್ಲ. ಈ ಬಗ್ಗೆ ಸಾಕಷ್ಟು ದೂರು ಬಂದಿದ್ದು, ಮುಂಬರುವ ದಿನಗಳಲ್ಲಿ ಅ ಧಿಕಾರಿಗಳು ಅದನ್ನೆ ಮುಂದುವರಿಸಿದಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಲೋಕಾಯುಕ್ತ ಡಿವೈಎಸ್‌ಪಿ ವಿ.ಬಿ. ಚಿಕ್ಕಮಠ ಎಚ್ಚರಿಸಿದರು.

ನಗರದ ತಾಪಂ ಸಭಾಂಗಣದಲ್ಲಿ ಮಂಗಳವಾರ ಸಾರ್ವತ್ರಿಕ ದೂರು ಸ್ವೀಕಾರ ಮತ್ತು ತಾಲೂಕು ಮಟ್ಟದ ಅಧಿಕಾರಿಗಳ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸರ್ಕಾರದ ವಿವಿಧ ಯೋಜನೆಗಳು ಜಾರಿಯಾಗುತ್ತಿದ್ದು, ಅವುಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವಲ್ಲಿ ಅಧಿಕಾರಿಗಳ ಬೇಜವಾಬ್ದಾರಿ ನಿರ್ಲಕ್ಷ್ಯ ಕಂಡು ಬರುತ್ತಿದೆ. ಯಾವುದೇ ಇಲಾಖೆಯಾಗಲಿ ತಮ್ಮ ಕೆಲಸವನ್ನು ಸಮರ್ಪಕವಾಗಿ ನಿಭಾಯಿಸಬೇಕು. ಯಾವುದೇ ಯೋಜನೆಯ ಸಫಲತೆ ಸಾಕಾರವಾಗುವವರೆಗೂ ಅದನ್ನು ನಿಭಾಯಿಸುವ ನಿರ್ವಹಿಸುವ ಕರ್ತವ್ಯ ಅಧಿಕಾರಿಗಳದ್ದಾಗಿದೆ ಎಂದು ತಿಳಿಸಿದರು.

ಕಳೆದ ಐದಾರು ವರ್ಷಗಳಿಂದ ಸಾಕಷ್ಟು ಕಾಮಗಾರಿ ನನೆಗುದಿಗೆ ಬಿದ್ದಿವೆ. ಸಾರ್ವಜನಿಕರಿಂದ ನೂರಾರು ದೂರುಗಳು ಬಂದಿದ್ದು, ಅಸಮರ್ಪಕ ಅವ್ಯವಸ್ಥೆಯಿಂದ ಕಾಮಗಾರಿಗಳು ಅರ್ಧ ಕೆಲಸಗಳಾಗಿ ಸ್ಥಗಿತಗೊಂಡಿವೆ. ಅವುಗಳನ್ನು ಸಮರ್ಪಕವಾಗಿ ನಿಭಾಯಿಸಬೇಕು ಎಂದು ಸೂಚಿಸಿದರು.

ಕಂದಾಯ ಇಲಾಖೆಯಲ್ಲೂ ಸಭೆಗಳು ಜಾಸ್ತಿ ನಡೆಯುತ್ತವೆ. ಆದರೆ ಕೆಲಸಗಳು ಆಗಲ್ಲ. ಬರಿ ಸಭೆ ನಡೆಸಿದರೂ ಕೆಲಸಗಳನ್ನು ನಿರ್ವಹಿಸುವುದು ಯಾರು? ಯಾವ ಕೆಲಸ ಎಲ್ಲಿಗೆ ಬಂದು ನಿಂತಿದೆ, ಯಾವ ಹಂತ ತಲುಪಿದೆ ಎಂಬುದನ್ನು ಯಾವ ಅಧಿಕಾರಿಗಳಿಗೂ ಗೊತ್ತಿಲ್ಲ. ಅಲ್ಲದೇ ಸಕಾಲದಲ್ಲಿ ಸಾಕಷ್ಟು ಗೊಂದಲ ಸೃಷ್ಟಿಸಲಾಗಿದೆ. ನಿಗದಿತ ಸಮಯದಲ್ಲಿ ಸಕಾಲದ ಅರ್ಜಿಗಳನ್ನು ವಿಲೇವಾರಿ ಮಾಡುತ್ತಿಲ್ಲ ಎಂಬ ಅಪವಾದಗಳಿವೆ. ಕೇಳಿದರೆ ಅಧಿಕಾರಿಗಳು ಸಕಾಲದಲ್ಲಿ ಸಲ್ಲಿಸಿದ ಅರ್ಜಿಗಳಿಗೆ ಯಾವುದೋ ಒಂದು ಕಾರಣ ನೀಡಿ ರದ್ದುಪಡಿಸಲಾಗುತ್ತದೆ. ಯಾವುದೇ ಅರ್ಜಿಗೆ ಮರಳಿ ಉತ್ತರಿಸಬೇಕಿದ್ದಲ್ಲಿ ಅದು ಕಾನೂನಾತ್ಮಕವಾಗಿರಬೇಕು ಎಂದರು.

ಅದೇ ರೀತಿ ಜೆಸ್ಕಾಂ ಮತ್ತು ಗಂಗಾ ಕಲ್ಯಾಣ ಯೋಜನೆ ಅಧಿಕಾರಿಗಳ ಕಾರ್ಯ ವೈಖರಿ ವಿಚಾರಿಸಿ, ಇಲಾಖಾವಾರು ಸಂಪರ್ಕ ಸಾಧಿ ಸಿ ಕೊಳವೆ ಬಾವಿ ಕೊರೆಯುವ ಸ್ಥಳಕ್ಕೆ ಭೇಟಿ ನೀಡಿ ಸಮರ್ಪಕವಾಗಿ ವಿಚಾರಿಸಿ ಜೆಸ್ಕಾಂ ಅಧಿಕಾರಿಗಳನ್ನು ಸಂಪರ್ಕಿಸಿ ವಿದ್ಯುತ್‌ ಸಂಪರ್ಕ ಕಲ್ಪಿಸಿ ಕೆಲಸ ಪೂರ್ಣವಾಗಿಸುವುದು ಯೋಜನೆಯ ಅಧಿಕಾರಿಗಳ ಕೆಲಸ ಎಂದು ಎಚ್ಚರಿಸಿದರು.

ಇದೇ ಸಂದರ್ಭದಲ್ಲಿ ಹಾರಣಗೇರಾ ಕುಡಿಯುವ ನೀರಿನ ಕೊರತೆ ಮತ್ತು ಇತರೆ ದೂರುಗಳನ್ನು ಸ್ವೀಕರಿಸಿ ಸಂಬಂಧಿ ಸಿದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡು ಅವುಗಳನ್ನು ಪರಿಹಾರಕ್ಕೆ ಸೂಚಿಸಿದರು. ಅಲ್ಲದೇ ನಿತ್ಯ ಪತ್ರಿಕೆಯಲ್ಲಿ ಸಾಕಷ್ಟು ಸಮಸ್ಯೆಗಳ ಕುರಿತು ಬರೆಯಲಾಗುತ್ತಿದೆ. ಅವುಗಳತ್ತ ಗಮನ ಹರಿಸಬೇಕು. ಸ್ಥಳ ಪರಿಶೀಲನೆ ಮಾಡುವ ಮೂಲಕ ತಕ್ಷಣ ಪರಿಹಾರಕ್ಕೆ ಮುಂದಾಗಬೇಕು ಎಂದು ತಿಳಿಸಿದರು. ಲೋಕಾಯುಕ್ತ ಪಿಐ ಗುರುರಾಜ, ತಹಶೀಲ್ದಾರ್‌ ಜಗನ್ನಾಥರಡ್ಡಿ, ತಾಪಂ ಇಒ ಜಗನ್ನಾಥ ಮೂರ್ತಿ, ತಾಲೂಕು ಆರೋಗ್ಯ ಅಧಿ ಕಾರಿ ಡಾ| ರಮೇಶ ಗುತ್ತೇದಾರ ಉಪಸ್ಥಿತರಿದ್ದರು. ಸಭೆಯಲ್ಲಿ ಜೆಸ್ಕಾಂ ಎಇಇ ಶಾಂತಪ್ಪ ಪೂಜಾರಿ, ಗೃಹ ಮಂಡಳಿ ಎಇಇ ಶರಣಗೌಡ ಪಾಟೀಲ, ಸಿಡಿಪಿಒ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಸಿಬ್ಬಂದಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.