ವಂದೇ ಭಾರತ ರೈಲಿಗೆ ವರ್ಷ ಪೂರ್ಣ; 92 ಕೋಟಿ ರೂ. ಗಳಿಕೆ
Team Udayavani, Feb 19, 2020, 9:54 PM IST
ಹೊಸದಿಲ್ಲಿ: ಮೇಕ್ ಇನ್ ಯೋಜನೆ ಅಡಿಯಲ್ಲಿ ನಿರ್ಮಿಸಲಾಗಿರುವ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಸೇವೆಗೆ ಒಂದು ವರ್ಷ ಸಂದಿವೆ. ಸಂಪೂರ್ಣ ಸ್ವದೇಶಿ ಖ್ಯಾತಿಯ ಈ ರೈಲು ದಿಲ್ಲಿ-ವಾರಣಾಸಿ ನಡುವೆ ಸಂಚರಿಸುತ್ತಿದೆ. ಶತಾಬ್ಧಿ ಎಕ್ಸ್ಪ್ರೆಸ್ ಬದಲು ಹಳಿಗೆ ಇಳಿದಿದ್ದ ವಂದೇ ಭಾರತ್ ಎಕ್ಸ್ಪ್ರೆಸ್ ಈಗಾಗಲೇ 3.8 ಲಕ್ಷ ಕಿ.ಮೀ. ಸಂಚಾರ ನಡೆಸಿದೆ. ಇದರಿಂದ 92.29 ಕೋಟಿ ರೂ. ಸಂಪಾದಿಸಿದೆ.
ಈ ರೈಲು ಸೋಮವಾರ ಮತ್ತು ಗುರುವಾರ ಹೊರತುಪಡಿಸಿ ಇತರ ದಿನಗಳಲ್ಲಿ ಓಡಾಡುತ್ತಿದ್ದು, ದಿಲ್ಲಿಯಿಂದ ವಾರಾಣಸಿಗೆ 8 ಗಂಟೆಯ ಪ್ರಯಾಣಾವಧಿ ಹೊಂದಿದೆ. ಇದು 16 ಎಸಿ ಬೋಗಿಗಳನ್ನು ಹೊಂದಿದ್ದು, ಅಟೋಮೆಟಿಕ್ ಡೋರ್ಗಳು, ಸ್ಲೈಡಿಂಗ್ ಡೋರ್ಗಳನ್ನು ಹೊಂದಿದೆ. ಈ ರೈಲಿನಲ್ಲಿ ಅತ್ಯಾಧುನಿಕ ಸೌಲಭ್ಯಗಳನ್ನು ಕಲ್ಪಿಸಲಾಗಿದೆ.
ಪ್ರತಿ ಕೋಚ್ನಲ್ಲಿ ಜಿಪಿಎಸ್ ತಂತ್ರಜ್ಞಾನ, ಪ್ರತಿಯೊಂದು ಬೋಗಿಗಳಲ್ಲೂ ಸಿಸಿಟಿವಿ ಕ್ಯಾಮೆರಾಗಳು, ವೈಫೈ ಸೌಲಭ್ಯ ನೀಡಲಾಗಿದೆ. ಇದರೊಂದಿಗೆ ಮನರಂಜನೆಗೆ ಬೇಕಾದ ವ್ಯವಸ್ಥೆ, ಹೊಸ ತಂತ್ರಜ್ಞಾನದ ಮೊಬೈಲ್ ಚಾರ್ಜಿಂಗ್ ಆಯ್ಕೆಗಳು ಇದರಲ್ಲಿದೆ.
ಸಾಮಾನ್ಯ ರೈಲಿನ ಒಂದು ಬೋಗಿಗಳಲ್ಲಿ 78 ಆಸನಗಳ ವ್ಯಸಸ್ಥೆಗಳಿದ್ದರೆ, ವಂದೇ ಭಾರತ್ ಎಕ್ಸ್ಪ್ರೆಸ್ನಲ್ಲಿ 52 ಸುಖಾಸನ ಸೀಟುಗಳನ್ನು ನೀಡಲಾಗಿದೆ. ಅದೇ ರೀತಿ ಟ್ರೈನ್ನ ನಡುವೆ ಎರಡು ಎಕ್ಸಿಕ್ಯೂಟಿವ್ ಕಂಪಾರ್ಟ್ಮೆಂಟ್ ಇದೆ.
ಭಾರತದಲ್ಲಿ ನಿರ್ಮಾಣವಾಗಿರುವ ಅತ್ಯಾಧುನಿಕ ಸೌಲಭ್ಯಗಳನ್ನು ಒಳಗೊಂಡಿರುವ ಈ ಟ್ರೈನ್ ಅನ್ನು ಖರೀದಿಸಲು ಪೆರು, ಇಂಡೋನೇಷ್ಯಾ, ಸಿಂಗಾಪುರ್, ಮಲೇಷ್ಯಾ ಮತ್ತು ಮಧ್ಯಪ್ರಾಚ್ಯದ ಕೆಲವು ರಾಷ್ಟ್ರಗಳು ಆಸಕ್ತಿವಹಿಸಿದೆ ಎಂದು ರೈಲ್ವೇ ಮಂಡಳಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್
MUST WATCH
ಹೊಸ ಸೇರ್ಪಡೆ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ