ಅಧಿಕಾರಿ, ಸಚಿವರ ಅನುಪಸ್ಥಿತಿಗೆ ಪ್ರತಿಪಕ್ಷ ಆಕ್ಷೇಪ


Team Udayavani, Feb 20, 2020, 3:06 AM IST

adhikari-sa

ವಿಧಾನ ಪರಿಷತ್‌: ಅಪರಾಹ್ನ ಕಲಾಪ ಆರಂಭ ಆಗುತ್ತಿದ್ದಂತೆ ಸೂಚಿತ ಅಧಿಕಾರಿಗಳು ಮತ್ತು ನಿರ್ದಿಷ್ಟ ಸಂಖ್ಯೆಯಲ್ಲಿ ಸಚಿವರು ಹಾಜರಾಗದೇ ಇರುವ ಬಗ್ಗೆ ಪ್ರತಿಪಕ್ಷದವರು ಆಕ್ಷೇಪ ವ್ಯಕ್ತಪಡಿಸಿದರು.

ಪ್ರತಿಪಕ್ಷ ನಾಯಕ ಎಸ್‌.ಆರ್‌.ಪಾಟೀಲ್‌ರೊಂದಿಗೆ ಕಾಂಗ್ರೆಸ್‌ ಸದಸ್ಯ ಐವಾನ್‌ ಡಿಸೋಜ, ಅಧಿಕಾರಿಗಳು ಹಾಗೂ ಸಚಿವರ ಅನುಪಸ್ಥಿತಿ ಕುರಿತು ಪ್ರಸ್ತಾಪ ಮಾಡಿದರು. ಆಡಳಿತ ಪಕ್ಷದ ನಾಯಕ ಹಾಗೂ ಸಚಿವ ಕೋಟ ಶ್ರೀನಿವಾಸ ಪೂಜಾರಿ ಎಲ್ಲರೂ ಇನ್ನು ಸ್ವಲ್ಪ ಹೊತ್ತಲ್ಲಿ ಬರುತ್ತಾರೆಂದು ಸಮಜಾಯಿಷಿ ನೀಡಿದರು. ಕಲಾಪದಲ್ಲಿ ಆಡಳಿತ-ಪ್ರತಿಪಕ್ಷ ಸದಸ್ಯರ ಅನುಪಸ್ಥಿತಿಯೂ ಎದ್ದು ಕಾಣುತ್ತಿತ್ತು.

ಸಭಾಪತಿ ಪ್ರತಾಪ್‌ ಚಂದ್ರಶೆಟ್ಟಿ ಅವರು ಆರಂಭದಲ್ಲಿ ನಿಲುವಳಿ ಸೂಚನೆಯಡಿ ಮಾತನಾ ಡಲು ಕಾಂಗ್ರೆಸ್‌ ಸದಸ್ಯ ಪಿ.ಆರ್‌.ರಮೇಶ್‌ರಿಗೆ ಸೂಚಿಸಿದರು. ಹುಬ್ಬಳ್ಳಿ-ಧಾರವಾಡ ಕೆಎಲ್‌ಇ ಕಾಲೇಜಿನ ಮೂವರು ವಿದ್ಯಾರ್ಥಿಗಳು ದೇಶ ದ್ರೋಹ ಹೇಳಿಕೆ ನೀಡಿದ್ದಾರೆ. ಈ ಬಗ್ಗೆ ಕ್ರಮ ಕೈಗೊಂಡಿಲ್ಲ. ಆದರೆ, ಕಾಲೇಜು ಪ್ರಾಂಶುಪಾಲರು ಇವರು ಪ್ರಧಾನಿ ಸ್ಕಾಲರ್‌ ಶಿಪ್‌ ಅಡಿ ಬಂದವರು ಎಂದು ಹೇಳಿದ್ದಾರೆ. ಇದರಿಂದ ಪ್ರಧಾನಿ ಕಾರ್ಯಾಲಯ ವಿಚಾರಣೆಗೆ ಎಳೆಯಬಾರದು ಎಂದು ವಿದ್ಯಾರ್ಥಿಗಳನ್ನು ಬಿಟ್ಟಿದ್ದಾರೆ ಎಂದು ಆರೋಪಿಸಿದರು.

ಇದೇ ಸಂದರ್ಭ ಆಡಳಿತ ಮತ್ತು ಪ್ರತಿಪಕ್ಷದ ಸದಸ್ಯರ ನಡುವೆ ಕೆಲಕಾಲ ಆರೋಪ, ಪ್ರತ್ಯಾರೋಪ ಕೇಳಿಬಂತು. ವಿದ್ಯಾರ್ಥಿಗಳ ವಿರುದ್ಧ ಕ್ರಮ ಕೈಗೊಂಡಿಲ್ಲ ಏಕೆ ಎಂದು ಪ್ರತಿಪಕ್ಷ ಕಾಂಗ್ರೆಸ್‌, ಜೆಡಿಎಸ್‌ ಸದಸ್ಯರು ಆಗ್ರಹಿಸಿದರೆ, ಪ್ರಧಾನಿ ಕಾರ್ಯಾಲಯ ಎಲ್ಲವನ್ನೂ ಪರಿಶೀಲನೆ ಮಾಡಲು ಆಗಲ್ಲ ಎಂದು ಆಡಳಿತ ಪಕ್ಷದವರು ವಾದಿಸಿದರು.

ಅಮಾಯಕರನ್ನು ಗೋಲಿಬಾರ್‌ ಮಾಡಿ ಸಾಯಿಸಿ ದೇಶದ್ರೋಹ ಪ್ರಕರಣ ಹೇರಿದ್ದಾರೆ. ಎಷ್ಟು ಸರಿ ಎಂದು ಪ್ರತಿಪಕ್ಷ ನಾಯಕರು ಆಡಳಿತ ಪಕ್ಷದ ವಿರುದ್ಧ ಮುಗಿಬಿದ್ದರು. ನೈತಿಕ-ಅನೈತಿಕ ಎಂಬ ಮಾತು ಎರಡೂ ಕಡೆಯಿಂದ ಕೇಳಿಬಂತು. 15 ನಿಮಿಷ ಗದ್ದಲದ ನಂತರ ತಿಳಿಯಾಗುತ್ತಾ ಬಂದಾಗ ಬಿಜೆಪಿ ಸದಸ್ಯರು ಪ್ರತಿಪಕ್ಷಗಳು ಸದನದಲ್ಲಿ ಸಂಘ ಪರಿವಾರದ ಹೆಸರು ಪ್ರಸ್ತಾಪಿಸಿದ್ದು ಸರಿಯಲ್ಲ ಎಂದರು.

ಕಾಂಗ್ರೆಸ್‌ ಸದಸ್ಯ ನಾರಾಯಣಸ್ವಾಮಿ ಮಾತನಾಡಿ, ಮಂಗಳೂರು ಗಲಭೆ ವೇಳೆ ಪೊಲೀಸರು ಸೋಡಾ ಬಾಟಲಿ ಬಳಸಿದ್ದಾರೆಂಬ ಪದಕ್ಕೆ, ಅನಿವಾರ್ಯ ಸಂದರ್ಭ ಪ್ರಾಣ ರಕ್ಷಣೆಗೆ ಬಳಸಿದ್ದರೂ ಬಳಸಿರಬಹುದು ಎಂಬ ಹೇಳಿಕೆಯನ್ನು ಆಡಳಿತ ಪಕ್ಷದ ನಾಯಕರು ನೀಡಿದರು. ಆದರೆ ಪೊಲೀಸರ ಕೈಲಿ ಲಾಠಿ ಇರುತ್ತದೆ. ಯಾರೋ ಎಸೆದ ಸೋಡಾ ಬಾಟಲಿ ಬಳಸುವ ಅವಶ್ಯಕತೆ ಇಲ್ಲ. ಲಾಠಿಯಿಂದ ಹೊಡೆದು ಪ್ರಾಣ ರಕ್ಷಿಸಿಕೊಳ್ಳಬಹುದು.

ಇಂತಹ ಪೊಲೀಸರನ್ನು ನಾನೆಲ್ಲೂ ಕಂಡಿಲ್ಲ. ಸೋಡಾ ಬಾಟಲಿ, ಕಲ್ಲು ಬಳಕೆ ಸರಿಯಲ್ಲ, ಪೊಲೀಸರ ಮೇಲೆ ನಮಗೂ ಗೌರವಿದೆ ಎಂದರು. ಸಚಿವ ಬಿ.ಸಿ.ಪಾಟೀಲ್‌ ಮಾತನಾಡಿ, ಕೈಲಿ ಬಾಟಲಿ ಹಿಡಿದಿದ್ದರು ಎಂದಿದ್ದಾರೆ, ಹೊಡೆದಿದ್ದಾರೆ ಎಂದಿಲ್ಲ ಎಂಬ ಸಮಜಾಯಿಷಿ ನೀಡಿದರು. ಸಭಾ ನಾಯಕ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ಆ ಕಡೆಯಿಂದ ಬಂದಿರುವ ಬಾಟಲಿಯನ್ನು ಕೈಯಲ್ಲಿ ಹಿಡಿದಿದ್ದಿರಬಹುದು ಎಂದು ಹೇಳಿದರು.

ಟಾಪ್ ನ್ಯೂಸ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.