ತ್ಯಾಜ್ಯ ವಿಲೇವಾರಿ ಘಟಕ ಸ್ಥಗಿತಕ್ಕೆ ಹೈ ಸೂಚನೆ


Team Udayavani, Feb 20, 2020, 3:05 AM IST

tyjya

ಬೆಂಗಳೂರು: ನಗರದ ಮಹಾಲಕ್ಷ್ಮೀಪುರದ 2ನೇ ಹಂತದ ವಸತಿ ಪ್ರದೇಶದಲ್ಲಿ ಆರಂಭಿಸಿರುವ ತಾಜ್ಯ ವಿಂಗಡಣೆ ಮತ್ತು ವಿಲೇವಾರಿ ಘಟಕವನ್ನು ಒಂದು ತಿಂಗಳಲ್ಲಿ ಸ್ಥಗಿತಗೊಳಿಸಬೇಕು ಬಿಬಿಎಂಪಿಗೆ ಹೈಕೋರ್ಟ್‌ ಬುಧವಾರ ನಿರ್ದೇಶಿಸಿದೆ.

ತ್ಯಾಜ್ಯ ಘಟಕವನ್ನು ಸ್ಥಳಾಂತರಿಸಲು ಬಿಬಿಎಂಪಿಗೆ ನಿರ್ದೇಶಿಸುವಂತೆ ಕೋರಿ ಮಹಾಲಕ್ಷ್ಮೀಪುರ 2ನೇ ಹಂತದ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಮುಖ್ಯ ನ್ಯಾಯಮೂರ್ತಿ ಎ.ಎಸ್‌.ಓಕಾ ನೇತೃತ್ವದ ವಿಭಾಗೀಯ ನ್ಯಾಯಪೀಠದ ಮುಂದೆ ವಿಚಾರಣೆಗೆ ಬಂದಿತ್ತು.

ಈ ವೇಳೆ ಕರ್ನಾಟಕ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಪರ ವಕೀಲರು, ಈ ಘಟಕ ಆರಂಭಿಸಲು ಬಿಬಿಎಂಪಿಯು ಮಂಡಳಿಯಿಂದ ಪೂರ್ವಾನುಮತಿ ಪಡೆದಿಲ್ಲ. ಘಟಕವು ವಸತಿ ಪ್ರದೇಶದ 100 ಮೀ. ವ್ಯಾಪ್ತಿಯೊಳಗೆ ಇದೆ ಎಂದು ತಿಳಿಸಿದರು. ಇದನ್ನು ಪರಿಗಣಿಸಿದ ನ್ಯಾಯಪೀಠ, ಘಟಕ ಆರಂಭಿಸಲು ಮಂಡಳಿಯಿಂದ ಪೂರ್ವಾನುಮತಿ ಪಡೆದಿಲ್ಲ.

ಇದು ಕಾನೂನು ಬಾಹಿರ ಕ್ರಮವಾಗಿದೆ. ಆದ್ದರಿಂದ ಒಂದು ತಿಂಗಳಲ್ಲಿ ಘಟಕದ ಎಲ್ಲಾ ಕಾರ್ಯ ಚಟುವಟಿಕೆ ಸ್ಥಗಿತಗೊಳಿಸಬೇಕು. ನಂತರ ಘಟಕವನ್ನು ಮುಂದುರಿಸಬೇಕೆಂದು ಉದ್ದೇಶಿಸಿದರೆ, ಅದಕ್ಕಾಗಿ ಅನುಮತಿ ಕೋರಿ ಮಂಡಳಿಗೆ ಕಾನೂನು ಪ್ರಕಾರ ಸೂಕ್ತ ಅರ್ಜಿ ಸಲ್ಲಿಸಬೇಕು.

ಒಂದೊಮ್ಮೆ ಘಟಕದ ಕಾರ್ಯ ಚಟುವಟಿಕೆಗಳನ್ನು ಮುಂದುವರಿಸದಿದ್ದರೆ, ಅದರ ಜಾಗವನ್ನು ಆಟದ ಮೈದಾನವಾಗಿ ಪರಿವರ್ತಿಸಬೇಕೆಂಬ ಅರ್ಜಿದಾರರ ಮನವಿಯನ್ನು ಪರಿಗಣಿಸಬೇಕು ಎಂದು ಬಿಬಿಎಂಪಿಗೆ ಸೂಚಿಸಿ ಅರ್ಜಿ ಇತ್ಯರ್ಥಪಡಿಸಿತು. ಮಹಾಲಕ್ಷ್ಮೀಪುರಂನ 2ನೇ ಹಂತದಲ್ಲಿ ಸರ್ವೇ ನಂಬರ್‌ 31/4ರಲ್ಲಿನ 1021 ಚ.ಮೀ. ವಿಸ್ತೀರ್ಣದ ನಿವೇಶನದಲ್ಲಿ ತ್ಯಾಜ್ಯ ಸಂಗ್ರಹಣೆ, ವಿಂಗಡಣೆ ಮತ್ತು ವಿಲೇವಾರಿ ಘಟಕವನ್ನು ಬಿಬಿಎಂಪಿ ಆರಂಭಿಸಿದೆ.

ಆದರೆ, ಘಟಕದ ಸುತ್ತಮುತ್ತ ಜನ ವಸತಿ ಪ್ರದೇಶವಿದೆ. ಅಲ್ಲದೆ, ಶಾಲೆ, ಆಸ್ಪತ್ರೆ, ವಾಣಿಜ್ಯ ಮಳಿಗೆ ಹಾಗೂ ಚಿತ್ರಮಂದಿರಗಳಿವೆ. ಘಟಕದಿಂದ ಸುತ್ತಮುತ್ತಲಿನ ಪರಿಸರ ಮಾಲಿನ್ಯವಾಗುತ್ತಿದೆ. ಸೊಳ್ಳೆಗಳ ಕಾಟ ಹೆಚ್ಚಾಗಿದೆ. ಹೀಗಾಗಿ ಘಟಕವನ್ನು ಸ್ಥಳಾಂತರಿಸಬೇಕು. ಸ್ಥಳಾಂತರದ ಬಳಿಕ ಆ ಜಾಗವನ್ನು ಆಟದ ಮೈದಾನವಾಗಿ ಮಾರ್ಪಡಿಸಿಕೊಡಲು ಬಿಬಿಎಂಪಿಗೆ ನೀರ್ದೇ ಶಿಸಬೇಕು ಎಂದು ಅರ್ಜಿದಾರರು ಕೋರಿದ್ದರು.

ಪಾಲಿಕೆಗೆ ನ್ಯಾಯಪೀಠದ ಸೂಚನೆಗಳು
-ಘಟಕ ಆರಂಭಿಸಲು ಮಂಡಳಿಯಿಂದ ಪೂರ್ವಾನುಮತಿ ಪಡೆಯದಿರುವುದು ಕಾನೂನು ಬಾಹಿರ ಕ್ರಮ.

-ಒಂದು ತಿಂಗಳಲ್ಲಿ ಘಟಕದ ಎಲ್ಲಾ ಕಾರ್ಯ ಚಟುವಟಿಕೆ ಸ್ಥಗಿತಗೊಳಿಸಬೇಕು.

-ಬಳಿಕ ಘಟಕ ಮುಂದುರಿಸಲು ಅನುಮತಿ ಕೋರಿ ಮಂಡಳಿಗೆ ಕಾನೂನು ಪ್ರಕಾರ ಅರ್ಜಿ ಸಲ್ಲಿಸಬೇಕು.

-ಒಂದೊಮ್ಮೆ ಘಟಕದ ಕಾರ್ಯ ಚಟುವಟಿಕೆಗಳನ್ನು ಮುಂದುವರಿಸದಿದ್ದರೆ, ಅದರ ಜಾಗವನ್ನು ಆಟದ ಮೈದಾನವಾಗಿ ಪರಿವರ್ತಿಸಬೇಕು.

ಟಾಪ್ ನ್ಯೂಸ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.