ಪೆಟ್ಟಿಗೆ ಅಂಗಡಿ ತೆರವು ಕಾರ್ಯಾಚರಣೆ
ತಾಲೂಕು ಆಡಳಿತ-ತಾಪಂ-ಪುರಸಭೆ ಅಧಿಕಾರಿಗಳು-ಪೊಲೀಸರ ಸಹಕಾರ
Team Udayavani, Feb 20, 2020, 6:02 PM IST
ತರೀಕೆರೆ: ಪಟ್ಟಣದ ತಾಲೂಕು ಪಂಚಾಯಿತಿ ಮುಂಭಾಗ, ಸಾರ್ವಜನಿಕ ಆಸ್ಪತ್ರೆ ಮಾರ್ಗದಲ್ಲಿದ್ದ ಮತ್ತು ಬಯಲುರಂಗ ಮಂದಿರದಲ್ಲಿ ಹಾಕಿಕೊಂಡಿದ್ದ ಪೆಟ್ಟಿಗೆ ಅಂಗಡಿ, ದೂಡುವ ಕೈಗಾಡಿಗಳನ್ನು ತಾಲೂಕು ಆಡಳಿತ, ತಾಲೂಕು ಪಂಚಾಯಿತಿ ಮತ್ತು ಪುರಸಭೆ ಅಧಿಕಾರಿಗಳು ಪೊಲೀಸರ ಸಹಕಾರದೊಂದಿಗೆ ತೆರವುಗೊಳಿಸಿದರು.
ಬುಧವಾರ ಬೆಳಗ್ಗೆ 6 ಗಂಟೆಗೆ ಆರಂಭಗೊಂಡ ಕಾರ್ಯಾಚರಣೆ ಮಧ್ಯಾಹ್ನದ ವರೆಗೂ ನಡೆಯಿತು. ಅಂಗಡಿ ಹಾಕಿಕೊಂಡಿದ್ದ ಮಾಲಿಕರು ಪ್ರತಿಭಟನೆ ನಡೆಸಲು ಮುಂದಾದರು. ಆದರೆ, ವಿರೋಧವನ್ನು ಲೆಕ್ಕಿಸದೆ ತೆರವುಗೊಳಿಸಲಾಯಿತು. ಕೆಲವರು ತಮ್ಮ ಅಂಗಡಿಗಳನ್ನು ತಾವೇ ತೆರವುಗೊಳಿಸಲು ಮುಂದಾದರು.
ವಿರೋಧ ವ್ಯಕ್ತಪಡಿಸಿದವರ ಅಂಗಡಿಗಳನ್ನು ಜೆಸಿಬಿ ಯಂತ್ರದ ಮೂಲಕ ತೆರವುಗೊಳಿಸಲಾಯಿತು. 11 ವರ್ಷಗಳಿಂದಲೂ ಬೀದಿ ಬದಿಯಲ್ಲಿ ಅಂಗಡಿಗಳನ್ನು ಹಾಕಿಕೊಂಡು ಜೀವನಕ್ಕೆ ಆಧಾರ ಮಾಡಿಕೊಂಡಿದ್ದವರು ಅನೇಕರು. ಇವರಲ್ಲಿ ಬಹುತೇಕರು ಹಿಂದುಳಿದ ಮತ್ತು ಅಲ್ಪಸಂಖ್ಯಾತ ವರ್ಗಕ್ಕೆ ಸೇರಿದವರು ಮತ್ತು ಬಡವರು ಎಂಬುದು ಗಮನಾರ್ಹ. ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ನೀಡಿದ ಲಿಖೀತ ದೂರಿನ ಹಿನ್ನೆಲೆಯಲ್ಲಿ ಅಂಗಡಿಗಳನ್ನು ತೆರವುಗೊಳಿಸಲಾಗಿದೆ ಎಂದು ತಿಳಿದು ಬಂದಿದೆ. ಕಾರ್ಯಾಚರಣೆ ಯಲ್ಲಿ ಪುರಸಭೆಯ ಸಿಬ್ಬಂದಿ, ಸ್ಥಳೀಯ ಪೊಲೀಸರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ
Hindutva ಮತ್ತು ಹಿಂದೂಗಳಿಗೆ ಒಳ್ಳೆಯದಾಗಲಿ: ದೇವರ ಹುಂಡಿಗೆ ಪತ್ರ!
Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ
Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು
Chikkamagaluru: ಹೊರನಾಡು ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ವಸ್ತ್ರ ಸಂಹಿತೆ ಜಾರಿ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.