ಪೈಪ್‌ಲೈನ್‌ ಕಾಮಗಾರಿ ಅವೈಜ್ಞಾನಿಕ


Team Udayavani, Feb 20, 2020, 6:12 PM IST

20-February-29

ಮೊಳಕಾಲ್ಮೂರು: ಪಟ್ಟಣದ ಕೋನಸಾಗರ ರಸ್ತೆ ಬದಿಯಲ್ಲಿ ಕೈಗೊಂಡಿರುವ ತುಂಗಾ ಹಿನ್ನೀರು ಯೋಜನೆಯ ಪೈಪ್‌ ಲೈನ್‌ ಕಾಮಗಾರಿ ಅವೈಜ್ಞಾನಿಕವಾಗಿದೆ ಎಂದು ಆರೋಪಿಸಿ ಪಟ್ಟಣ ಪಂಚಾಯತ್‌ ಸದಸ್ಯರು ಕಾಮಗಾರಿಯನ್ನು ತಡೆಯೊಡ್ಡಿ ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಪಟ್ಟಣ ಪಂಚಾಯತ್‌ ಸದಸ್ಯ ಎಂ. ಅಬ್ದುಲ್ಲಾ, ರಸ್ತೆ ಮಧ್ಯದಿಂದ 21 ಮೀಟರ್‌ ಅಂತರದಲ್ಲಿ ಪೈಪ್‌ಲೈನ್‌ ಅಳವಡಿಸಬೇಕೆಂಬ ನಿಯಮವಿದೆ. ಆದರೆ ರಸ್ತೆಯ ಬದಿಯ 10 ಅಡಿ ಅಂತರದಲ್ಲಿಯೇ ಪೈಪ್‌ಲೈನ್‌ ಹಾಕುತ್ತಿರುವುದು ಅವೈಜ್ಞಾನಿಕವಾಗಿದೆ. ಟೌನ್‌ ವ್ಯಾಪ್ತಿಗೆ ಬರುವ ಈ ರಸ್ತೆ ಬದಿಯ 10 ಅಡಿ ಅಂತರದಲ್ಲಿ ಪೈಪ್‌ ಲೈನ್‌ ಹಾಕಿದರೆ ವ್ಯರ್ಥವಾಗುತ್ತದೆ. ಹಾಗಾಗಿ ಮುಂದಿನ ದಿನಗಳಲ್ಲಿ ಈ ಯೋಜನೆ ವಿಫಲವಾಗಲಿದೆ. ಈ ರಸ್ತೆ ರಾಜ್ಯ ಹೆದ್ದಾರಿಗೆ ಒಳಪಟ್ಟಿದ್ದು 21 ಮೀಟರ್‌ ಅಂತರದಲ್ಲಿ ಕಾಮಗಾರಿ ಕೈಗೊಳ್ಳದೆ ರಸ್ತೆ ಸಮೀಪದಲ್ಲಿ ಪೈಪ್‌ ಲೈನ್‌ ಹಾಕಿದರೆ ಮುಂದಿನ ದಿನಗಳಲ್ಲಿ ರಸ್ತೆ ಅಗಲೀಕರಣವಾಗುವಾಗ ಈ ಯೋಜನೆಯಿಂದ ಜನರಿಗೆ ತೊಂದರೆಯಾಗುತ್ತದೆ. ಆದ್ದರಿಂದ ಈ ಕಾಮಗಾರಿಯನ್ನು ಸಮರ್ಪಕವಾಗಿ ಕೈಗೊಳ್ಳಬೇಕೆಂದು ಒತ್ತಾಯಿಸಿದರು.

ತುಂಗಾ ಹಿನ್ನೀರಿನ ಕಾಮಗಾರಿ ಯೋಜನೆಯ ಮೆಗಾ ಕನ್ಸ್ಟ್ರಕ್ಷನ್‌ ಯೋಜನಾ ವ್ಯವಸ್ಥಾಪಕ ಪೊನ್ನುಸ್ವಾಮಿ ಮಾತನಾಡಿ, ಈಗಾಗಲೇ ಹಾನಗಲ್‌ ಹಾಗೂ ಇನ್ನಿತರ ಗ್ರಾಮೀಣ ಪ್ರದೇಶಗಳ ರಸ್ತೆ ಬದಿಯಲ್ಲಿ ಕಾಮಗಾರಿ ಕೈಗೊಳ್ಳಲು ಲೋಕೋಪಯೋಗಿ ಇಲಾಖೆಯಿಂದ ಅನುಮತಿ ಪಡೆದು ಮಾಡಿದಂತೆ ಈ ರಸ್ತೆಯಲ್ಲಿ ಕಾಮಗಾರಿ ಕೈಗೊಳ್ಳಲಾಗಿದೆ. ಈ ರಸ್ತೆಯಿಂದ ಕೋನಸಾಗರ ಗ್ರಾಮದ ಮಾರ್ಗವಾಗಿ ಹೋಗುವ ಪೈಪ್‌ಲೈನ್‌ ಕಾಮಗಾರಿ ಕೈಗೊಂಡಿದ್ದು, ಕೂಡಲೇ ರಸ್ತೆಯ ನಿಯಮದಂತೆ ಪಟ್ಟಣ ಪಂಚಾಯತ್‌ ಅನುಮತಿ ಪಡೆದು ಕಾಮಗಾರಿ ಕೈಗೊಳ್ಳಲಾಗುವುದೆಂದು ತಿಳಿಸಿದರು.

ಪಟ್ಟಣ ಪಂಚಾಯತ್‌ ಇಂಜಿನಿಯರ್‌ ರೇವಣಸಿದ್ದೇಶ್ವರ ಮಾತನಾಡಿ, ಪಟ್ಟಣದ ವ್ಯಾಪ್ತಿಗೊಳಪಡುವ ಈ ರಸ್ತೆಯಲ್ಲಿ ಕಾಮಗಾರಿ ಕೈಗೊಳ್ಳುವ ಮುನ್ನ ಪಪಂ ಗಮನಕ್ಕೆ ತಂದು ಅನುಮತಿ ಪಡೆಯಬೇಕಿದೆ. ಕುಡಿಯುವ ನೀರಿನ ಈ ಯೋಜನೆ
ಶಾಶ್ವತವಾಗಿದ್ದು, ನಿಯಮಾನುಸಾರ 21 ಮೀಟರ್‌ ಅಂತರದಲ್ಲಿ ಕಾಮಗಾರಿ ಕೈಗೊಳ್ಳುವಂತೆ ಸೂಚಿಸಿದರು. ಪಟ್ಟಣ ಪಂಚಾಯತ್‌ ಸದಸ್ಯರಾದ ಟಿ.ಟಿ. ರವಿಕುಮಾರ್‌, ನಬಿಲ್‌ ಅನ್ಸರ್‌, ಗ್ರಾಮೀಣ ಕುಡಿಯುವ ನೀರಿನ ಇಲಾಖೆ ಸಹಾಯಕ ಅಭಿಯಂತರ ಪವನ್‌, ಮುಖಂಡರಾದ ಡಿಶ್‌ ರಾಜ್‌, ಗೋಪಾಲ್‌, ಓಬಣ್ಣ ಮೊದಲಾದವರು ಇದ್ದರು.

ಟಾಪ್ ನ್ಯೂಸ್

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.