ಸಿಹಿಗೂ ಸೈ, ಸಾಂಬಾರಿಗೂ ಜೈ; ಇದು ಪೈನಾಪಲ್ ಪಾಕ ಲೋಕ!


ಶ್ರೀರಾಮ್ ನಾಯಕ್, Aug 13, 2020, 7:00 PM IST

pineapple–750

ಪೈನಾಪಲ್(ಅನಾನಸ್)ಕೇವಲ ಹಣ್ಣಿನ ರೂಪದಲ್ಲಿ ಅಥವಾ ಪಾನೀಯ ರೂಪದಲ್ಲಿ ಮಾತ್ರ ಉಪಯೋಗಿಸುತ್ತಾರೆ. ಅದರಿಂದ ವಿಶೇಷವಾದ ಅಡುಗೆ ಮತ್ತು ತಿಂಡಿ ಮಾಡಬಹುದೆಂದು ಅನೇಕರಿಗೆ ತಿಳಿದಿರಲಾರದು. ಹೇರಳವಾದ ಮಿಟಮಿನ್ ಸಿ, ಕಬ್ಬಿಣಾಂಶ, ನಾರಿನಂಶ ಹಾಗೂ ಕಡಿಮೆ ಕೊಬ್ಬಿನಾಂಶ ಹೊಂದಿರುವ ಪೈನಾಪಲ್ ಹಣ್ಣಿನಿಂದ ಹಲವಾರು ರೆಸಿಪಿ ಮಾಡಬಹುದು. ಕೇವಲ ಸಿಹಿಯೊಂದೇ ಅಲ್ಲ, ಅನ್ನಕ್ಕೆ ಮತ್ತು ಚಪಾತಿಗೆ ಹೊಂದುವ ರುಚಿಯಾದ ಪದಾರ್ಥಗಳನ್ನು ತಯಾರಿಸ ಬಹುದು. ಹಾಗಿದ್ದರೆ ಇನ್ನೇಕೆ ತಡ ಪೈನಾಪಲ್ ನಿಂದ ತಯಾರಿಸಬಹುದಾದ ಕೆಲವೊಂದು ರೆಸಿಪಿಗಳು ಇಲ್ಲಿವೆ…..

ಪೈನಾಪಲ್ ಕೇಸರಿ ಬಾತ್
ಬೇಕಾಗುವ ಸಾಮಗ್ರಿ
ಬಾಂಬೆ (ಚಿರೋಟಿ)ರವೆ 1ಕಪ್, ಸಕ್ಕರೆ 2 ಕಪ್, ಪೈನಾಪಲ್ ನ ತುರಿ 1ಕಪ್ , ತುಪ್ಪ  4 ಚಮಚ, ಹಾಲು 2 ಕಪ್, ಕೇಸರಿ ಬಣ್ಣ, ಏಲಕ್ಕಿ ಪುಡಿ ಸ್ವಲ್ಪ, ದ್ರಾಕ್ಷಿ, ಗೋಡಂಬಿ ಸ್ವಲ್ಪ.

ತಯಾರಿಸುವ ವಿಧಾನ
ಬಾಂಬೆ ರವೆಯನ್ನು ಸ್ವಲ್ಪ ತುಪ್ಪ ಹಾಕಿ ಪರಿಮಳ ಬರುವವರೆಗೆ ಹುರಿದಿಟ್ಟುಕೊಳ್ಳಿ. 2 ಕಪ್ ಹಾಲನ್ನು ಕುದಿಯಲು ಇಟ್ಟು ಅದಕ್ಕೆ ಕೇಸರಿ ಬಣ್ಣವನ್ನು ಹಾಕಿರಿ. ನಂತರ ಹುರಿದಿಟ್ಟ ರವೆಯನ್ನು ಹಾಕಿ. ರವೆ ಚೆನ್ನಾಗಿ ಬೆಂದ ನಂತರ ಸಕ್ಕರೆ , ಪೈನಾಪಲ್ ತುರಿ, ತುಪ್ಪವನ್ನು ಹಾಕಿರಿ. ಸ್ವಲ್ಪ ಹೊತ್ತು ಮುಚ್ಚಿಟ್ಟು ಸಣ್ಣ ಉರಿಯಲ್ಲಿ ಇಡಿ. ನಂತರ ಏಲಕ್ಕಿ ಪುಡಿ, ತುಪ್ಪದಿಲ್ಲಿ ಹುರಿದ ಗೋಡಂಬಿ, ದ್ರಾಕ್ಷಿಯನ್ನು ಹಾಕಿರಿ. ಬಿಸಿ ಬಿಸಿಯಾದ ಪೈನಾಪಲ್ ಕೇಸರಿ ಬಾತ್ ಸವಿಯಲು ಸಿದ್ಧ.

ಪೈನಾಪಲ್ ಮೆಣಸುಕಾಯಿ
ಬೇಕಾಗುವ ಸಾಮಗ್ರಿ
ಪೈನಾಪಲ್ 1 ಕಪ್, ಬೆಲ್ಲ ಸ್ವಲ್ಪ, ಒಣಮೆಣಸು 6 ರಿಂದ 8, ಉದ್ದಿನ ಬೇಳೆ 3 ಚಮಚ, ದನಿಯಾ 2 ಚಮಚ, ಎಳ್ಳು 3 ಚಮಚ, ಅರಶಿನ ಪುಡಿ ಸ್ವಲ್ಪ, ಹುಣಸೇ ಹುಳಿ ಒಂದು ಲಿಂಬೆ ಗಾತ್ರದಷ್ಟು, ಕರಿಬೇವು, ಎಣ್ಣೆ ಸ್ವಲ್ಪ, ತೆಂಗಿನ ಕಾಯಿ ತುರಿ 2ಕಪ್, ಉಪ್ಪು ರುಚಿಗೆ ತಕ್ಕಷ್ಟು.

ತಯಾರಿಸುವ ವಿಧಾನ
ಮೊದಲು ಎಳ್ಳನ್ನು (ಎಣ್ಣೆ ಹಾಕದೇ)ಹುರಿಯಿರಿ. ದನಿಯಾ, ಕರಿಬೇವನ್ನು ಎಣ್ಣೆ ಹಾಕಿ ಹುರಿಯಿರಿ. ಎಲ್ಲವನ್ನು ಮಿಕ್ಸಿಗೆ ಹಾಕಿ ತೆಂಗಿನ ತುರಿಯೊಂದಿಗೆ ರುಬ್ಬಿಕೊಳ್ಳಿ. ಹುಣಸೇ ರಸ, ಉಪ್ಪು, ಅರಶಿನ ಪುಡಿ, ಬೆಲ್ಲವನ್ನು ಒಂದು ಪಾತ್ರೆಯಲ್ಲಿ ಹಾಕಿ ಕುದಿಯಲು ಇಡಿ. ಕುದಿಯುವ ಮಿಶ್ರಣಕ್ಕೆ ಪೈನಾಪಲ್ ಹೋಳುಗಳನ್ನು ಹಾಕಿ ಅನಂತರ ರುಬ್ಬಿಟ್ಟ ಮಸಾಲೆಯನ್ನು ಹಾಕಿ ಕುದಿಸಿ ಇದಕ್ಕೆ ಕರಿಬೇವು ಸೇರಿಸಿದ ಸಾಸಿವೆ ಒಗ್ಗರಣೆ ಹಾಕಿರಿ. ಪೈನಾಪಲ್ ಮೆಣಸಿನಕಾಯಿ ಸವಿಯಲು ಸಿದ್ಧ. ಆನ್ನಕ್ಕೆ ಮಾತ್ರವಲ್ಲದೆ ಚಪಾತಿ, ದೋಸೆಗಳಿಗೂ ಇದು ರುಚಿಕರ.

ಪೈನಾಪಲ್ ಸಾಸಿವೆ
ಬೇಕಾಗುವ ಸಾಮಗ್ರಿ
ಪೈನಾಪಲ್ 1ಕಪ್, ಬೆಲ್ಲ 2 ಚಮಚ, ತೆಂಗಿನ ತುರಿ ಅರ್ಧ ಕಪ್, ಸಾಸಿವೆ 2 ಚಮಚ, ಒಣಮೆಣಸು 3ರಿಂದ 5, ರುಚಿಗೆ ತಕ್ಕಷ್ಟು ಉಪ್ಪು.

ತಯಾರಿಸುವ ವಿಧಾನ
ಸಣ್ಣಗೆ ಹೆಚ್ಚಿದ ಪೈನಾಪಲ್ ಹಣ್ಣಿನ ಹೋಳುಗಳಿಗೆ ಬೆಲ್ಲವನ್ನು ಬೆರೆಸಿಡಿ. ತೆಂಗಿನ ತುರಿಗೆ ಸಾಸಿವೆ ಹಾಗೂ ಒಣ ಮೆಣಸನ್ನು ಸೇರಿಸಿ ನುಣ್ಣಗೆ ರುಬ್ಬಿ. ಪೈನಾಪಲ್ ಹೋಳುಗಳಿಗೆ ಸೇರಿಸಿ. ಇದಕ್ಕೆ ರುಚಿಗೆ ಬೇಕಷ್ಟು ಉಪ್ಪು ಮತ್ತು ನೀರು ಸೇರಿಸಿ ಹದ ಮಾಡಿಕೊಳ್ಳಿ. ಈಗ ರುಚಿಕರವಾದ ಪೈನಾಪಲ್ ಸಾಸಿವೆ ಸವಿಯಲು ಸಿದ್ಧ. ಚಪಾತಿ, ಅನ್ನದ ಜೊತೆ ಸೇರಿಸಿ ಸವಿಯಬಹುದು.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.