ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಭೂಸ್ವಾಧೀನ ಚುರುಕು; ಡಿ.ಸಿ. ನಿರ್ದೇಶ

ಕಾಸರಗೋಡು-ಮಂಜೇಶ್ವರ: ಶೇ.40ಕ್ಕೂ ಹೆಚ್ಚು ಭೂಸ್ವಾಧೀನ ಬಾಕಿ

Team Udayavani, Feb 20, 2020, 10:58 PM IST

Kasaragod-Manjeshwar

ಸಾಂದರ್ಭಿಕ ಚಿತ್ರ..

ಕಾಸರಗೋಡು: ಈಗಾಗಲೇ ವಿಳಂಬವಾಗಿರುವ ರಾಷ್ಟ್ರೀಯ ಹೆದ್ದಾರಿ ಯನ್ನು ಚತುಷ್ಪಥಗೊಳಿಸುವ ಯೋಜ ನೆಗೆ ಅಗತ್ಯದ ಭೂಸ್ವಾಧೀನ ಚುರುಕು ಗೊಳಿಸಲು ಜಿಲ್ಲಾಧಿಕಾರಿ ಡಾ| ಡಿ. ಸಜಿತ್‌ ಬಾಬು ನಿರ್ದೇಶ ನೀಡಿದ್ದಾರೆ. ಭೂಸ್ವಾ ಧೀನ ಪ್ರಕ್ರಿಯೆಯನ್ನು ಶೀಘ್ರವೇ ಪೂರ್ತಿಗೊಳಿ ಸುವಂತೆ ನಿರ್ದೇಶದಲ್ಲಿ ತಿಳಿಸಲಾಗಿದೆ.

ಕಾಸರಗೋಡು ಮತ್ತು ಮಂಜೇಶ್ವರ ತಾಲೂಕುಗಳಲ್ಲಿ ಸುಮಾರು ಒಂದು ಸಾವಿರದಷ್ಟು ಮಂದಿಯ ಭೂಸ್ವಾಧೀನ ಪ್ರಕ್ರಿಯೆ ನಡೆಸಲು ಬಾಕಿಯಿದೆ. ಸರಕಾರ ತೀರ್ಮಾನಿಸಿದ ನಷ್ಟ ಪರಿಹಾರವನ್ನು ನಿರ್ಣ ಯಿಸುವ ಕೆಲಸ ಇನ್ನೂ ಅಂತಿಮ ಗೊಂಡಿಲ್ಲ. ಹೊಸದುರ್ಗ ತಾಲೂಕಿನಲ್ಲಿ ಭೂಸ್ವಾಧೀನಕ್ಕೆ ಇನ್ನು ಕೇವಲ ಶೇ. 5ರಷ್ಟು ಬಾಕಿಯಿದೆ. ಆದರೆ ಕಾಸರಗೋಡು ಮತ್ತು ಮಂಜೇಶ್ವರ ತಾಲೂಕಿನಲ್ಲಿ ಶೇ.40 ಕ್ಕೂ ಹೆಚ್ಚು ಭೂಸ್ವಾಧೀನ ಬಾಕಿಯಿದೆ. ಚತುಷ್ಪಥ ರಸ್ತೆ ಅಭಿವೃದ್ಧಿಗೆ ಸ್ಥಳ ಬಿಟ್ಟುಕೊಟ್ಟ ಎಲ್ಲರಿಗೂ ನಷ್ಟ ಪರಿಹಾರ ಶೀಘ್ರವೇ ನೀಡುವಂತೆ ಜಿಲ್ಲಾಧಿಕಾರಿ ಡಾ|ಡಿ.ಸಜಿತ್‌ಬಾಬು ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶ ನೀಡಿದ್ದಾರೆ.ತಿರುವನಂತಪುರದಲ್ಲಿ ಸಚಿವ ಜಿ.ಸುಧಾಕರನ್‌ ಅವರ ಅಧ್ಯಕ್ಷತೆ ಯಲ್ಲಿ ನಡೆದ ಸಭೆಯಲ್ಲಿ ರಾಷ್ಟ್ರೀಯ ಹೆದ್ದಾರಿಯನ್ನು ಚತುಷ್ಪಥವಾಗಿ ಅಭಿವೃದ್ಧಿ ಗೊಳಿಸುವ ಕಾಮಗಾರಿ ಆರಂಭಿಸಲು ಅಗತ್ಯದ ಭೂಸ್ವಾಧೀನ ಪ್ರಕ್ರಿಯೆಯನ್ನು ಶೀಘ್ರವೇ ಪೂರ್ತಿಗೊಳಿಸಬೇಕೆಂದು ಆಗ್ರಹಿಸಲಾಗಿದೆ.

ನೌಕರರ ಕೊರತೆ
ಕಾಸರಗೋಡು ಮತ್ತು ಮಂಜೇಶ್ವರ ತಾಲೂಕುಗಳಲ್ಲಿ ಅಗತ್ಯದ ನೌಕರರ ಕೊರತೆ ಯಿಂದಾಗಿ ನಷ್ಟ ಪರಿಹಾರ ನಿರ್ಣಯಿಸುವ ಸಹಿತ ವಿವಿಧ ಪ್ರಕ್ರಿಯೆಗಳು ವಿಳಂಬವಾಗಲು ಪ್ರಮುಖ ಕಾರಣವಾಗಿದೆ ಎಂದು ಸಭೆಯಲ್ಲಿ ಅಭಿಪ್ರಾಯಪಡಲಾಗಿದೆ. ಈ ಎರಡು ತಾಲೂಕುಗಳಲ್ಲಿ ನೇಮಕಾತಿ ಪಡೆದುಕೊಂಡ ಬಳಿಕ ಶೀಘ್ರವೇ ಇಲ್ಲಿಂದ ವರ್ಗಾವಣೆ ಪಡೆದು ತೆರಳುತ್ತಿರುವುದರಿಂದ ಅಗತ್ಯದ ನೌಕರರ ಸಮಸ್ಯೆ ಎದುರಾಗುತ್ತಿದೆ. ಈ ಕಾರಣದಿಂದ ರಾಷ್ಟ್ರೀಯ ಹೆದ್ದಾರಿ ಚತುಷ್ಪಥವಾಗಿ ಅಭಿವೃದ್ಧಿಗೊಳಿಸಲು ಕಾಮಗಾರಿ ಆರಂಭಿಸಲು ವಿಳಂಬವಾಗುತ್ತಲೇ ಇದೆ. ದಿನಗಳ ಹಿಂದೆ ಇಬ್ಬರು ಕಂದಾಯ ಇನ್‌ಸ್ಪೆಕ್ಟರ್‌ಗಳನ್ನು ಹಾಗೂ ಮೂವರು ಕ್ಲರ್ಕ್‌ಗಳನ್ನು ಜಿಲ್ಲಾಧಿಕಾರಿ ನೇಮಿಸಿದ್ದರೂ ಆ ಬಳಿಕ ಈ ನಿರ್ಣಯವನ್ನು ಬದಲಾಯಿಸಿದರು. ನೌಕರರ ಭಡ್ತಿ ಮೊದಲಾದವುಗಳ ಹಿನ್ನೆಲೆಯಲ್ಲಿ ಈ ತೀರ್ಮಾನವನ್ನು ಬದಲಾಯಿಸಲು ಪ್ರಮುಖ ಕಾರಣವಾಗಿದೆ. ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ರಸ್ತೆಯನ್ನಾಗಿ ಅಭಿವೃದ್ಧಿಗೊಳಿಸಲು ಟೆಂಡರ್‌ ಪ್ರಕ್ರಿಯೆ ಪೂರ್ತಿಯಾಗಲಿರುವಂತೆ ಭೂಸ್ವಾಧೀನ ಪ್ರಕ್ರಿಯೆ ಇನ್ನೂ ಪೂರ್ಣವಾಗದಿರುವುದರಿಂದ ಕಾಮಗಾರಿ ಆರಂಭಿಸಲು ಇನ್ನೂ ವಿಳಂಬವಾಗಬಹುದೆಂದು ಆತಂಕ ವ್ಯಕ್ತವಾಗಿದೆ.

ಜಿಲ್ಲೆಗೆ ಹಿರಿಯ ಅಧಿಕಾರಿಗಳ ತಂಡ ಭೇಟಿ
ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಗೊಳಿಸುವ ಅಭಿವೃದ್ಧಿಗಾಗಿ ಅಗತ್ಯ ಭೂಸ್ವಾ ಧೀನ ಪ್ರಕ್ರಿಯೆಯನ್ನು ಶೀಘ್ರವೇ ಪೂರ್ತಿ ಗೊಳಿಸುವ ಸಂಬಂಧವಾಗಿ ಅಡೀಶನಲ್‌ ಸೆಕ್ರೆಟರಿ ಕೆ. ಬಿಜು, ರಾಷ್ಟ್ರೀಯ ಹೆದ್ದಾರಿ ಅಥಾರಿಟಿ ಪ್ರೊಜೆಕ್ಟ್ ಡೈರೆಕ್ಟರ್‌ ನಿರ್ಮಲ್‌ ಎಂ. ಸಾಡೆ ಮೊದಲಾದ ಅಧಿಕಾರಿಗಳು ಮುಂದಿನ ವಾರ ಕಾಸರಗೋಡು ಜಿಲ್ಲೆಗೆ ಭೇಟಿ ನೀಡಲಿದ್ದಾರೆ.

ಕಾಸರಗೋಡು, ಅಡ್ಕತ್ತಬೈಲು, ಕಾಂಞಂ ಗಾಡ್‌ ವಿಲೇಜ್‌ಗಳಲ್ಲಿ ಭೂಸ್ವಾಧೀನ ಮಾಡಿಕೊಂಡಿರುವ ಸ್ಥಳಕ್ಕೆ ನಷ್ಟಪರಿಹಾರ ಮೊತ್ತವನ್ನು ಮಂಜೂರು ಮಾಡಿದ್ದರೂ ಆ ಬಳಿಕ ರಾಷ್ಟ್ರೀಯ ಹೆದ್ದಾರಿ ಅಥಾರಿಟಿ ಈ ಮೊತ್ತವನ್ನು ತಡೆ ಹಿಡಿದಿರುವುದರಿಂದ ನಷ್ಟಪರಿಹಾರ ನೀಡಿಕೆ ಬಗ್ಗೆ ತರ್ಕದಲ್ಲಿದೆ.

ಆರ್ಬಿಟ್ರೇಷನ್‌ನಲ್ಲಿ ಜಿಲ್ಲಾಧಿಕಾರಿಗಳ ತೀರ್ಪು ಬಳಿಕ ಹಣವನ್ನು ಭೂಮಾಲಕರಿಗೆ ನೀಡಿದರೆ ಸಾಕೆಂಬ ರಾಷ್ಟ್ರೀಯ ಹೆದ್ದಾರಿ ಅಥೋರಿಟಿ ಪ್ರೊಜೆಕ್ಟ್ ಡೈರೆಕ್ಟರ್‌ಗಳ ನಿಲುವು ಸರಿಯಲ್ಲ ಎಂಬುದು ಕಂದಾಯ ಅಧಿಕಾರಿಗಳ ಅಂಬೋಣ. ಈ ಬಗೆಗಿನ ತರ್ಕವನ್ನು ಹಿರಿಯ ಅಧಿಕಾರಿಗಳು ಪರಿಶೀಲಿಸಿ ಅಂತಿಮ ಪರಿಹಾರ ಕಂಡುಕೊಳ್ಳಬಹುದೆಂಬುದು ನಿರೀಕ್ಷೆಯಾಗಿದೆ.

ಸೊತ್ತಿನ ದಾಖಲೆಪತ್ರಗಳಲ್ಲಿನ ದರಕ್ಕಿಂತ ಶೇ.200 ತನಕ ಹೆಚ್ಚು ದರ ನಿಗದಿಪಡಿಸಿ ಭೂಸ್ವಾಧೀನ ವಿಭಾಗ ತೀರ್ಮಾನಿಸಿದೆ ಎಂದು ಆರೋಪಿಸಿ ರಾಷ್ಟ್ರೀಯ ಹೆದ್ದಾರಿ ಅಥಾರಿಟಿ ಅಧಿಕಾರಿಗಳು ಮಂಜೂರು ಮಾಡಿದ ಹಣವನ್ನು ಆ ಬಳಿಕ ತಡೆಹಿಡಿದಿಡಲು ಪ್ರಮುಖ ಕಾರಣವಾಗಿದೆ.

ಟಾಪ್ ನ್ಯೂಸ್

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.