ಹೆದ್ದಾರಿ ಕಾಮಗಾರಿ ಅವ್ಯವಸ್ಥೆ: ನಿತ್ಯ ಅಪಘಾತ


Team Udayavani, Feb 21, 2020, 6:00 AM IST

2002KDLM7PH

ಕುಂದಾಪುರ: ನಗರದಲ್ಲಿ ಸಾಗುತ್ತಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಅವ್ಯವಸ್ಥೆಯಿಂದಾಗಿ ವಾಹನಗಳ ಅಪಘಾತ ತಾಣವಾಗುತ್ತಿದೆ. ಗುರುವಾರ ಮುಂಜಾನೆ ಗೋವಾ ನೋಂದಣಿಯ ಕಾರೊಂದು ಅಪಘಾತಕ್ಕೀಡಾಗಿದೆ.

ದಿಢೀರ್‌ ತಿರುವು
ಉಡುಪಿ ಕಡೆಯಿಂದ ಕುಂದಾಪುರ ಕಡೆಗೆ ಬರುವಾಗ ವಿನಾಯಕ ಥಿಯೇಟರ್‌ ಬಳಿ ಹೆದ್ದಾರಿ ಮುಗಿದು ದಿಢೀರ್‌ ಸರ್ವಿಸ್‌ ರಸ್ತೆಗೆ ಪ್ರವೇಶ ಪಡೆಯಬೇಕಾಗುತ್ತದೆ. ಸೂಚನಾ ಫ‌ಲಕ ಸರಿ ಇಲ್ಲದ ಕಾರಣ, ಹೆದ್ದಾರಿ ಮುಗಿದು ಸರ್ವಿಸ್‌ ರಸ್ತೆಗೆ ಹೋಗಲು ಗೊಂದಲ ಉಂಟಾಗುವ ಕಾರಣ, ದಿಢೀರ್‌ ತಿರುವು ಆರಂಭವಾಗುವ ಕಾರಣ ವಾಹನಗಳು ನೇರ ಚಲಿಸುತ್ತವೆ. ಪರಿಣಾಮ ಅಲ್ಲಿ ಹಾಕಿದ ಮಣ್ಣಿನ ರಾಶಿ, ಹೆದ್ದಾರಿ ಕಾಮಗಾರಿಗೆ ತಂದು ಹಾಕಿದ ಸಿಮೆಂಟ್‌ ವಸ್ತುಗಳಿಗೆ ಢಿಕ್ಕಿ ಹೊಡೆಯುತ್ತಿವೆ. ಕೆಲವೊಮ್ಮೆ ಇಲ್ಲಿ ಲಾರಿಗಳೂ ನಿಂತಿರುತ್ತವೆ.

ಕತ್ತಲು

ಹೆದ್ದಾರಿಯಲ್ಲಿ ಹಂಗಳೂರಿನ ದುರ್ಗಾಂಬಾ ಗ್ಯಾರೇಜ್‌ನಿಂದ ಕುಂದಾಪುರ ಕಡೆಗೆ ಬರುವಾಗ ಯಾವುದೇ ಬೀದಿದೀಪಗಳು ಬೆಳಗುವುದಿಲ್ಲ. ಇದರಿಂದಾಗಿಯೂ ಗೊಂದಲ ಉಂಟಾಗುತ್ತದೆ. ರಾತ್ರಿ ವೇಳೆ ವಾಹನಗಳಿಗೆ ಈ ಕತ್ತಲಿನಿಂದಾಗಿಯೂ ಸಮಸ್ಯೆಯಾಗುತ್ತದೆ. ಅದಕ್ಕಾಗಿ ಹೆದ್ದಾರಿ ಬೀದಿ ದೀಪಗಳನ್ನು ಆದಷ್ಟು ಶೀಘ್ರ ಬೆಳಗಿಸಬೇಕೆಂದು ಸಾರ್ವಜನಿಕರ ಬೇಡಿಕೆ ಇದೆ. ಅಷ್ಟಲ್ಲದೇ ಇಲ್ಲಿ ಯೂ ಟರ್ನ್ ಮಾಡುವುದಿದ್ದರೆ ಹೈ ಮಾಸ್ಟ್‌ ದೀಪ ಅಳವಡಿಸಬೇಕೆಂದು ಕೂಡಾ ಜನ ಆಗ್ರಹಿಸುತ್ತಾರೆ.

ಭರದ ಕಾಮಗಾರಿ
ಕಳೆದ ತಿಂಗಳಿನಿಂದ ಫ್ಲೈಓವರ್‌ ಸಂಪರ್ಕ ರಸ್ತೆಯ ಕಾಮಗಾರಿ ಭರದಿಂದ ನಡೆಯುತ್ತಿದೆ. ಫ್ಲೈಓವರ್‌ಗೆ ಹೋಗುವ ರಸ್ತೆಯ ಕಾಮಗಾರಿ ಪೂರ್ಣವಾಗುವ ಹಂತ ತಲುಪುತ್ತಿದ್ದು ಫ್ಲೈಓವರ್‌ಗೆ ಸ್ಪರ್ಶ ಮಾಡುವ ಕಾಮಗಾರಿ ನಡೆದಿಲ್ಲ. ವಿನಾಯಕ ಬಳಿ ಪಾದಚಾರಿ ಅಂಡರ್‌ಪಾಸ್‌ ನಡೆದಿದ್ದು, ಕೆಎಸ್‌ಆರ್‌ಟಿಸಿ ಬಳಿ ಕ್ಯಾಟಲ್‌ ಅಂಡರ್‌ಪಾಸ್‌ ಕಾಮಗಾರಿ ನಡೆದಿದೆ. ಇಲ್ಲಿ ಕೂಡಾ ಮಣ್ಣು ಹಾಕಿ ಫ್ಲೈಓವರ್‌ಗೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು ಎತ್ತರಿಸುವ ಕಾರ್ಯ ನಡೆದಿದೆ. ಒಟ್ಟಿನಲ್ಲಿ ಫ್ಲೈಓವರ್‌ ಕಾಮಗಾರಿ ವೇಗದಿಂದ ನಡೆಯುತ್ತಿದೆ ಎನ್ನುವುದು ನೋಡಿದಾಗಲೇ ಸ್ಪಷ್ಟವಾಗುವಂತಿದೆ.

ದೂರವಾಣಿ ಸ್ತಬ್ಧ
ಫ್ಲೈಓವರ್‌ ಕಾಮಗಾರಿಯ ನೆಪದಲ್ಲಿ ಆಗಾಗ ಬಿಎಸ್‌ಎನ್‌ಎಲ್‌ ದೂರವಾಣಿ ಕೇಬಲ್‌ಗ‌ಳನ್ನು ಹಾಳುಗೆಡವುತ್ತಿರುವ ಕಾರಣ ತೊಂದರೆಯಾಗುತ್ತಿದೆ. ಪ್ರತಿನಿತ್ಯ ಎಂಬಂತೆ ದೂರವಾಣಿಗಳು ಸ್ತಬ್ಧವಾಗುವ ಸಮಸ್ಯೆ ಉಂಟಾಗುತ್ತಿದೆ. ಬಿಎಸ್‌ಎನ್‌ಎಲ್‌ನಲ್ಲಿ ಸಿಬಂದಿ ಕೊರತೆ ಇರುವ ಕಾರಣ ಸರಿಪಡಿಸಲು ಸಿಬಂದಿ ಒದ್ದಾಡುವುದು ಕಂಡು ಬರುತ್ತಿದೆ. ಬಿಎಸ್‌ಎನ್‌ಎಲ್‌ ಸಮಸ್ಯೆಯಾದ ಕೂಡಲೇ ಬ್ಯಾಂಕಿಂಗ್‌ ವ್ಯವಹಾರಗಳಿಗೂ ತೊಂದರೆಯಾಗುತ್ತಿದೆ.

ಲೈಟ್‌ ಹಾಕಲಿ
ವಿನಾಯಕ ಬಳಿ ಹೈ ಮಾಸ್ಟ್‌ ದೀಪ ಹಾಕಲಿ. ಕತ್ತಲೆಯಿಂದಾಗಿಯೇ ಅನೇಕ ಅಪಘಾತಗಳು ಸಂಭವಿಸುತ್ತಿವೆ.
-ಮಹೇಶ್‌ ಶೆಣೈ,ರಿಕ್ಷಾ ಚಾಲಕ,ವಿನಾಯಕ ಬಳಿ ಸ್ಟಾಂಡ್‌

ಇಂದು ಸಂಸದೆ ಭೇಟಿ
ಸಂಸದೆ ಶೊಭಾ ಕರಂದ್ಲಾಜೆ ಅವರು ಫೆ. 21ಂದು ಬೆಳಗ್ಗೆ 11 ಗಂಟೆಗೆ ಕುಂದಾಪುರಕ್ಕೆ ಆಗಮಿಸಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಪ್ರಗತಿ ಪರಿಶೀಲನೆ ಮಾಡಲಿದ್ದಾರೆ ಎಂದು ಬಿಜೆಪಿ ಅಧ್ಯಕ್ಷ ಶಂಕರ ಅಂಕದಕಟ್ಟೆ ತಿಳಿಸಿದ್ದಾರೆ.

ಟಾಪ್ ನ್ಯೂಸ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.