ಔಷಧ, ಎಲೆಕ್ಟ್ರಾನಿಕ್ಸ್‌ಗೆ ಕೊರೊನಾ ಹೊಡೆತ

ಆರ್‌ಬಿಐ ನಿರ್ದೇಶಕ ಸತೀಶ್‌ ಮರಾಠೆ

Team Udayavani, Feb 21, 2020, 7:20 AM IST

chitra-39

ಮಂಗಳೂರು: ಚೀನದಲ್ಲಿ ವ್ಯಾಪಕವಾಗಿರುವ ಕೊರೊನಾ ರೋಗ ದಿಂದ ಭಾರತದ ಆರ್ಥಿಕತೆಯ ಮೇಲೂ ಪರಿಣಾಮ ಬೀರುವುದು ಖಚಿತ. ಅದರಲ್ಲಿಯೂ ಫಾರ್ಮಸ್ಯೂಟಿಕಲ್‌ (ಔಷಧಿ), ಸ್ಮಾರ್ಟ್‌ ಫೋನ್‌ ಮತ್ತು ಎಲೆಕ್ಟ್ರಾನಿಕ್ಸ್‌ ಕ್ಷೇತ್ರಗಳ ಮೇಲೆ ಅಡ್ಡ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ಭಾರತೀಯ ರಿಸರ್ವ್‌ ಬ್ಯಾಂಕ್‌ ಆಫ್‌ ಇಂಡಿಯಾದ ನಿರ್ದೇಶಕ ಸತೀಶ್‌ ಮರಾಠೆ ಹೇಳಿದ್ದಾರೆ. ಮಂಗಳೂರಿಗೆ ಆಗಮಿಸಿರುವ ಅವರು ಗುರುವಾರ “ಉದಯವಾಣಿ’ಗೆ ವಿಶೇಷ ಸಂದರ್ಶನ ನೀಡಿದ್ದು, ಕೊರೊನಾ ದಿಂದ ನಮ್ಮ ದೇಶದ ಆರ್ಥಿಕತೆ ಮೇಲಾಗುವ ಪ್ರತಿಕೂಲ ಪರಿಣಾಮ, ಆರ್ಥಿಕ ಹಿಂಜರಿತ ಸಹಿತ ಹಲವು ಪ್ರಸಕ್ತ ವಿದ್ಯಮಾನಗಳ ಕುರಿತಂತೆ ಮಾತನಾಡಿದರು.

ಕೊರೊನಾ ಭಾರತದ ಆರ್ಥಿಕತೆ ಮೇಲೂ ಪರಿಣಾಮ ಬೀರಬಹುದೇ ?
ಮುಖ್ಯವಾಗಿ ಫಾರ್ಮಸ್ಯೂಟಿಕಲ್‌ (ಔಷಧಿ), ಸ್ಮಾರ್ಟ್‌ ಫೋನ್‌ ಮತ್ತು ಎಲೆಕ್ಟ್ರಾನಿಕ್ಸ್‌ ಕ್ಷೇತ್ರಗಳ ಮೇಲೆ ಪರಿಣಾಮ ಪರಿಣಾಮ ಬೀರುವುದು ಖಚಿತ. ಏಕೆಂದರೆ ಕೆಲವೊಂದು ಪ್ರಾಥಮಿಕ ಔಷಧಗಳಿಗಾಗಿ ನಾವು ಚೀನವನ್ನೇ ಅವಲಂಬಿಸಿದ್ದೇವೆ. ಹಾಗಾಗಿ ಜೀವ ರಕ್ಷಕ ಔಷಧಗಳು ಸಿಗದಿದ್ದರೆ ನಮಗೆ ಕಷ್ಟವಾಗಬಹುದು. ಅಲ್ಲದೆ, ಸ್ಮಾರ್ಟ್‌ ಫೋನ್‌ಗಳ ಕ್ರಿಟಿಕಲ್‌ ಬಿಡಿ ಭಾಗಗಳು ಚೀನದಿಂದ ಬರುತ್ತಿದ್ದವು. ಇದಕ್ಕೆಲ್ಲ ನಮ್ಮಲ್ಲಿ ಪರ್ಯಾಯ ವ್ಯವಸ್ಥೆಯಿಲ್ಲದ ಕಾರಣ ಅದರಿಂದಲೂ ಕೊಂಚ ತೊಂದರೆ ಎದುರಾಗಬಹುದು. ದ್ವಿಪಕ್ಷೀಯ ಒಪ್ಪಂದದ ಪ್ರಕಾರ ಈ ಪ್ರಾಥಮಿಕ ಔಷಧ ಮತ್ತು ಸ್ಮಾರ್ಟ್‌ ಫೋನ್‌ಗಳ ಕ್ರಿಟಿಕಲ್‌ ಬಿಡಿ ಭಾಗಗಳನ್ನು ಪೂರೈಕೆ ಮಾಡುವ ಬದ್ಧತೆ ಚೀನಕ್ಕಿದೆ. 3 ತಿಂಗಳ ತನಕ ಏನೆಲ್ಲ ಪರಿಣಾಮ ಬೀರಬಹುದು ಎಂಬುದನ್ನು ಅವಲೋಕಿಸಲಾಗುತ್ತಿದೆ. ಆದರೆ, ಮಾರ್ಚ್‌ ಬಳಿಕವೂ ಕೊರೊನಾದಿಂದ ಚೀನ ಚೇತರಿಸಿ ಕೊಳ್ಳದೆ ಹೋದರೆ, ನಮಗೆ ಹೆಚ್ಚಿನ ಸಂಕಷ್ಟ ಎದುರಾಗಬಹುದು. ಪ್ರಧಾನಿ ಮೋದಿ ಕೂಡ ಫೆ.18ರಂದು ವಿವಿಧ ಉದ್ಯಮಿಗಳ ಸಭೆ ಕರೆದು ಕೊರೊನಾ ಪರಿಣಾಮಗಳ ಬಗ್ಗೆ ಚರ್ಚಿಸಿದ್ದಾರೆ.

ದೇಶದ ಆರ್ಥಿಕ ಹಿಂಜರಿತ ಸರಿದಾರಿಗೆ ಬರಲು ಇನ್ನೆಷ್ಟು ಸಮಯ ಬೇಕಿದೆ?
ಈ ವರ್ಷ ಸಮಯಕ್ಕೆ ಸರಿಯಾಗಿ ವಾಡಿಕೆ ಮಳೆ ಬಂದರೆ ಕೃಷಿ, ತೋಟಗಾರಿಕೆ ಚಟು ವಟಿಕೆಗೆ ಉತ್ತೇಜನ ಲಭಿಸಿ ಮುಂದಿನ ಅಕ್ಟೋಬರ್‌-ನವೆಂಬರ್‌ ವೇಳೆಗೆ ಆರ್ಥಿಕ ಪರಿಸ್ಥಿತಿ ಸುಧಾರಿಸಬಹುದೆಂದು ನಿರೀಕ್ಷಿಸಲಾಗಿದೆ.

ಬ್ಯಾಂಕ್‌ಗಳ ವಿಲೀನ ಪ್ರಕ್ರಿಯೆ ಬಗ್ಗೆ ಟೀಕೆಗಳು ಕೇಳಿ ಬರುತ್ತಿವೆಯಲ್ಲವೇ?
ಬ್ಯಾಂಕ್‌ಗಳ ವಿಲೀನ ಪ್ರಕ್ರಿಯೆ ಸರಕಾರದ ಕ್ರಮ. ಸದುದ್ದೇಶದಿಂದ ಅದನ್ನು ಮಾಡಲಾಗಿದೆ. ವಿಲೀನ ಪ್ರಕ್ರಿಯೆ ಖಂಡಿತಾ ಆಗಲಿದೆ. ಕಳೆದ ಸಾಲಿನಲ್ಲಿ ವರ್ಷದ ಮಧ್ಯ ಭಾಗದಲ್ಲಿ ವಿಲೀನ ಪ್ರಕ್ರಿಯೆಯನ್ನು ಘೋಷಿಸಿದ್ದರಿಂದ ಬ್ಯಾಂಕ್‌ಗಳ ಬ್ಯಾಲೆನ್ಸ್‌ ಶೀಟ್‌ ತಯಾರಾಗಲು ಕಾಯಲಾಗುತ್ತಿದೆ. ಕರಾವಳಿಯ ಬ್ಯಾಂಕ್‌ಗಳ ವಿಲೀನವೂ ಸೇರಿದಂತೆ ಘೋಷಿಸಿದ ಎಲ್ಲ ವಿಲೀನ ಪ್ರಕ್ರಿಯೆಗಳು ಮುಂದಿನ ಮಾರ್ಚ್‌ನಲ್ಲಿ ಮುಕ್ತಾಯಗೊಂಡು ಎಪ್ರಿಲ್‌ನಿಂದ ಅನ್ವಯ ವಾಗುವಂತೆ ಜಾರಿಗೆ ಬರುವ ನಿರೀಕ್ಷೆಯಿದೆ.

ಸಹಕಾರಿ ಬ್ಯಾಂಕ್‌ಗಳಿಗೆ ಆದಾಯ ತೆರಿಗೆ ವಿಧಿಸಿರುವುದು ಸರಿಯೇ?
ಸಹಕಾರಿ ಬ್ಯಾಂಕ್‌ಗಳಿಗೆ ಆದಾಯ ತೆರಿಗೆಯನ್ನು ಇತ್ತೀಚೆಗೆ ಮಂಡಿಸಿದ ಕೇಂದ್ರ ಬಜೆಟ್‌ನಲ್ಲಿ ಕಡಿತ ಮಾಡಲಾಗಿದೆ. ಸಹಕಾರಿ ರಂಗದಲ್ಲಿ ಬ್ಯಾಂಕ್‌ಗಳು ಹೆಚ್ಚು ಬರಬೇಕಾಗಿದೆ. ಈ ದಿಶೆಯಲ್ಲಿ ಸರಕಾರ ಉತ್ತೇಜನ ನೀಡುತ್ತಿದೆಯೇ ಹೊರತು ಹೊರೆಯಾಗುವ ಕ್ರಮ ಕೈಗೊಂಡಿಲ್ಲ. ಕ್ರೆಡಿಟ್‌ ಸಹಕಾರಿ ಸಂಘಗಳನ್ನು ಬ್ಯಾಂಕ್‌ಗಳಾಗಿ ಪರಿವರ್ತಿಸಬೇಕು. ಸಹಕಾರಿ ಸಂಘಗಳು ಬ್ಯಾಂಕ್‌ಗಳ ಸ್ಥಾನಕ್ಕೇರಿದಾಗ ಠೇವಣಿಗೆ ವಿಮಾ ಸೌಲಭ್ಯ ಸಿಗುತ್ತದೆ. ವಿಮೆಯ ಮೊತ್ತವನ್ನು ಈ ಹಿಂದೆ ಇದ್ದ 2 ಲಕ್ಷ ರೂ. ಗಳಿಂದ 5 ಲಕ್ಷ ರೂ.ಗಳಿಗೆ ಏರಿಸಲಾಗಿದೆ.

ಗ್ರಾಮೀಣ ಆರ್ಥಿಕತೆ ಪ್ರಗತಿಗೆ ಆರ್‌ಬಿಐ ಹೊಸ ಚಿಂತನೆ ಏನಿದೆ?
ರೈತರ ಆದಾಯ ಹೆಚ್ಚಿಸಲು ಸಹಕಾರಿ ರಂಗದಲ್ಲಿ ಹೈನುಗಾರಿಕೆಗೆ ಉತ್ತೇಜನ ನೀಡಬೇಕಾಗಿದೆ. ಪ್ರಸ್ತುತ ದೇಶದ ಪಶ್ಚಿಮ ಭಾಗದಲ್ಲಿ ಮಾತ್ರ ಹೈನುಗಾರಿಕೆ ಇದೆ. ದೇಶದ ಪೂರ್ವ, ಉತ್ತರ, ಮಧ್ಯ ಭಾಗ ದಲ್ಲಿಯೂ ಸಹಕಾರಿ ರಂಗದಲ್ಲಿ ಹಾಲು ಉತ್ಪಾದನೆ, ಸಂಸ್ಕರಣ ಘಟಕಗಳು ಸ್ಥಾಪನೆಯಾಬೇಕು. ಸಹಕಾರ ರಂಗದ ಹೈನೋದ್ಯಮದಲ್ಲಿ ರೈತರಿಗೆ ಶೇ.70ರಷ್ಟು ಆದಾಯ ಬರುತ್ತದೆ; ಅದೇ ಖಾಸಗಿ ರಂಗದಲ್ಲಿ ರೈತರಿಗೆ ಸಿಗುವುದು ಶೇ.40ರಷ್ಟು ಮಾತ್ರ. ಹಾಗಾಗಿ ರೈತರ ಹಿತದೃಷ್ಟಿಯಿಂದ ಸಹಕಾರಿ ರಂಗದಲ್ಲಿ ಹೈನುಗಾರಿಕೆಗೆ ಸಹಕಾರ ನೀಡಬೇಕು.

2000 ರೂ. ನೋಟು ಹಿಂಪಡೆಯುವುದಿಲ್ಲ
ಪ್ರಸ್ತುತ ದೇಶದ 650 ಜಿಲ್ಲೆಗಳ ಪೈಕಿ 220 ಜಿಲ್ಲೆಗಳಲ್ಲಿ ಮಾತ್ರ ಹಾಲು ಉತ್ಪಾದಕರ ಸಹಕಾರಿ ಸಂಘಗಳಿವೆ. ಕೃಷಿ ಸಂಸ್ಕರಣ ಘಟಕಗಳ ಮಾದರಿಯಲ್ಲಿ ಎಲ್ಲ ಜಿಲ್ಲೆಗಳಲ್ಲಿಯೂ ಗ್ರಾಮೀಣ ಪ್ರದೇಶಗಳಲ್ಲಿ ಹಾಲು ಸಂಸ್ಕರಣ ಘಟಕಗಳು ಸ್ಥಾಪನೆ ಆಗಬೇಕು. ರಾಷ್ಟ್ರೀಯ ಹೈನು ಅಭಿವೃದ್ಧಿ ಮಂಡಳಿ(ಎನ್‌ಡಿಡಿಬಿ) ನಡೆಸಿದ ಸಮೀಕ್ಷೆ ಪ್ರಕಾರ ದೇಶದಲ್ಲಿ 3 ಲಕ್ಷ ಪ್ರಾಥಮಿಕ ಹಾಲು ಉತ್ಪಾದಕರ ಸಂಸ್ಕರಣ ಘಟಕಗಳ ಆವಶ್ಯಕತೆಯಿದೆ. ಈಗಿರುವ ಹಾಲು ಸಂಸ್ಕರಣ ಘಟಕಗಳ ಸಂಖ್ಯೆ 1,40,000 ಮಾತ್ರ. ಇದನ್ನು ದುಪ್ಪಟ್ಟು ಮಾಡಬಹುದಾಗಿದೆ. ಈ ನಡುವೆ 2000 ರೂಪಾಯಿ ನೋಟು ಹಿಂಪಡೆಯಲಾಗುತ್ತಿದೆ ಎನ್ನುವುದು ವದಂತಿ ಮಾತ್ರ; ಇದರಲ್ಲಿ ಸತ್ಯಾಂಶ ಇಲ್ಲ.

– ಹಿಲರಿ ಕ್ರಾಸ್ತಾ

ಟಾಪ್ ನ್ಯೂಸ್

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

Supreme Court slams IMA

Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

Supreme Court slams IMA

Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.