ಮಕ್ಕಳ ಪಾಲನಾ ಕೇಂದ್ರಗಳ ಸಮಗ್ರ ವಿವರ ಸಂಗ್ರಹಿಸಲು ಡಿಸಿ ಸೂಚನೆ
Team Udayavani, Feb 21, 2020, 1:48 AM IST
ಮಂಗಳೂರು: ಜಿಲ್ಲೆಯಲ್ಲಿರುವ ಅನಾಥಾಲಯ, ನಿರ್ಗತಿಕರ ಮಂದಿರ ಸೇರಿದಂತೆ ಮಕ್ಕಳಿಗೆ ಆಶ್ರಯ ನೀಡುತ್ತಿರುವ ಎಲ್ಲ ಕೇಂದ್ರಗಳ ಸಮಗ್ರ ವಿವರ ಸಂಗ್ರಹಿಸಲು ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಸೂಚಿಸಿದ್ದಾರೆ. ಗುರುವಾರ ಜಿಲ್ಲಾಧಿಕಾರಿ ಕಚೇರಿ ಕೋರ್ಟ್ಹಾಲ್ನಲ್ಲಿ ನಡೆದ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ, ಮಕ್ಕಳ ಪಾಲನಾ ಸಂಸ್ಥೆಗಳ ಜಿಲ್ಲಾ ತನಿಖಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿರುವ ಎಲ್ಲ ಮಕ್ಕಳ ಪಾಲನಾ ಕೇಂದ್ರಗಳನ್ನು ಬಾಲನ್ಯಾಯ ಕಾಯಿದೆ ಅನ್ವಯ ನೋಂದಾಯಿಸಿ ಆಗಿಂದಾಗ್ಗೆ ಪಾಲನಾ ಕೇಂದ್ರಗಳಿಗೆ ಭೇಟಿ ನೀಡಿ, ಪರೀಶಿಲನೆ ನಡೆಸುವಂತೆ ಆದೇಶಿಸಿದರು.
ಪೊಲೀಸ್ ಪರಿಶೀಲನೆ ಅಗತ್ಯ
ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ವೆಂಕಪ್ಪ ಎಂ. ಮಾತನಾಡಿ, ಮಕ್ಕಳ ಪಾಲನಾ ಸಂಸ್ಥೆಯಲ್ಲಿ ನಿಯೋಜಿಸಲ್ಪಡುವ ಸಿಬಂದಿಯನ್ನು ಪೊಲೀಸ್ ಪರಿಶೀಲನೆ ಮಾಡದೇ ನೇಮಿಸಬಾರದು ಮತ್ತು ಈಗಾಗಲೇ ಕಾರ್ಯನಿರ್ವಹಿಸುತ್ತಿರುವ ಸಿಬಂದಿಯ ಹಿನ್ನೆಲೆಯನ್ನು ಪೊಲೀಸ್ ಪರಿಶೀಲನೆ ಮುಖಾಂತರ ಖಚಿತಪಡಿಸಿಕೊಳ್ಳಬೇಕು ಹಾಗೂ ಸಿಬಂದಿಯ ಪೊಲೀಸ್ ಪರಿಶೀಲನೆಯನ್ನು ಶುಲ್ಕ ರಹಿತವಾಗಿ ನಡೆಸಿಕೊಡುವಂತೆ ಇಲಾಖೆಗೆ ಸೂಚಿಸಿದೆ ಎಂದು ವಿವರಿಸಿದರು.
ಭಿಕ್ಷಾಟನೆ ನಿರತ ಮಕ್ಕಳು ಕಂಡು ಬಂದಾಗ ಸಮಾಜ ಕಲ್ಯಾಣ ಇಲಾಖೆಯ ಸಹಾಯ ಪಡೆದು ಮಕ್ಕಳನ್ನು ಪುರ್ನವಸತಿ ಕೇಂದ್ರಗಳಿಗೆ ದಾಖಲಿಸಲಾಗುತ್ತಿದೆ ಎಂದು ಡಿಸಿಪಿಒ ಹೇಳಿದರು.
ಹೆಚ್ಚುವರಿ ಮಕ್ಕಳಿಗೆ ಸೌಲಭ್ಯ ಎಚ್ಐವಿ ಸೋಂಕಿತ, ಬಾಧಿತ ಮಕ್ಕಳು ಹಾಗೂ ಇಂತಹ ಕಾಯಿಲೆಯಿಂದ ಪಾಲಕರನ್ನು ಕಳೆದುಕೊಂಡ ಮಕ್ಕಳ ಪಾಲನೆ ನಿಮಿತ್ತ ವಿಶೇಷ ಪಾಲನಾ ಯೋಜನೆಯ ಅನುಷ್ಠಾನ
ಗೊಳಿಸುವ ಕಾರ್ಯಕ್ರಮದ ಪ್ರಗತಿ ಪರಿಶೀಲನೆ ನಡೆಸಿ, ಹೆಚ್ಚುವರಿ ಮಕ್ಕಳಿಗೆ ಸೌಲಭ್ಯ ಕೊಡುವ ಬಗ್ಗೆ ಜಿಲ್ಲಾಧಿಕಾರಿ ಸೂಚಿಸಿದರು.
ಈ ಯೋಜನೆಯ ಅನ್ವಯ ಜಿಲ್ಲೆಯಲ್ಲಿ 2019-20ನೇ ಸಾಲಿನಲ್ಲಿ 537 ಫಲಾನುಭವಿಗಳಿಗೆ 21,48,000 ರೂ. ಪೋಷಣಾ ವೆಚ್ಚ ಜಮೆ ಮಾಡಲಾಗಿದೆ. ಈ ಫಲಾನುಭವಿಗಳಲ್ಲಿ 18 ವರ್ಷ ಪೂರ್ಣಗೊಂಡಿರುವುದರಿಂದ ಆ ಫಲಾನುಭವಿಗಳ ಬದಲಿಗೆ 28 ಹೊಸ ಫಲಾನುಭವಿಗಳ ಸೇರ್ಪಡೆಗೆ ಅನುಮೋದನೆ ಕೋರಿದೆ ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ವೆಂಕಪ್ಪ ಎಂ. ಮಾಹಿತಿ ನೀಡಿದರು.
ಕಾನೂನು ಸೇವಾ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಶಿಲ್ಪಾ ಎ.ಜೆ., ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ| ರಾಮಕೃಷ್ಣ ರಾವ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ಉಸ್ಮಾನ್, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ರೆನ್ನಿ ಡಿಸೋಜಾ, ಶಾಂತಿ ಸಂದೇಶ ಟ್ರಸ್ಟ್ ನಿರ್ದೇಶಕ ಸಿ| ದುಲ್ಸಿನ್ ಕ್ರಾಸ್ತಾ, ವಕ್ಫ್ ಅಧಿಕಾರಿ ಎಂ. ಅಬೂಬಕ್ಕರ್, ಬಾಲನ್ಯಾಯ ಮಂಡಳಿ ಸದಸ್ಯೆ ಗೌರಿ ಕೆ.ಎಸ್.ವೆನಲಾಕ್ ಆಸ್ಪತ್ರೆ ಆಪ್ತ ಸಮಾಲೋಚಕ ಆನಂದ್ ಎನ್. ಮೊದಲಾದವರು ಉಪಸ್ಥಿತರಿದ್ದರು.
ಮಕ್ಕಳ ಹಕ್ಕು ಉಲ್ಲಂಘನೆ ದೂರು ಇಲ್ಲ
ವಕ್ಫ್ ಇಲಾಖೆಯ ಮದ್ರಸಗಳಲ್ಲಿ ಮುಖ್ಯೋಪಾಧ್ಯಾಯರು, ಆಡಳಿತ ಸಮಿತಿಯ ಸದಸ್ಯರು ಮತ್ತು ಮಕ್ಕಳ ರಕ್ಷಕರು ಸೇರಿ ಮಕ್ಕಳ ಸುರಕ್ಷತಾ ಸಮಿತಿಯನ್ನು ರಚಿಸಿರುತ್ತಾರೆ, ಪ್ರತಿ ಎರಡು ತಿಂಗಳಿಗೊಮ್ಮೆ ಸಭೆ ಸೇರಿ ಕುಂದುಕೊರತೆ ಗಳನ್ನು ಪರಿಶೀಲನೆ ನಡೆಸಿದ್ದಾರೆ. ಜಿಲ್ಲೆಯ ಮದ್ರಸಗಳಲ್ಲಿ ಮಕ್ಕಳ ಹಕ್ಕು ಉಲ್ಲಂಘನೆಯಾದ ಬಗ್ಗೆ ದೂರು ಬಂದಿರುವುದಿಲ್ಲ ಎಂದು ಡಿಸಿಪಿಒ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್ ನಲ್ಲಿ ಪತ್ತೆ!
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ
ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್ ಘೋಷಣೆ ಬರೆದ ವಿದ್ಯಾರ್ಥಿ ಪಾಸ್: ಪ್ರಾಧ್ಯಾಪಕ ಅಮಾನತು!
Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ