ಕಾಂಗ್ರೆಸ್ ಮತ್ತು ತುಕ್ಡೆ,ತುಕ್ಡೆ ಗ್ಯಾಂಗ್ ಭಾರತವನ್ನು ಪಾಕಿಸ್ತಾನ ಮಾಡಲು ಹೊರಟಿದೆಯಾ?ಸಿಂಗ್
ಪಠಾಣ್ ಹೇಳಿಕೆಯನ್ನು ಬಿಜೆಪಿ, ಆರ್ ಜೆಡಿ ಸೇರಿದಂತೆ ಹಲವು ರಾಜಕೀಯ ಪಕ್ಷಗಳು ಖಂಡಿಸಿವೆ.
Team Udayavani, Feb 21, 2020, 11:36 AM IST
ನವದೆಹಲಿ: ದೇಶದಲ್ಲಿರುವ ನೂರು ಕೋಟಿ ಹಿಂದೂಗಳಿಗೆ ಕೇವಲ 15 ಕೋಟಿ ಜನಸಂಖ್ಯೆ ಹೊಂದಿರುವ ಮುಸ್ಲಿಮರು ತಕ್ಕ ತಿರುಗೇಟು ನೀಡಬಲ್ಲರು ಎಂದು ಮಹಾರಾಷ್ಟ್ರದ ಎಐಎಂಐಎಂ ಮುಖಂಡ ವಾರಿಸ್ ಪಠಾಣ್ ಹೇಳಿಕೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಕೇಂದ್ರ ಸಚಿವ ಗಿರಿರಾಜ್ ಸಿಂಗ್, ಈ ತುಕ್ಡೆ, ತುಕ್ಡೆ ಗ್ಯಾಂಗ್ ಭಾರತವನ್ನು ಪಾಕಿಸ್ತಾನ ಮಾಡಲು ಹೊರಟಿದೆ ಎಂದು ಆರೋಪಿಸಿದರು.
ಶುಕ್ರವಾರ ಟ್ವೀಟ್ ಮಾಡಿರುವ ಸಿಂಗ್, ಕಾಂಗ್ರೆಸ್, ಆರ್ ಜೆಡಿ ಮತ್ತು ತುಕ್ಡೆ, ತುಕ್ಡೆ ಗ್ಯಾಂಗ್ ಒಂದು ವೇಳೆ ಭಾರತವನ್ನು ಪಾಕಿಸ್ತಾನವನ್ನಾಗಿ ಬದಲಾಯಿಸಲು ಹೊರಟಿದೆಯಾ ಎಂಬ ಬಗ್ಗೆ ಸ್ಪಷ್ಟನೆ ನೀಡಬೇಕು ಎಂದು ತಿಳಿಸಿದ್ದಾರೆ.
ಭಾರತದಲ್ಲಿರುವ ನೂರು ಕೋಟಿ ಹಿಂದುಗಳನ್ನು ಕೇವಲ 15 ಕೋಟಿ ಮುಸ್ಲಿಮರು ಎದುರಿಸಬಲ್ಲರು ಎಂಬ ವಾರಿಸ್ ಪಠಾಣ್ ಕರ್ನಾಟಕದ ಕಲಬುರಗಿಯಲ್ಲಿ ನಡೆದ ಸಿಎಎ ವಿರೋಧಿ ಪ್ರತಿಭಟನಾ ಸಭೆಯಲ್ಲಿ ಹೇಳಿಕೆ ನೀಡಿದ ಬಳಿಕ ಗಿರಿರಾಜ್ ಸಿಂಗ್ ಈ ಪ್ರತಿಕ್ರಿಯೆ ನೀಡಿದ್ದಾರೆ.
ಪಠಾಣ್ ಹೇಳಿಕೆಯನ್ನು ಬಿಜೆಪಿ, ಆರ್ ಜೆಡಿ ಸೇರಿದಂತೆ ಹಲವು ರಾಜಕೀಯ ಪಕ್ಷಗಳು ಖಂಡಿಸಿವೆ. ಅಲ್ಲದೇ ಪಠಾಣ್ ನನ್ನು ಕೂಡಲೇ ಬಂಧಿಸಬೇಕೆಂದು ಒತ್ತಾಯಿಸಿದ್ದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rajasthan; ಗಣಿಯಲ್ಲಿ ಲಿಫ್ಟ್ ಕುಸಿದು ಸಂಕಷ್ಟಕ್ಕೆ ಸಿಲುಕಿದ್ದ 14 ಮಂದಿಯ ರಕ್ಷಣೆ
Android ಮೊಬೈಲ್ ಅಪ್ಡೇಟ್ ಮಾಡಿ: ಬಳಕೆದಾರರಿಗೆ ಕೇಂದ್ರ ಸರ್ಕಾರ ಎಚ್ಚರಿಕೆ
Excise Policy Case: ಆಪ್ ಆರೋಪಿ! ದಿಲ್ಲಿ ಹೈಕೋರ್ಟ್ಗೆ ಇ.ಡಿ. ಮಾಹಿತಿ
Election; ಮುಸ್ಲಿಮರಲ್ಲೂ ಮಿತ್ರರಿದ್ದಾರೆ, ನನ್ನ ವರ್ಚಸ್ಸಿಗೆ ಧಕ್ಕೆ ತರಲು ಯತ್ನ: ಪಿಎಂ
Kangana Ranaut ಬಳಿ 4.5 ಕೋಟಿ ಮೌಲ್ಯದ 50 ಪಾಲಿಸಿ: ಅಫಿದವಿತ್