ಆವಣಿ ಜಾತ್ರೆ: ನೀರಿಗೆ ರೈತರ ಪರದಾಟ


Team Udayavani, Feb 21, 2020, 1:39 PM IST

kolar-tdy-1

ಸಾಂಧರ್ಬಿಕ ಚಿತ್ರ

ಮುಳಬಾಗಿಲು: ಆಧುನಿಕತೆ ಅಬ್ಬರಕ್ಕೆ ಸಿಲುಕಿ ಗ್ರಾಮೀಣ ಸಂಸ್ಕೃತಿ ತನ್ನ ನೆಲೆ ಕಳೆದುಕೊಳ್ಳುತ್ತಿರುವ ಬೆನ್ನಲ್ಲೇ ಆವಣಿ ಆವಣಿ ಜಾತ್ರೆಯತ್ತ ರಾಸುಗಳು ಹರಿದು ಬರುತ್ತಿರುವುದು ರೈತರಲ್ಲಿ ಖುಷಿ ನೀಡಿದೆ.

ಮುಳಬಾಗಿಲು ತಾಲೂಕಿನ ಪುರಾಣ ಪ್ರಸಿದ್ಧ ಆವಣಿ ಶ್ರೀರಾಮಲಿಂಗೇಶ್ವರ ಕ್ಷೇತ್ರ ಪುರಾಣ ಪ್ರಸಿದ್ಧ ಸ್ಥಳ. ರಾಮಾಯಣದ ಮೇರು ವ್ಯಕ್ತಿಗಳಾದ ರಾಮ, ಲಕ್ಷ್ಮಣ, ಸೀತಾಮಾತೆ ವಾಸವಾಗಿದ್ದ ಸ್ಥಳ. ಅಶ್ವಮೇಧ ಯಾಗದ ಕುದುರೆ ಕಟ್ಟಿಹಾಕಿದ ಧೀಮಂತ ವ್ಯಕ್ತಿ ಗಳಾದ ಲವ-ಕುಶರ ಜನ್ಮಸ್ಥಳ ಹಾಗೂ ವಾಸದ ಮನೆ, ಸೀತಾಮಾತೆ ಜಿಗುಪ್ಸೆಗೊಂಡು ಭೂಗರ್ಭ ಸೇರಿದ ಪ್ರದೇಶ. ಬೆಟ್ಟದ ತಪ್ಪಲಿನಲ್ಲಿ ಶ್ರೀರಾಮಲಕ್ಷ್ಮಣರು ವಾಸವಾಗಿದ್ದ ವೇಳೆ ಅಲ್ಲಿ ಸ್ಥಾಪಿಸಲಾಗಿದ್ದ ಪಂಚಲಿಂಗಗಳೂ, ವಾಲ್ಮೀಕಿ ಮಹರ್ಷಿ ರಾಮಾಯಣ ಬರೆದ ಸ್ಥಳ ಮತ್ತು ಗ್ರಾಮದಲ್ಲಿನ ರಾಮಲಿಂಗೇಶ್ವರ ದೇವಾಲಯ ಮುಂತಾದ ಹಲವಾರು ರಾಮಾಯಣಕ್ಕೆ ಪೂರಕವಾದ ಕುರುಹು ಇವೆ ಎಂದು ನಂಬಲಾಗಿದೆ.

ಬೆಟ್ಟದ ತಪ್ಪಲಿನ ದಕ್ಷಿಣಕ್ಕೆ ಅಂತರಗಂಗೆ ಪ್ರತಿ ಯುಗಾದಿ ಹಬ್ಬದಂದು ವಿಶೇಷ ಪೂಜಾ ಕಾರ್ಯಕ್ರಮವಿರುತ್ತದೆ, ಇಂತಹ ಹಲವಾರು ಸ್ಥಳಗಳನ್ನು ಪ್ರಸ್ತುತ ಆವಣಿ ಬೆಟ್ಟದಲ್ಲಿ ಕಾಣಬಹುದಾಗಿದೆ. ಇಂತಹ ಪುರಾಣ ಪ್ರಸಿದ್ಧ ಸ್ಥಳದಲ್ಲಿ ಪ್ರತಿ ವರ್ಷ ಶಿವ ರಾತ್ರಿ ಹಬ್ಬದ ಮಾರನೇ ದಿನ ಅಂದರೆ ಈ ಬಾರಿ ಫೆ.23 ರಂದು ಸರ್ಕಾರದಿಂದ ಶ್ರೀರಾಮಲಿಂಗೇಶ್ವರ ಸ್ವಾಮಿ ಬ್ರಹ್ಮರಥೋತ್ಸವ ವಿಜೃಂಭಣೆಯಿಂದ ನಡೆಯಲಿದೆ. ರಥೋತ್ಸವದ ವೇಳೆ ಬ್ರಹ್ಮರಥದ ಮುಂಭಾಗದಲ್ಲಿ ಮಾತೆ ಕೀಲುಹೊಳಲಿ ಗ್ರಾಮದೇವತೆ ಸಲ್ಲಾಪುರಮ್ಮ ದೇವರ ಮೆರವಣಿಗೆ ಸಾಗುವುದರಿಂದ ರಥೋತ್ಸವ ಮೆರಗು ಹೆಚ್ಚಾಗಿರುತ್ತದೆ.

ಮತ್ತೂಂದಡೆ ಸದರೀ ಕ್ಷೇತ್ರದಲ್ಲಿ ಹಲವಾರು ವರ್ಷಗಳಿಂದಲೂ 15-20 ದಿನ ಭಾರೀ ದನಗಳ ಜಾತ್ರೆ ನಡೆಯಲಿದೆ. ಕರ್ನಾಟಕ, ಹಾವೇರಿ, ಗಂಗಾವತಿ, ಆಂಧ್ರ, ಬೆಜವಾಡಾ, ತಮಿಳುನಾಡು ಒಡಿಶಾ ಹಾಗೂ ಗೋವಾ ರಾಜ್ಯಗಳಿಂದ ರಾಸು ಖರೀದಿಸಲು ವ್ಯಾಪಾರಿಗಳು ಆಗಮಿಸುತ್ತಾರೆ. ಶುಕ್ರವಾರ ಮತ್ತು ಶನಿವಾರ ಅಮಾವಾಸ್ಯೆ ಇರುವುದರಿಂದ ರೈತರು ಎತ್ತುಗಳನ್ನು ಮಾರಲು ಎತ್ತಿನ ಗಾಡಿಗಳಲ್ಲಿ ಹುಲ್ಲನ್ನು ತುಂಬಿಕೊಂಡು ರೈತರು ಆಗಮಿಸಿ ಬಿಡಾರ ಹೂಡಿದ್ದಾರೆ. ಆಗಲೇ ಬಂದಿರುವ ವ್ಯಾಪಾರಸ್ಥರು ವ್ಯಾಪಾರ ವಹಿವಾಟು ಆರಂಭಿಸಿದ್ದು ಒಂದು ಜೊತೆ ಎತ್ತಿನ ಬೆಲೆ ಕನಿಷ್ಠ 1 ಲಕ್ಷದಿಂದ 2.75ಲಕ್ಷ ರೂ.ವರೆಗೆ ಮಾರಾಟವಾಗುತ್ತಿದೆ. ಅಲ್ಲದೇ ಜಾತ್ರೆಯಲ್ಲಿ ಎತ್ತು-ಗಾಡಿಗಳ ಶುಲ್ಕ ವಸೂಲಿ ಮಾಡದಿರಲು ನಿರ್ಧರಿಸಲಾಗಿದೆ. ಪ್ರತಿ ವರ್ಷ ರಥೋತ್ಸವ ಹಾಗೂ ಜಾತ್ರೆ ವೀಕ್ಷಿಸಲು ಲಕ್ಷಾಂತರ ಜನ ಆಗಮಿಸುತ್ತಾರೆ.

ಈ ಬಾರಿ ಕಾಲು ಬಾಯಿ ಜ್ವರ ಕಡಿವಾಣಕ್ಕಾಗಿ ಪಶುವೈದ್ಯಕೀಯ ಇಲಾಖೆ ಸಹಾಯಕ ನಿರ್ದೇಶಕ ತುಳಸಿರಾಮ್‌ ಮಾರ್ಗದರ್ಶನದಂತೆ ವೈದ್ಯರು ಹಲವಾರು ಕ್ರಮ ಕೈಗೊಂಡಿದ್ದಾರೆ. ಆದರೆ, ನೀರಿಗೆ ಸಮಸ್ಯೆಯಾಗಿದೆ.  ಇನ್ನು ಅರಣ್ಯ ಇಲಾಖೆ ಅಧಿಕಾರಿಗಳು ಅತ್ತ ಕಡೆ ಸುಳಿಯಲಿಲ್ಲ. ಆವಣಿ ಗ್ರಾಪಂ ಪಿಡಿಒ, ತೊಟ್ಟಿಗಳಿಗೆ ನೀರು ಸರಬರಾಜು ಮಾಡಲು ತಿಳಿಸದೇ ಇರುವುದರಿಂದ ಟ್ಯಾಂಕರನ್ನು ಸುಮ್ಮನೇ ನಿಲ್ಲಿಸಲಾಗಿದೆ ಎಂದು ಕೆಎಸ್‌ಆರ್‌ಟಿಸಿ ಅಧಿಕಾರಿಗಳು ಪ್ರತಿಕ್ರಿಯಿಸಿದರು.

ಫೆ.23 ರಂದು ನಡೆಯಲಿರುವ ಜಿಲ್ಲೆಯಲ್ಲಿಯೇ ಅತೀ ದೊಡ್ಡದಾದ 62ಅಡಿಗಳ ಎತ್ತರದ ಶೃಂಗಾರ ಭರಿತ ಬ್ರಹ್ಮ ರಥೋತ್ಸವಕ್ಕೆ ಕರ್ನಾಟಕ ಹಾಗೂ ಹೊರ ರಾಜ್ಯಗಳಿಂದ ಲಕ್ಷಾಂತರ ಜನ ಪಾಲ್ಗೊಳ್ಳುತ್ತಾರೆ. ಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಚಂದ್ರಶೇಖರ್‌ ಬಸ್‌ ದರ ಏರಿಕೆ ಮಾಡದೇ ಹಳೆ ದರದಂತೆಯೇ ಮುಳಬಾಗಿಲು, ಕೋಲಾರ, ಕೆಜಿಎಫ್, ಶ್ರೀನಿವಾಸಪುರ, ಮಾಲೂರು ಡಿಪೋಗಳಿಂದ ಒಂದು ವಾರ ವಿಶೇಷ ಎಲ್ಲಾ ಮಾರ್ಗಗಳಲ್ಲಿ 60 ಬಸ್‌ ಮತ್ತು ರಥೋತ್ಸವದಂದು 160-170 ಬಸ್‌ ನಿಯೋಜಿಸಿದ್ದಾರೆ. ಅಹಿತಕರ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಪಿಎಸ್‌ಐ ಪ್ರದೀಪ್‌ಸಿಂಗ್‌ ಸ್ಥಳದಲ್ಲಿ ಹಾಜರಿದ್ದು ಜಾತ್ರೆಯಾದ್ಯಂತ ಸಿಸಿ ಕ್ಯಾಮೆರಾ ಹಾಕಿಸಿ ಮತ್ತು ರಕ್ಷಣೆ ಗಾಗಿ ನೂರಾರು ಪೊಲೀಸರನ್ನು ನಿಯೋಜಿಸಲು ಮುಂದಾಗಿದ್ದಾರೆ.

ಜಾನುವಾರುಗಳಿಗೆ ಉಚಿತ ಮೇವು ಮತ್ತು ನೀರಿನ ಸೌಕರ್ಯ ಒದಗಿಸಬೇಕೆಂದು ಜಾನುವಾರು ಮಾರಾಟ ಮಾಡಲು ಬಂದಿರುವ ದೊಮ್ಮಸಂದ್ರ ಮಂಜುನಾಥ್‌, ವೆಂಕಟೇಶಪ್ಪ ತಾಲೂಕು ಆಡಳಿತಕ್ಕೆ ಮನವಿ ಮಾಡಿದ್ದಾರೆ. ಆದರೆ ತಹಶೀಲ್ದಾರ್‌ ರಾಜಶೇಖರ್‌ ಮಾತ್ರ ಇದ್ಯಾವುದರ ಬಗ್ಗೆ ತಮಗೆ ಸಂಬಂಧವೇ ಇಲ್ಲವೆನ್ನುವಂತೆ ವರ್ತಿಸುತ್ತಿದ್ದಾರೆಂದು ಸಾರ್ವಜನಿಕರು ಆರೋಪಿಸಿದ್ದಾರೆ.

ಕುಡಿಯಲು ನೀರಿಲ್ಲ :   ಗುರುವಾರವೇ ಹೊಸಕೋಟೆ ತಾಲೂಕು ತಾವರೆಕೆರೆ, ಆಂಧ್ರದ ಕೆ.ನಕ್ಕನಪಲ್ಲಿ, ಶಿಡ್ಲಘಟ್ಟ ತಾಲೂಕು ತಲಕಾಯಲಬೆಟ್ಟ, ಮಾಲೂರಿನ ಹೆಡಗಿನಬೆಲೆ, ಕೋಲಾರ ತಂಬಿಹಳ್ಳಿ, ತಾಲೂಕಿನ ದೊಮ್ಮಸಂದ್ರ, ಕುರುಡುಮಲೆ ಸೇರಿದಂತೆ ರಾಜ್ಯ ಮತ್ತು ಅಂತರ ರಾಜ್ಯಗಳಿಂದ ನೂರಾರು ಜೋಡಿಗಳ ರಾಸುಗಳು ಆಗಮಿಸಿವೆ. ಆದರೆ, ನೀರಿನ ಸೌಕರ್ಯ ಕಲ್ಪಿಸಲು ಆವಣಿ ಗ್ರಾಪಂ ಪಿಡಿಒ ಮಂಗಳಾಂಬ ಮುಂದಾಗಿಲ್ಲ. ಇನ್ನು ಮನೆಗಳ ಆವರಣಗಳಲ್ಲಿರುವ ತೊಟ್ಟಿಗಳಿಂದಲೇ ಕಾಡಿ ಬೇಡಿ ತೆಗೆದುಕೊಂಡು ಹೋಗುತ್ತಿದ್ದಾರೆ. ಅಲ್ಲದೇ, ಮತ್ತೆ ಕೆಲವು ರೈತರು ಜಾನುವಾರುಗಳನ್ನು ದೂರದ ರಾಮಾಪುರ ಕೆರೆಯಲ್ಲಿ ನೀರು ಕುಡಿಸುವ ಸ್ಥಿತಿ ನಿರ್ಮಾಣವಾಗಿದೆ.

ಜಾತ್ರೆಯಲ್ಲಿ ಜನ, ಜಾನುವಾರುಗಳಿಗೆ ಕುಡಿವ ನೀರಿನ ಸೌಕರ್ಯಕ್ಕಾಗಿ ವಿವಿಧ ಇಲಾಖೆ ಅಧಿಕಾರಿಗಳಿಗೆ ಪೂರ್ವಭಾವಿ ಸಭೆಯಲ್ಲಿ ಸೂಚಿಸಲಾಗಿದೆ. ಗುರುವಾರವೇ ನೀರು ಸರಬರಾಜು ಮಾಡಬೇಕಾಗಿದ್ದರೂ ಮಾಡಿರಲಿಲ್ಲ. ಹೀಗಾಗಿ ಶುಕ್ರವಾರದಿಂದ ಕ್ರಮ ಕೈಗೊಳ್ಳಲಿದ್ದಾರೆ.  –ಸುಬ್ರಮಣ್ಯಂ, ಆವಣಿ ರಾಜಸ್ವ ನಿರೀಕ್ಷಕ

 

-ಎಂ.ನಾಗರಾಜಯ್ಯ

ಟಾಪ್ ನ್ಯೂಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.