ಕಾರ್ಮಿಕರಿಗೆ ಪ್ರೇರಣೆಯಾದ ಸಿಇಒ


Team Udayavani, Feb 21, 2020, 3:48 PM IST

bk-tdy-2

ಬಾಗಲಕೋಟೆ: ಕೂಲಿ ಕಾರ್ಮಿಕರೊಂದಿಗೆ ತಾವು ಸಹ ಕೆಲಸದಲ್ಲಿ ಸಾಥ್‌ ನೀಡುವ ಮೂಲಕ ಜಿಪಂ ಸಿಇಒ ಗಂಗೂಬಾಯಿ ಮಾನಕರ ಕಾರ್ಮಿಕರಿಗೆ ಪ್ರೇರಣೆಯಾದರು.

ಜಿಪಂ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಯೋಗದಲ್ಲಿ ಉದ್ಯೋಗ ಖಾತರಿ ಯೋಜನೆಯ ಮಾಹಿತಿ ಅರಿವು ಮೂಡಿಸುವ ನಿಟ್ಟಿನಲ್ಲಿ ಹುನಗುಂದ ತಾಲೂಕಿನ ಮುಗುನೂರು ಗ್ರಾಪಂ ವ್ಯಾಪ್ತಿಯ ಜಮೀನಿನಲ್ಲಿ ಉದ್ಯೋಗ ಖಾತರಿ ಯೋಜನೆಯಡಿ ಪಿಆರ್‌ಇಡಿಯಿಂದ ನಿರ್ಮಿಸಲಾಗುತ್ತಿರುವ ಚೆಕ್‌ ಡ್ಯಾಂ ಕಾಮಗಾರಿ ವೀಕ್ಷಣೆಯ ಭೇಟಿ ನೀಡಿದ ವೇಳೆ ಸ್ವತಃ ಜಿಪಂ ಸಿಇಒ ಕಾರ್ಮಿಕರೊಂದಿಗೆ ಮಣ್ಣು ಬುಟ್ಟಿಯಲ್ಲಿ ತುಂಬಿಕೊಂಡು ಟ್ರ್ಯಾಕ್ಟರ್‌ಗಳಲ್ಲಿ ಹಾಕಿದರು.

ಕಾರ್ಮಿಕರಿಗೆ ಕೇವಲ ಉದ್ಯೋಗ ಖಾತರಿ ಯೋಜನೆಯಡಿ ಕೂಲಿ ಸಿಗುವುದಲ್ಲದೇ ತಮ್ಮ ಜಮೀನುಗಳಲ್ಲಿ ಕೃಷಿ ಹಾಗೂ ತೋಟಗಾರಿಕೆಯ ವಿವಿಧ ಚಟುವಟಿಕೆ ಕೈಗೊಂಡು ತಾವೇ ಕೆಲಸ ಮಾಡಿ ಕೂಲಿಯನ್ನು ಸಹ ಪಡೆದುಕೊಳ್ಳಬಹುದಾಗಿದೆ. ಉದ್ಯೋಗ ಖಾತರಿ ಯೋಜನೆ ದುಡಿಯುವ ಕೈಗಳಿಗೆ ಮಾತ್ರವಲ್ಲದೇ ರೈತರಿಗೂ ವರದಾನವಾಗಿ ಪರಿಣಮಿಸಿದ್ದು, ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಕೃಷಿ ಇಲಾಖೆಯಿಂದ ನಿರ್ಮಾಣಗೊಳ್ಳುತ್ತಿರುವ ಕೃಷಿ ಹೊಂಡ ಕಾಮಗಾರಿಗಳನ್ನು ವೀಕ್ಷಿಸಿದರು.

ಮುಗನೂರು ವ್ಯಾಪ್ತಿಯ ಬಸರಿಕಟ್ಟಿ ಗ್ರಾಮಕ್ಕೆ ಭೇಟಿ ನೀಡಿ, ಶಾಲೆಗಳಿಗೆ ತೆರಳಿ ಶೌಚಾಲಯ ವೀಕ್ಷಿಸಿದರು. ನಂತರ ವಿವಿಧ ತರಗತಿಗಳ ಕೊಠಡಿಗೆ ತೆರಳಿ ಮಕ್ಕಳ ಕಲಿಕಾ ಮಟ್ಟ ಪರಿಶೀಲಿಸಿದರು. ನಂತರ ಬಸರಿಕಟ್ಟಿಯಿಂದ ಹೊರಟಾಗ ಹಾದಿಯಲ್ಲಿ ಸಾಮಾಜಿಕ ಅರಣ್ಯ ಇಲಾಖೆಯ ನಡತೋಪು ವೀಕ್ಷಿಸಿದರು. ಈ ವೇಳೆ ವಲಯ ಅರಣ್ಯಧಿಕಾರಿ ಎಂ.ಎಂ.ಸಜ್ಜನ ಪ್ರಸಕ್ತ ಸಾಲಿನಲ್ಲಿ 190 ಕಿ.ಮೀ ನವರೆಗೆ ಗುರಿ ಹೊಂದಲಾಗಿತ್ತು. ಈ ಪೈಕಿ 192 ಕಿ.ಮೀ.ನಷ್ಟು ಗಿಡಗಳನ್ನು ನೆಡಸಲಾಗಿದೆ ಎಂದರು.

ರಕ್ಕಸಗಿ ಗ್ರಾಪಂ ವ್ಯಾಪ್ತಿಯ ಹೊನ್ನರಹಳ್ಳಿ ಗ್ರಾಮಕ್ಕೆ ತೆರಳಿದ ಮಾನಕರ ಸ್ವ-ಸಹಾಯ ಗುಂಪುಗಳಿಗೆ ನಿರ್ಮಿಸಲಾದ ವರ್ಕ್‌ ಶೆಡ್‌ ವೀಕ್ಷಿಸಿದರು. ವರ್ಕ್‌ ಶೆಡ್‌ನ‌ಲ್ಲಿರುವ ಸ್ವ-ಸಹಾಯ ಗುಂಪುಗಳಿಗೆ ಇರುವ ಸೌಲಭ್ಯಗಳ ಬಗ್ಗೆ ಮನವರಿಕೆ ಮಾಡಿಕೊಡಲಾಯಿತು. ಅವರು ತಯಾರಿಸಿದ ಬ್ಯಾಗ್‌ಗಳನ್ನು ವೀಕ್ಷಿಸಿ, ವಿವಿಧ ಕೌಶಲ್ಯ ತರಬೇತಿ, ಸಾಲ ಸೌಲಭ್ಯ, ಆರ್ಥಿಕ ಸಹಾಯಧನ, ತಿಂಡಿ ತಿನಿಸುಗಳ ತಯಾರಿಸುವದರಿಂದ ಉತ್ತಮ ಆದಾಯ ಪಡೆಯಬಹುದಾಗಿದೆ ಎಂದು ಸಿಇಒ ಮಾನಕರ ತಿಳಿಸಿದರು.

ಸ್ವ-ಸಹಾಯ ಗುಂಪುಗಳಿಗೆ ವರ್ಕ್‌ಶೆಡ್‌ ನಿರ್ಮಿಸಿ ಕೊಡಲಾಗುತ್ತಿದ್ದು, ಜಿಲ್ಲೆಯಲ್ಲಿ ಈಗಾಗಲೇ ಒಟ್ಟು 6 ವರ್ಕಶೆಡ್‌ ಕಾಮಗಾರಿಗಳು ನಡೆಸಲಾಗುತ್ತಿದೆ. ಜಮಖಂಡಿ ತಾಲೂಕಿನ ಕಣ್ಣೂರ ಗ್ರಾಪಂ ವ್ಯಾಪ್ತಿಯಲ್ಲಿ 2, ಸಾವಳಗಿಯಲ್ಲಿ 1, ಬಾಗಲಕೋಟೆ ತಾಲೂಕಿನ ಮುಗಳೊಳ್ಳಿ ಹಾಗೂ ತುಳಸಿಗೇರಿಯಲ್ಲಿ ತಲಾ 1 ಹಾಗೂ ಹುನಗುಂದ ತಾಲೂಕಿನ ರಕ್ಕಸಗಿ ಗ್ರಾಪಂ ವ್ಯಾಪ್ತಿಯ ಹೊನ್ನರಹಳ್ಳಿಯಲ್ಲಿ 1 ನಿರ್ಮಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ. ಹುನಗುಂದ ತಾಪಂ ಕಾರ್ಯ ನಿರ್ವಾಹಕ ಅಧಿಕಾರಿ ಪುಷ್ಪಾ ಕಮ್ಮಾರ, ಪಂಚಾಯತ ರಾಜ್‌ ಇಲಾಖೆಯ ಸಹಾಯಕ ಅಭಿಯಂತರ ಎಂ.ಎಂ. ಪಾಟೀಲ, ಎಡಿಪಿಸಿಯ ನಾಗರಾಜ ರಾಜನಾಳ, ಜಿಲ್ಲಾ ಐಇಸಿ ಸಂಯೋಜಕ ಪವನ ಕುಲಕರ್ಣಿ, ಜಿಲ್ಲಾ ಎಂಐಎಸ್‌ ಸಂಯೋಜಕ ಉಜ್ವಲ ಸಕ್ರಿ, ತಾಲೂಕಾ ಐಇಸಿ ಸಂಯೋಜಕಿ ಸುವರ್ಣ ಭಜಂತ್ರಿ, ತಾಂತ್ರಿಕ ಸಯೋಜಕ ವಿಜಯಕುಮಾರ ಚಿಂದಿ, ಪಂಚಾಯತ ಅಭಿವೃದ್ಧಿ ಅಧಿಕಾರಿಗಳಾದ ಎಂ.ಎಸ್‌. ಗೋಡಿ, ಹುಲ್ಲಪ್ಪ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.