ಸಂಸ್ಕೃತಿ ಬೆಳವಣಿಗೆಗೆ ಸಹಕಾರ ಅಗತ್ಯ
ಸುಗ್ಗಿ-ಹುಗ್ಗಿ ಕಾರ್ಯಕ್ರಮ ನಿತ್ಯ ಬದುಕಿನಲ್ಲಿ ಹಾಸು ಹೊಕ್ಕಾದ ಜಾನಪದ ಸಾಹಿತ್ಯ
Team Udayavani, Feb 21, 2020, 3:43 PM IST
ಹುಣಸಗಿ: ನಾಡಿನ ಕಲೆ-ಸಂಸ್ಕೃತಿ-ಸಾಹಿತ್ಯ ಉಳಿಸುವ ನಿಟ್ಟಿನಲ್ಲಿ ಕನ್ನಡ ಸಂಸ್ಕೃತಿ ಇಲಾಖೆ ಶ್ರಮಿಸುತ್ತಿದ್ದು, ಇವುಗಳನ್ನು ಉಳಿಸಿ-ಬೆಳೆಸುವಲ್ಲಿ ಸಮುದಾಯದ ಸಹಕಾರ ಅಗತ್ಯ ಎಂದು ಯಾದಗಿರಿ ಜಿಪಂ ಅಧ್ಯಕ್ಷ ರಾಜಶೇಖರಗೌಡ ಪಾಟೀಲ ಹೇಳಿದರು.
ಹುಣಸಗಿ ತಾಲೂಕಿನ ಕಲ್ಲದೇವನಹಳ್ಳಿ ಗ್ರಾಮದಲ್ಲಿ ನಡೆದ ಸುಗ್ಗಿ ಹುಗ್ಗಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ದಿನನಿತ್ಯ ಬದುಕಿನಲ್ಲಿ ಜಾನಪದ ಸಾಹಿತ್ಯ ಹಾಸುಹೊಕ್ಕಾಗಿದ್ದು, ಜಾನಪದ ಸಾಹಿತ್ಯ ಉಳಿಸಿ- ಬೆಳೆಸುವುದು ಎಲ್ಲರ ಕರ್ತವ್ಯ ಎಂದರು.
ಯುವ ಮುಖಂಡ ಬಬ್ಲು ಗೌಡ ಮಾತನಾಡಿ, ಬದಲಾದ ಕಾಲಮಾನ ಮತ್ತು ಜೀವನ ಶೈಲಿಯಲ್ಲಿ ನಮ್ಮ ಸಂಸ್ಕೃತಿ ಮರೆಯಾಗುತ್ತಿರುವುದು ಕಳವಳಕಾರಿ ಸಂಗತಿ. ಈ ಹಿಂದೆ ನಮ್ಮ ಪೂರ್ವಜರು ಕೃಷಿ ಚಟುವಟಿಕೆಯೊಂದಿಗೆ ಜಾನುವಾರು ಸಾಕುವ ಮೂಲಕ ಬದುಕು ಕಟ್ಟಿಕೊಳ್ಳುತ್ತಿದ್ದರು. ಇಂದು ಅವೆಲ್ಲ ಕಣ್ಮರೆಯಾಗಿ ಯಾಂತ್ರಿಕ ಬದುಕು ಸಾಗಿಸುತ್ತಿದ್ದೇವೆ ಎಂದರು.
ತೊಟ್ಟಿಲು ಹಾಗೂ ಸೋಬಾನ ಹಾಡುಗಳು ಎಲ್ಲೆಡೆ ಕೇಳಿ ಬರುತ್ತಿದ್ದವು. ಕಾಲಕ್ರಮೇಣ ಎಲ್ಲವೂ ಮರೆಯಾಗುತ್ತಿವೆ ಎಂದು ಬೇಸರ ವ್ಯಕ್ತಪಡಿಸಿದರು. ಜಾನಪದ ಅಕಾಡೆಮಿ ಸದಸ್ಯ ಅಮರಯ್ಯಸ್ವಾಮಿ ಜಾಲಿಬೆಂಚಿ ಮಾತನಾಡಿದರು. ಈ ಸಂದರ್ಭದಲ್ಲಿ ತಾಪಂ ಸದಸ್ಯ ರವಿಕುಮಾರ ರಾಠೊಡ, ಗ್ರಾಪಂ ಉಪಾಧ್ಯಕ್ಷ ಮಲ್ಲನಗೌಡ ಹಂದ್ರಾಳ, ಸಿದ್ದಲಿಂಗಯ್ಯ ಹಿರೇಮಠ, ಸಿದ್ದನಗೌಡ ಕರಿಬಾವಿ, ಸಿದ್ದನಗೌಡ ಪೊಲೀಸ್ ಪಾಟೀಲ, ಬಾಪುಗೌಡ ಮಾಲಿಪಾಟೀಲ, ಸೇರಿದಂತೆ ಇತರರು ಇದ್ದರು.
ಕಾರ್ಯಕ್ರಮದಲ್ಲಿ ಪೂಜಾ ಕುಣಿತ, ಚಿಲಿಪಿಲಿ ಗೊಂಬೆ, ಕೊಂಬು ಕಹಳೆ, ತಮಟೆ ವಾದನ, ಹಗಲು ವೇಷ, ವೀರಭದ್ರ ಕುಣಿತ ಜನಮನ ಸೆಳೆದವು. ಗ್ರಾಮದ ಪ್ರಮುಖ ಬೀದಿಗಳಲ್ಲಿ ವಿವಿಧ ಕಲಾತಂಡಗಳ ಮೆರವಣಿಗೆ ನಡೆಯಿತು. ಶಿಕ್ಷಕ ಎಸ್.ಎಸ್. ಮಾರನಾಳ ನಿರೂಪಿಸಿ, ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Wadgera; ಜಮೀನಿನಲ್ಲಿ ಕಾಣಿಸಿಕೊಂಡು ರೈತರಿಗೆ ಆತಂಕ ತಂದ ಮೊಸಳೆ
Eknath Shindeಗೆ ತಾಕತ್ ಇದ್ದರೆ ನಮ್ಮ ರಾಜ್ಯಕ್ಕೆ ಬರಲಿ: ಸಚಿವ ದರ್ಶನಾಪುರ ಸವಾಲ್
Yadgir: ಸಿಡಿಲು ಬಡಿದು ಕುರಿಗಾಹಿ ಮೃತ್ಯು, 17 ಕುರಿಗಳು ಸಾವು
SSLC Exam Result; ಮತ್ತೆ ಕೊನೆಯ ಸ್ಥಾನ ಪಡೆದ ಯಾದಗಿರಿ..; ಕಾರಣವೇನು?
CD ಮಾಡುವುದರಲ್ಲಿ ಡಿಕೆಶಿ ನುರಿತವರು: ಬಿಜೆಪಿ ಅಭ್ಯರ್ಥಿ ರಾಜುಗೌಡ ವ್ಯಂಗ್ಯ
MUST WATCH
ಹೊಸ ಸೇರ್ಪಡೆ
2nd PUC ಪರೀಕ್ಷೆ-2 ಫಲಿತಾಂಶ ಪ್ರಕಟ; ಶೇ. 35.25 ವಿದ್ಯಾರ್ಥಿಗಳು ಉತ್ತೀರ್ಣ
Indi: ಕೃಷಿ ಹೊಂಡದಲ್ಲಿ ಬಿದ್ದು ಇಬ್ಬರು ಬಾಲಕರು ಮೃತ್ಯು
Thirthahalli: ಸಾಲ ಬಾಧೆಯಿಂದ ರೈತ ಆತ್ಮಹತ್ಯೆ
Poonam Pandey: ನನ್ನ ಬೆತ್ತಲೆ ವಿಡಿಯೋ ಲೀಕ್ ಮಾಡಿದ್ದೇ ನನ್ನ ಮಾಜಿ ಗೆಳೆಯ – ಪೂನಂ ಪಾಂಡೆ
Ragini Dwivedi; ಸಂಜು ಜೊತೆ ರಾಗಿಣಿ ಡ್ಯಾನ್ಸ್ ; ಮಂಗ್ಲಿ ಹಾಡಿಗೆ ಭರ್ಜರಿ ಸ್ಟೆಪ್