14 ದಿನ ನ್ಯಾಯಾಂಗ ಬಂಧನ


Team Udayavani, Feb 22, 2020, 3:05 AM IST

14dina

ಬೆಂಗಳೂರು: ಸಿಎಎ ವಿರೋಧಿ ಕಾರ್ಯಕ್ರಮದಲ್ಲಿ “ಪಾಕಿಸ್ತಾನ್‌ ಜಿಂದಾಬಾದ್‌’ ಘೋಷಣೆ ಕೂಗಿ ದೇಶದ್ರೋಹ ಆರೋಪ ಪ್ರಕರಣದಲ್ಲಿ ಬಂಧಿತಳಾಗಿರುವ ಅಮೂಲ್ಯ ಲಿಯೋನಾ ಜೈಲು ಸೇರಿದ್ದು, 14 ದಿನ ನ್ಯಾಯಾಂಗ ಬಂಧನ ವಿಧಿಸಿ ಮ್ಯಾಜಿಸ್ಟ್ರೇಟ್‌ ನ್ಯಾಯಾಧೀಶರು ಆದೇಶಿಸಿದ್ದಾರೆ.

ಉಪ್ಪಾರಪೇಟೆ ಪೊಲೀಸರು ಸ್ವಯಂಪ್ರೇರಿತವಾಗಿ ಅಮೂಲ್ಯ ವಿರುದ್ಧ ದೇಶದ್ರೋಹ ಸೇರಿ ಮತ್ತಿತರ ಆರೋಪಗಳ ಅನ್ವಯ ಪ್ರಕರಣ ದಾಖಲಿಸಿಕೊಂಡಿದ್ದರು. ಘಟನೆ ಸಂಬಂಧ ಆಕೆಯನ್ನು ತೀವ್ರ ವಿಚಾರಣೆ ನಡೆಸಿ, ಹೇಳಿಕೆ ಪಡೆದುಕೊಂಡ ಪೊಲೀಸರು ತಡರಾತ್ರಿ ಕೋರಮಂಗಲದ ರಾಷ್ಟ್ರೀಯ ಕ್ರೀಡಾ ಗ್ರಾಮದಲ್ಲಿರುವ 5ನೇ ಎಸಿಎಎಂ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದರು. ಈ ವೇಳೆ ನ್ಯಾಯಾಧೀಶರಾದ ಶಿರಿನ್‌ ಜೆ ಅನ್ಸಾರಿ ಅವರು, ಆರೋಪಿ ಅಮೂಲ್ಯಳಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಆದೇಶ ನೀಡಿದ್ದಾರೆ.

ನ್ಯಾಯಾಧೀಶರ ಮುಂದೆ ಅಮೂಲ್ಯಳಿಗೆ ಜಾಮೀನು ನೀಡುವಂತೆ ಆಕೆಯ ಪರ ವಕೀಲರು ಮನವಿ ಮಾಡಿದರು. ಆದರೆ, ನ್ಯಾಯಾಧೀಶರು ಜಾಮೀನು ಅರ್ಜಿಯನ್ನು ಸಾಮಾನ್ಯ ಅರ್ಜಿಯ ಮಾದರಿಯಲ್ಲಿ ವಿಚಾರಣೆ ನಡೆಸಲಾಗುವುದು ಎಂದು ತಿಳಿಸಿದರು ಎಂದು ಪೊಲೀಸ್‌ ಮೂಲಗಳು ತಿಳಿಸಿವೆ. ಆರೋಪಿ ಅಮೂಲ್ಯಳನ್ನು ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸುವ ವೇಳೆ ಆಕೆ ವಿಜಯದ ಸಂಕೇತ ತೋರಿಸಿ ಹೋಗಿರುವ ವಿಡಿಯೋ ಕೂಡ ವೈರಲ್‌ ಆಗಿದ್ದು ಸಾಕಷ್ಟು ಚರ್ಚೆಗೆ ಕಾರಣವಾಗಿದೆ.

ಗಲ್ಲು ಶಿಕ್ಷೆ ವಿಧಿಸಲಿ: ಪಾಕ್‌ ಪರ ಘೋಷಣೆ ಕೂಗಿದವರಿಗೆ ಜೀವಾವಧಿ ಶಿಕ್ಷೆಯಾಗಲಿ. ಒಂದು ವೇಳೆ ಉದ್ದೇಶಪೂರ್ವಕವಾಗಿ ಘೋಷಣೆಗಳನ್ನು ಕೂಗುವವರಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಮಾಜಿ ಸಚಿವ ಜಮೀರ್‌ ಅಹ್ಮದ್‌ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿ, ಒಂದು ಬಾರಿ ಹೇಳಿದ್ದರೆ ಬಾಯಿ ತಪ್ಪಿ ಹೇಳಿರಬಹುದು ಎಂದು ಭಾವಿಸಬಹುದಿತ್ತು. ಆದರೆ, ಒಂದೇ ಘೋಷಣೆ ಯನ್ನು ಮೂರು ಬಾರಿ ಹೇಳಿ¨ªಾರೆ. ಈ ಘಟನೆಯನ್ನು ತೀವ್ರವಾಗಿ ಖಂಡಿಸುತ್ತೇನೆ ಎಂದು ಹೇಳಿದರು.

ಆಯೋಜಕರ ವಿಚಾರಣೆ?: ಕಾರ್ಯಕ್ರಮ ಆಯೋಜಿಸಿದ್ದ ಸಂಘಟಕರನ್ನು ವಿಚಾರಣೆ ನಡೆಸಲೂ ಪೊಲೀಸರು ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ. ಆಕೆಯ ಸ್ವ ಇಚ್ಛಾ ಹೇಳಿಕೆ ಗಮನಿಸಿದಾಗ “ಉದ್ದೇಶ ಪೂರ್ವಕವಾಗಿಯೇ ಘೋಷಣೆ ‘ಕೂಗಿರುವುದು ಕಂಡು ಬರುತ್ತಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದರು. ಆಕೆ ಘೋಷಣೆ ಹಿಂದಿರುವ ಉದ್ದೇಶ ಹಾಗೂ ಪ್ರೇರಣೆ ಬಗ್ಗೆಯೂ ಪರಿಶೀಲಿಸಲಾಗುತ್ತದೆ. ಕಾರ್ಯಕ್ರಮದ ಆಯೋಜಕರನ್ನು ವಿಚಾರಣೆ ನಡೆಸಿ ಮಾಹಿತಿ ಪಡೆಯಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

ARMY (2)

ಕಾಶ್ಮೀರದ ಉಧಂಪುರದಲ್ಲಿ ಗ್ರಾಮ ರಕ್ಷಣ ಸಿಬಂದಿ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.