ನಾಟಕಗಳಿಂದ ಮನ ಪರಿವರ್ತನೆ: ಭೋವಿ ಜಗದ್ಗುರು


Team Udayavani, Feb 22, 2020, 11:44 AM IST

bk-tdy-2

ಬಾಗಲಕೋಟೆ: “ದೇಸಿ ಕಲೆಗಳಲ್ಲಿ ಒಂದಾದ ನಾಟಕವು, ಮನುಷ್ಯನ ಆತ್ಮ ನಿರೀಕ್ಷೆಯ ಕೇಂದ್ರವಾಗಿದ್ದು, ಅದು ಮನಪರಿವರ್ತನೆಯನ್ನು ಮಾಡುತ್ತದೆ’ ಎಂದು ಭೋವಿ ಗುರುಪೀಠದ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಹೇಳಿದರು.

ನಗರದ ಜಗದ್ಗುರು ಸಿದ್ಧರಾಮೇಶ್ವರ ಮಹಾಸಂಸ್ಥಾನ, ಶರಣಬಸವ ಅಪ್ಪಂಗಳ ಆಶ್ರಮದಲ್ಲಿ ಮಹಾಶಿವರಾತ್ರಿ ಮಹೋತ್ಸವ ಅಂಗವಾಗಿ ನಡೆದ ಜಮುರಾ ನಾಟಕೋತ್ಸವದ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಮಾನವ ತನ್ನ ಜೀವನದಲ್ಲಿ ನಕಾರಾತ್ಮಕ ಚಿಂತನೆಗಳನ್ನು ಅಳವಡಿಸಿಕೊಂಡರೆ ಸಂಸ್ಕಾರ, ಸಂಸ್ಕೃತಿ ನಾಶವಾಗುತ್ತದೆ. ನಾಟಕ ಸಂಸ್ಕೃತಿಯ ಒಂದು ಭಾಗವಾಗಿದೆ ಎಂದರು.

ಮಹಾತ್ಮ ಗಾಂಧಿ ಅವರು “ಸತ್ಯ ಹರಿಶ್ಚಂದ್ರ’ ನಾಟಕವನ್ನು ನೋಡಿ ತಮ್ಮ ಮನಪರಿವರ್ತನೆ ಮಾಡಿಕೊಂಡರು. ಸ್ವಾತಂತ್ರ್ಯ ಹೋರಾಟವನ್ನು ಅವರು ಸತ್ಯಾಗ್ರಹ ಎಂದು ಕರೆದರು. ತಮ್ಮ ಜೀವನದುದ್ದಕ್ಕೂ ಸತ್ಯದ ಮಾರ್ಗದಲ್ಲಿಯೇ ನಡೆದು ಮಹಾತ್ಮರಾಗಿದ್ದಾರೆ ಎಂದರು.

“ನಮ್ಮ ಮನೆಯ ಮಕ್ಕಳು ಸಂಸ್ಕೃತಿ, ಸಂಸ್ಕಾರದ ಭಾಗವಾಗಬೇಕು. ಆಗ ದೇಶದಲ್ಲಿ ಅಪರಾಧಗಳು ಕಡಿಮೆಯಾಗುತ್ತದೆ. ಅಪರಾಧ ಮಾಡುವವರ ದೃಷ್ಟಿಯನ್ನು ಬದಲಾಯಿಸಲು ಶರಣರ ವಚನ, ತತ್ವ ಹಾಗೂ ನಾಟಕಗಳು ಸಹಕಾರಿಯಾಗುತ್ತವೆ’ ಎಂದರು. ಸರಳತೆ, ಆದರ್ಶ, ತತ್ವ, ಜೀವನ ಮೌಲ್ಯಗಳನ್ನು ನಾಟಕಗಳು ನಮಗೆ ಕಲಿಸುತ್ತವೆ. ಜೀವನ ಪರ್ಯಂತ ನಾಟಕ ಮಾಡುವವರು ಇಂದು “ಸಾಯೋ ಆಟ’ ನಾಟಕ ನೋಡಲೇ ಬೇಕು. ನಾಟಕಗಳು ಪ್ರತಿಯೊಬ್ಬ ಮನುಷ್ಯನಿಗೆ ಸಂಸ್ಕಾರ ಕಲಿಸುತ್ತದೆ. ಒಳ್ಳೆಯದು ಮತ್ತು ಕೆಟ್ಟದರ ಬಗೆಗಿನ ಆಲೋಚನೆಯನ್ನು ನಾಟಕಗಳು ತಿಳಿಸುತ್ತವೆ. ಸಂಗೀತ, ನೃತ್ಯ ವಿವಿಧ ಕಲೆಗಳನ್ನು ಮನುಷ್ಯ ಆಸ್ವಾದಿಸಬೇಕು. ಮೊಬೈಲ್‌ ಬಳಕೆ, ಟಿ.ವಿ ವೀಕ್ಷಣೆಯನ್ನು ಕಡಿಮೆ ಮಾಡಿ ಪುಸ್ತಕ, ವಚನ ಸಾಹಿತ್ಯದತ್ತ ಮನುಷ್ಯ ಗಮನ ಹರಿಸಬೇಕು’ ಎಂದರು.

ನಿಂಗರಾಜ ಮಬ್ರುಮಕರ ಅವರು, ಕಂಪ್ಯೂಟರ್‌ ಕಲಿಕೆ ಪುಸ್ತಕ ಬಿಡುಗಡೆ ಹಾಗೂ ವಿತರಣೆ ಕುರಿತು ಮಾತನಾಡಿದರು. ತಿಪ್ಪೇರುದ್ರ ಸ್ವಾಮೀಜಿ ಮಾತನಾಡಿದರು. ಸಮಾರಂಭದಲ್ಲಿ ಧಾರವಾಡದ ಮಂಜುನಾಥ ಭೋವಿ, ಬೆಳವಡಿಯ ಲಕ್ಷಣ, ಸುರೇಶ್‌ ಹಾಗೂ ಧರ್ಮದರ್ಶಿಗಳಾದ ಆಸಂಗಿ, ದುಂಡಯ್ಯ ಕೋಟಿಮಠ ಇದ್ದರು. ಮಲ್ಲಿಕಾರ್ಜುನ ಕೋಲ್ಹಾರ ನಿರೂಪಿಸಿದರು.

ಟಾಪ್ ನ್ಯೂಸ್

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ

Vijayendra (2)

JDS ಪ್ರಜ್ವಲ್ ಗೆ ಮೋದಿ ನೆರವು; ದಾರಿ ತೋಚದೆ ಟೀಕಿಸುತ್ತಿದ್ದಾರೆ: ವಿಜಯೇಂದ್ರ ತಿರುಗೇಟು

1-wdsad

I.N.D.I.A ಕೂಟದಲ್ಲಿ ವರ್ಷಕ್ಕೆ ಒಬ್ಬರನ್ನು ಪ್ರಧಾನಿಯನ್ನಾಗಿಸಲು ಚಿಂತನೆ: ಅಣ್ಣಾಮಲೈ

1-wwwqe

HSC PARALI; ಲಕ್ಷದ್ವೀಪದಿಂದ ಮಂಗಳೂರಿಗೆ ಆಗಮಿಸಿದ ಹೈ ಸ್ಪೀಡ್ ಪರಲಿ

1-qweqweq

CNG ಇಂಧನ ನಿರಂತರ ಪೂರೈಕೆಗೆ ಕೇಂದ್ರಕ್ಕೆ ಯಶ್ ಪಾಲ್ ಸುವರ್ಣ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wdsad

I.N.D.I.A ಕೂಟದಲ್ಲಿ ವರ್ಷಕ್ಕೆ ಒಬ್ಬರನ್ನು ಪ್ರಧಾನಿಯನ್ನಾಗಿಸಲು ಚಿಂತನೆ: ಅಣ್ಣಾಮಲೈ

ಬಿಜೆಪಿ ಶಾಸಕ ಯತ್ನಾಳ ಶುಗರ್‌ ಫ್ಯಾಕ್ಟ್ರಿ ಹೆಂಗ್‌ ಕಟ್ಟಿದ್ರು: ಶಿವಾನಂದ ಪಾಟೀಲ

ಬಿಜೆಪಿ ಶಾಸಕ ಯತ್ನಾಳ ಶುಗರ್‌ ಫ್ಯಾಕ್ಟ್ರಿ ಹೆಂಗ್‌ ಕಟ್ಟಿದ್ರು: ಶಿವಾನಂದ ಪಾಟೀಲ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ

Vijayendra (2)

JDS ಪ್ರಜ್ವಲ್ ಗೆ ಮೋದಿ ನೆರವು; ದಾರಿ ತೋಚದೆ ಟೀಕಿಸುತ್ತಿದ್ದಾರೆ: ವಿಜಯೇಂದ್ರ ತಿರುಗೇಟು

Uppinangady: ತೀವ್ರ ಜ್ವರ; ಅರ್ಚಕ ಸಾವು

Uppinangady: ತೀವ್ರ ಜ್ವರ; ಅರ್ಚಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.