ರಣಥಂಬೋರ್ ನ್ಯಾಷನಲ್ ಪಾರ್ಕ್; 26 ಹುಲಿಗಳು ನಿಗೂಢವಾಗಿ ನಾಪತ್ತೆ-ತನಿಖೆಗೆ ಮನವಿ
ನಾಪತ್ತೆಯಾದ ಹುಲಿಗಳ ಪ್ರಕರಣಕ್ಕೆ ಸಂಬಂಧಿಸಿದಂತೆ ಉನ್ನತ ಮಟ್ಟದ ತನಿಖೆ ನಡೆಸಬೇಕು
Team Udayavani, Feb 22, 2020, 11:49 AM IST
ಜೈಪುರ:ಸುಮಾರು ಹತ್ತು ವರ್ಷಗಳಲ್ಲಿ ರಣಥಂಬೋರ್ ನ್ಯಾಷನಲ್ ಪಾರ್ಕ್(ರಾಜಸ್ಥಾನ್)ನಲ್ಲಿ 26 ಹುಲಿಗಳು ನಾಪತ್ತೆಯಾಗಿರುವ ಅಂಶ ಬೆಳಕಿಗೆ ಬಂದಿದೆ. ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರದ(ಎನ್ ಟಿಸಿಎ) ಸದಸ್ಯೆ ದಿಯಾ ಕುಮಾರಿ ಕೇಂದ್ರ ಪರಿಸರ ಮತ್ತು ಅರಣ್ಯ ಸಚಿವ ಪ್ರಕಾಶ್ ಜಾವ್ಡೇಕರ್ ಗೆ ಪತ್ರ ಬರೆಯುವ ಮೂಲಕ ವಿಷಯ ಬಹಿರಂಗವಾಗಿದೆ.
ನಾಪತ್ತೆಯಾದ ಹುಲಿಗಳ ಪ್ರಕರಣಕ್ಕೆ ಸಂಬಂಧಿಸಿದಂತೆ ಉನ್ನತ ಮಟ್ಟದ ತನಿಖೆ ನಡೆಸಬೇಕೆಂದು ದಿಯಾ ಕುಮಾರಿ ವಿನಂತಿಸಿಕೊಂಡಿದ್ದಾರೆ.
ಫೆಬ್ರವರಿ 19ರಂದು ಕೇಂದ್ರ ಸಚಿವರಿಗೆ ಬರೆದಿರುವ ಪತ್ರದಲ್ಲಿ, ರಾಜ್ಯ ಸರ್ಕಾರಕ್ಕೆ ಇತ್ತೀಚೆಗೆ ಸಲ್ಲಿಸಲಾಗಿರುವ ಗೌಪ್ಯ ವರದಿಯಲ್ಲಿ, ರಣಥಂಭೋರ್ ನ್ಯಾಷನಲ್ ಪಾರ್ಕ್ ನಲ್ಲಿ 116 ಹುಲಿಗಳಿವೆ. ಇದರಲ್ಲಿ 26 ಹುಲಿಗಳು ಪಾರ್ಕ್ ನಿಂದ ನಾಪತ್ತೆಯಾಗಿರುವುದಾಗಿ ತಿಳಿಸಿದೆ.
ಈ ನ್ಯಾಷನಲ್ ಪಾರ್ಕ್ ಹುಲಿಗಳ ಸಂರಕ್ಷಣೆಗೆ ಇದ್ದಿರುವುದು ವಿನಃ, ಹುಲಿಗಳ ಸಂಖ್ಯೆಯನ್ನು ಕಡಿಮೆಗೊಳಿಸಲು ಅಲ್ಲ. ಅಧಿಕಾರಿಗಳು ಕೂಡಾ ಅರೆಮನಸ್ಸಿನಿಂದ, ಬೇಜವಾಬ್ದಾರಿತನದಿಂದ ಕಾರ್ಯ ನಿರ್ವಹಿಸಿದ್ದರ ಪರಿಣಾಮ ಇದಾಗಿದೆ ಎಂದು ಪತ್ರದಲ್ಲಿ ದಿಯಾ ಉಲ್ಲೇಖಿಸಿದ್ದಾರೆ.
ಹುಲಿಗಳ ನಾಪತ್ತೆ ಹಿಂದೆ ಯಾರಿದ್ದಾರೆ ಎಂಬುದನ್ನು ಪತ್ತೆ ಹಚ್ಚಿ ಅಂತಹವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವ ಮೂಲಕ ಇನ್ಮುಂದೆ ಇಂತಹ ಘಟನೆ ನಡೆಯದಂತೆ ತಡೆಯಬೇಕಾಗಿದೆ ಎಂದು ಪತ್ರದಲ್ಲಿ ವಿನಂತಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ
Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ
ಜಗತ್ತಿಗಿಂತ ಮೊದಲು ಪಾಕ್ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್ ದಾಳಿ ಬಗ್ಗೆ ಪ್ರಧಾನಿ
Encounter: ಛತ್ತೀಸ್ಗಢದಲ್ಲಿ ಎನ್ಕೌಂಟರ್… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ
MUST WATCH
ಹೊಸ ಸೇರ್ಪಡೆ
ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ
Road Mishap; ಬೈಕ್-ಪಿಕ್ ಅಪ್ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು
Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!
Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ
Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ